Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಡಿ. 28 : ಸಂಸದ ಬೃಜೇಶ್ ಚೌಟರ ನೇತೃತ್ವದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳದಲ್ಲಿ ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಕಂಬಳ ಗ್ರಾಮೀಣ ಜನರ ಪರಿಶ್ರಮ ಮತ್ತು ಗೌರವದ ಸಂಕೇತವೂ ಆಗಿದೆ. ಗ್ರಾಮೀಣ ಪ್ರದೇಶದಲ್ಲಿದ್ದ ಕಂಬಳವನ್ನು ಸಂಸದ ಕ್ಯಾ.ಬೃಜೇಶ್ ಚೌಟರು ನಗರ ಪ್ರದೇಶಕ್ಕೆ ಪರಿಚಯಿಸಿದ್ದಾರೆ. ಕಂಬಳ ಒಂದು ಗ್ರಾಮೀಣ ಕ್ರೀಡೆಯಲ್ಲ ಅದು ರಾಜ್ಯದ ಅಸ್ಥಿತೆ ಎಂದರು. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದ ಕ್ಯಾ.ಬೃಜೇಶ್ ಚೌಟ ಅವರು, ‘ಬ್ಯಾಕ್ ಟು ಊರು ಪರಿಕಲ್ಪನೆ’ಯು ದೇಶ ಮತ್ತು ವಿದೇಶಗಳಲ್ಲಿ ನೆಲೆಸಿರುವವ ಕರಾವಳಿಗರು ತಾಯ್ನಾಡಿಗೆ ಸಾಮಾಜಿಕ ಕೊಡುಗೆಗಳನ್ನು ನೀಡುವಂತೆ ಪ್ರೇರೇಪಿಸುವ ಕೆಲಸವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ‘ಬ್ಯಾಕ್ ಟು ಊರು’ ಪರಿಕಲ್ಪನೆಯಡಿ ಸಾಧನೆಗೈದ ಒಂಬತ್ತು ಉದ್ಯಮಿಗಳನ್ನು ಸನ್ಮಾನಿಸಲಾಯಿತು. ಎಂ.ಆರ್.ಜಿ. ಗ್ರೂಪ್ ನ ಮ್ಹಾಲಕರು ಮತ್ತು ಮಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ದ.ಕ.…
ಮಂಗಳೂರು,ಡಿ. 27 : ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸದ ವೈಕುಂಠ ಏಕಾದಶಿಯನ್ನು ಡಿ.30 ರಂದು ಭಕ್ತಿಪೂರ್ವಕವಾಗಿ ಆಚರಿಸಲಾಗುವುದು ಹಾಗೂ ಕ್ಷೇತ್ರಕ್ಕೆ ಭೇಟಿ ನೀಡುವ ಕುಟುಂಬದ ಓರ್ವ ಭಕ್ತರಿಗೆ ಪ್ರಸಾದ ರೂಪದಲ್ಲಿ ತುಳಸಿ ಗಿಡ ವಿತರಣೆ ಮಾಡಲಾಗುವುದೆಂದು ಗಣೇಶ್ ನಾಗ್ವೇಕರ್ ಅವರು ದೇವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ‘ನೈಕಾದಶ್ಯಾಃ ಪರಂ ವ್ರತಂ ಎಂಬ ಪುರಾಣ ವಚನದಂತೆ ಏಕಾದಶಿ ವ್ರತವೇ ಶ್ರೇಷ್ಠವೆಂದು ಶಾಸ್ತ್ರಗಳು ಹೇಳುತ್ತವೆ. ಈ ದಿನ ವೈಕುಂಠದ್ವಾರ ತೆರೆದಿರುತ್ತದೆ ಎಂಬ ಭಕ್ತರ ನಂಬಿಕೆ ಇದೆ. ವೈಕುಂಠ ಏಕಾದಶಿ ದಿನ ಶ್ರೀ ವೆಂಕಟೇಶ್ವರ ಅಥವಾ ಶ್ರೀ ವಿಷ್ಣು ದೇವರ ದರ್ಶನ ಮಾಡಿದರೆ ಸ್ವರ್ಗಪ್ರಾಪ್ತಿ ಹಾಗೂ ಆತ್ಮಿಕ ಶಾಂತಿ ದೊರೆಯುತ್ತದೆ ಎಂಬ ಪ್ರತೀತಿ ಇದೆ ಎಂದರು. ಈ ಪವಿತ್ರ ಪರ್ವಕಾಲದಲ್ಲಿ ಲೋಕಕಲ್ಯಾಣ ಹಾಗೂ ಚೈತನ್ಯಾಭಿವೃದ್ಧಿಯ ಸಂಕಲ್ಪದೊಂದಿಗೆ ಶ್ರೀ ದೇವರ ಸಾನಿಧ್ಯದಲ್ಲಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪ್ರಶ್ನೆಯಾಗ, ಅಷ್ಟಾವಧಾನ ಸೇವೆಗಳನ್ನು ಶ್ರೀ…
