Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಸೆ. 03 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಕ್ರೈಸ್ತ ಸಮುದಾಯದವರ ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದರು. ನಾಡಿನೆಲ್ಲೆಡೆ ಹಬ್ಬಗಳ ಸಂಭ್ರಮ ಆರಂಭವಾಗಿದ್ದು, ಇದೇ ಸೆಪ್ಟೆಂಬರ್ 4 ರಂದು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಕ್ತರು ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಿದ್ದಾರೆ. ಅದೇ ರೀತಿಯಲ್ಲಿ ಸೆಪ್ಟೆಂಬರ್ 8 ರಂದು ಕರಾವಳಿ ಭಾಗದಲ್ಲಿ ಕ್ರೈಸ್ತ ಸಮುದಾಯದವರು ಮರಿಯ ಜಯಂತಿ/ ತೆನೆಹಬ್ಬವನ್ನು ಅತ್ಯಂತ ವಿಶೇಷವಾಗಿ, ಸಂಭ್ರಮದಿಂದ ಆಚರಿಸುವುದಾಗಿದ್ದು ಈ ಎರಡೂ ಹಬ್ಬದ ಆಚರಣೆಗೆ ಅನುಕೂಲವಾಗುವಂತೆ ರಜೆ ಘೋಷಣೆ ಮಾಡಬೇಕೆಂದು ಆ ಸಮುದಾಯದ ಹಲವಾರು ಮುಖಂಡರು, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಮುಖರು, ನನ್ನಲ್ಲಿ ಮನವಿ ಮಾಡಿರುತ್ತಾರೆ ಎಂದು ಶಾಸಕರಾದ ವೇದವ್ಯಾಸ ಕಾಮತ್ ರವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ವಿವೇಚನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸೆಪ್ಟೆಂಬರ್…
ಮಂಗಳೂರು, ಸೆ. 02 : ಇಸ್ಕಾನ್ ಮಂಗಳೂರು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ 2026 ಅನ್ನು ಸೆಪ್ಟೆಂಬರ್ 3 ಮತ್ತು 4ರಂದು ಪಿಲಿಕುಳದ ಸೌಟ್ಸ್ ಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಇಸ್ಕಾನ್ ಶ್ರೀಕೃಷ್ಣ ಬಲರಾಮ ಮಂದಿರದ ಅಧ್ಯಕ್ಷರಾದ ಗುಣಾಕರ ರಾಮದಾಸ ಅವರು ಮಂಗಳೂರಿನ ಇಸ್ಕಾನ್ ಪಿವಿಎಸ್ ಕಲಾಕುಂಜದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ಕಾನ್ ಪಿವಿಎಸ್ ಕಲಾಕುಂಜ ವತಿಯಿಂದ ಆಯೋಜಿಸಲಾಗಿರುವ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ಆಳ್ವಾಸ್ ವತಿಯಿಂದ ‘ಶ್ರೀಕೃಷ್ಣ ವೈಭವಂ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಭಾರತದ ಶ್ರೀಮಂತ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸಲಾಗುವುದು. “ಅಂತರರಾಷ್ಟ್ರೀಯ ಭಜನ್ ಕ್ಲಬ್ಬಿಂಗ್” ಭಕ್ತಿಮಯ ಸಂಗೀತ, ಜಪ ಹಾಗೂ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮಂಗಳೂರಿನ 20ಕ್ಕೂ ಹೆಚ್ಚಿನ ಬ್ರಾಂಡ್ ಗಳ ಭಾಗವಹಿಸುವಿಕೆಯಲ್ಲಿ ‘ಕೃಷ್ಣ ರಸ ಬಜಾರ್’ ಆಹಾರೋತ್ಸವ ನಡೆಯಲಿದೆ. ಕೃಷ್ಣನಿಗಾಗಿ ಬ್ಲಾಗ್ ಕಾರ್ಯಕ್ರಮ, ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.…
