Author: admin

ಮಂಗಳೂರು, ನ. 24 : ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ನ. 28ರಂದು ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ. ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಅವರು ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ ಎಂದು ನಟ ಅರ್ಜುನ್ ಕಾಪಿಕಾಡ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದರು. ನಟ ಕವೀಶ್ ಶೆಟ್ಟಿ ಮಾತಾಡಿ, ಕನ್ನಡ ಮತ್ತು ಮರಾಠಿ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿರುವ ಈ ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ ಅವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ ಪ್ರಕಾಶ್ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ಬಹಳ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಸಡಗರ ರಾಘವೇಂದ್ರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ ಎಂದರು. ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಮಾತಾಡಿ ತುಳು ಚಿತ್ರರಂಗದ ನಟ ಅರ್ಜುನ್ ಕಾಪಿಕಾಡ್ ಈ ಚಿತ್ರದಲ್ಲಿ ಒಬ್ಬ ಖಡಕ್ ಆರ್ಮಿ ಆಫೀಸರ್ ಪಾತ್ರದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದಾರೆ. ಹಾಗೆ ಮರಾಠಿ…

Read More

ಕಾಪು, ನ. 23 : ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಮೃತಪಟ್ಟ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಕಾಪು ಪಡುಗ್ರಾಮದ ನಿವಾಸಿ ಸಕೇಂದ್ರ ಪೂಜಾರಿ (52) ಎಂದು ಗುರುತಿಸಲಾಗಿದೆ. ಬಸ್ ಉಚ್ಚಿಲ ತಲುಪಿದಾಗ, ಸಕೇಂದ್ರ ಪೂಜಾರಿ ಅವರು ಮುಂಭಾಗದ ಬಾಗಿಲಿನ ಬಳಿ ಇಳಿದುಕೊಳ್ಳಲು ಸಿದ್ಧವಾಗಿದ್ದ ವೇಳೆ, ಚಾಲಕನು ಎದುರು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕಲು ನಿರ್ಲಕ್ಷ್ಯದಿಂದ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ. ಇದರಿಂದಾಗಿ ಸಕೇಂದ್ರ ಬಾಗಿಲಿನ ಮೂಲಕ ಹೊರಗೆ ಎಸೆಯಲ್ಪಟ್ಟು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ನ. 22 : ನಗರದ ಉರ್ವ ಸ್ಟೋರ್ನ ತುಳುಭವನದ ಸಿರಿ ಚಾವಡಿಯಲ್ಲಿ ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ನೀಡಿದ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಗೌರವ ಸೂಚಕವಾಗಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮವನ್ನು ಶ್ರೀ ರೋಶನ್ ಮಾಡ್ತಾ ನಿರೂಪಿಸಿದರು. ಈ ಸಂದರ್ಭದಲ್ಲಿ ಅದಾನಿ ಗ್ರೂಪ್ನ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ.ಸಿ.…

Read More

ಮಂಗಳೂರು, ನ. 21 : ನರರೋಗ, ಮಾನಸಿಕ ಅಸ್ವಸ್ಥತೆ, ಅಲೈಮರ್, ಪಾರ್ಶ್ವವಾಯು ಹಾಗೂ ಕ್ಯಾನ್ಸರ್ ಸೇರಿದಂತೆ ದೀರ್ಘಕಾಲೀನ ಕಾಯಿಲೆಗಳೊಂದಿಗೆ ಹೋರಾಟ ನಡೆಸುತ್ತಿರುವವರಿಗೆ ಸಹಾಯಕವಾಗುವ ಉದ್ದೇಶದಿಂದ ಕಾಸರಗೋಡಿನ ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕದ ಉದ್ಘಾಟನೆ  ನವೆಂಬರ್ 23, 2025, ಭಾನುವಾರ ಮಧ್ಯಾಹ್ನ 2 ಗಂಟೆಗೆ ಸಾಯಿ ನಿಕೇತನ ಸೇವಾಶ್ರಮದಲ್ಲಿ ನಡೆಯಲಿದೆ ಎಂದು ನವಚೇತನ ಕೇರ್ ಸೆಂಟರ್‌ನ ಸಂಸ್ಥಾಪಕ ಹಾಗೂ ಭಟ್ ಬಯೋಟೆಕ್ ಚೇರ್‌ಮನ್ ಡಾ. ಶ್ಯಾಂ ಭಟ್‌  ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವೇಗದ ಜೀವನಶೈಲಿ, ಕುಟುಂಬಗಳ ಆರೈಕೆ ಸವಾಲು, ಹಾಗೂ ಮನೆಯಲ್ಲಿನ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ದೀರ್ಘಕಾಲೀನ ಕಾಯಿಲೆಗಳ ನಿತ್ಯ ನಿರ್ವಹಣೆ ಕಷ್ಟಕರವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮನೆಯಿಂದ ಹೊರಗೆ ಆದರೆ ಮನೆ ವಾತಾವರಣದಲ್ಲಿ, 24×7 ವೈದ್ಯಕೀಯ ಮೇಲ್ವಿಚಾರಣೆಯೊಂದಿಗೆ ಆರೈಕೆ ಒದಗಿಸುವ ವ್ಯವಸ್ಥೆ ಜನರಿಗೆ ಅಗತ್ಯವಾಗಿದೆ. ಈ ಬೇಡಿಕೆಯನ್ನು ಮನಗಂಡು ನವಚೇತನ ಕೇರ್ ಸೆಂಟರ್‌ನ್ನು ದೈಗೋಳಿಯಲ್ಲಿ ಸ್ಥಾಪಿಸುತ್ತಿದ್ದೇವೆ ಎಂದರು. ನವಚೇತನ ಕೇರ್ ಸೆಂಟರ್‌ 18 ಹಾಸಿಗೆ ಸಾಮರ್ಥ್ಯದ…

