Author: admin

ಮಂಗಳೂರು, ಸೆ. 02: ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16 ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಯಾದ ಸಾಹಿತಿ ಸಂತೋಷ ಕುಮಾರ ಮೆಹಂದಳೆ ಅವರು ಸಮಾರಂಭವನ್ನು ಉದ್ದೇಶಿಸಿ ಮಾತಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಕರ್ನಾಟಕದ ಪಂಚ ಸಾಧಕರಾದ ಡಾ ಎಸ್ ಎಮ್ ಶಿವಪ್ರಕಾಶ್, ಡಾ ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ ಅಸದ್, ರೆಮೊನಾ ಎವೆಟ್ ಪೆರೇರಾ ಮತ್ತು ಗೋಕಾವಿ ಗೆಳೆಯರ ಬಳಗದ ಪರವಾಗಿ ಜಯಾನಂದ ಮಾದರ ಅವರಿಗೆ ಡಾ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ರಘು ಇಡ್ಕಿದು ಅಭಿನಂದನ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಹೊರ ತಂದಿರುವ ಹಿರಿಯ ಲೇಖಕ ಕಡ್ಕೆ ರಾಮ ಅವಭೃತ ಅವರ ಪರ್ಯಟನಾನುಭವ ಕೃತಿ ಬಿಡುಗಡೆ ನಡೆಯಿತು.ಸಮಾರಂಭದಲ್ಲಿ ಡಾ…

Read More

ಮಂಗಳೂರು, ಸೆ. 01 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ್ ಶೆಟ್ಟಿ ಅವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ ಪಿಲಿಪರ್ಬವು ಸಂಭ್ರಮದಿಂದ ನಡೆಯಲಿದೆ. ನಮ್ಮ ಪ್ರತಿಷ್ಠಾನದ ಮೂಲ ಉದ್ದೇಶ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ಅನುಮತಿ ಪಡೆಯಲಾಗಿದ್ದು ಸಾರ್ವಜನಿಕರೆಲ್ಲರಿಗೂ ಸಂಭ್ರಮದ ಪಿಲಿಪರ್ಬಕ್ಕೆ ಸ್ವಾಗತ ಎಂದರು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್…

Read More

ಬೆಂಗಳೂರು, ಆ. 31 : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ(ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯ ನಂತರ ಮೇ 21 ರಿಂದ ಪ್ರಭಾರಿ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದ ಡಾ. ಸಲೀಂ ಅವರನ್ನು ಆಗಸ್ಟ್ 30 ರ ಶನಿವಾರ ಅಧಿಕೃತ ಅಧಿಸೂಚನೆಯೊಂದಿಗೆ ಆ ಹುದ್ದೆಗೆ ದೃಢಪಡಿಸಲಾಗಿದೆ.

Read More

ಉಡುಪಿ, ಆ. 30 : ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಸೆ.13ರ ಬೆಳಗ್ಗೆ 8:30ರಿಂದ ಸಂಜೆ 5:00ರವರೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಎಂದು ಶಾಸಕ ಯಶ್ಪಾಲ್ ಸುವರ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈಗಾಗಲೇ 100ಕ್ಕೂ ಅಧಿಕ ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಸುಮಾರು 4.000ಕ್ಕೂ ಅಧಿಕ ಮಂದಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ. ಉದ್ಯೋಗ ಮೇಳದಲ್ಲಿ ಒಟ್ಟು 1500ಕ್ಕೂ ಅಧಿಕ ವಿವಿಧ ದರ್ಜೆಯ ಉದ್ಯೋಗಗಳು ಲಭ್ಯವಿರಲಿದೆ ಎಂದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಅವರು ಮಾತಾನಾಡಿ, ಈ ಬಾರಿ ಅಜ್ಜರಕಾಡು ಮೈದಾನದಲ್ಲಿ 75 ಕೌಂಟರ್ಗಳನ್ನು ಹಾಕಲಾಗುವುದು. ಆಸಕ್ತರು ಆನ್ಲೈನ್ ಮೂಲಕವೂ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ…

