Author: admin

ಮಂಗಳೂರು, ಆ.27.: ಮಣಿಪಾಲ ಆರೋಗ್ಯ ಕಾರ್ಡ್ 2026, ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್  ಅವರು  ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆ ಮಣಿಪಾಲದ ಪ್ರಸ್ತುತ ಕುಲಾಧಿಪತಿಗಳಾದ ಡಾ. ರಾಮ ದಾಸ್ ಎಂ. ಪೈ ಅವರ ಮಾರ್ಗದರ್ಶ ನದಲ್ಲಿ 2000ನೇ ಇಸವಿಯಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಕಳೆದ 26 ವರ್ಷಗಳಲ್ಲಿ ಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಆರಂಭಿಕ ವರ್ಷದಲ್ಲಿ ಕೇವಲ 3,200 ಕುಟುಂಬಗಳನ್ನು ಮಾತ್ರ ಹೊಂದಿದ್ದ ಈ ಯೋಜನೆಯು ಈಗ ಗಣನೀಯವಾಗಿ ವಿಸ್ತರಿ ಸಿದೆ. ಕಳೆದ ಹಣಕಾಸು ವರ್ಷದಲ್ಲಿ ಸುಮಾರು 2 ಲಕ್ಷ ಕುಟುಂಬಗಳು ನೋಂದಾಯಿಸಿಕೊಂಡಿದ್ದು, ಪ್ರಸ್ತುತ ಕರ್ನಾಟಕ ಮತ್ತು ಕೇರಳ ರಾಜ್ಯಗಳಾದ್ಯಂತ ಸುಮಾರು 6.5 ಲಕ್ಷ ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಎಂದವರು ಹೇಳಿದರು. ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಎ.…

Read More

ಮಂಗಳೂರು, ಆ.27 : ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ನಡೆಯಿತು.ಸಭೆಯನ್ನು ಶಶಿಧರ ಶೆಟ್ಟಿ ಬರೋಡ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾಗಿ 25 ಕೋಟಿ ರೂಪಾಯಿಗೂ ಮಿಕ್ಕಿ ಪರಿಹಾರ ಧನವನ್ನು ಬಡವರಿಗೆ ವಿತರಿಸಿದ್ದಾರೆ. ಒಳ್ಳೆಯ ಕೆಲಸಗಳಿಂದ ಬಂಟ ಸಮಾಜ ಇತರ ಸಮಾಜಕ್ಕೆ ಮಾದರಿಯಾಗಬೇಕು ಎಂದು ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು, ಬರೋಡ ಶಶಿ ಕ್ಯಾಟರಿಂಗ್ ನ ಮಾಲಕರಾದ ಶಶಿಧರ ಶೆಟ್ಟಿ ಬರೋಡ ತಿಳಿಸಿದರು. ಒಕ್ಕೂಟದ ನಿರ್ದೇಶಕ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಮಾಜಪರ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಐಕಳ ಹರೀಶ್ ಶೆಟ್ಟಿಯವರ ಸಂಘಟನೆ ಮತ್ತು ಪದಾಧಿಕಾರಿಗಳ ಕೆಲಸ ಕಾರ್ಯಗಳಿಂದ ಒಕ್ಕೂಟ ಹಲವು ಕೋಟಿ ರೂ.ಗಳನ್ನು ಬಡವರ ವಿವಿಧ ಕಾರ್ಯಗಳಿಗೆ ವಿನಿಯೋಗಿಸಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ…

Read More

ಮಂಗಳೂರು, ಆ.25 : ಮಂಗಳೂರು ಪ್ರೊಡಕ್ಕಿವಿಟಿ ಕೌನ್ಸಿಲ್ ವತಿಯಿಂದ ರೋಟರಿ ಕ್ಲಬ್ ಮಂಗಳೂರು ಸಹಯೋಗದಲ್ಲಿ ಮಂಗಳೂರಿನ ರೆಡ್ ಕ್ರಾಸ್ ಪ್ರೇರಣಾ ಹಾಲ್ ನಲ್ಲಿ ಆ.20,ಶುಕ್ರವಾರ ಎಂಪಿಸಿ ರೋಟರಿ ಕೋಸ್ಟೈಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್ – 2026 ಸಮಾವೇಶ ನಡೆಯಿತು. ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗಬೇಕು. ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 1 ರಷ್ಟು ಜನರಿಗೆ ಮಾತ್ರ ಸರಕಾರದಿಂದ ಉದ್ಯೋಗ ಒದಗಿಸಲು ಸಾಧ್ಯ. ಉಳಿದ ಶೇಕಡಾ 99 ರಷ್ಟು ಮಂದಿಗೆ ಖಾಸಗಿ ಅಥವಾ ಸ್ವಂತ ಉದ್ಯೋಗವೇ ಪ್ರಮುಖ ಅವಕಾಶವಾಗಿದೆ ಎಂದರು. ಎಂಪಿಸಿ ಕಾನ್ ಕೇವ್ ನಿರ್ದೇಶಕ ಹಾಗು ಮಹಾಪೋಷಕ ಸಿಎ ಎಸ್.ಎಸ್ ನಾಯಕ್ ಅವರು ಮಾತನಾಡಿ, ಕರಾವಳಿ ಕರ್ನಾಟಕದ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್‌ಎಂಇ) ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮ…

