Author: admin

ಬಜಪೆ ಜು. 07 : ಬಜಪೆ ವಲಯದ ಬಂಟರ ಸಂಘದಿಂದ ತಾರಿಕಂಬ್ಳದ ಮುಂಡಾರಿನಲ್ಲಿ ಬಂಟರ ಭವನಕ್ಕೆ ಶಿಲಾನ್ಯಾಸ ,ಸಾಧಕರಿಗೆ ಸನ್ಮಾನ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಕಾರ್ಯಕ್ರಮವು ಸಂಘದ ನಿವೇಶನ ಇರುವ ಬಜಪೆ ತಾರಿಕಂಬ್ಳ ಮುಂಡಾರಿನಲ್ಲಿ ನಡೆಯಿತು. 10 ಕೋ.ರೂ. ವೆಚ್ಚದಲ್ಲಿ ಬಜಪೆ ತಾರಿಕಂಬ್ಳದ ಮುಂಡಾರಿನಲ್ಲಿ ನಿರ್ಮಾಣವಾಗಲಿರುವ ನೂತನ ಬಂಟರ ಭವನದ ಶಿಲಾನ್ಯಾಸ ಎಂಆರ್‌ಜಿ ಗ್ರೂಪ್ಸ್ ನ ಸ್ಥಾಪಕ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ,ಇತರ ಗಣ್ಯರು ಸೇರಿ ನೆರವೇರಿಸಿದರು. ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿ.ಕೆ ಗ್ರೂಪ್ ಆಫ್ ಕಂಪೆನಿಸ್ ಇದರ ಸಿಎಂಡಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಅವರು ಕಟ್ಟಡದ ನೀಲನಕ್ಷೆ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಎಂಆರ್‌ಜಿ ಗ್ರೂಪ್ಸ್ ಇದರ ಸ್ಥಾಪಕ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟ ಅವರು ಮಾತನಾಡಿ, ದಾನಿಗಳ ಸಹಾಯದಿಂದ ನಿರ್ಮಾಣವಾಗಲಿರುವ ಈ ಬಂಟರ ಭವನದಲ್ಲಿ ಬಡವರಿಗೆ,ಸಮಾಜ ಬಾಂಧವರಿಗೆ ನೆರವಾಗುವ ಕಾರ್ಯಕ್ರಮ…

Read More

ಮಂಗಳೂರು, ಜು.06 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 47 ನೇ ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿ 10ಲಕ್ಷ ರೂ ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಯಂತೆ ಲಭ್ಯವಿರುವ ಅನುದಾನಗಳನ್ನು ಹೊಂದಿಸಿಕೊಂಡು ಈ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ರಾಮಮೂರ್ತಿ ಸೋಮನಹಳ್ಳಿ, ಪ್ರವೀಣ್ ನಿಡ್ಡೇಲ್, ಶಬರೀಶ್, ಮಂಜುನಾಥ್ ಅತ್ತಾವರ, ವಿನೋದ್ ಕುಮಾರ್, ಶರ್ಮಿಳಾ ಶೆಟ್ಟಿ, ಹರೀಶ್ ರಾವ್, ಸುರೇಶ್ ಕುಮಾರ್, ಜ್ಯೋತಿ ಯಲಬುರ್ಗಿ, ಎಂ.ಬಿ ರಾಜ, ಶೈಲ ಚಂದ್ರಹಾಸ್, ರಮಾಕಾಂತ್ ನಾಯಕ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Read More

ಮಂಗಳೂರು, ಜು.05  : ಸಹಕಾರಿ ದಿ.ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ಮುಂದಕ್ಕೆ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಬೇಕು. ಈ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ತುಂಬಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ. ಇಂದು ಇಲ್ಲಿ ಪುರಸ್ಕಾರ ಪಡೆದಿರುವ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ, ಮಕ್ಕಳು ದೇಶಕಟ್ಟುವ ಕಾಯಕದಲ್ಲಿ ತೊಡಗಲಿ. ಮುಂದೆ ಕನಿಷ್ಠ ಇಬ್ಬರು ಮಕ್ಕಳಿಗಾದರೂ ನೆರವಾಗುವಂತಾಗಬೇಕು ಎಂದರು. ವೇದಿಕೆಯಲ್ಲಿ ಮಾಜಿ ಸಚಿವ ಜೆ.ಕೃಷ್ಣ ಪಾಲೇಮಾರ್, ಬ್ಯಾಂಕ್ ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ವಿನಯ್ ಕುಮಾರ್ ಸೂರಿಂಜೆ, ಭಾಸ್ಕರ್ ಕೋಟ್ಯಾನ್, ಬ್ಯಾಂಕ್ ಎಂ.ಡಿ.ಗೋಪಿನಾಥ್ ಭಟ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಎಂ.ಡಿ.ಪ್ರವೀಣ್ ನಾಯ್ಕ್, ಬ್ಯಾಂಕ್…