ಬಂಟ್ವಾಳ, ಸೆ.01:ಆಟೋ ರಿಕ್ಷಾಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಜಿಪಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ಭಾನುವಾರ ರಾತ್ರಿ ನಡೆದಿದೆ. ಮೃತರನ್ನು ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ರಶೀಕ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಸಜಿಪಮೂಡ ಕಡೆಗೆ ಪ್ರಯಾಣಿಸುತ್ತಿದ್ದಾಗ ಪೆಲತ್ತಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರಾತ್ರಿ ಸುಮಾರು 8 ಗಂಟೆಗೆ ಮುಡಿಪು ಕಡೆಯಿಂದ ಮೆಲ್ಕಾರ್ ಕಡೆಗೆ ಬರುತ್ತಿದ್ದ ಆಟೋವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ರಶೀಕ್ ಅವರನ್ನು ಸ್ಥಳೀಯರು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬಂಟ್ವಾಳ ಸಂಚಾರ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಾವರ ನಿವಾಸಿ ಝಾನುಲ್ ಅಬಿದೀನ್ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠ್ಮಂಡು, ಆ. 31 : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) 395 ಪವರ್ಮ್ಯಾನ್ಗಳನ್ನು ನೇಮಕ ಮಾಡಿಕೊಂಡಿದೆ. ಇನ್ನೂ ಕೂಡ ಪವರ್ಮೇನ್ ಹುದ್ದೆಗಳು ಖಾಲಿ ಇದೆ. 165 ಮಂದಿಯನ್ನು ನೇಮಕ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಹರೀಶ್ ಕುಮಾರ್ ಕೆ. ಅವರು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮೆಸ್ಕಾಂನಲ್ಲಿ ಖಾಲಿ ಇರುವ ಪವರ್ಮೇನ್ ಹುದ್ದೆಗಳ ಭರ್ತಿ ಮಾಡಲು 430 ಹುದ್ದೆಗಳಿಗೆ ನೋಟಿಫಿಕೇಶನ್ ಆಗಿತ್ತು. ಈ ಪೈಕಿ 395 ಮಂದಿಯ ನೇಮಕವಾಗಿದ್ದು, ಅವರಿಗೆ ಈಗಾಗಲೇ ನೇಮಕಾತಿ ಪತ್ರ ನೀಡಲಾಗಿದೆ ಎಂದರು. ನಾಲ್ಕು ಜಿಲ್ಲೆಗಳ ವ್ಯಾಪ್ತಿಗೊಳಪಟ್ಟ ಮೆಸ್ಕಾಂನಲ್ಲಿ ಪವರ್ಮೆನ್ಗಳಳಿಗೆ ಸುರಕ್ಷತೆಯ ದೃಷ್ಟಿಯಿಮದ ಕೆಲಸ ನಿರ್ವಹಿಸಲು 705 ಸಂಖ್ಯೆಯ ನಾನ್ ಕಾನ್ಟ್ಯಾಕ್ಟ್ ವೋಲ್ಟೇಜ್ ಡಿಟೆಕ್ಟರ್ಸ್(ಎನ್ಸಿವಿಡಿ)ಅನ್ನು ನೀಡಲಾಗಿದೆ ಎಂದು ತಿಳಿಸಿದರು. ಆನೆ ಕಾರಿಡಾರ್ ಇರುವ ಕಡೆ ಹಾಗೂ ಇತರ ಕಾಡು ಪ್ರದೇಶಗಳ ಬಳಿ ವಿದ್ಯುತ್ ಮಾರ್ಗವನ್ನು ಕವರ್ಡ್ ಕಂಡಕ್ಟ (ವಿದ್ಯುತ್ ತಂತಿಗೆ ಸುರಕ್ಷಾ ಕವಚ ಇರಲಿದೆ) ಆಗಿ ಮಾರ್ಪಡಿಸಲಾಗುವುದು. ಪುತ್ತೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು-1 ಮತ್ತು…
ಕಠ್ಮಂಡು, ಆ. 30 : ನೇಪಾಳ-ಚೀನಾ ಗಡಿಯ ಸಮೀಪದ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಹೆಚ್ಚಿನ ಜನರನ್ನು ರಕ್ಷಿಸಲಾಗಿದ್ದು, 2,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಹಿಮನದಿ ಕುಸಿದು ಲ್ಹೆಂಡೆ ಖೋಲಾ ನದಿಗೆ ಭಾರಿ ಪ್ರಮಾಣದ ಮಂಜುಗಡ್ಡೆ, ಬಂಡೆಗಳು ಹರಿದು ಬಂದು ಭೋಟೆ ಕೋಶಿ ನದಿಗೆ ನೀರು ನುಗ್ಗಿದೆ. ಇದರ ಪರಿಣಾಮ ರಸುವಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ.ಪ್ರವಾಹದಿಂದಾಗಿ ಇದುವರೆಗೆ 626 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿರುವ ಹಿನ್ನೆಲೆ, ನೇಪಾಳ ಸರ್ಕಾರದ ಮನವಿಯ ಮೇರೆಗೆ ವೈದ್ಯಕೀಯ ಸಿಬ್ಬಂದಿ ಮತ್ತು ಸುರಂಗ ರಕ್ಷಣಾ ತಜ್ಞರನ್ನು ಒಳಗೊಂಡ 11 ಸದಸ್ಯರ ಭಾರತೀಯ ತಂಡವು ಶನಿವಾರ ನೇಪಾಳಕ್ಕೆ ತಲುಪಿದೆ.
