Author: admin

ಗೋವಾ, ಡಿ. 07 : ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 23 ಜನರು ಮೃತಪಟ್ಟಿದ್ದಾರೆ. ಗೋವಾದ ಬಾಗಾದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ಎಂಬ ಕ್ಲಬ್ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ತಡರಾತ್ರಿ ಸಂಭವಿಸಿದ  ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಇಲ್ಲಿಯತನಕ 23 ಸಾವುಗಳು ವರದಿಯಾಗಿವೆ ಬೆಂಕಿಯ ಕಾರಣ ಖಚಿತಪಡಿಸಿಕೊಳ್ಳಲಾಗಿಲ್ಲ. ಹಲವಾರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಭಾನುವಾರ ಬೆಳಗಿನ ಜಾವದವರೆಗೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದವು. ಮೃತರಲ್ಲಿ ಹೆಚ್ಚಿನವರು ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಎಂದು ಪೊಲೀಸರು ತಿಳಿಸಿದ್ದಾರೆ . ತಂಡಗಳು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿವೆ.

Read More

ಮಂಗಳೂರು,ಡಿ.06 : ಹಂಪನಕಟ್ಟೆ ಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟ‌ರ್ ಪ್ರಯೋಗಾಲಯದ ಕೊಠಡಿಯನ್ನು ಶಾಸಕರಾದ ಡಿ.ವೇದವ್ಯಾಸ ಕಾಮತ್ ಉದ್ಘಾಟನೆ ಅವರು ಉದ್ಘಾಟನೆಗೊಳಿಸಿದರು. ಹಂಪನಕಟ್ಟೆ ಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟ‌ರ್ ಪ್ರಯೋಗಾಲಯದ ಕೊಠಡಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ ನಂತರ ಮಾತನಾಡಿದ ಶಾಸಕರು, 2025-26 ನೇ ಸಾಲಿನಿಂದ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಪ್ರಾರಂಭಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯವಿರುವ ಅನೇಕ ವಿಷಯಗಳ ಬಗ್ಗೆ ಕಾಲೇಜಿನವರು ನನ್ನ ಬಳಿ ಮನವಿ ಮಾಡಿದ್ದರು. ಅದರಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು ಬಳಸಿಕೊಂಡು ಕಂಪ್ಯೂಟರ್ ಹಾಗೂ ಸುಸಜ್ಜಿತ ಪ್ರಯೋಗಾಲಯವನ್ನು ನಿರ್ಮಿಸಿ ಇದೀಗ ಲೋಕಾರ್ಪಣೆಗೊಳಿಸಲಾಗಿದೆ. ಈ ವೇಳೆ ನಮ್ಮ ಮನವಿಗೆ ಸ್ಪಂದಿಸಿ ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಿರುವ ಯೂನಿಫೈ ಸಿ.ಎಕ್ಸ್ (ದಿಯಾ ಸಿಸ್ಟಮ್ಸ್) ಮಂಗಳೂರು ಇವರಿಗೂ ನನ್ನ ವಿಶೇಷ…

Read More

ಮಂಗಳೂರು, ಡಿ.05 : ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯು ಪಂಪ್ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ನ.04. ಗುರುವಾರ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಅನಿವಾಸಿ ಭಾರತೀಯ ಉದ್ಯಮಿ ಮೈಕಲ್ ಡಿಸೋಜಾ ಅವರು ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್ನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷರಾದ ಅನಿಲ್ ಲೋಬೊ ಅವರು ತಮ್ಮ ಸ್ವಾಗತ ಭಾಷಣದಲ್ಲಿ ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಆಧುನೀಕರಣ ಮತ್ತು ಹೊಸ ಆಲೋಚನೆಗಳನ್ನು ನಿರೀಕ್ಷಿಸುತ್ತಾರೆ. ನಮ್ಮ ಬ್ಯಾಂಕ್ ಡಿಜಿಟಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಎಲ್ಲಾ 16 ಶಾಖೆಗಳನ್ನು ನವೀಕರಿಸಿದೆ. ಗ್ರಾಹಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದೆ. ಕಂಕನಾಡಿ ಶಾಖೆಯು 54 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಗ್ರಾಹಕರು ತಮ್ಮ ವಹಿವಾಟುಗಳನ್ನು ಸಂತೋಷದಾಯಕವಾಗಿ ನಡೆಸಲು ಅನುಕೂಲವಾಗುವಂತೆ ಶಾಖೆಯನ್ನು ನವೀಕರಿಸಲಾಗಿದೆ ಎಂದು ಅವರು ಹೇಳಿದರು. ಫಾದರ್ ಜೆ. ಬಿ. ಕ್ರಾಸ್ತಾ ಅವರು ತಮ್ಮ…

