Author: admin

ಮಂಗಳೂರು, ಸೆ.15 :ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವನ್ನು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,ಬಂಟ್ಸ್ ಹಾಸ್ಟೆಲ್ ನಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ಗಣೇಶೋತ್ಸವ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯುತ್ತಿದೆ. ಸತತ 2ನೇ ಬಾರಿ ಈ ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ತನಗೆ ದೊರೆದಿದೆ ಎಂದು ಅವರು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾತನಾಡಿ, ಪ್ರಧಾನ ಮಂತ್ರಿಗಳ ಸ್ವಚ್ಛ ಭಾರತದ ಆಶಯದಂತೆ ಪರಿಸರಕ್ಕೆ ಪೂರಕವಾಗಿ ಎಲ್ಲ ಗಣೇಶೋತ್ಸವಗಳು ನಡೆಯುವಂತಾಗಲಿ ಎಂದರು. ಧ್ವಜಾವರೋಹಣಗೈದ ಗ್ರೂಪ್ ಕ್ಯಾಪ್ಟನ್ ಎಸ್.ಎಂ.ಅಡ್ಯoತಾಯ ಅವರು ಕಾರ್ಯಕ್ರಮದಲ್ಲಿ ಮಾತನಾಡದರು.ಮಾತೃ ಸಂಘದ ಮಾಜಿ ಉಪಾಧ್ಯಕ್ಷ ರವೀಂದ್ರನಾಥ ಜಿ ಹೆಗ್ಡೆ ನಳಿನಿ ಆರ್ ಹೆಗ್ಡೆ ತೆನೆ ವಿತರಿಸಿದರು. ಅತಿಥಿಗಳಾಗಿ ಗೀತಾ ಅಡ್ಯoತಾಯ, ಮಾಳವಿಕಾ ಜಯಾನಂದ್, ದಂಬೆಕಾನ ಸದಾಶಿವ ರೈ, ಪದ್ಮನಾಭ ರೈ, ಬಜಪೆ ಬಂಟರ ಸಂಘದ ಅಧ್ಯಕ್ಷ…

Read More

ಮಂಗಳೂರು, ಸೆ.14 : ಬಂಟರ ಯಾನೆ ನಾಡವರ ಮಾತೃಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆಯುವ 20 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ   ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ಅವರ ನೇತೃತ್ವದಲ್ಲಿ, ಬಾಲಾಂಭಟ್ ದೇವಸ್ಥಾನದ ಹಿರಿಯ ಅರ್ಚಕರಾದ ಗಿರಿಧರ್ ಭಟ್ ಅವರ ಮಾರ್ಗದರ್ಶನದಲ್ಲಿ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಶ್ರೀ ಸಿದ್ದಿ ವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರಕ್ಕೆ ತರಲಾಯಿತು.. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಪ್ರತಿಷ್ಠಾನದ ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಯೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೆ ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ಕೃಷ್ಣಪ್ರಸಾದ್ ರೈ ಬೆಳ್ಳಿಪಾಡಿ, ಡಾ…

Read More

ಮಂಗಳೂರು, ಸೆ.13 : ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ಕಾಪಿಕಾಡ್ (ದೇವ್) ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಚಿತ್ರದ ನಿರ್ದೇಶಕ ಅರ್ಜುನ್ ಕಾಪಿಕಾಡ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಟಾಸ್” ಸಿನಿಮಾದ ಕಥೆ,ಚಿತ್ರಕಥೆ, ಸಂಭಾಷಣೆ, ಹಾಡುಗಳು ದೇವದಾಸ್ ಕಾಪಿಕಾಡ್ ಅವರದ್ದಾಗಿದೆ. ನಿರ್ದೇಶನವನ್ನುಅರ್ಜುನ್ ಕಾಪಿಕಾಡ್ ಅವರು ಮಾಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ ಎಂದರು. ಚಿತ್ರದನಿರ್ಮಾಪಕರು ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್ ಪೂಜಾರಿ, ಸಹ ನಿರ್ದೇಶಕರು ಯಶಾಂತ್ ಕಲ್ಲಡ್ಕ, ರಾಕೇಶ್ ಬಿ.ಜೆ.ವಿಕ್ರಮ್ ದೇವಾಡಿಗ, ಸಹಾಯಕ ನಿರ್ದೇಶಕರು ಸೌರವ್, ರಾಮ್ ,ಸುಜಿತ್ ,ವಿನೋದ್ ,ಆಶಿಷ್ ರಾವ್ ಛಾಯಾಗ್ರಹಣ ಜೋಯೆಲ್ ಶಮನ್ ಡಿ’ಸೋಜಾ, ಸಹಾಯಕ ಛಾಯಾಗ್ರಾಹಕರು ಅಮನ್ ಪ್ರಖ್ಯಾತ್, ಕಲಾ ನಿರ್ದೇಶನ ರಾಜೇಶ್ ಕೊಳಕೆ, ರಾಜೇಶ್ ಬಾಂಧ್ಯೋಡ್, ಸಂಕಲನ ಯಶ್ವಿನ್ ಕೆ.…

