Author: admin

ಮಂಗಳೂರು, ಮೇ 14: ರಾಘವೇಂದ್ರ ಸ್ಟುಡಿಯೋ ಪ್ರೆಸೆಂಟ್ಸ್ ಹಾಗೂ ಕೋಸ್ಟಲ್ ಫಿಲಂಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕನ್ನಡ ಟೆಲಿಚಿತ್ರ ‘ಮೊನಾಲಿಸಾ- ಇಸ್ ಇನ್ ಟ್ರಬಲ್ ಪ್ರೀಮಿಯರ್ ಪ್ರದರ್ಶನ ಮೇ 15ರಿಂದ 17ರ ವರೆಗೆ ಮಂಗಳೂರಿನ ಭಾರತ್ ಸಿನೆಮಾಸ್ನಲ್ಲಿ ನಡೆಯಲಿದೆ. ಎಂದು ಚಿತ್ರದ ನಿರ್ದೇಶಕ ಬೃಂದಾವನ್ ಎನ್. ಶೆಟ್ಟಿ  ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರವು ಡ್ರಿಲ್ಲರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿದೆ. ಚಿತ್ರದ ಕಥೆಯನ್ನು ಶ್ರೇಯಸ್ ಕುಮಾರ್ ಫರಂಗಿಪೇಟೆ ಬರೆದಿದ್ದು ಮಂಗಳೂರಿನ ಸುತ್ತಮುತ್ತಲಲ್ಲಿ ಚಿತ್ರೀಕರಣಗೊಂಡಿದೆ. ರಂಗಿತರಂಗ ಖ್ಯಾತಿಯ ಕಾರ್ತಿಕ್ ವಿ.ಆರ್., ಯಜೇಶ್ ಬರ್ಕೆ ಈ ಟೆಲಿಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ನ್ಯಾಯವಾದಿ ನವೀನ್ ಕುಮಾರ್ ಶೆಟ್ಟಿ, ಶ್ರೇಯಸ್ ಕುಮಾರ್ ಫರಂಗಿಪೇಟೆ, ನಟಿ ವಿನುತಾ ಸಿ. ನಾಯಕ್, ನ್ಯಾಯವಾದಿ ಪ್ರಸಾದ್ ಪಾಲನ್, ದೇವಿ ಪ್ರಸಾದ್ ಕೊಂಚಾಡಿ, ದಿನೇಶ್ ಕೋಟ್ಯಾನ್, ಅಭಿನವ್ ಉಪಸ್ಥಿತರಿದ್ದರು.

Read More

ಮಂಗಳೂರು, ಮೇ 14: ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್‌ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅವರು ಮೇ. 13,ಬುಧವಾರ ನಿಧನರಾದರು. 1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಹಾಗೆನೇ ಅವರು ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್  ಸಂಸ್ಥೆಗಳನ್ನು ಹೊಂದಿದ್ದರು ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್‌ಗಳು, 4 ಮಸೀದಿಗಳು ಮತ್ತು 3 ದೇವಾಲಯಗಳನ್ನು ನಿರ್ಮಿಸಿ ದ್ದಾರೆ. ಹಾಗೆನೇ ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ನಿರ್ಮಿಸಿದ್ದರು. ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು, ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್ ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ. ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ ಅವರ  ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್‌ಕೆಸಿಎ…

Read More

ಮಂಗಳೂರು,ಮೇ. 13 : 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭವು ಮೇ 15, ಶುಕ್ರವಾರ ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ಅವರುಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಭಿನಂದನಾ ಸಮಿತಿಯ ಸಂಚಾಲಕರಾದ ಮೆಲ್ವಿನ್ ರೊಡ್ರಿಗಸ್ ಅವರ ನೇತೃತ್ವದಲ್ಲಿ ಬಹಳ ಆಯೋಜಿಸಲಾಗಿದೆ.ಅನಿವಾಸಿ ಉದ್ಯಮಿ ಮೈಕಲ್ ಡಿಸೋಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಖ್ಯಾತ ಕನ್ನಡ ಕವಿ ಮತ್ತು ಸಾಹಿತಿ ಜಯಂತ್ ಕಾಯ್ಕಿಣಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಸಂಜೆ 5.30ಕ್ಕೆ ಕಾರ್ಯಕ್ರಮವು ಆರಂಭವಾಗಲಿದ್ದು, 5:45ಕ್ಕೆ ಉಸ್ತಾದ್ ರಫೀಕ್ ಖಾನ್ ಮತ್ತು ಅವರ ಸಂಗಾತಿಗಳಿಂದ ‘ಸಿತಾರ್ ಪ್ಯೂಷನ್’ ಎಂಬ ವಿಶಿಷ್ಟ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಎಡ್ಡಿ ಸಿಕೇರ್ ಮತ್ತು ಮುಹಮ್ಮದ್ ಮುಆದ್ ಜಿ.ಎಂ. ಅವರಿಂದ ಎಚ್.ಎಂ. ಪೆರ್ನಾಲ್ ಅವರ ಕವಿತೆಗಳ ಸಾದರೀಕರಣದ ಮೂಲಕ…