ಮಂಗಳೂರು,ಡಿ. 27 : ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡು ಕರೆ ‘ಮಂಗಳೂರು ಕಂಬಳ’ ಡಿ.27, ಶನಿವಾರ ಅದ್ದೂರಿಯಾಗಿ ಉದ್ಘಾಟನೆಗೊಂಡಿತು. ಕಂಕನಾಡಿ ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಅಧ್ಯಕ್ಷ ರಾದ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು.ಕಟೀಲು ಕ್ಷೇತ್ರದ ಅರ್ಚಕ ಅನಂತಪದ್ಮನಾಭ ಅಸ್ರಣ್ಣರು ತೆಂಗಿನ ಕೊಂಬು ಅರಳಿಸುವ ಮೂಲಕ ಜೋಡುಕರೆಯಲ್ಲಿ ಕಂಬಳ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಮಂಗಳೂರು ಕಂಬಳ ಕ್ರೀಡಾಕೂಟವು ಸ್ಥಳೀಯ ಜಾನಪದ ಕ್ರೀಡೆಗಳನ್ನು ಸಂರಕ್ಷಿಸುವ ಸಲುವಾಗಿ ಆಯೋಜಿಸಲಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ತುಳುನಾಡಿನ ಸಂಸ್ಕೃತಿಯು ಮುಂದಿನ ಪೀಳಿಗೆಗೆ ತಲುಪುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಕೆಂಗಿನಮನೆ, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೋಡಿಕಲ್, ಸಂಜಯ್ ಪ್ರಭು, ಜೋಯಲೆಸ್ ಡಿಸೋಜ, ವಸಂತ್ ಜೆ. ಪೂಜಾರಿ,…
ಮಂಗಳೂರು, ಡಿ.26 : ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ದೇಶ ಕಂಡ ಮಹಾನಾಯಕ ಅಟಲ್ ಜೀ ನೆನಪಿನಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳು ನಡೆಯುತ್ತಿವೆ. ಅದರ ಭಾಗವಾಗಿ ನಮ್ಮ ಕ್ಷೇತ್ರದ ಈ ಶಾಲೆಯಲ್ಲಿ ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು ನೆಡಲಾಗುತ್ತಿದೆ. ಆ ಮೂಲಕ ದೇಶ ಕಂಡ ಅಪರೂಪದ ನಾಯಕರ ಸ್ಮರಣೆ ಮಾಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪ್ರಮುಖರಾದ ಪೂರ್ಣಿಮಾ, ಅಶ್ವಿತ್ ಕೊಟ್ಟಾರಿ, ಪೂರ್ಣಿಮಾ ರಾವ್, ಮೋಹನ್ ಪೂಜಾರಿ, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು, ಕಾರ್ಯಕರ್ತರು, ಶಾಲೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಂಗಳೂರು, ಡಿ. 25 : ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ ‘ನೆರವು-2025’ ಗುರುವಾರ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಎಂ.