Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಜೂ. 17 : ನಿರ್ದೇಶಕ ಪಿ.ವಿ. ಪ್ರದೀಪ್ ಕುಮಾರ್ ಅವರ ಕಲ್ಪನೆ ಹಾಗೂ ಸಾರಥ್ಯದಲ್ಲಿ ಮೂಡಿಬಂದಿರುವ ಎಐ ನಿರ್ಮಿತ ಕಿರುಚಿತ್ರ ‘ಅದಿತಿ’ ಇದರ ಪ್ರೀಮಿಯರ್ ಶೋ ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಪಿ.ವಿ. ಪ್ರದೀಪ್ ಕುಮಾರ್ ಅವರು ಮಾತಾಡಿ, ‘ಅದಿತಿ’ ಚಿತ್ರವು ಒಂದು ವಿಭಿನ್ನ ಶೈಲಿಯ ಸಸ್ಪೆನ್ಸ್, ಆಕ್ಷನ್ ಹಾಗೂ ಎಮೋಷನಲ್ ಲವ್ ಸ್ಟೋರಿಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಸ್ಪೆನ್ಸ್ ಮತ್ತು ರಹಸ್ಯಗಳ ಜೊತೆಗೆ ಪ್ರೇಮಕಥೆಯೂ ಇದೆ ಎಂದರು. ‘ಅದಿತಿ’ ಚಿತ್ರದ ಮೂಲಕ ದೊಡ್ಡ ಮಟ್ಟದ ಚಿತ್ರರಂಗದ ಪ್ರಯಾಣಕ್ಕೆ ಹೆಜ್ಜೆ ಇಡುತ್ತಿದ್ದೇನೆ. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ, ಹೊಸ ತಂತ್ರಜ್ಞಾನವಾದ ಎ ಐ ಸಹಾಯದೊಂದಿಗೆ ಈ ಚಿತ್ರದ ದೃಶ್ಯಗಳನ್ನು ಕಲ್ಪಿಸಿಕೊಳ್ಳಲಾಗಿದೆ. ಕಥೆಗಾರನೊಬ್ಬನ ಕಲ್ಪನೆಗೆ ತಂತ್ರಜ್ಞಾನ ಸಾಥ್ ನೀಡಿದಾಗ ‘ಅದಿತಿ’ ಹೇಗೆ ಮೂಡಿಬಂದಿದ್ದಾಳೆ ಎಂಬುದನ್ನು ಮಾಧ್ಯಮಗಳ ಮುಂದೆ ತರಲು ಹೆಮ್ಮೆಯಾಗುತ್ತಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಪತ್ರಿಕಾ ಭವನದ ಅಧ್ಯಕ್ಷರು ಪಿಬಿ ಹರೀಶ್ ರೈ, ಮಂಗಳೂರು ಪಿಂಗಾರ ಪತ್ರಿಕೆಯ…
ಉಡುಪಿ, ,ಜೂ. 16 : ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ , ರಸ್ತೆ ಮಧ್ಯೆ ಬಸ್ ಡಿವೈಡರ್ಗೆ ಡಿಕ್ಕಿಯಾದ ಸೋಮವಾರ ಬೆಳಗ್ಗೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಮಾಧವ ಕೃಪಾ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಬಸ್ ಚಾಲನೆಯಲ್ಲಿರುವಾಗಲೇ ಅಸ್ವಸ್ಥಗೊಂಡು ಅವರು ತಕ್ಷಣ ಬಸ್ಸನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದರು. ಪರಿಸ್ಥಿತಿಯನ್ನು ಅರಿತ ಅವರು ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್ಗೆ ಡಿಕ್ಕಿಯಾಗಿದೆ. ಆದರೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯ ಡಿವೈಡರ್ಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಬಸ್ನಲ್ಲಿದ್ದ ವಿದ್ಯಾರ್ಥಿ ಗಳು ಅಪಾಯದಿಂದ ಪಾರಗಿದ್ದಾರೆ ವಿದ್ಯಾರ್ಥಿಗಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಸ್ಥಳೀಯ ನಿವಾಸಿಗಳು ಮತ್ತು ಶಾಲಾ ಸಿಬ್ಬಂದಿ ತಕ್ಷಣ ಚಾಲಕನಿಗೆ ಸಹಾಯ ಮಾಡಲು ಧಾವಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು.