ಮಂಗಳೂರು,ಆ.28: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಸೆಪ್ಟೆಂಬರ್ 4ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ 44 ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಈ ಮಕ್ಕಳ ಉತ್ಸವದಲ್ಲಿ ಈ ಬಾರಿ ಒಟ್ಟು 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. 12 ವೇದಿಕೆಗಳಲ್ಲಿ ಏಕಕಾಲದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 9ರಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಸೆ.4ರಂದು ಬೆಳಗ್ಗೆ 9 ಗಂಟೆಗೆ ಶ್ರೀಕೃಷ್ಣ ವರ್ಣ ವೈಭವ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮಹಿಳೆಯರು ಸಾಂಪ್ರದಾಯಿಕವಾಗಿ ಹಾಡುಗಳನ್ನು ಹಾಡುತ್ತಾ ಕಡಗೋಲಿನಿಂದ ಮೊಸರು ಕಡೆದು ಬೆಣ್ಣೆ ತೆಗೆಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ…
ಮಂಗಳೂರು, ಆ.27.: ಮಣಿಪಾಲ ಆರೋಗ್ಯ ಕಾರ್ಡ್ 2026, ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆ ಮಣಿಪಾಲದ ಪ್ರಸ್ತುತ ಕುಲಾಧಿಪತಿಗಳಾದ ಡಾ. ರಾಮ ದಾಸ್ ಎಂ. ಪೈ ಅವರ ಮಾರ್ಗದರ್ಶ ನದಲ್ಲಿ 2000ನೇ ಇಸವಿಯಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಕಳೆದ 26 ವರ್ಷಗಳಲ್ಲಿ ಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಆರಂಭಿಕ ವರ್ಷದಲ್ಲಿ ಕೇವಲ 3,200 ಕುಟುಂಬಗಳನ್ನು ಮಾತ್ರ ಹೊಂದಿದ್ದ ಈ ಯೋಜನೆಯು ಈಗ ಗಣನೀಯವಾಗಿ ವಿಸ್ತರಿ ಸಿದೆ. ಕಳೆದ ಹಣಕಾಸು ವರ್ಷದಲ್ಲಿ ಸುಮಾರು 2 ಲಕ್ಷ ಕುಟುಂಬಗಳು ನೋಂದಾಯಿಸಿಕೊಂಡಿದ್ದು, ಪ್ರಸ್ತುತ ಕರ್ನಾಟಕ ಮತ್ತು ಕೇರಳ ರಾಜ್ಯಗಳಾದ್ಯಂತ ಸುಮಾರು 6.5 ಲಕ್ಷ ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಎಂದವರು ಹೇಳಿದರು. ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಎ.…
ಮಂಗಳೂರು, ಆ.27 : ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ನಡೆಯಿತು.ಸಭೆಯನ್ನು ಶಶಿಧರ ಶೆಟ್ಟಿ ಬರೋಡ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾಗಿ 25 ಕೋಟಿ ರೂಪಾಯಿಗೂ ಮಿಕ್ಕಿ ಪರಿಹಾರ ಧನವನ್ನು ಬಡವರಿಗೆ ವಿತರಿಸಿದ್ದಾರೆ. ಒಳ್ಳೆಯ ಕೆಲಸಗಳಿಂದ ಬಂಟ ಸಮಾಜ ಇತರ ಸಮಾಜಕ್ಕೆ ಮಾದರಿಯಾಗಬೇಕು ಎಂದು ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು, ಬರೋಡ ಶಶಿ ಕ್ಯಾಟರಿಂಗ್ ನ ಮಾಲಕರಾದ ಶಶಿಧರ ಶೆಟ್ಟಿ ಬರೋಡ ತಿಳಿಸಿದರು. ಒಕ್ಕೂಟದ ನಿರ್ದೇಶಕ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಮಾಜಪರ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಐಕಳ ಹರೀಶ್ ಶೆಟ್ಟಿಯವರ ಸಂಘಟನೆ ಮತ್ತು ಪದಾಧಿಕಾರಿಗಳ ಕೆಲಸ ಕಾರ್ಯಗಳಿಂದ ಒಕ್ಕೂಟ ಹಲವು ಕೋಟಿ ರೂ.ಗಳನ್ನು ಬಡವರ ವಿವಿಧ ಕಾರ್ಯಗಳಿಗೆ ವಿನಿಯೋಗಿಸಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ…