Read More

ಮಂಗಳೂರು, ಸೆ.12 : ಅಡಿಕೆ ಹಾಳೆಯಿಂದ ತಯಾರಿಸುವ ತಟ್ಟೆಗಳಲ್ಲಿ ಅಡಿಕೆಗೆ ಸಂಬಂಧಿಸಿದ ಹಾನಿಕಾರಕ ಅಂಶಗಳ ಪ್ರಮಾಣ ಅತ್ಯಂತ ಕಡಿಮೆ ಇದೆ.ಹಲವು ಪ್ರತಿಷ್ಠಿತ ಪ್ರಯೋಗಾಲಯಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಅಡಿಕೆಯಲ್ಲಿರುವ ಅರೆಕೋಲಿನ್ ಪ್ರಮಾಣ ಕಡಿಮೆ ಕಂಡುಬಂದಿದೆ ಎಂದು ‘ಅಗ್ರಿ ಲೀಫ್’ ಸಹ ಸಂಸ್ಥಾಪಕ ಅವಿನಾಶ್ ರಾವ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ಹಾಳೆ ತಟ್ಟೆಗಳ ಸುರಕ್ಷತೆ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ವಿವಿಧ ಸಂಶೋಧನಾ ಸಂಸ್ಥೆಗಳ ಸಹಯೋಗದಲ್ಲಿ ಅಧ್ಯಯನ ನಡೆಸಲಾಗಿದೆ. ಎನ್‌ವೈಪಿಎ, ಮಣಿಪಾಲ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಸಹಕಾರದೊಂದಿಗೆ ಸುಮಾರು ₹50–60 ಲಕ್ಷ ವೆಚ್ಚದಲ್ಲಿ ಸಂಶೋಧನೆ ನಡೆಸಲಾಗಿದೆ ಎಂದರು. ಖ್ಯಾತ ವಿಜ್ಞಾನಿ ಹಾಗೂ ಅಡಿಕೆ ಬೆಳೆ ಸಂಶೋಧಕ ಗೋಪಾಲ್ ಮರಾಠೆ ಮಾತನಾಡಿ, ಅಡಿಕೆ ಹಾಳೆಗಳಲ್ಲಿ ಅರೆಕೋಲಿನ್, ಅರೆಕಡೀನ್, ಗುವಾಕೋಲಿನ್ ಸೇರಿದಂತೆ ಸಂಬಂಧಿತ ಅಂಶಗಳ ಪ್ರಮಾಣವನ್ನು ವೈಜ್ಞಾನಿಕವಾಗಿ ಪರೀಕ್ಷಿಸಲಾಗಿದೆ. ಪರೀಕ್ಷೆಗಳಿಂದ ಅಡಿಕೆಯಲ್ಲಿ ಕಂಡುಬರುವ ಪ್ರಮಾಣಕ್ಕೆ ಹೋಲಿಸಿದರೆ ಹಾಳೆಯಲ್ಲಿ ಇವುಗಳ ಪ್ರಮಾಣ…