ಮಂಗಳೂರು, ಜೂ.15: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್ ಸಿಎ) ವತಿಯಿಂದ ನಡೆಯುವ ಪ್ರೀಮಿಯರ್ ಟಿ-20 ಕ್ರಿಕೆಟ್ ಪಂದ್ಯಾಟ ‘ಮಹಾರಾಜ ಟ್ರೋಫಿ-2026’ ಇದರಲ್ಲಿ ಪಾಲ್ಗೊಳ್ಳುವ ಕೋಸ್ಟಲ್ ಕಿಂಗ್ಸ್ ಮಂಗಳೂರು ಕ್ರಿಕೆಟ್ ತಂಡದ ಜೆರ್ಸಿ ಮತ್ತು ತಂಡದ ಗೀತೆ ಬಿಡುಗಡೆ ಕಾರ್ಯಕ್ರಮವು ಕೆಎಸ್ ಸಿಎ ಆಶ್ರಯದಲ್ಲಿ ಭಾನುವಾರ ನಗರದ ಹೋಟೆಲ್ ಸಭಾಂಗಣವೊಂದರಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೋಸ್ಟಲ್ ಕಿಂಗ್ಸ್ ಮಂಗಳೂರು ಕ್ರಿಕೆಟ್ ತಂಡದ ನಾಯಕನಾಗಿ ಕರುಣ್ ನಾಯರ್ ಮತ್ತು ಉಪನಾಯಕನಾಗಿ ಶ್ರೇಯಸ್ ಗೋಪಾಲ್ನ್ನು ಆಯ್ಕೆ ಮಾಡಲಾಯಿತು. ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ಮಾಲಕತ್ವವನ್ನು ಮಾನ್ಯತಾ ಡೆವಲಪರ್ ಪಡೆದುಕೊಂಡಿದೆ.ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯತಾ ಡೆವಲಪರ್ಸ್ ಮಾಲೀಕ ವಿನೋದ್ ನಾಯ್ಡು ಇದು ಕರಾವಳಿಯನ್ನು ಪ್ರತಿನಿಧಿಸುವ ತಂಡ ಆದ್ದರಿಂದ ಈ ತಂಡಕ್ಕೆ ಕೋಸ್ಟಲ್ ಕಿಂಗ್ಸ್ ಎಂದು ಹೆಸರು ಇಡಲಾಗಿದೆ ಎಂದರು. ಕೆಎಸ್ ಸಿಎ ವತಿಯಿಂದ ಜೂನ್ ಮತ್ತು ಜುಲೈನಲ್ಲಿ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯ ಮೈದಾನಗಳಲ್ಲಿ ಪಂದ್ಯಾಟಗಳು ನಡೆಯಲಿದೆ. ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮಂಗಳೂರು ವಲಯದ ಅಧ್ಯಕ್ಷ…
ಮಂಗಳೂರು,ಜೂ. 14 : ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು, ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಶ್ಲಾಘಿಸಿದರು. ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರ ದೂರದೃಷ್ಟಿಯ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ಸಮರ್ಪಿತ ಸೇವೆಯನ್ನು ಪ್ರಶಂಸಿಸಿದರು. ಗ್ರಾಹಕ ಸ್ನೇಹಿ ಸೇವೆ, ವೃತ್ತಿಪರತೆ ಮತ್ತು ಬದ್ಧತೆಯೇ ಬ್ಯಾಂಕ್ಗೆ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಟ್ಟಿದೆ. ಬ್ಯಾಂಕ್ನ ನಿರಂತರ ಬೆಳವಣಿಗೆಗೆ ನವೀನತೆ, ತಂಡದ ಕಾರ್ಯಪಟುತ್ವ, ನಿರಂತರ ಕಲಿಕೆ ಹಾಗೂ ಗ್ರಾಹಕ ಕೇಂದ್ರಿತ ಸೇವೆ ಅಗತ್ಯವೆಂದು…