ಮಂಗಳೂರು, ಆ.25 : ಮಂಗಳೂರು ಪ್ರೊಡಕ್ಕಿವಿಟಿ ಕೌನ್ಸಿಲ್ ವತಿಯಿಂದ ರೋಟರಿ ಕ್ಲಬ್ ಮಂಗಳೂರು ಸಹಯೋಗದಲ್ಲಿ ಮಂಗಳೂರಿನ ರೆಡ್ ಕ್ರಾಸ್ ಪ್ರೇರಣಾ ಹಾಲ್ ನಲ್ಲಿ ಆ.20,ಶುಕ್ರವಾರ ಎಂಪಿಸಿ ರೋಟರಿ ಕೋಸ್ಟೈಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್ – 2026 ಸಮಾವೇಶ ನಡೆಯಿತು. ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗಬೇಕು. ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 1 ರಷ್ಟು ಜನರಿಗೆ ಮಾತ್ರ ಸರಕಾರದಿಂದ ಉದ್ಯೋಗ ಒದಗಿಸಲು ಸಾಧ್ಯ. ಉಳಿದ ಶೇಕಡಾ 99 ರಷ್ಟು ಮಂದಿಗೆ ಖಾಸಗಿ ಅಥವಾ ಸ್ವಂತ ಉದ್ಯೋಗವೇ ಪ್ರಮುಖ ಅವಕಾಶವಾಗಿದೆ ಎಂದರು. ಎಂಪಿಸಿ ಕಾನ್ ಕೇವ್ ನಿರ್ದೇಶಕ ಹಾಗು ಮಹಾಪೋಷಕ ಸಿಎ ಎಸ್.ಎಸ್ ನಾಯಕ್ ಅವರು ಮಾತನಾಡಿ, ಕರಾವಳಿ ಕರ್ನಾಟಕದ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ಹಾಗೂ ಸ್ಟಾರ್ಟ್ಅಪ್ಗಳಿಗೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮ…
ಮಂಗಳೂರು , ಆ. 24 : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್), ‘ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್’ ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ.ಕಳೆದ 16 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳನ್ನು ನೋಂದಾಯಿಸಿದೆ ಎಂದು ಶಾಖಾ ಮುಖ್ಯಸ್ಥ ಸೂರಜ್ ಪ್ರಭು ಅವರು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ ಮುಖ್ಯ ವೈಶಿಷ್ಟ್ಯಗಳು ಕೇವಲ ವಿಜ್ಞಾನಾಧಾರಿತ ಮೌಲ್ಯಮಾಪನ ಅಂಕಗಳನ್ನು ನೀಡದೆ, ವಿದ್ಯಾರ್ಥಿಯ ವಿಷಯ ಜ್ಞಾನ, ವಿಶ್ಲೇಷಣಾತ್ಮಕ ಸಾಮರ್ಥ್ಯ ಮತ್ತು ಪರೀಕ್ಷಾ ನಡವಳಿಕೆಯನ್ನು ವೈಜ್ಞಾನಿಕವಾಗಿ ವಿಶ್ಲೇಷಿಸುವ ‘ನೈದಾನಿಕ ಮೌಲ್ಯಮಾಪನ’ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದರು. ಪರೀಕ್ಷೆಯ ನಂತರ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿವರವಾದ ವರದಿ ಸಿಗಲಿದೆ. ಅರ್ಹ ವಿದ್ಯಾರ್ಥಿಗಳಿಗೆ ಆಕಾಶ್ ಸಂಸ್ಥೆಯ ಕ್ಲಾಸ್ರೂಮ್, ಹೈಬ್ರಿಡ್ ಮತ್ತು ಡಿಜಿಟಲ್ ಕೋರ್ಸ್ಗಳಿಗೆ 100% ವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ₹2.5 ಕೋಟಿ ನಗದು ಬಹುಮಾನ ಅತ್ಯುತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು ₹2.5 ಕೋಟಿ ಮೌಲ್ಯದ ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು. ಎಇಎಸ್ಎಲ್ನ…