Read More

ಮಂಗಳೂರು, ಜು.04 : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವಿಗೀಡಾದ ಘಟನೆ ಕೂಳೂರು ರಾಷ್ಟ್ರೀಯ ಹೆದ್ದಾರಿ 66ರ ವಿ.ಅರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಸದಾನಂದ ಶೆಟ್ಟಿಗಾರ್(46) ಎಂದು ಗುರುತಿಸಲಾಗಿದೆ. ಸದಾನಂದ ಶೆಟ್ಟಿಗಾರ್ ಕೊಟ್ಟಾರ ಕಡೆಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸದಾನಂದ  ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ಜು.03 : ಎಂಸಿಸಿ ಬ್ಯಾಂಕ್ ನ 22 ಶಾಖೆಯು ದೇರಳ ಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಕಟ್ಟಡದ ಸಂಕೀರ್ಣದಲ್ಲಿ ಜೂನ್ 28, ರವಿವಾರ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ವಂ. ಫಾ. ನಿಲೇಶ್ ಕ್ರಾಸ್ತಾ ಅವರು ಎಟಿಎಂ ಅನ್ನು ಉದ್ಘಾಟಿಸಿ ಚಾಲನೆ ನೀಡಿದರು. ಉರ್ಸುಲಿನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್ನ ಸುಪೀರಿಯರ್ ಜನರಲ್ ವಂ. ಸಿ. ಮಿಲ್ಲಿ ಫೆರ್ನಾಂಡಿಸ್ ಅವರು ಸೇಫ್ ರೂಂ ಅನ್ನು ಉದ್ಘಾಟಿಸಿದರು. ಫಾ. ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗದ (ಎಫ್ ಎಮ್ ಎಚ್ ಪಿಡಿ) ಆಡಳಿತಾಧಿಕಾರಿ ವಂ. ಫಾ. ನೆಲ್ಸನ್ ದೀರಜ್ ಪಾಯ್ಸ್ ಅವರು ಬ್ಯಾಂಕಿನ ಇ-ಸ್ಟಾಂಪ್ ಸೇವೆಗೆ ಚಾಲನೆ ನೀಡಿದರು. ಪಾಣೀರ್ನ ಅವರ್ ಲೇಡಿ ಆಫ್ ಮರ್ಸಿ ಚರ್ಚ್ನ ಧರ್ಮಗುರು ವಂ. ಫಾ. ವಿಕ್ಟರ್ ಡಿ‘ಮೆಲ್ಲೊ ಅವರು ನೂತನ ಶಾಖೆಗೆ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಮಂಗಳೂರು, ಜು.02 : ಬಂಟರ ಸಂಘ ಬಜಪೆ ವಲಯದ ಬಂಟರ ಭವನಕ್ಕೆ ಶಿಲಾನ್ಯಾಸ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಕಾರ್ಯಕ್ರಮವು ಸಂಘದ ನಿವೇಶನ ಇರುವ ಬಜಪೆ ತಾರಿಕಂಬ್ಳ ಮುಂಡಾರಿನಲ್ಲಿ ಜುಲೈ 5ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ವಲಯ ಅಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ ಅವರು ಜೂ.16,ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬಂಟರ ಭವನ ವು ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಈ ಬಂಟರ ಭವನದ ಶಿಲಾನ್ಯಾಸವನ್ನು ಎಂಆರ್‌ಜಿ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ನೆರವೇರಿಸುವರು. ಶಬರಿ ಇಂಡಸ್ಟ್ರಿಯಲ್ ಕ್ಯಾಟರಿಂಗ್ ಸರ್ವಿಸಸ್ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಕೆ. ಶೆಟ್ಟಿ ದೀಪ ಪ್ರಜ್ವಲನೆ ಮಾಡುವರು. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸುವರು. ವಿಕೆ ಗ್ರೂಪ್ ಆಫ್ ಕಂಪೆನೀಸ್ ಸಿಎಂಡಿ ಕರುಣಾಕರ ಶೆಟ್ಟಿ ಮಧ್ಯಗುತ್ತು ನೀಲನಕ್ಷೆ ಬಿಡುಗಡೆ ಮಾಡುವರು. ಪೂನಾ ಬಂಟರ ಸಂಘ ಅಧ್ಯಕ್ಷ…