Read More

ಮಂಗಳೂರು,ಡಿ.04 : ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಸಹಕಾರಿ ರಂಗದ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಡಿ.6 ರಂದು ಅಪರಾಹ್ನ 3 ಗಂಟೆಯಿಂದ ಪ್ರಶಸ್ತಿ ಪುರಸ್ಕೃತಗೊಂಡ ಅವರಿಗೆ ನಾಗರಿಕ ಪೌರ ಸನ್ಮಾನದ ಭಾಸ್ಕರಾಭಿನಂದನೆ ಕಾರ್ಯಕ್ರಮವು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಸಮಿತಿಯ ಸಂಚಾಲಕಾದ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 3 ಗಂಟೆಯಿಂದ ಚಲನಚಿತ್ರ ನಟ ಮಂಜು ರೈ ಮುಳೂರು ಅವರ ನಿರೂಪಣೆಯೊಂದಿಗೆ ಜಿಲ್ಲೆಯ ಕಲಾವಿರದರಿಂದ ಸಂಗೀತ, ಹಾಸ್ಯ, ಲಹರಿ ಕಾರ್ಯಕ್ರಮ ನಡೆಯಲಿದೆ ಎಂದರು. ಸಂಜೆ 3.45ಕ್ಕೆ ಸನ್ಮಾನ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿಸೊಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಮಾಜಿ ಸಚಿವರು ಹಾಗೂ ಶಾಸಕರಾದ ಸುನಿಲ್ ಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ ಸಂಸದ ಕ್ಯಾ,ಬ್ರಿಜೇಶ್ ಚೌಟ ದ್ವೀಪ ಪ್ರಜ್ವಲನೆ ಮಾಡಲಿರುವರು.ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು…

Read More

ಬೆಂಗಳೂರು, ಡಿ.03 : ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ರಾಜ್ ಬಿ ಶೆಟ್ಟಿ ಒಟ್ಟಾಗಿ ನಟಿಸಿರುವ 45 ಚಿತ್ರ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಈ ವರ್ಷದ ಕೊನೆಯ ಸಿನಿಮಾದ ಟ್ರೈಲರ್ ಶೀಘ್ರ ಬಿಡುಗಡೆ ಆಗಲಿದೆ. ನಿರ್ಮಾಪಕ ರಮೇಶ್ ರೆಡ್ಡಿ ಅವರ 45 ಚಿತ್ರದ ಬಜೆಟ್ ₹100 ಕೋಟಿ ಎಂದು ಅಂದಾಜಿಸಲಾಗಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 45 ಚಿತ್ರಕ್ಕೆ ಹಾಲಿವುಡ್ ಪ್ರಾಜೆಕ್ಟ್‌ಗಳಿಗೆ ಕೆಲಸ ಮಾಡಿರುವ ಕೆನಡಾದ ಪ್ರತಿಷ್ಠಿತ ವಿ.ಎಫ್.ಎಕ್ಸ್ ಸಂಸ್ಥೆ “MARZ” ಕೆಲಸ ಮಾಡಿದೆ. ಎಪ್ರೋ ಟಪಾಂಗ್ (‘AFRO ಟಪಾಂಗ್’) ಹಾಡು ತನ್ನ ವಿಶಿಷ್ಟ ಮ್ಯೂಸಿಕ್ ಮತ್ತು ಉಗಾಂಡದ ಪ್ರಸಿದ್ಧ ಜಿಟೊ ಕಿಡ್ಸ್ ತಂಡದ ಆಕರ್ಷಕ ಸ್ಟೆಪ್ಸ್‌ಗಳಿಂದ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಜಿಟೊ ಕಿಡ್ಸ್ ತಂಡವು ಭಾ ರತೀಯ ಚಿತ್ರರಂಗಕ್ಕೆ ಇದೇ ಮೊದಲ ಬಾರಿಗೆ ಎಂಟ್ರಿ ಕೊಟ್ಟಿದೆ. ಚಿತ್ರದ ಈ ಪ್ರಮೋಷನಲ್ ಸಾಂಗ್ ಯುಟ್ಯೂಬ್‌ನಲ್ಲಿ ಮೂಲಕ ದಾಖಲೆಯ…