ನವದೆಹಲಿ,ಜೂ. 13 : ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30ರಂದು ನಿವೃತ್ತರಾದ ನಂತರ ಧೀರಜ್ ಸೇಠ್ ಅವರು ಭಾರತೀಯ ಸೇನೆಯ ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನವದೆಹಲಿ, ಜೂ. 12 : ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಅಗ್ನಿ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಮುಂಜಾನೆ ಸುಮಾರು 2:30ರ ವೇಳೆಗೆ ತುಘಲಕಾಬಾದ್ನ ಐದು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ನೆಲಮಹಡಿಯಲ್ಲಿ ಚಾರ್ಜ್ ಮಾಡಲಾಗುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು, ಕೆಲವೇ ಕ್ಷಣಗಳಲ್ಲಿ ಬೆಂಕಿ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದಾಗಿ ಒಳಭಾಗದಲ್ಲಿ ದಟ್ಟ ಹೊಗೆ ಆವರಿಸಿತು. ಇದರಿಂದ ಕಟ್ಟಡದಲ್ಲಿದ್ದ ನಿವಾಸಿಗಳು ಹೊರಬರಲಾಗದೇ ಅಲ್ಲೇ ಸಿಲುಕಿಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ…
ಬ್ರಹ್ಮಾವರ, ಜೂ. 11 : ತಾಯಿಯ ಕಂಕುಳಿನಲ್ಲಿದ್ದ ಮಗುವಿನ ಮೇಲೆ ತೆಂಗಿನ ಮರದಿಂದ ಕಾಯಿ ಬಿದ್ದು ಒಂದೂವರೆ ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ಮಂಗಳವಾರ ಬ್ರಹ್ಮಾವರದ ಹೆರಂಜೆಯಲ್ಲಿ ನಡೆದಿದೆ. ತಾಯಿಯು ಎಂದಿನಂತೆ ದೊಡ್ಡ ಮಗುವನ್ನು ಶಾಲೆಗೆ ಬಿಡಲು ಹೊರಟಿದ್ದರು. ಈ ವೇಳೆ ಸಣ್ಣ ಮಗುವನ್ನು ಕೂಡ ಎತ್ತಿಕೊಂಡು ಸ್ವಲ್ಪ ದೂರ ಸಾಗುವಷ್ಟರಲ್ಲಿ ದಾರಿ ಬದಿಯಲ್ಲಿದ್ದ ತೆಂಗಿನ ತೋಟದಲ್ಲಿದ್ದ ಮರದಿಂದ ಆಕಸ್ಮಿಕವಾಗಿ ತೆಂಗಿನ ಕಾಯಿ ನೇರವಾಗಿ ಮಗುವಿನ ತಲೆಗೆ ಬಿದ್ದಿದೆ. ಕೂಡಲೇ ಸ್ಥಳೀಯರು ಸೇರಿ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರು. ಮಗುವಿನ ತಲೆಗೆ ಗಂಭೀರ ಏಟು ಆಗಿದ್ದರಿಂದ ಕೂಡಲೇ ಶಸ್ತ್ರ ಚಿಕಿತ್ಸೆ ನಡೆಸಿದರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಸರಗೋಡು, ಜೂ. 10 : ಗಾಳಿಯ ಅಬ್ಬರಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಬುಧವಾರ ಕುಂಬಳೆ ಸಮೀಪದ ಪೆರುವಾಡ್ ಮೈದಾನ ಬಳಿ ನಡೆದಿದೆ. ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮೃತರನ್ನು ಪೆರುವಾಡಿನ ಅಬ್ದುಲ್ಲ (65) ಎಂದು ಗುರುತಿಸಲಾಗಿದೆ. ಅಬ್ದುಲ್ಲ ಅವರು ಬೆಳಿಗ್ಗೆ ಸ್ನೇಹಿತರಾದ ಇಬ್ರಾಹಿಂ ಮತ್ತು ಹಸೈನಾರ್ ಜೊತೆ ಕುಳಿತು ಮಾತನಾಡುತ್ತಿದ್ದ ವೇಳೆ ಜೋರಾಗಿ ಗಾಳಿ ಬೀಸಿದ ಪರಿಣಾಮ ತೆಂಗಿನ ಮರ ಮುರಿದು ಅವರ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಯಾಂಟೋ ಡೊಮಿಂಗೊ, ಜೂ. 