Read More

ಮಂಗಳೂರು, ಆ. 29 : ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ(76) ಅವರು ಆಗಸ್ಟ್ 29 ರಂದು  ಶುಕ್ರವಾರ ನಿಧನರಾಗಿದ್ದಾರೆ. ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಿಕ್ ಒಜಾರಿಯೊ ಅವರನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 19 ದಿನಗಳ ಚಿಕಿತ್ಸೆಯ ಬಳಿಕ ಕಾಯಿಲೆ ನಿಯಂತ್ರಣಕ್ಕೆ ಬಾರದೆ ಅವರು ಶುಕ್ರವಾರ ನಿಧನರಾದರು ಎಂಬ ಮಾಹಿತಿ ಲಭ್ಯವಾಗಿದೆ. ಎರಿಕ್ ಒಜಾರಿಯೊ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಕೊಂಕಣಿ ಪ್ರದರ್ಶನ ಕಲೆಗಳನ್ನು ಪೋಷಿಸಲು ಮೀಸಲಾಗಿರುವ ಪ್ರಮುಖ ಸಾಂಸ್ಕೃತಿಕ ಸಂಸ್ಥೆಯಾದ ಮಂಡ್ ಸೊಭಾನ್ ಅನ್ನು ಒಜಾರಿಯೊ ಸ್ಥಾಪಿಸಿದರು. ನಂತರ, ಅವರು ಕಲಾಂಗಣ ಎಂಬ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿದರು. ಈ ಸಂಸ್ಥೆಯು ಕೊಂಕಣಿ ಸಂಪ್ರದಾಯಗಳನ್ನು ಕಲಿಯಲು ಮತ್ತು ಸಂರಕ್ಷಿಸಲು ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಒಜಾರಿಯೊ ಅವರು ಕೊಂಕಣಿ ರತ್ನ, 1993 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮತ್ತು 1999 ರಲ್ಲಿ ಕರ್ನಾಟಕ ಕೊಂಕಣಿ…

Read More

ಮಂಗಳೂರು, ಆ. 28 : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಆ. 27, ಬುಧವಾರ ತೆನೆ ಹಬ್ಬ. ಧಾರ್ಮಿಕ ಕಾರ್ಯಕ್ರಮ  ನಡೆಯಿತು. ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದರು. ಲೆ.ಕ. ರಮಾನಾಥ ಶೆಟ್ಟಿ ಮತ್ತು ಕ್ಷಮಾ ರಮಾನಾಥ ಶೆಟ್ಟಿ ಧ್ವಜಾರೋಹಣಗೈದರು. ಡಾ. ಮಹಾಬಲ ರೈ ಮತ್ತು ಮಲ್ಲಿಕಾ ಎಂ ರೈ ತೆನೆ ವಿತರಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೋಡಿಯಾಲ್ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಬಂಟರ ಸಂಘದ ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟ್ವಾಳ…