Read More

ಮಂಗಳೂರು, ಸೆ.11 : ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನುಲೈಟ್‌ಹೌಸ್ ಹಿಲ್ ರೋಡ್ ಕ್ಯಾಂಪಸ್‌ನಲ್ಲಿ ಸೆ.14 ಮತ್ತು 15 ರಂದು ಆಚರಿಸಲು ಸಜ್ಜಾಗಿದೆ ಎಂದು ಕೆಎಂಸಿ ಮಂಗಳೂರು ಡೀನ್ ಡಾ.ಬಿ. ಉಣ್ಣಿಕೃಷ್ಣನ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಚತುರ್ಥಿ ಉತ್ಸವವು ಕೆಎಂಸಿ ಸಮುದಾಯದ ಏಕತೆ, ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯದ ಸಂಕೇತವಾಗಿದ್ದು, ಪ್ರತಿವರ್ಷ ಉತ್ಸಾಹದಿಂದ ಆಚರಿಸಲಾಗುತ್ತಿದೆ ಎಂದರು. ಕೆಎಂಸಿ ಮಂಗಳೂರಿನ ಅಸೋಸಿಯೇಟ್ ಡೀನ್ ಡಾ.ಶೀತಲ್ ಉಳ್ಳಾಲ್ ಅವರು ಮಾತನಾಡಿ, ಸಂಭ್ರಮಾಚರಣೆಯು ಸೆ. 14 ಸೋಮವಾರ ಬೆಳಿಗ್ಗೆ 9:00 ಗಂಟೆಗೆ ಲೈಟ್‌ಹೌಸ್ ಹಿಲ್ ರೋಡ್ ಕ್ಯಾಂಪಸ್‌ನಲ್ಲಿ ಗಣೇಶ ಸ್ಥಾಪನಾ ಪೂಜೆಯೊಂದಿಗೆ ಪ್ರಾರಂಭವಾಗಲಿದೆ. ಸೆ. 15 ಮಂಗಳವಾರ ಸಂಜೆ 6ಕ್ಕೆ ಭವ್ಯಶೋಭಾಯಾತ್ರೆ ನಡೆಯಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಎಂಸಿ ಮಂಗಳೂರಿನ ಅಸೋಸಿಯೇಟ್ ಡೀನ್ ಡಾ. ಮಂಗಳಾ ಎಂ.ಪೈ, ಡಾ.ಅಶ್ಫಾಕ್ ಮೊಹಮ್ಮದ್ ಹಾಗೂ ವಿದ್ಯಾರ್ಥಿ ಸಂಘದ ಪ್ರಮುಖರಾದ ಅನನ್ಯಾ ಹೆಗ್ಗೇರಿ ಉಪಸ್ಥಿತರಿದ್ದರು.

Read More

ಮಂಗಳೂರು, ಸೆ.10 : ಅಡಿಕೆ ಮಾರುಕಟ್ಟೆಯ ಏರಿಳಿತ ಹಾಗೂ ಕೊಕ್ಕೊ ವಲಯದ ಸವಾಲುಗಳ ನಡುವೆಯೂ ಕ್ಯಾಂಪ್ಕೊಸಂಸ್ಥೆಯು 2025-26ನೇ ಸಾಲಿನಲ್ಲಿ 3,735 ಕೋಟಿ ರೂ. ಒಟ್ಟು ದಾಖಲೆಯ ವ್ಯವಹಾರ ವಹಿವಾಟು ಮತ್ತು 49.62 ಕೋಟಿ ರೂ. ತೆರಿಗೆಪೂರ್ವ ಲಾಭ ದಾಖಲಿಸಿದೆ. 2025-26ನೇ ಸಾಲಿಗೆ ಸದಸ್ಯರಿಗೆ ಶೇ. 14ರಷ್ಟು ಡಿವಿಡೆಂಡ್ ನೀಡಲು ನಿರ್ದೇಶಕ ಮಂಡಳಿ ಶಿಫಾರಸು ಮಾಡಿದೆ ಎಂದು ಅಧ್ಯಕ್ಷ ಸತೀಶ್ ಚಂದ್ರ ಎಸ್ ಆರ್ ಅವರು ನಗರದ ಕ್ಯಾಂಪ್ಕೊ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ 2,924.32 ಕೋಟಿ ರೂ. ಮೌಲ್ಯದ 58,742.76 ಮೆ.ಟನ್ ಅಡಿಕೆ ಖರೀದಿಸಿದ್ದು, 2,985.19 ಕೋಟಿ ರೂ. ಮೌಲ್ಯದ 59,088.64 ಮೆ.ಟನ್ ಅಡಿಕೆ ಮಾರಾಟ ಮಾಡಿದೆ ಎಂದರು. ಆಮದು ಅಡಿಕೆಯಿಂದ ದೇಶೀಯ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಹಾಗೂ ಆಮದು ಅಡಿಕೆಯನ್ನು ದೇಶೀಯ ಉತ್ಪನ್ನದೊಂದಿಗೆ ಮಿಶ್ರಣ ಮಾಡುವ ಪ್ರಕರಣಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು. ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ…

