Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಆ. 17 : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಬೋಳೂರಿನ ಸುಲ್ತಾನ್ ಬತ್ತೇರಿ ಬಳಿಯ ಸ್ವಸ್ತಿಕ್ ರಿವರ್ ಫ್ರಂಟ್ ನಲ್ಲಿ “ಆಟಿದ ಐಸಿರ” ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಗಣ್ಯರು ಕಂಬಳದ ಕೋಣಗಳಿಗೆ ಹಿಂಡಿ ಅವಲಕ್ಕಿ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಇತರ ಗಣ್ಯರೋಂದಿಗೆ ಸೇರಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಹಿಂದಿನ ಕಾಲದಲ್ಲಿ ಆಟಿದ ದಿನಗಳು ಒಂದು ಹೊತ್ತಿನ ಊಟಕ್ಕೂ ಕಷ್ಟಕರವಾಗಿದ್ದವು. ಅಂದಿನ ಆ ದಿನಗಳನ್ನು ನೆನಪಿಸುವುದರಕೋಸ್ಕರ ಆಟಿ ದಿನವನ್ನು ಆಚರಿಸುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ಈ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ದಿನವನ್ನು ಆಚರಿಸುತ್ತಾರೆ.ನಮ್ಮ ಹಿರಿಯರು ಆಟಿಯ ಕಾಲದಲ್ಲಿ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಟ್ಟು, ಪ್ರಕೃತಿದತ್ತವಾಗಿ ಸಿಗುವ ಆಹಾರ ಪದಾರ್ಥಗಳನ್ನೇ ಬಳಸಿಕೊಂಡು ಹೇಗೆ ಬದುಕಿದರು…
ಮಂಗಳೂರು, ಆ. 15: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಆಗಸ್ಟ್ 15, ಶನಿವಾರ 80ನೇ ಸ್ವಾತಂತ್ರ್ಯೋ ತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ನಂತರ ಅವರು ಸ್ವಾತಂತ್ರ್ಯೋ ತ್ಸವದ ಸಂದೇಶದಲ್ಲಿ, ದೇಶದ ಏಕತೆ, ಸೌಹಾರ್ದತೆ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು. ಯುವಜನತೆ ದೇಶಭಕ್ತಿಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬಲಿಷ್ಠ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದರು. ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ನಾಗರಿಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಹಾಗೂ ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಾಗಿರುವ ಸುಧಾರಣೆಗಳ ಬಗ್ಗೆ ಮಾತಾಡಿದರು. ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ನಾಗರಿಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯಗ ಹೋರಾಟಗಾರರಿಗೆ ಗೌರವ ಸಲ್ಲಿಸಿದರು.…
ಮಂಗಳೂರು, ಆ. 14 : ಮಂಗಳೂರಿನ ಸಾಹಿತ್ಯ ಕೇಂದ್ರದ ವತಿಯಿಂದ ‘ಪುಸ್ತಕ ಹಬ್ಬ–2026’ ಅನ್ನು ಆಗಸ್ಟ್ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಸಂಘನಿಕೇತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿ ಸಂಚಾಲಕ ಲತೇಶ್ ಬಾಕ್ರಬೈಲ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 16ರಂದು ಖ್ಯಾತ ಲೇಖಕ ಗಿರೀಶ್ ರಾವ್ ಹತ್ವಾರ್ (ಜೋಗಿ) ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಡಾ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಮೂರು ದಿನಗಳ ಕಾಲ ಕವಿಗೋಷ್ಠಿ, ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ, ಯಕ್ಷಗಾನ ಹಾಗೂ ವಿಚಾರಗೋಷ್ಠಿಗಳು ನಡೆಯಲಿವೆ ಎಂದರು. ಅದೇ ದಿನ ಪೂರ್ವಾಹ್ನ 11: 45ಕ್ಕೆ ಡಾ. ಧನಂಜಯ ಕುಂಬ್ಳೆ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ 2ರಿಂದ ವಿದ್ವಾನ್ ಮಹೇಶ್ ಪದ್ಯಾಣ ಬಳಗದಿಂದ ಶಾಸ್ತ್ರೀಯ ಸುಗಮ ಸಂಗೀತ, ಸಂಜೆ 3:30ರಿಂದ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಸಂಜೆ 5:30ರಿಂದ ಎಸ್.ಡಿ.ಎಂ. ರಂಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಬೇಂದ್ರ ಆಂದ್ರೆ’…