Read More

ಮಂಗಳೂರು, ಆ. 28 : ಕೃತರ್ಥ ಪ್ರೊಡಕ್ಷನ್ ನಿರ್ಮಾಣದ ಕನ್ನಡ ಚಲನಚಿತ್ರ, ‘ಕುಡ್ಲ ನಮ್ದು ಊರುʼ ಆಗಸ್ಟ್ 5 ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ ರಾಜ್ಯದ 70 ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಚಿತ್ರದ ಪ್ರೇಮಿಯರ್ ಶೋ ಈಗಾಗಲೇ ಎರಡು ಕಡೆ ನಡೆದಿದ್ದು ಜನರ ಪ್ರತಿಕ್ರಿಯೆ ಚೆನ್ನಾಗಿದೆ ಎಂದು ಚಿತ್ರದ ನಿರ್ದೇಶಕರು ಹಾಗೂ ನಾಯಕ ನಟರಾದ ದುರ್ಗಾ ಪ್ರಸಾದ್ ಆರ್ ಕೆ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ‘ಕುಡ್ಲ ನಮ್ದು ಊರುʼ ಚಿತ್ರವನ್ನು ವಿಭಿನ್ನ ರೀತಿಯಲ್ಲಿ ತೋರಿಸುವ ಪ್ರಯತ್ನವನ್ನು ಮಾಡಿ ದ್ದೇನೆ. ಚಿತ್ರದಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದ್ದು, ಚಿತ್ರವು ಉತ್ತಮವಾಗಿ ಮೂಡಿಬಂದಿದೆ ಎಂದರು. ಅಂಕಿತ ಪದ್ಮ, ಚಿತ್ರ ಗೌಡ,ನರೇಂದ್ರ ಜೈನ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ನಿರ್ದೇಶನ ದುರ್ಗಾ ಪ್ರಸಾದ್ ಆರ್ ಕೆ (ಅಲೋಕ್), ನಿರ್ವಹಿಸಿದ್ದಾರೆ. ನಾಯಕ ನಟರುಗಳಾಗಿ ದುರ್ಗಾ ಪ್ರಸಾದ್ ಆರ್ ಕೆ (ಅಲೋಕ್ ಏಕೆ), ಸ್ವರಾಜ್ ಶೆಟ್ಟಿ, ಲಂಚು ಲಾಲ್ ಕೆ ಎಸ್…

Read More

ಮಂಗಳೂರು, ಆ. 27 : ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆ.29, ಶುಕ್ರವಾರ ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಾಯಕ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆತ್ತರಕೆರೆ ಸಿನಿಮಾ ತುಳು ಭಾಷೆಯಲ್ಲಿ ಮಾತ್ರವಲ್ಲದೆ ಇತರ ಭಾಷೆಯಲ್ಲೂ ಸಂಚಲನ ಮೂಡಿಸುವ ನಿರೀಕ್ಷೆ ಇದೆ, ಈ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ ಎಂದರು. ಚಿತ್ರವು  ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ. ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ಮಾರ್. ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ ಎಂದು ತಿಳಿಸಿದರು. ಚಿತ್ರದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳೂರು,…

Read More

ಮಂಗಳೂರು, ಆ. 27 : ಎಸ್ಯಾಸಾಫ್ಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ತನ್ನ ಅತ್ಯಾಧುನಿಕ ಕಲಿಕೆ ಮತ್ತು ಸಾಮಥ್ರ್ಯ ಅಭಿವೃದ್ಧಿ ಕೇಂದ್ರವನ್ನು ಮಂಗಳೂರಿನ ಬಜ್ಪೆಯಲ್ಲಿ ಆರಂಭಿಸಿದೆ. ಈ ಕೇಂದ್ರವನ್ನು ಮೂಡಬಿದರೆ ಶಾಸಕ ಉಮನಾಥ್ ಕೋಟ್ಯಾನ್ ಅವರು ಆ.25, ಸೋಮವಾರ ಉದ್ಘಾಟಿಸಿದರು. ಕಂಪನಿಯ ಸ್ಥಾಪಕ ಮತ್ತು ಸಿಇಒ ಶ್ರೀ ಬಿಪಿನ್ ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಈ ಸೌಲಭ್ಯವು ಎಐ, ಐಒಟಿ, ಸ್ಮಾರ್ಟ್ ಗ್ರಿಡ್ಗಳು, ಇವಿ, ಹವಾಮಾನ ಮೂಲಸೌಕರ್ಯ ಮತ್ತು ಇಂಧನ ನಿರ್ವಹಣಾ ವ್ಯವಸ್ಥೆಗಳನ್ನು ಸಂಯೋಜಿಸುವುದರೊಂದಿಗೆ ನವೀಕರಿಸಬಹುದಾದ, ಉಪಯುಕ್ತ ಡಿಜಿಟಲೀಕರಣ ಮತ್ತು ಇಂಧನ ಮೂಲಸೌಕರ್ಯದಲ್ಲಿ ಅಸ್ತಿತ್ವದಲ್ಲಿರುವ ಜಾಗತಿಕ ಯೋಜನೆಗಳಿಗೆ ಪ್ರಾಯೋಗಿಕವಾಗಿ ಆರಂಭಕ್ಕೆ ಒತ್ತು ನೀಡಿದೆ ಎಂದು ಬಿಪಿನ್ ಚಂದ್ರ  ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. 50 ಸಾವಿರ ಚದರ ಅಡಿ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಈ ಕೇಂದ್ರವು ಪ್ರಾಯೋಗಿಕ ಕಲಿಕೆ, ಉದ್ಯಮ ಸಹಯೋಗ ಮತ್ತು ವೃತ್ತಿಪರ ಬೆಳವಣಿಗೆಗಾಗಿ ಉತ್ತಮ ಪರಿಸರ ಹೊಂದಿದೆ.ಈ ಅತ್ಯಾಧುನಿಕ ತಂತ್ರಜ್ಞಾನಗಳು ಯುವ ವೃತ್ತಿಪರರಿಗೆ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲಿಸಲಿದ್ದು, ಈ ವಿಶ್ವ ದರ್ಜೆಯ ಕೇಂದ್ರವು ಭಾರತದ…