Read More

ಮಂಗಳೂರು , ಆ. 24 : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್), ‘ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್’ ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ.ಕಳೆದ 16 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳನ್ನು ನೋಂದಾಯಿಸಿದೆ  ಎಂದು ಶಾಖಾ ಮುಖ್ಯಸ್ಥ ಸೂರಜ್ ಪ್ರಭು ಅವರು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ ಮುಖ್ಯ ವೈಶಿಷ್ಟ್ಯಗಳು ಕೇವಲ ವಿಜ್ಞಾನಾಧಾರಿತ ಮೌಲ್ಯಮಾಪನ ಅಂಕಗಳನ್ನು ನೀಡದೆ, ವಿದ್ಯಾರ್ಥಿಯ ವಿಷಯ ಜ್ಞಾನ, ವಿಶ್ಲೇಷಣಾತ್ಮಕ ಸಾಮರ್ಥ್ಯ ಮತ್ತು ಪರೀಕ್ಷಾ ನಡವಳಿಕೆಯನ್ನು ವೈಜ್ಞಾನಿಕವಾಗಿ ವಿಶ್ಲೇಷಿಸುವ ‘ನೈದಾನಿಕ ಮೌಲ್ಯಮಾಪನ’ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದರು. ಪರೀಕ್ಷೆಯ ನಂತರ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿವರವಾದ ವರದಿ ಸಿಗಲಿದೆ. ಅರ್ಹ ವಿದ್ಯಾರ್ಥಿಗಳಿಗೆ ಆಕಾಶ್ ಸಂಸ್ಥೆಯ ಕ್ಲಾಸ್ರೂಮ್, ಹೈಬ್ರಿಡ್ ಮತ್ತು ಡಿಜಿಟಲ್ ಕೋರ್ಸ್ಗಳಿಗೆ 100% ವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ₹2.5 ಕೋಟಿ ನಗದು ಬಹುಮಾನ ಅತ್ಯುತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು ₹2.5 ಕೋಟಿ ಮೌಲ್ಯದ ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು. ಎಇಎಸ್ಎಲ್ನ…

Read More

ಮಂಗಳೂರು, ಆ. 23: ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ ಯಲ್ಲಿ 2416 ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ದೊರಕಿದೆ. 6183 ಜನರನ್ನುಮುಂದಿನ ಉದ್ಯೋಗ ಸಂದರ್ಶನಕ್ಕೆಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, 332 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು, 15,539 ಅಭ್ಯರ್ಥಿಗಳು ಭಾಗವಹಿಸಿದ್ದರು. ಮೇಳದಲ್ಲಿ ಭಾಗವಹಿಸಿದ್ದ 301 ಕಂಪನಿಗಳ ಫಲಿತಾಂಶಗಳನ್ನು ವೆಬ್‌ಸೈಟ್ (www.alvaspragati.com )ನಲ್ಲಿ ಪ್ರಕಟಿಸಲಾಗಿದೆ. ಉಳಿದ ಕಂಪನಿಗಳ ಹಾಗೂ ಅಭ್ಯರ್ಥಿಗಳ ಫಲಿತಾಂಶಗಳನ್ನು ನೇಮಕಾತಿ ಸಂಸ್ಥೆಗಳಿಂದ ಮಾಹಿತಿ ಲಭ್ಯವಾದಂತೆ ಪ್ರಕಟಿಸಲಾಗುವುದು. ಉದ್ಯೋಗ ಮೇಳದಂದು ಸ್ಥಳದಲ್ಲೇ ನೋಂದಣಿ ಮಾಡಿದಂತಹ ಎಸೆಸೆಲ್ಸಿ, ಪಿಯುಸಿಹಾಗೂ ಐಟಿಐ ಅಭ್ಯರ್ಥಿಗಳ ನೇಮಕಾತಿ ವಿವರಗಳನ್ನು ಆಳ್ವಾಸ್ ತಂಡದಿಂದ ದೂರವಾಣಿ ಕರೆ ಹಾಗೂ ಎಸ್‌ಎಂಎಸ್ ಮೂಲಕ ನೇರವಾಗಿ ತಲುಪಿಸಲಾಗುತ್ತದೆ ಎಂದು ತಿಳಿಸಿದರು. ಉತ್ಪಾದನಾ ಕ್ಷೇತ್ರದ 75 ಕಂಪನಿಗಳು ಭಾಗವಹಿಸಿ 523 ಮಂದಿಯನ್ನು…