ಆರ್.ಜಿ.ಗ್ರೂಪಿನ ಚೇರ್ಮನ್ ಡಾ.ಪ್ರಕಾಶ್ ಶೆಟ್ಟಿ ಅವರು, ನಾನು 2019ರಲ್ಲಿ ನನ್ನ ಆತ್ಮೀಯರು ಹೇಳಿದ್ದಕ್ಕೆ ಧ್ವನಿಗೂಡಿಸಿ ನೆರವು ಯೋಜನೆ ಪ್ರಾರಂಭಿಸಿದೆ. ಏಳು ಜಿಲ್ಲೆಗಳ ಫಲಾನುಭವಿಗಳಿಗೆ ಇಂದು ನೀಡುತ್ತಿರುವ ಆರ್ಥಿಕ ಸಹಾಯದ ಸದುಪಯೋಗವಾಗಬೇಕು.ಮಕ್ಕಳು ಇದರ ಪ್ರಯೋಜನ ಪಡೆದುಕೊಂಡು ಸಮಾಜದಲ್ಲಿ ಎತ್ತರದ ಸ್ಥಾನಕ್ಕೇರಬೇಕು. ಮುಂದೆ ನನ್ನಂತೆ ಸಮಾಜದ ನೊಂದವರ ಶೋಷಿತರ ಪರ ನೀವೆಲ್ಲರೂ ನಿಲ್ಲಬೇಕು ಎಂದರು. ಈ ವರ್ಷ ನೆರವು ಯೋಜನೆ ಏಳನೇ ವರ್ಷವನ್ನು ಪೂರೈಸುತ್ತಿದೆ. ಇನ್ನು ಮೂರು ವರ್ಷಗಳ ಕಾಲ ಯೋಜನೆ ಮುಂದುವರಿಯುತ್ತದೆ. ದಶಮಾನೋತ್ಸವ ಬಳಿಕ ‘ನೆರವು’ ಯೋಜನೆಯ ಫಲಾನುಭವಿಗಳನ್ನು ಸೇರಿಸಿಕೊಂಡು ಅದಕ್ಕೊಂದು ಸಾಮೂಹಿಕ ರೂಪ ಕೊಡುವ ಚಿಂತನೆ ಇದೆ.ಈ ಯೋಜನೆಯನ್ನು ಆರಂಭ ಮಾಡಿದ ಮೊದಲ ವರ್ಷ ಒಟ್ಟು 1.25 ಕೋ.ರೂ. ನೆರವು ವಿತರಿಸಿದ್ದೇವೆ.…
ಮಂಗಳೂರು,ಡಿ.24 : ಕ್ಯಾ.ಬ್ರಿಜೇಶ್ ಚೌಟ ನೇತ್ರತ್ವದಲ್ಲಿ 9ನೇ ವರ್ಷದ ರಾಮ – ಲಕ್ಷ್ಮಣ ಜೋಡುಕರೆ ಕಂಬಳ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಡಿ. 27 ರಂದು ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ದ.ಕ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 27 ರಂದು ಬೆಳಗ್ಗೆ 8 ಗಂಟೆಗೆ ಕಂಬಳದ ಉದ್ಘಾಟನೆ ನಡೆಯಲಿದ್ದು ಉದ್ಘಾಟನೆಯನ್ನು ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಮೊಕ್ತೇಸರರಾದ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೆಂದ್ರ ಸಹಿತ ಶಾಸಕರು, ಸಾಮಾಜಿಕ,ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮ ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು , ಬಹುಮಾನ ವಿತರಣೆ ರವಿವಾರ ಬೆಳಗ್ಗೆ ನಡೆಯಲಿದೆ ಎಂದರು. ನಗರದಲ್ಲಿ ನೆಲೆಸಿರುವ ದೇಶ ವಿದೇಶದ ಮಕ್ಕಳಿಗೆ ತುಳುನಾಡಿನ ಸಂಸ್ಕೃತಿಯ ಪರಿಚಯ ಆಗಬೇಕು…