Read More

ಮಂಗಳೂರು, ಆ. 26: ಜಪ್ಪಿನಮೊಗರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಗಸ್ಟ್ 26ರಿಂದ 28ರ ವರೆಗೆ ಜಪ್ಪಿನಮೊಗರು ಗಣೇಶ ಮಂಟಪದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಜೆ. ನಾಗೇಂದ್ರ ಕುಮಾರ್ ಶನಿವಾರ ನಗರದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಆಗಸ್ಟ್26ರಂದು ಸಂಜೆ ಗಂಟೆಗೆ ಪೂರ್ಣಕುಂಭ ಸ್ವಾಗತದೊಂದಿಗೆ ಜಪ್ಪಿನಮೊಗರು ಶ್ರೀ ವೈದ್ಯನಾಥ ಮಹಾದ್ವಾರದಿಂದ ಶ್ರೀ ವಿಶ್ವೇಶ್ವರನ ವಿಗ್ರಹವನ್ನು ಶ್ರೀ ಗಣೇಶ ಮಂಟಪಕ್ಕೆ ತರಲಾಗುತ್ತದೆ. 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದರು, ಆಗಸ್ಟ್ 27ರಂದು ಬೆಳಗ್ಗೆ 7ಗಂಟೆಗೆ ಬ್ರಹ್ಮಶ್ರೀ ವಿಠಲದಾಸ್ ತಂತ್ರಿ ಅವರ ಪೌರೋಹಿತ್ಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾಪನೆ ನಡೆಯಲಿದೆ. 9ಗಂಟೆಗೆ ಪ್ರತಿಷ್ಠಾಪನ ಸಭಾ ಕಾರ್ಯಕ್ರಮ ನಡೆಯಲಿದೆ. 10ಗಂಟೆಗೆ ಹಸಿರು ತೆನೆ ವಿತರಣೆ, ಅನಂತರ ಭಜನಾ ಕಾರ್ಯಕ್ರಮ, ಮಧ್ಯಾಹ್ನದ ಮಹಾಪೂಜೆ ನಡೆಯಲಿದೆ. ಸಂಜೆ 5.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ಸಾರ್ವಜನಿಕ ರಂಗಪೂಜೆ ಹಾಗೂ ಮಹಾಪೂಜೆ, ಅನಂತರ ಅನ್ನಸಂತರ್ಪಣೆ…

Read More