Read More

ಮಂಗಳೂರು, ಸೆ.10 : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಬುಧವಾರ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿ ನಡೆದಿದೆ. ಈ ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಚರ್ಚೆ ನಡೆಸಿ, ಸಂಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸಿದ್ದರು. ಬಳಿಕ ಎಐಸಿಸಿ ವೀಕ್ಷಕರು ಹಾಗೂ ಹಿರಿಯ ನಾಯಕರ ಚರ್ಚೆಯ ಆಧಾರದಲ್ಲಿ ದ. ಕ.ನೂತನ ಜಿಲ್ಲಾ ಅಧ್ಯಕ್ಷ ರಾಗಿ ಪದ್ಮರಾಜ್ ಆರ್.ಪೂಜಾರಿ ಅವರನ್ನು ನೇಮಕ ಮಾಡಲು ಅನುಮೋದನೆ ನೀಡಲಾಗಿದೆ.

Read More

ಮಂಗಳೂರು, ಸೆ.09: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದ ಸಂಭ್ರಮ ‘ರಾಗ ಸುಧಾ’ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತಾಡಿ, ಸಂಗೀತದ ಮೂಲಕ ಮಾನಸಿಕ ನೆಮ್ಮದಿ ಹೊಂದಲು ಸಾಧ್ಯ. ಕಲಾಸಾಧನ ತಂಡದಿಂದ ರಾಮಕೃಷ್ಣ ಮಠದ ಪ್ರಶಾಂತ ಪರಿಸರ ದಲ್ಲಿ ರಾಗ ಸುಧಾ ಸಂಗೀತ ಸಂಭ್ರಮ ನಡೆಸಲು ಆಯ್ಕೆ ಮಾಡಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ದ.ಕ ಜಿಲ್ಲಾ ಉಪ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮ ರಡ್ಡಿ, ಅದಾನಿ ಸಮೂಹ ಸಂಸ್ಥೆ ಗಳ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಹೃದ್ರೋಗ ತಜ್ಞ ಡಾ. ಮೋಹನ್ ಪೈ,,ಎಂ ಆರ್ ಪಿ ಎಲ್ ನಿವೃತ್ತ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ,ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರ ಅಧಿಕಾರಿ ಪ್ರಶಾಂತ್…

Read More

ಮಂಗಳೂರು, ಸೆ.08 : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ, ಮಹಾಗಣಯಾಗವು ಸೆಪ್ಟೆಂಬರ್ 14ರಿಂದ 16ರವರೆಗೆ ಮಂಗಳೂರಿನ ಬಂಟ್ಸ್ ಹಾಸ್ಟೇಲ್ನ ಓಂಕಾರ ನಗರದಲ್ಲಿ ನಡೆಯಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಸೆ.13ರಂದು ಸಂಜೆ 5.00 ಗಂಟೆಗೆ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲಿನ ಓಂಕಾರ ನಗರಕ್ಕೆ ಬರಮಾಡಿಕೊಳ್ಳುವುದು ಎಂದರು. ಸೆ.14ರಂದು ಬೆಳಿಗ್ಗೆ 8.00 ಗಂಟೆಗೆ ಮೂರ್ತಿ ಪ್ರತಿಷ್ಠೆ ,9.00 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ…

Read More

ವಾಷಿಂಗ್ಟನ್, ಸೆ. 07 : ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಮೆಜಾನ್ ಪ್ರೈಮ್ ಏರ್‌ಗೆ ಸೇರಿದ ಕಾರ್ಗೋ ಜೆಟ್‌ವೊಂದು ರನ್‌ವೇಯಿಂದ ಜಾರಿ ಪಾರ್ಕ್ ಮಾಡಲಾಗಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ರವಿವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಬೋಯಿಂಗ್ 767-300 ವಿಮಾನ ಮಿಯಾಮಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ. ವಿಮಾನ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ರಕ್ಷಣಾ ತಂಡಗಳು ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ, ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ವರದಿಯಾಗಿದೆ. ಈ ಕಾರ್ಗೋ ವಿಮಾನವು ಪೋರ್ಟೊ ರಿಕೊದ ಸ್ಯಾನ್ ಜುವಾನ್‌ನಿಂದ ಮಿಯಾಮಿಗೆ ಆಗಮಿಸಿತ್ತು.ಘಟನೆಯ ಕುರಿತು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ತನಿಖೆ ನಡೆಸುವುದಾಗಿ ತಿಳಿಸಿದೆ. ಮತ್ತೊಂದೆಡೆ, ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಕೂಡ ಅಪಘಾತಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

Read More