Read More

ಮಂಗಳೂರು, ಮೇ. 12: ಮಕ್ಕಳ ಪ್ರತಿಭೆ, ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಪಾರ್ಕ್ ಟ್ರೀ ವತಿಯಿಂದ ಮೇ 16 ಮತ್ತು 17ರಂದು ನಗರದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ಎಂಬ ವಿಶೇಷ ಮಕ್ಕಳ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪಾರ್ಕ್ ಟ್ರೀ ಸಂಸ್ಥೆಯ ಸೌಜನ್ಯ ಹೆಗ್ಡೆ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉತ್ಸವದಲ್ಲಿ ಮಕ್ಕಳಿಗೆ ಕಲಿಕೆ, ಆಟೋಟ, ಸೃಜನಾತ್ಮಕ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಾಗಾರಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿಶೇಷ ಆಕರ್ಷಣೆಯಾಗಿ ಮೊದಲ ಬಾರಿಗೆ ಮಕ್ಕಳಿಗಾಗಿ ‘ಕಿಡ್ಸ್ ಮ್ಯಾರಥಾನ್’ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರೀತಮ್ ಪೊನ್ನಪ್ಪ ಉಪಸ್ಥಿತರಿದ್ದರು.

Read More

ಮಂಗಳೂರು, ಮೇ 12 : ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಆಚರಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಸಂಸ್ಥಾಪಕರ ಕುಟುಂಬ ಸದಸ್ಯರು ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ಭಾವಚಿತ್ರಕ್ಕೆ ಪುಷ್ಪ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಅಧ್ಯಕ್ಷರಾದ ಅನಿಲ್ ಲೋಬೊ ಅವರು ಸ್ವಾಗತ ಭಾಷಣದಲ್ಲಿ, ಸಂಸ್ಥಾಪಕರ ದೃಷ್ಟಿಕೋನ ಮತ್ತು ಧ್ಯೇಯವನ್ನು ಸ್ಮರಿಸುವ ಉದ್ದೇಶದಿಂದ ಸಂಸ್ಥಾಪಕರ ದಿನಾಚರಣೆಯನ್ನು ಪ್ರಾರಂಭಿಸಲಾಗಿದೆ.2018ರಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕ್ ವೃತ್ತಿಪರತೆಯೊಂದಿಗೆ ಗಮನಾರ್ಹ ಬೆಳವಣಿಗೆ ಸಾಧಿಸಿದೆ.24 ವರ್ಷಗಳ ಬಳಿಕ ಶಾಖೆಗಳ ಸಂಖ್ಯೆ 16ರಿಂದ 21ಕ್ಕೆ ಏರಿಕೆಯಾಗಿದೆ.ಬ್ಯಾಂಕಿನ ಒಟ್ಟು ವ್ಯವಹಾರ ರೂ.500 ಕೋಟಿಯಿಂದ ರೂ.1,525 ಕೋಟಿಗೆ ಏರಿಕೆಯಾಗಿದ್ದು, ಠೇವಣಿಗಳು ರೂ.300 ಕೋಟಿಯಿಂದ ರೂ.875 ಕೋಟಿಗೆ ಹೆಚ್ಚಳವಾಗಿವೆ ಎಂದರು. ಬ್ಯಾಂಕ್ ರೂ.13 ಕೋಟಿ ಲಾಭ ದಾಖಲಿಸಿದೆ ಎಂದು ಹೇಳಿದರು. ವಂ. ಡಾ| ಪ್ರವೀಣ್ ಮಾರ್ಟಿಸ್ ಅವರು ತಮ್ಮ ಭಾಷಣದಲ್ಲಿ, ಅಧ್ಯಕ್ಷರಾದ…