Read More

ಮಂಗಳೂರು,ನ. 21 : ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ ಸಾಹಿತ್ಯದ ಬಗ್ಗೆ ಒಲವು ಮೂಡಿಸಲು ಪ್ರೌಢಶಾಲಾವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. ಡಿಸೆಂಬರ್ 07 ರಂದು ಭಾನುವಾರ ಬೆಳಿಗ್ಗೆ 8.45 ರಿಂದ ಸಂಜೆ 4.00 ಗಂಟೆ ತನಕ ಮಂಗಳೂರಿನ ಶಕ್ತಿನಗರ ದಲ್ಲಿರುವ ಕಲಾಂಗಣ ಮೈದಾನದಲ್ಲಿ ಈ ಸಮ್ಮೇಳನ ನಡೆಯಲಿದೆ ಎಂದು ಮಾಂಡ್ ಸೊಭಾಣ್ ನ ಅಧ್ಯಕ್ಷರಾದ ಲುವಿಸ್ ಜೆ.ಪಿಂಟೋ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಢಿಯಲ್ಲಿ ಮಾತಾಡಿದ ಅವರು,ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೊಕಿಂ ಸ್ಟ್ಯಾನಿ ಆಲ್ವಾರಿಸ್ ಸಮ್ಮೇಳನದ ಮೆರವಣಿಗೆಯನ್ನು ಉದ್ಘಾಟಿಸುವರು. ಸಮ್ಮೇಳನದ ಅಧ್ಯಕ್ಷತೆಯನ್ನು ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಹಿತಿ ವಂ. ಪ್ರಶಾಂತ್ ಮಾಡ್ತಾ ವಹಿಸಲಿರುವರು. 9 ನೇ ತರಗತಿಯ ವಿದ್ಯಾರ್ಥಿನಿ ಸಂಜನಾ ರಿವಾ ಮತಾಯಸ್ ಆಶಯ ಭಾಷಣವನ್ನು ಮಾಡಲಿರುವರು. ‘ಮಕ್ಕಳ ಸಾಹಿತ್ಯದ ಭವಿಷ್ಯ’ ಎಂಬ ವಿಷಯದ ಮೇಲೆ ವಿಚಾರಗೋಷ್ಠಿ…

Read More

ಮಂಗಳೂರು, ನ. 20 : ನವಂಬರ್ 21 ರಂದು “ವಾದಿರಾಜ ವಾಲಗ ಮಂಡಳಿ” ಕನ್ನಡ ಚಲನಚಿತ್ರಕ್ಕೆ ಉರ್ವ ಮಾರಿಯಮ್ಮನ ಸಾನಿಧ್ಯದಲ್ಲಿ ಮುಹೂರ್ತ ನಡೆಯಲಿದೆ ಎಂದು ಚಲನ ಚಿತ್ರ ನಿರ್ಮಾಪಕ ಡಾ ಎಂ.ಎನ್. ರಾಜೇಂದ್ರಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ಹಾಗೇನೇ, ನಿರ್ದೇಶಕ ಎಂ.ಡಿ.ಶ್ರೀಧರ ಅವರ ನಿರ್ದೇಶನದಲ್ಲಿ “ಗಲಾಟೆ” ಎಂಬ ಸಿನೆಮಾ ನಟ ಪ್ರಜ್ವಲ್ ದೇವರಾಜ್ ಹಾಗೂ ಬಹುತಾರಾಗಣದಲ್ಲಿ ನಿರ್ಮಾಣವಾಗಿದ್ದು, ಇದು ಬಹುಪಾಲು ವಿದೇಶದಲ್ಲಿ ಚಿತ್ರೀಕರಣಗೊಂಡಿದೆ. ಈ “ಗಲಾಟೆ” ಚಲನಚಿತ್ರ ‘ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆಯ ಮೊದಲ ಚಲನಚಿತ್ರವಾಗಿದೆ ಎಂದರು. ‘ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆ ತುಳುನಾಡಿನ ಸಂಸ್ಥೆಯಾಗಿರುವುದರಿಂದ ತುಳುಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ “ಡಾಕ್ಟ್ರಾ.ಭಟ್ರಾ?” ಎನ್ನುವ ತುಳು ಸಿನೆಮಾ ಮುಹೂರ್ತ ಮಾಡಲಾಗಿದ್ದು, ಈ ಸಿನೆಮಾ ಮುಂದಿನ ವರ್ಷ ತೆರೆಕಾಣಲಿದೆ  ಎಂದು  ತಿಳಿಸಿದರು. ಈ ಮಧ್ಯೆ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ನಿರ್ದೇಶಕ, ಕಾಂತಾರ ಸಿನೆಮಾದ…