Read More

ಮಂಗಳೂರು, ಆ.21  : ತುಳು ಭಾಷೆ, ಸಾಹಿತ್ಯ ಸಂಸ್ಕೃತಿ ಮತ್ತು ಪರಂಪರೆಯನ್ನು ಡಿಜಿಟಲ್ ಜಗತ್ತಿನಲ್ಲಿ ದಾಖಲಿಸುವ ಪ್ರಯತ್ನವಾದ ತುಳು ವಿಕಿ ಪೀಡಿಯಾ ತನ್ನ ಲೈವ್ ಆವೃತ್ತಿಯ 10 ವರ್ಷಗಳನ್ನು ಪೂರೈಸಿದೆ. ಈ ದಶಮಾನೋತ್ಸವದ ಸ್ಮರಣೆ ಹಾಗೂ ಮುಂದಿನ ಹಂತದ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಸೆ.12 ಮತ್ತು 13ರದು ಮಂಗಳೂರಿನಲ್ಲಿ ಕರಾವಳಿ ವಿಕಿ ಮೀಡಿಯನ್ಸ್ ಯೂಸರ್ ಗ್ರೂಪ್‌ನಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರಾವಳಿ ವಿಕಿ ಮೀಡಿಯನ್ಸ್ ಯೂಸರ್ಸ್ ಗ್ರೂಪ್ನ ಅಧ್ಯಕ್ಷ ಡಾ. ವಿಶ್ವನಾಥ ಬದಿಕಾನ ಅವರು ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.12ರಂದು ಬೆಳಗ್ಗೆ 10 ಗಂಟೆಗೆ ಕರಂಗಲ್ಪಾಡಿಯ ಎಜೆ ಗ್ರಾಂಡ್ ಹೊಟೇಲ್‌ನಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವ ಗಣಕತಜ್ಞ ಡಾ. ಕೆ.ಪಿ.ರಾವ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತುಳು ವಿಕಿಪೀಡಿಯಾದ 10 ವರ್ಷಗಳ ಪಯಣವನ್ನು…

Read More

ಮಂಗಳೂರು, ಆ.21 : ಲೋಕಕಲ್ಯಾಣ, ಸಮೃದ್ಧಿ, ಶಾಂತಿ ಹಾಗೂ ಸರ್ವಜನ ಕ್ಷೇಮದ ಸಂಕಲ್ಪದೊಂದಿಗೆ ಜಗದಾಚಾರ್ಯ ಸ್ವಾಮಿ ಅಖಿಲೇಶ್‌ಜೀ ಮಹಾರಾಜ್ ಸೇವಾ ಸಂಸ್ಥಾನ ಹಾಗೂ ದಿ ಸ್ಯಾಫ್ರನ್ ಫ್ರಂಟ್ ಸಹಯೋಗದಲ್ಲಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಾಗವನ್ನು ಆಗಸ್ಟ್ 24ರಿಂದ 28ರವರೆಗೆ ಶ್ರೀ ಯೋಗೇಶ್ವರ ಕದ್ರಿ ಮಠದಲ್ಲಿ ಮಹಾಯಾಗ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ ಎಂದು ಕಾರ್ಯಾಧ್ಯಕ್ಷ ದಿನಕರ ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಚಾರ್ಯ ಶ್ರೀ ಲವಕುಶ್ ಮಿಶ್ರಾಜೀ ಅವರ ಪೌರೋಹಿತ್ಯದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನಡೆಯಲಿವೆ. ಜಾತಿ-ಭೇದವಿಲ್ಲದೆ ಎಲ್ಲ ವರ್ಗದ ಜನರು ಭಾಗವಹಿಸುವ ಮೂಲಕ ಕುಟುಂಬ ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮೃದ್ಧಿ ನೆಲೆಸುವುದು ಮಹಾಯಾಗದ ಉದ್ದೇಶವಾಗಿದೆ ಎಂದರು. ಆಗಸ್ಟ್ 24ರಂದು ಬೆಳಗ್ಗೆ 8 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಿಂದ ಶ್ರೀ ಯೋಗೇಶ್ವರ ಕದ್ರಿ ಮಠದವರೆಗೆ ಕಳಶಯಾತ್ರೆ ನಡೆಯಲಿದೆ. ಐದು ದಿನಗಳ ಕಾಲ ಹೋಮ-ಹವನ, ಮಂತ್ರಪಠಣ ಹಾಗೂ ವಿವಿಧ…