Read More

ಚೆನ್ನೈ, ಮೇ. 11 : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ವಿಜಯ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು. 234 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 120 ಶಾಸಕರ ಬೆಂಬಲ ಪಡೆದ ವಿಜಯ್ ಜೊತೆಗೆ, ರಾಜ್ಯಪಾಲ ಅರ್ಲೇಕರ್ ಅವರು ‘ಬಸ್ಸಿ’ ಎನ್ ಆನಂದ್, ಕೆಜಿ ಅರುಣ್‌ರಾಜ್, ಆಧವ್ ಅರ್ಜುನ, ಎ ರಾಜ್‌ಮೋಹನ್, ಕೆಎ ಸೆಂಗೋಟ್ಟೈಯನ್, ಪಿ ವೆಂಕಟರಮಣನ್, ಸಿಟಿಆರ್ ನಿರ್ಮಲ್ ಕುಮಾರ್, ಕೀರ್ತನಾ ಮತ್ತು ಕೆಟಿ ಪ್ರಭು ಅವರನ್ನೊಳಗೊಂಡ ಹೊಸ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಿದರು.

Read More

ಉಪ್ಪಿನಂಗಡಿ, ಮೇ. 10 : ರಸ್ತೆ ಕಾಮಗಾರಿಯ ವೇಳೆ ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೇ 9, ಶನಿವಾರ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ. ಮೃತರನ್ನು ಬಿಹಾರ ಮೂಲದ ರಾಮಚಂದ್ರ ಶಿಕಾರಿ (55) ಎಂದು ಗುರುತಿಸಲಾಗಿದೆ. ಗಾಂಧಿಪಾರ್ಕ್ ಬಳಿ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ವ್ಯಕ್ತಿಯೋರ್ವ ರಸ್ತೆ ಬದಿ ಮಲಗಿದ್ದ, ಅವರು ಮಲಗಿರುವುದು ಅರಿವಿಗೆ ಬಾರದೆ ಆತನ ಮೇಲೆ ರೋಡ್ ರೋಲರ್ ಚಲಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲ್ಕತ್ತಾ, ಮೇ. 09 : ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಯ ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು. ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ಅಗ್ನಿಮಿತ್ರಾ ಪೌಲ್, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.

Read More

ಕಡಬ, ಮೇ. 08 : ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ(15) ಹಾಗೂ ಸುನೀತಾ(21) ಎಂದು ಗುರುತಿಸಲಾಗಿದೆ. ರಜೆ ಇರುವುದರಿಂದ ಸ್ನೇಹಿತರ ತಂಡದೊಂದಿಗೆ ನದಿಗೆ ಆಗಮಿಸಿದ್ದ 5 ಮಂದಿ ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದಾರೆ.ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗದೆ ಮುಳುಗಿ ಸಾವನ್ನಪ್ಪದ್ದಾರೆ ಎಂದು ವರದಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ಸಹಕಾರದಿಂದ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ.

Read More

ಮಂಗಳೂರು, ಮೇ o7: : ಮೊಗೇರ ಸಂಘ (ರಿ) ಮಂಗಳೂರು ತಾಲೂಕು ಇದರ ನೇತೃತ್ವದಲ್ಲಿ ನಗರದ ಕೂಳೂರು ಪಂಜಿಮೊಗರುವಿನ ಮುಖ್ಯ ರಸ್ತೆಯ ಪಕ್ಕದಲ್ಲಿ ನಿರ್ಮಾಣಗೊಂಡಿರುವ “ಮೊಗೇರ ಸೌಧ” ಬಹುಮಹಡಿಗಳ ಕಟ್ಟಡವು 2026 ಮೇ 10 ರಂದು ಉದ್ಘಾಟನೆಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಮೊಗೇರ ಸಂಘದ ಅಧ್ಯಕ್ಷರಾದ ಸೀತಾರಾಮ ಕೊಂಬಾಡಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಸಮಾರಂಭದಲ್ಲಿ ಸಮಾಜ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದು, ಸಮುದಾಯ ಭವನದ ಉದ್ಘಾಟನೆಯನ್ನು ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್, ಮೊಗೇರ ಸೌಧ ಬಹುಮಹಡಿ ಕಟ್ಟಡ ಸಂಕೀರ್ಣದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಬ್ರಿಜೇಶ್ ಚೌಟ, ಸ್ವ ಉದ್ಯೋಗ ತರಬೇತಿ ಕೇಂದ್ರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ನಾರಾಯಣ ಸ್ವಾಮಿ. ಸಂಘದ ನೂತನ…

Read More