ಬೆಂಗಳೂರು, ಆ. 13 : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಬುಧವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕಿದ್ದಾರೆ. ರಾಮಲಿಂಗಾರೆಡ್ಡಿ-ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಲಕ್ಷ್ಮಣ ಸವದಿ-ಸಹಕಾರ, ರುದ್ರಪ್ಪ ಲಮಾಣಿ-ಸಕ್ಕರೆ ಮತ್ತು ಜವಳಿ, ಬಿ.ಝಡ್.ಝಮೀರ್ ಅಹ್ಮದ್ ಖಾನ್-ವಸತಿ, ಕೆ.ಎಚ್.ಮುನಿಯಪ್ಪ-ಸಮಾಜ ಕಲ್ಯಾಣ, ಶಿವರಾಜ್ ತಂಗಡಗಿ-ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ, ಯು.ಟಿ. ಖಾದರ್-ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಡಾ.ಅಜಯ್ ಸಿಂಗ್-ಸಣ್ಣ ನೀರಾವರಿ, ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ(ಎಸ್ಟಿ ) ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ, ಚಲುವರಾಯಸ್ವಾಮಿ-ಜಲಸಂಪನ್ಮೂಲ, ಮಧು ಬಂಗಾರಪ್ಪ-ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ. ಶಿವಲಿಂಗೇಗೌಡ-ಅಬಕಾರಿ,ಪುಟ್ಟರಂಗಶೆಟ್ಟಿ-ಪಶುಸಂಗೋಪನೆ ಮತ್ತು ರೇಶ್ಮೆ, ವಿಜಯಾನಂದ ಕಾಶಪ್ಪನವರ್-ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳು, ಕೆ.ಎಸ್.ಬಸವಂತಪ್ಪ- ಮುಜುರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ. ಎಸ್.ಎಸ್. ಮಲ್ಲಿಕಾರ್ಜುನ್-ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಸಂತೋಷ್…
ಬಂಟ್ವಾಳ, ಆ. 12 : ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಖಾಸಗಿ ಶಾಲೆಗೆ ಸೇರಿದ ಬಸ್ಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ಯಾಂತ್ರಿಕ ದೋಷದಿಂದ ನೇರವಾಗಿ ಕೆಳಗಡೆ ಚಲಿಸಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಬೆಳ್ತಂಗಡಿ, ಆ. 11 : ಧರ್ಮಸ್ಥಳ-ಉಜಿರೆ ಮುಖ್ಯ ರಸ್ತೆಯ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತನನ್ನು ಮಡಂತ್ಯಾರ್ನ ಪಾರೆಂಕಿ ಪಾಂಗಲ್ ನಿವಾಸಿ ಸನತ್ (30) ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ, ಆ. 10 : ಶಿರ್ವ-ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸ್ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವರದಿ ಪ್ರಕಾರ,ಆರೋಪಿ ಉತ್ತರಖಾಂಡದ ಅಜಯ್ ರಸ್ತೋಗಿ ಯಾನೆ ಅನ್ಮೋಲ್(23) ಎಂಬಾತನನ್ನು ಕುಮಟಾದಲ್ಲಿ, ಬಿಹಾರದ ಜಿಯಾಹುಲ್ ವಜೂಲ್ ಶೇಖ್ ಯಾನೆ ದೀಪಕ್(38) ಎಂಬಾತನನ್ನು ಭಟ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಮೊದಲು ಉತ್ತರ ಪ್ರದೇಶ ಥಾಣಾ ಪಿಲ್ವದ ರಾಜು(42) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ. 7ರಂದು ಮಧ್ಯಾಹ್ನ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿರುವ ಪ್ರಿನ್ಸ್ ಎಂಟರ್ಪ್ರೈಸಸ್ ಕಚೇರಿಗೆ ಬಂದಿದ್ದ ಡೇವಿಡ್ ಡಿಸೋಜಾ ಅವರು, ಬಳಿಕ ತನ್ನ ಥಾರ್ ವಾಹನದತ್ತ ತೆರಳಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಆರೋಪಿಗಳು ಡೇವಿಡ್ ಡಿಸೋಜಾ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡ ಡೇವಿಡ್ ಡಿಸೋಜಾ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು…