ಮಂಗಳೂರು, ಡಿ. 23 : : ಎಂ.ಆರ್.ಜಿ. ಗ್ರೂಪ್ ನ ಆಶಾ-ಪುಕಾಶ್ ಶೆಟ್ಟಿ ಅವರ ಸಹಾಯ ಪ್ರದಾನ ಸಮಾರಂಭ ‘ನೆರವು-2025’ ಡಿ. 25ರಂದು ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದೆ. 7ನೇ ವರ್ಷದ ಈ ಸಮಾರಂಭದಲ್ಲಿ ಸುಮಾರು 4 ಸಾವಿರ ಕುಟುಂಬಗಳು ಹಾಗೂ 100ಕ್ಕೂ ಅಧಿಕ ಸಂಘ-ಸಂಸ್ಥೆಗಳಿಗೆ ಒಟ್ಟು 9.5 ಕೋಟಿ ಮೊತ್ತದ ನೆರವು ವಿತರಿಸಲಾಗುವುದು ಎಂದು ಯೋಜನೆಯ ಪವರ್ತಕರಾದ ಎಂ.ಆರ್.ಜಿ. ಗ್ರೂಪ್ನ ಚೇರ್ಮನ್ ಡಾ. ಪುಕಾಶ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆರವು’ ಯೋಜನೆ ಈ ವರ್ಷ ಏಳನೇ ವರ್ಷವನ್ನು ಪೂರೈಸುತ್ತಿದೆ. ಯೋಜನೆ ಇನ್ನೂ ಮೂರು ವರ್ಷಗಳ ಕಾಲ ಮುಂದುವರಿಯಲಿದ್ದು, ದಶಮಾನೋತ್ಸವದ ಬಳಿಕ ಫಲಾನುಭವಿಗಳನ್ನು ಒಗ್ಗೂಡಿಸಿ ಯೋಜನೆಗೆ ಸಾಮೂಹಿಕ ಸ್ವರೂಪ ನೀಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಮುಂದಿನ ದಿನಗಳಲ್ಲಿ ಪ್ರತಿವರ್ಷ ಕನಿಷ್ಠ 14 ಸಾವಿರ ಕುಟುಂಬಗಳಿಗೆ ನೆರವು ನೀಡುವ ಸಾಧ್ಯತೆ ಉಂಟಾಗಲಿದೆ ಎಂದರು. ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ…
ಮಂಜೇಶ್ವರ,ಡಿ.22 : ಇಲ್ಲಿನ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಕಾರ್ಯಕ್ರಮ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು. ಅತೀ ವಂದನೀಯ ಬಿಷಪ್ ಹೇಮಚಂದ್ರ ಕುಮಾರ್, ಒಫ಼್ ಚರ್ಚ್ ಒಫ಼್ ಸೌತ್ ಇಂಡಿಯಾ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ, ಆಚರಣೆಗೆ ಮುನ್ನ ಕ್ಯಾಂಪಸ್ಗೆ ಭೇಟಿ ನೀಡಿದರು, ಅವರು ನಿವಾಸಿಗಳನ್ನು ಆಶೀರ್ವದಿಸಿದರು ಮತ್ತು ಪ್ರೀತಿ, ಕರುಣೆ ಮತ್ತು ಮಾನವೀಯ ಕಾರ್ಯಗಳ ಅದ್ಭುತ ಸಂದೇಶವನ್ನು ನೀಡಿದರು. ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಸಂತ್ ಶೆಟ್ಟಿ ಅತಿಥಿಯಾಗಿ ಉಪಸ್ಥಿತಿ ಇದ್ದು, ಕ್ರಿಸ್ತ ಮತ್ತು ಕೃಷ್ಣರನ್ನು ಹೋಲಿಸುವ ಸಂದೇಶ ಹೊಂದಿರುವ ಮಾತುಗಳನ್ನು ಆಡಿದರು.ಬ್ರದರ್ ಜೋಸೆಫ್ ಕ್ರಾಸ್ತಾ ಅವರ ಸೇವೆ ಶ್ಲಾಘ ನೀಯ ಎಂದರು. ದೆಹಲಿಯ ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಮತ್ತು ಬಾಂಬೆಯ ಪಿಟಿಐ ಕನ್ಸಲ್ಟೆನ್ಸಿಯ ಮಾಲೀಕರು ಜೋಸೆಫ್ ಎಲಿಯಾಸ್ ಮಿನೆಜಸ್, ಅವರು ತಮ್ಮ ಕಾವ್ಯಾತ್ಮಕ ಶೈಲಿಯಲ್ಲಿ ತಮ್ಮ ಅನುಭವ ಹಾಗೂ ಭಾವನೆಗಳನ್ನು ಹಂಚಿಕೊಂಡರು. ನೂತನವಾಗಿ ಆಯ್ಕೆಯಾದ ಕಾಸರಗೋಡು ಜಿಲ್ಲಾ…