Read More

ಉಡುಪಿ, ಡಿ. 02 : ಒಣ ಹುಲ್ಲಿಗೆ ಬೆಂಕಿ ತಗುಲಿ ಖಾಸಗಿ ಶಾಲಾ ಬಸ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಭಾನುವಾರ ಅಲೆವೂರಿನ ಪ್ರಗತಿ ನಗರದಲ್ಲಿ ನಡೆದಿದೆ. ಅಲೆವೂರು ಪ್ರಗತಿ ನಗರ ಪ್ರದೇಶದಲ್ಲಿ ಒಣಗಿದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಜ್ವಾಲೆಗಳು ಬೇಗನೆ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿ ಸಮೀಪದಲ್ಲಿ ನಿಲ್ಲಿಸಿದ್ದ ಖಾಸಗಿ ಶಾಲಾ ಬಸ್ ಬೆಂಕಿಗೆ ಆಹುತಿಯಾಗಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಯಾವುದೇ ವಿದ್ಯಾರ್ಥಿಗಳು ಬಸ್ಸಿನೊಳಗೆ ಇರಲಿಲ್ಲ,

Read More

ಬೆಳ್ತಂಗಡಿ, ಡಿ. 01 : ಬೆಳ್ತಂಗಡಿ: ಬಸ್ ಮತ್ತು ಬೈಕ್ ಸಂಭವಿಸಿದ ರಸ್ತೆ ದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪದ ಘಟನೆ ಬೆಳ್ತಂಗಡಿಯ ಪಾರ್ಪಿಕಲ್ಲು ಎಂಬಲ್ಲಿ ಭಾನುವಾರ ಸಂಭವಿಸಿದೆ. ಮೃತರನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ದೊಡ್ಡಗಾನಹಳ್ಳಿಯ ಪನ್ನ ಕೇಶವ ಗೌಡ ಅವರ ಪುತ್ರ ದೀಪಕ್ (24) ಎಂದು ಗುರುತಿಸಲಾಗಿದೆ. ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್, ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು  ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

Read More

ಮಂಗಳೂರು, ನ.30 : ರೋಹನ್ ಕಾರ್ಪೊರೇಶನ್ ಸಂಸ್ಥೆಯು ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್‌ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ ಉಪಸ್ಥಿತರಿದ್ದು, ರೋಹನ್ ಕಾರ್ಪೊರೇಶನ್ನ ಸೇಲ್ಸ್ ಮ್ಯಾನೇಜರ್ ಸವಿಲ್ ಅವರು ಆರೋಗ್ಯ ಇಲಾಖೆಗೆ ಟಾರ್ಚ್‌ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ, ಮಲೇರಿಯಾ ಪತ್ತೆ ಮತ್ತು ತಡೆ ಕಾರ್ಯಗಳಲ್ಲಿ ಕ್ಷೇತ್ರ ಮಟ್ಟದ ಪರಿಶೀಲನೆ ಅತ್ಯಂತ ಪ್ರಮುಖವಾಗಿದೆ. ಇಂತಹ ಸಂದರ್ಭಗಳಲ್ಲಿ ಟಾರ್ಚ್‌ಗಳಂತಹ ಉಪಕರಣಗಳು ಅಗತ್ಯವಾಗಿದ್ದು, ರೋಹನ್ ಕಾರ್ಪೊರೇಶನ್ ನೀಡಿರುವ ಈ ಸಹಕಾರ ಆರೋಗ್ಯ ಇಲಾಖೆಯ ಕಾರ್ಯಕ್ಷಮತೆಯನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದರು. ರೋಹನ್ ಕಾರ್ಪೊರೇಶನ್ನ ಸೇಲ್ಸ್ ಮ್ಯಾನೇಜರ್ ಶ್ರೀ ಸವಿಲ್ ಅವರು ಮಾತನಾಡಿ,ಸಾರ್ವಜನಿಕ…