ಮಂಗಳೂರು,ಆ. 09 : 2003ರಲ್ಲಿ ಸ್ಥಾಪನೆಯಾದ ತುಳುನಾಟಕ ಕಲಾವಿದರ ಒಕ್ಕೂಟವು 21 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಒಕ್ಕೂಟವು ನಿರಂತರವಾಗಿ ವಾರ್ಷಿಕ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಅಶಕ್ತ ಕಲಾವಿದರಿಗೆ ಧನಸಹಾಯ ಮತ್ತು ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. 2026-27ನೇ ಸಾಲಿನ ಕಾರ್ಯಕ್ರಮವು ಆ.11ರಂದು ಸಂಜೆ 5 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಆ.11ರಂದು ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಾರ್ಷಿಕ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮ ಮತ್ತು ಅಶಕ್ತ ಕಲಾವಿದರಿಗೆ ಗೌರವಧನ ವಿತರಣೆ ನಡೆಯಲಿದೆ ಎಂದರು. ಈ ಸಾಲಿನ ತೌಳವ ಪ್ರಶಸ್ತಿಯನ್ನು ಹಿರಿಯ ನಾಟಕಕಾರ, ನಟ, ಕಲಾ ನಿರ್ದೇಶಕ ಹಾಗೂ ಸಾಹಿತಿ ತಮ್ಮ ಲಕ್ಷ್ಮಣ ಅವರಿಗೆ ಪ್ರದಾನಿಸಲಾಗುವುದು. ಹಿರಿಯ ಕಲಾವಿದರಾದ ತಿಮ್ಮಪ್ಪ ಶೆಟ್ಟಿ…
ಮಂಗಳೂರು,ಆ. 08 : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಇದರ ರಾಜ್ಯ ಸಮಿತಿಯ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಹೋರಾಟಗಾರ ಎಂ. ದೇವದಾಸ್ ಅವರಿಗೆ ಗೌರವ ನುಡಿ ನಮನ ಕಾರ್ಯಕ್ರಮವನ್ನು ಆಗಸ್ಟ್ 10ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಉರ್ವಸ್ಟೋರ್ನ ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದು, ರಾಜ್ಯ ಸಂಚಾಲಕ ಎಂ. ಸೋಮಶೇಖರ್ (ಹಾಸನ) ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘಟನೆಯ ರಾಜ್ಯ ಹಾಗೂ ಜಿಲ್ಲಾ ಮುಖಂಡರು ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು ಮಾತನಾಡಿ, ಡಿಸಿ ಮನ್ನಾ ಭೂಮಿ ಹಂಚಿಕೆ ವಿಚಾರದಲ್ಲಿ ಎಂ. ದೇವದಾಸ್ ಅವರು ತೀವ್ರ ಹೋರಾಟ ನಡೆಸಿದ್ದು, ಅವರ ಹೋರಾಟವನ್ನು ಸಂಘಟನೆಯ ಮೂಲಕ ಮುಂದುವರಿಸಲಾಗುವುದು…
ಮಂಗಳೂರು, ಆ. 08 : ಕುಂದಾಪುರ ಮೂಲದವರು ವೃತ್ತಿ ನಿಮಿತ್ತ ಮಂಗಳೂರಿನಲ್ಲಿ ನೆಲೆಸಿದ್ದರೂ ತಮ್ಮ ಭಾಷೆ, ಸಂಸ್ಕೃತಿ, ಆಚರಣೆ ಹಾಗೂ ಸಂಪ್ರದಾಯವನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ಆಶ್ರಯದಲ್ಲಿ ‘ವಿಶ್ವ ಕುಂದಾಪ್ರ ದಿನಾಚರಣೆ’ ಹಾಗೂ ‘ಕುಂದಾಪ್ರ ಕನ್ನಡ ಹಬ್ಬ–2026’ ಅನ್ನು ಆಗಸ್ಟ್ 9ರಂದು ಮಂಗಳೂರಿನ ಉರ್ವಸ್ಟೋರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿಯ ಅಧ್ಯಕ್ಷೆ ಮಾಲತಿ ಎಸ್.ಶೆಟ್ಟಿ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 7.30ರಿಂದ ರಾತ್ರಿ 8.30ರವರೆಗೆ ವಿವಿಧ ಸಾಂಸ್ಕೃತಿಕ, ಕ್ರೀಡಾ ಹಾಗೂ ಆರೋಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12.30ರವರೆಗೆ ವಾಮಂಜೂರಿನ ಕಾಯ ಹೆಲ್ತ್ ಕೇರ್ ಡಯಾಗ್ನೋಸಿಸ್ ಆ್ಯಂಡ್ ಕ್ಲಿನಿಕ್ ವತಿಯಿಂದ ಉಚಿತ ರಕ್ತ ತಪಾಸಣಾ ಶಿಬಿರ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಎನ್ಎಸ್ಎಸ್ ಘಟಕದ ವತಿಯಿಂದ ವೈದ್ಯ ಡಾ.ಅವಿನ್ ಆಳ್ವ ಅವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ…