ಮಂಗಳೂರು, ಡಿ.21 : ದಕ್ಷಿಣ ಕನ್ನಡ ಜಿಲ್ಲಾಡಳಿತ , ಸ್ಥಳೀಯ ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಒಂದು ತಿಂಗಳು ನಡೆಯಲಿರುವ ಕರಾವಳಿ ಉತ್ಸಾವಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ಶನಿವಾರ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು,ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರ 2 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.ಪ್ರಥಮ ಬಾರಿಗೆ ರಾಜ್ಯ ಸರಕಾರ ಕರಾವಳಿ ಉತ್ಸಾವಕ್ಕೆ ದೊಡ್ಡ ಪ್ರಮಾಣದ ಅನುದಾನ ಕೊಟ್ಟಿದೆ .ಕರಾವಳಿ ಉತ್ಸವ ಒಂದು ತಿಂಗಳುಗಳ ಕಾಲ ನಡೆಯಲಿದೆ. ಈ ದಿನಗಳಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ, ಕ್ರೀಡಾ ಮತ್ತು ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ,ಐವನ್ ಡಿ ಸೋಜ,ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂಎ ಗಫೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,…
ಮಂಗಳೂರು, ಡಿ.20 : ಮಂಗಳೂರಿನ ಶಕ್ತಿನಗರದಲ್ಲಿರುವ ರಮಾಶಕ್ತಿ ಮಿಷನ್ ನಲ್ಲಿ ಡಿ. 25 ರಿಂದ 29ರವರೆಗೆ 5 ದಿನಗಳ ಕಾಲ ಲೋಕ ಕಲ್ಯಾಣಕ್ಕಾಗಿ ಶ್ರೀ ಸಹಸ್ರ ಚಂಡಿಕಾಯಾಗ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ಸುಧಾ ಪ್ರಸಾದ್ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವೇದ ಶಾಸ್ತ್ರಾನುಸಾರ ನಿರ್ಮಿತ 10 ಹೋಮ ಕುಂಡಗಳಲ್ಲಿ ಸುಮಾರು 130ಕ್ಕೂ ಹೆಚ್ಚು ಖುತ್ವಿಕರು ನಿರಂತರ ಯಾಗದಲ್ಲಿ ಪಾಲ್ಗೊಳ್ಳುತ್ತಾರೆ. ವೈದಿಕ ಪಂಡಿತರಾದ ಶ್ರೀ ಲಕ್ಷ್ಮೀ ನಾರಾಯಣ ಸೋಮಯಾಜಿ ಅವರು ಈ ಯಾಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ದಿನಾಂಕ 29 ರಂದು ನಡೆಯುವ ಮಹಾ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಶ್ರಂಗೇರಿ ಶಾರದಾ ಮಠದ ಪೀಠಾಧಿಪತಿಯಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಡಿ.23ರಂದು ಹೊರಕಾಣಿಕೆ ನಡೆಯಲಿದೆ. 25ರಂದು ಗಣಹೋಮ,26 ಶುಕ್ರವಾರದಂದು ಲಕ್ಷ್ಮೀನಾರಾಯಣ ಹ್ರದಯ ಹೋಮ,27ಶನಿವಾರದಂದು ನವಗ್ರಹ ಸಹಿತ ಮಹಾಮ್ರತ್ಯುಂಜಯ ಹೋಮ,28 ರಂದು ಧನ್ವಂತರಿ ಹೋಮ ಹಾಗೂ 29ರಂದು ಮಹಾ ಚಂಡಿಕಾ ಹೋಮ ನಡೆಯಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉದಯ್.ಡಿ.ಭಟ್ಕಳ್ ಅಧ್ಯಕ್ಷರು,ಡಾ.ಪೂರ್ಣಿಮಾ ಬಾಳಿಗ,ಅಶೋಕ್…