09 : ಡೊಮಿನಿಕನ್ ರಿಪಬ್ಲಿಕ್ನಲ್ಲಿ ಖಾಸಗಿ ಜೆಟ್ ವೊಂದನ್ನು ಭೂಸ್ಪರ್ಶ ಮಾಡುವ ವೇಳೆ ಪತನಗೊಂಡು, ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಸಾವನಪ್ಪಿರುವ ಘಟನೆ ಭಾನುವಾರ ನಡೆದಿದೆ. ವಿಮಾನ ಹೊತ್ತಿಯುರಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪಘಾತದಲ್ಲಿ ಪೈಲಟ್ಗಳಾದ ಎರಿಕ್ ಜೇವಿಯರ್ ಡಿಯಾಗೋ ಮತ್ತು ರೂಡಿ ಗಜಲ್ ಮೃತಪಟ್ಟಿದ್ದಾರೆ. ಪೈಲಟ್ ಹೊರತಾಗಿ ವಿಮಾನದಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎಂದು ಡೊಮಿನಿಕನ್ ನಾಗರಿಕ ವಿಮಾನ ಯಾನ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಖಾಸಗಿ ಜೆಟ್ ಗಲ್ಫ್ ಸ್ಟ್ರೀಮ್ ಜಿ200 ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೆಕ್ಸಾಸ್ನ ಆಸ್ಟಿನ್ಗೆ ಹೊರಟಿತ್ತು.ಈ ವೇಳೆ ಜೆಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತು ಲ್ಯಾಂಡ್ ಆಗುತ್ತಿದ್ದಾಗ ವಿಮಾನ ನಿಯಂತ್ರಣ ಕಳೆದುಕೊಂಡಿದ್ದು, ಪಕ್ಕದ ಹುಲ್ಲುಗಾವಲು ಪ್ರದೇಶಕ್ಕೆ ನುಗ್ಗಿ, ಕ್ಷಣಾರ್ಧದಲ್ಲಿ ಹೊತ್ತಿಉರಿದಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾದರೂ ಕೂಡ ಪೈಲಟ್ಗಳನ್ನು ರಕ್ಷಿಸಲು…
ಮಂಗಳೂರು, ಜೂ. 08 : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ “ಕಜ್ಜ” ತುಳು ಚಲನಚಿತ್ರ ಜೂನ್ 11ರಂದು ಕರಾವಳಿ ಜಿಲ್ಲೆಗಳಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಾಹಿತ್ಯ ರಚನೆಕಾರ ಮೋಹನ್ ರಾಜ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವು ಜಿಷ್ಣು ಎಸ್. ಮೆನನ್ ಹಾಗೂ ಸಿದ್ದಾರ್ಥ್ ಶೆಟ್ಟಿ ಅವರ ನಿರ್ದೇಶನದಲ್ಲಿ, ವಿಶಾಂತ್ ಮಿನೆಜಿಸ್ ನಿರ್ಮಾಣ ಹಾಗೂ ಪ್ರವೀಣ್ ಸುವರ್ಣ ಅವರ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ. ಚಿತ್ರವು ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕಾರ್ಕಳ, ಕುಂದಾಪುರ, ಬೆಳ್ತಂಗಡಿ, ಸುಳ್ಯ, ಮುಡಿಪು ಸೇರಿದಂತೆ ಕರಾವಳಿಯ ವಿವಿಧ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದರು. “ಕಜ್ಜ” ಚಿತ್ರದಲ್ಲಿ ಸಿದ್ದಾರ್ಥ್ ಶೆಟ್ಟಿ, ಉಮೇಶ್ ಮಿಜಾರ್, ಅರವಿಂದ ಬೋಳಾರ್, ಸಂತೋಷ್ ಶೆಟ್ಟಿ, ಜಯಶೀಲಾ, ಉದಯ ಪೂಜಾರಿ, ಶ್ವೇತಾ ಕೋಟ್ಯಾನ್, ಸಹನಾ ಸುಧಾಕರ್, ವೆನ್ಸಿಟಾ ಡಯಾಸ್, ಮೋಹನ್ ರಾಜ್, ಗೌತಮ್ ಬಂಗೇರ, ಪ್ರಜ್ವಲ್ ಸೇರಿದಂತೆ ಹಲವಾರು ಕಲಾವಿದರು…