Read More

ಮಂಗಳೂರು, ನ. 27 : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಸಾಕ್ಷಿ ದೂರುದಾರ,ಬಳಿಕ ಆರೋಪಿಯಾಗಿ ಬಂಧನಕ್ಕೆ ಒಳಗಾದ ಚಿನ್ನಯ್ಯನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಈ ಪ್ರಕರಣದಲ್ಲಿ ನ್ಯಾಯಾಲಯ 1 ಲಕ್ಷ ರೂ. ವೈಯಕ್ತಿಕ ಬಾಂಡ್ ಮತ್ತು 12 ಷರತ್ತುಗಳನ್ನು ವಿಧಿಸಿದೆ. ಎಸ್‌ಐಟಿ ಸಲ್ಲಿಸಿದ ಮಧ್ಯಂತರ ಆರೋಪಪಟ್ಟಿಯ ನಂತರ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಚಿನ್ನಯ್ಯ ಪರ ವಕೀಲರು ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ  ಸಲ್ಲಿಸಿದ್ದರು. ಜಾಮೀನು ಮಂಜೂರು ಮಾಡುವ ವೇಳೆ, ನ್ಯಾಯಾಲಯವು ಆರೋಪಿ ಪೂರ್ವಾನುಮತಿ ಇಲ್ಲದೆ ಜಿಲ್ಲೆ ಅಥವಾ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗುವಂತಿಲ್ಲ ಎಂದು ಸೂಚಿಸಿತು. ಹಾಗೆನೇ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಅಥವಾ ಸಂದರ್ಶನ ನೀಡಲು ನಿರ್ಬಂಧಿತರಾಗಿದ್ದಾರೆ.

Read More

ಮಂಗಳೂರು, ನ. 26 : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನ. 25,ಮಂಗಳವಾರಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, ನಮ್ಮ ಬಂಟರು ವಿಶ್ವದೆಲ್ಲೆಡೆ ಇದ್ದಾರೆ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ ಎಂದರು. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತಾಡಿ, ಜಿಲ್ಲೆಯ ಬೇರೆಲ್ಲಾ ಸಂಘಗಳಿಗೆ ಮಾದರಿಯಾಗಿ ನಮ್ಮ ಜಿಲ್ಲೆಗೆ ಗೌರವ ತಂದ ಸಂಘ ಏನಾದರೂ ಇದ್ದರೆ ಅದು ಬಂಟರ ಸಂಘ. ಬಂಟ ಸಮಾಜದ ಜೊತೆಗೆ ಎಲ್ಲ ಸಮಾಜವನ್ನು ಜೊತೆಗೆ ಕೊಂಡೊಯ್ಯುವ ಶಕ್ತಿ ಈ ಸಂಘಕ್ಕಿದೆ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲ ವರ್ಗದ ಜನರನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲುವ ಮೂಲಕ ಸಾಮರಸ್ಯವನ್ನು ಸ್ಥಾಪಿಸುವ ಮಹತ್ತರ ಜವಾಬ್ದಾರಿ ಸಾಮಾಜಿಕ ಸಂಘಟನೆಗಳಿವೆ.…

Read More