Read More

ಬಂಟ್ವಾಳ, ,ನ. 19 :ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಯುವ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಬುಧವಾರ ನಡೆದಿದೆ. ಸಹ ಸವಾರ ಗಂಭೀರವಾಗಿ ಗಾಯಗೊಂ ಡಿರುತ್ತಾರೆ. ಮೃತಳನ್ನು ಕಡಬದ ಸುನಿಲ್ ಎಂಬವರ ಪುತ್ರಿ ಅನನ್ಯ (21) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ ಗುರುವಾಯನಕೆರೆ ನಿವಾಸಿ ಪೃಥ್ವಿ ಆಗಿರುತ್ತಾನೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಪೂಂಜಾಲಕಟ್ಟೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ನ.18 : ರಚನಾ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಮಹಾಸಭೆಯು ನಗರದ ನ.16ರಂದು ಬೆಂದೂರ್ ಹಾಲ್‌ನಲ್ಲಿ ನಡೆಯಿತು. ಮಹಾಸಭೆಯಲ್ಲಿ ಕಥೊಲಿಕ್ ಮುಖಂಡ ಮತ್ತು ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಮುಂದಿನ ಎರಡು ವರ್ಷದ ಅವಧಿಗೆ ಏಕಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಪ್ರಾದೇಶಿಕ ವಾಣಿಜ್ಯ ವಲಯದಲ್ಲಿ ವ್ಯಕ್ತಿಯಾಗಿರುವ ಕ್ಯಾಸ್ತೆಲಿನೊ ಅವರು ಹೊಸ ಜವಾಬ್ದಾರಿಯನ್ನು ಸ್ವೀಕರಿಸಿದ್ದಾರೆ.ಸಭೆಯಲ್ಲಿ ಇತರ ಹುದ್ದೆಗಾರರನ್ನೂ ಆಯ್ಕೆ ಮಾಡಲಾಯಿತು. ಲೆಸ್ಲಿ ರೇಗೊ ಉಪಾಧ್ಯಕ್ಷರಾಗಿ, ಎಲ್ರೊನ್ ರೊಡ್ರಿಗಸ್ ಕಾರ್ಯದರ್ಶಿಯಾಗಿ, ಜೇಮ್ಸ್ ಜೆ. ಮಾಡ್ತಾ ಸಂಯುಕ್ತ ಕಾರ್ಯದರ್ಶಿಯಾಗಿ ಮತ್ತು ನವೀನ್ ಲೋಬೊ ಖಜಾಂಚಿಯಾಗಿ ಆಯ್ಕೆಯಾದರು. ಇದರಂತೆಯೇ, ಆಡಳಿತ ಮಂಡಳಿಗೆ ಮಾರ್ಸೆಲ್ ಮೊಂತೇರೊ, ರೊನಾಲ್ಡ್ ಗೊಮ್ಸ್, ಸ್ಟ್ಯಾನಿ ಅಲ್ವಾರಿಸ್, ವಿಲಿಯಂ ಡಿಸೋಜಾ, ನೆಲ್ಸನ್ ಮೊಂತೇರೊ ಮತ್ತು ಸುನಿಲ್ ವಾಜ್ ಇವರನ್ನು ಸದಸ್ಯರಾಗಿ ಆಯ್ಕೆ ಮಾಡಲಾಗಿದೆ. ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಮತ್ತು ವ್ಯವಹಾರ ಮುಖಂಡರು ಪರಸ್ಪರ ಸಂಪರ್ಕಿಸಿಕೊಳ್ಳಲು, ಸಹಕರಿಸಲು ಮತ್ತು ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಲು ರಚನಾ ಒಂದು ಮಹತ್ವದ ವೇದಿಕೆಯಾಗಿ ಗುರುತಿಸಲ್ಪಟ್ಟಿದೆ. ಸಂಸ್ಥೆ…

Read More

ಬೆಂಗಳೂರು,ನ.18  : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪುತ್ತೂರು ಸಹಾಯಕ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಸದ್ಯ ಈ ವಿವಾದಾತ್ಮಕ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಇದರ ಜೊತೆಗೆ 15 ದಿನದಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆಗೆ ಒಳಪಡಿಸಿ, ಸೂಕ್ತ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ಹೊರಡಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

Read More

ಮಂಗಳೂರು,ನ.17 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹವು ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಇತರ ಅಥಿತಿಗಳೊಂದಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು ,ಸಹಕಾರರಂಗ ದೇಶದ ಗ್ರಾಮೀಣ ಜನರ…

Read More