Read More

ಮಂಗಳೂರು, ಆ.20 : ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಮಂಗಳೂರಿನ ಕೆ.ಎಸ್.ಹೆಗಡೆ ಮೆಡಿಕಲ್ ಅಕಾಡೆಮಿಯ ಇಎನ್‌ಟಿ ವಿಭಾಗಗಳ ಜಂಟಿ ಆಶ್ರಯದಲ್ಲಿ ‘SEOCON-2026’ ಅಂತರರಾಷ್ಟ್ರೀಯ ಸಮ್ಮೇಳನ ಆ.20ರಿಂದ 23ರವರೆಗೆ ಮಂಗಳೂರಿನ ಅತ್ತಾವರದಲ್ಲಿರುವ ಅವತಾರ್ ಹೋಟೆಲ್ ಮತ್ತು ಕನ್ವೆನ್ಸನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಂಘಟನಾ ಅಧ್ಯಕ್ಷ ಡಾ.ದೇವಿಪ್ರಸಾದ್ ಡಿ. ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಎಂಡೋಸ್ಕೋಪಿಕ್ ಓಟೋರಿಗೋಲರಿಂಗೋಲಜಿಸ್ಟ್ ಸೊಸೈಟಿಯ ನಾಲ್ಕನೇ ಅಂತರರಾಷ್ಟ್ರೀಯ ಸಮ್ಮೇಳನವಾಗಿದೆ. ಸಮ್ಮೇಳನದಲ್ಲಿ 400ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ 100ಕ್ಕೂ ಅಧಿಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಜ್ಞರು ಭಾಗವಹಿಸಲಿದ್ದಾರೆ ಎಂದರು. ಆ.21ರಂದು ಸಂಜೆ 7ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪದ್ಮಶ್ರೀ ಪುರಸ್ಕೃತ ಖ್ಯಾತ ಇಎನ್‌ಟಿ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸಕ ಡಾ.ಮಿಲಿಂದ್ ವಿ. ಕಿರ್ತನೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇಎನ್‌ಟಿ ಚಿಕಿತ್ಸೆಯ ಬಗ್ಗೆ ಸಂವಾದಗಳು ನಡೆಯಲಿದೆ.ಇ ಎನ್ ಟಿ ಯಲ್ಲಿನ ನಾವೀನ್ಯತೆ, ಹಾಗೂ AI ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ…

Read More

ಮಂಗಳೂರು, ಆ.20 : ಆಗಸ್ಟ್ 21ರಂದು ಮಂಗಳೂರಿನಲ್ಲಿರುವ ರೆಡ್ ಕ್ರಾಸ್ ಪ್ರೇರಣಾ ಸಭಾಂಗಣದಲ್ಲಿ ಒಂದು ದಿನದ ಮೆಗಾ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಸಮಾವೇಶ ಆಯೋಜಿಸಲಾಗಿದೆ ಎಂದು ನಿರ್ದೇಶಕ ಎಸ್.ಎಸ್.ನಾಯಕ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.21ರಂದು ಬೆಳಗ್ಗೆ 9.15ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಉಡುಪಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಸಮ್ಮುಖದಲ್ಲಿ ಸಾಧಕ ಎಂಎಸ್‌ಎಂಇ ಉದ್ಯಮಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಸಮಾವೇಶದಲ್ಲಿ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್‌ಗಳು, ಸಿಬಿಲ್ ಸ್ಕೋರ್, ಸರ್ಕಾರಿ ಸಬ್ಸಿಡಿ, ಬ್ಯಾಂಕ್ ಸಾಲ ಸೌಲಭ್ಯ, ಮೀನುಗಾರಿಕೆ, ಕೃಷಿ, ಹೈನುಗಾರಿಕೆ, ಪಶುಸಂಗೋಪನೆ ಹಾಗೂ ಆಹಾರ ಸಂಸ್ಕರಣೆ ಕುರಿತು ತಜ್ಞರಿಂದ ವಿಶೇಷ ಅಧಿವೇಶನಗಳು ನಡೆಯಲಿವೆ ಎಂದು ತಿಳಿಸಿದರು. ತಂತ್ರಜ್ಞಾನ, ವ್ಯಾಪಾರ, ಇ-ಕಾಮರ್ಸ್, ಪ್ರವಾಸೋದ್ಯಮ, ಉತ್ಪಾದನೆ, ಸೇವೆ ಹಾಗೂ ಆರೋಗ್ಯ…

Read More

ಕೋಲ್ಕತ್ತಾ, ದುಬೈ,ಆ. 19 : ಇಲ್ಲಿನ ಹೋಟೆಲ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಸಾವನಪ್ಪಿರುವ ಘಟನೆ ಬುಧವಾರ ನಡೆದಿದೆ. ವರದಿ ಪ್ರಕಾರ,ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮೃತರಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಜೆಗಳು ಹಾಗೂ ಜಾರ್ಖಂಡ್ ನಿವಾಸಿಯೊಬ್ಬರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಏರ್‌ಕಂಡೀಷನರ್‌ನಲ್ಲಿ ಉಂಟಾದ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Read More