Read More

ನವದೆಹಲಿ, ಜು.01: ಭಾರತೀಯ ಭೂಸೇನೆಯ 31ನೇ ಭೂಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಮಂಗಳಾವಾರ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಭೂಸೇನೆಯಲ್ಲಿ 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಉತ್ತರಾಧಿಕಾರಿಯಾಗಿ ಜನರಲ್ ಧೀರಜ್ ಸೇಠ್ ಅವರು ಭಾರತದ 31ನೇ ಭೂಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಭಾರತೀಯ ಸೇನೆಯನ್ನು ತಂತ್ರಜ್ಞಾನ ಆಧಾರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸಜ್ಜಾದ ಪಡೆಯನ್ನಾಗಿ ಆಧುನೀಕರಿಸಲಾಗುವುದು ಎಂದು ಭರವಸೆ ನೀಡಿದ ಅವರು, ಜಾಗರೂಕತೆ, ನಾವೀನ್ಯತೆ, ಜಂಟಿ ಕಾರ್ಯಾಚರಣೆ, ಸ್ವಾವಲಂಬನೆ ಮತ್ತು ಸೈನಿಕರಿಗೆ ಆದ್ಯತೆ ನೀಡುವುದನ್ನು ಒಳಗೊಂಡ ತಮ್ಮ ಕಾರ್ಯತಂತ್ರದ ದೃಷ್ಟಿಕೋನವನ್ನು ವಿವರಿಸಿದ್ದಾರೆ. ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಜನರಲ್ ಧೀರಜ್ ಸೇಠ್ ಭೂಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಇಂದ ಪದವಿ ಪಡೆದು ಡಿಸೆಂಬರ್ 1986ರಲ್ಲಿ ಸೇನೆಗೆ ಸೇರಿದ್ದರು. ಜನರಲ್ ಧೀರಜ್ ಸೇಠ್ ಅವರು ಸುಮಾರು 40 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ…

Read More

ಮಂಗಳೂರು, ಜೂ.30  : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.1ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್., ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ.ಕರಿಕಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ನ್ಯೂಸ್ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಡಂಗಾಯ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಹಾಗೂ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.…

Read More

ಮಂಗಳೂರು, ಜೂ.29 : ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರವು ಮಹತ್ವದ ಕೊಡುಗೆ ನಿರಂತರವಾಗಿ ನೀಡುತ್ತಾ ಬಂದಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಇವರ ಸಂಯುಕ್ತ ಆಶ್ರಯ ದಲ್ಲಿ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಸೋಮ ವಾರ ಹಮ್ಮಿಕೊಂಡ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಹೇಳಿದರು. ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡುತ್ತಾ, ರಾಜ್ಯದಲ್ಲಿ 47 ಸಾವಿರಕ್ಕೂ ಅಧಿಕ ಸಹಕಾರಿ ಸಂಘಗಳು ,ದೇಶದಲ್ಲಿ ಮೂವತ್ತು ಕೋಟಿಗೂ ಅಧಿಕ ಮಂದಿ ಸಹಕಾರಿ ಸಂಘದ ಸದಸ್ಯರಿದ್ದಾರೆ.ಸಹಕಾರ ಸಂಘಗಳು ಜನಸಾಮಾನ್ಯರ ಬಳಿಗೆ ಬ್ಯಾಂಕ್ ಸೇವೆಯನ್ನು ನೀಡುತ್ತಿದೆ.ಅವರ ಜೊತೆ…

Read More

ಶಿವಮೊಗ್ಗ, ಜೂ. 28 : ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಚಲಿಸುತ್ತಿರುವಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿಯ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಘಟನೆ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ವಾಹನ ಚಾಲಕ ಮಹಮ್ಮದ್ ಹುಸೇನ್ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿ ಕೆಳಗಿಳಿದ್ದರಿಂದ ಪ್ರಾಣಪಾಯವಾಗಿಲ್ಲ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅಷ್ಟರಲ್ಲಿ ಲಾರಿಯ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

Read More