Subscribe to Updates
Get the latest creative news from FooBar about art, design and business.
Author: admin
ಶಿಮ್ಲಾ, ಜೂ. 06 : ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 5.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಂಗ್ರಾ, ಚಂಬಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಕಂಪನದ ಅನುಭವವಾಗುತ್ತಿದ್ದಂತೆ ಜನರು ಭಯದಿಂದ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಕಾಂಗ್ರಾ–ಚಂಬಾ ಗಡಿಯ ಸಮೀಪ ಇರುವ ಧರ್ಮಶಾಲಾದಿಂದ ಸುಮಾರು 40 ಕಿ.ಮೀ. ದೂರದಲ್ಲಿ 5 ಕಿ.ಮೀ. ಆಳದಲ್ಲಿ ರಾತ್ರಿ 10.04ಕ್ಕೆ ಈ ಭೂಕಂಪ ಸಂಭವಿಸಿದೆ. ಈ ಭೂಕಂಪದ ಕೇಂದ್ರಬಿಂದು ಕಾಂಗ್ರಾದ ಧರ್ ಗೊಡೋಯ್ ಸಮೀಪದಲ್ಲಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಯಾವುದೇ ಭಾಗದಲ್ಲಿ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿ ಉಂಟಾದ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಡಬಿದಿರೆ, ಜೂ. 05 : ಕಟ್ಟಡವೊಂದಕ್ಕೆ ಶೀಟು ಅಳವಡಿಸುವ ವೇಳೆ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಗುರುವಾರ ಕಡಪಳ್ಳ ಗಾಂಧಿನಗರದಲ್ಲಿ ನಡೆದಿದೆ. ಮೃತನನ್ನು ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಶೌರ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಕಡಪಳ್ಳ ಗಾಂಧಿನಗರದಲ್ಲಿರುವ ರಾಯಲ್ ಪ್ಯಾರಡೈಸ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಶೀಟು ಅಳವಡಿಸುವ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಸಮತೋಲನ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಟ್ಟಡದ ಗುತ್ತಿಗೆದಾರ ಪ್ರವೀಣ್ ಹಾಗೂ ಮಾಲಕರಾದ ನೋರ್ಟ್ ಶಾಬಾ ರೇಗೋ ಅವರು ಕಾಮಗಾರಿ ವೇಳೆ ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಾಗ್ರಿಗಳನ್ನು ನೀಡದಿರುವುದೇ ಈ ದುರಂತಕ್ಕೆ ಕಾರಣವೆನ್ನಲಾಗಿದ್ದು ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಜೂ. 04 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ಜೂ. 03 : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಡಿ ಕೆ ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್, ಇತರ ಸಚಿವರಾಗಿ ಕೆ.ಎಚ್. ಮುನಿಯಪ್ಪ , ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದರು.
ಬೈಂದೂರು, ಜೂ. 02 : ಪ್ರವಾಸಕ್ಕೆಂದು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಮೃತರನ್ನು ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿ ನಗರದಿಂದ ಒಟ್ಟು 7 ಮಂದಿ ಮುರುಡೇಶ್ವರ, ಕನ್ಯಾಕುಮಾರಿ ಪ್ರವಾಸಕ್ಕೆ ತೆರಳಿದ್ದರು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ಅವರು ವಿಶ್ರಾಂತಿ ಪಡೆಯಲು ನಿಲ್ಲಿಸಿದ್ದ ಸಂದರ್ಭದಲ್ಲಿ ಮನೆಯವರೆಲ್ಲಾ ಊಟದ ತಯಾರಿಯಲ್ಲಿರುವ ವೇಳೆ ಇಬ್ಬರು ಮಕ್ಕಳು ಪಕ್ಕದಲ್ಲಿರುವ ನದಿಗೆ ಸ್ನಾನಕ್ಕೆ ತೆರಳಿದ್ದರು. ನದಿಯ ಆಳ ಇರುವ ಜಾಗದಲ್ಲಿ ಈಜಲು ತೆರಳಿದ ಕಾರಣ ನೀರಿನ ಆಳ ತಿಳಿಯದೆ ಆಯುಷ್ ಮುಳುಗಿದ್ದಾನೆ ಎನ್ನಲಾಗಿದೆ. ತಕ್ಷಣ ಇನ್ನೊಬ್ಬ ಸಹೋದರ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಆದರೆ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ನದಿ ಆಳ ಇರುವ ಕಾರಣ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸುಮಾರು ಒಂದು…
ಮಂಗಳೂರು, ಜೂ. 01 : ಪಶ್ಚಿಮ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳು ಇಂದಿನಿಂದ ಬಹುತೇಕ ಸ್ಥಗಿತಗೊಳ್ಳಲಿವೆ. ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದೆ. ಅದ್ದರಿಂದ ಅವುಗಳ ರಕ್ಷಣೆಗಾಗಿ 61 ದಿನಗಳ ಕಾಲ ಯಾಂತ್ರೀಕೃತ ಬೋಟ್ಗಳು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ ಯಾಂತ್ರಿಕ ದೋಣಿಗಳು ಸಮುದ್ರಕ್ಕೆ ಇಳಿದರೆ ಮೀನುಗಳ ಸಂತಾನೋತ್ಪತ್ತಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ 61 ದಿನಗಳ ಕಾಲ ನಿಷೇಧ ಹೇರಲಾಗಿದೆ. ಈ ಅವಧಿಯಲ್ಲಿ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಹೆಚ್ಚಿನ ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳು ಮುಂದಿನ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದ್ದರೂ ಸಾಂಪ್ರದಾಯಿಕ ನಾಡದೋಣಿಗಳಿಗೆ ಮೀನುಗಾರಿಕೆ ಮುಂದುವರಿಸಲು ಅನುಮತಿ ನೀಡಲಾಗಿದೆ. ನಾಡದೋಣಿ ಮತ್ತು ಬಲೆಗಳನ್ನು ಬಳಸುವ ಮೀನುಗಾರರು 10 ಅಶ್ವಶಕ್ತಿಯ ಇಂಜಿನ್ ಅನ್ನು ಬಳಸಿ ಸಮುದ್ರದ ಬದಿ, ನದಿ ತೀರದಲ್ಲಿ ಮೀನುಗಾರಿಕೆ ನಡೆಸಬಹುದಾಗಿದೆ.
ಉಡುಪಿ, ಮೇ. 31 : ವ್ಯಕ್ತಿಯೊಬ್ಬರು ತನ್ನ ತೋಟದಲ್ಲಿರುವ ಬಾವಿಯ ಕೆಸರು ತೆಗೆಯಲು ಹೋಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ನಡೆದಿದೆ. ಮೃತರನ್ನು ಬೆಳ್ವೆ ಗ್ರಾಮದ ಪದ್ದು ಕುಂಬಾರ(75) ಎಂದು ಗುರುತಿಸ ಲಾಗಿದೆ. ಪದ್ದು ಕುಂಬಾರ ಇವರು ಮೇ 27ರಂದು ಮನೆಯ ತೋಟದಲ್ಲಿರುವ ಬಾವಿಯ ಕೆಸರನ್ನು ತೆಗೆಯಲು ಬಾವಿಗೆ ಇಳಿದಿದ್ದರು. ಕೆಲಸ ಮುಗಿಸಿ, ಹಗ್ಗದ ಸಹಾಯದಿಂದ ಮೇಲಕ್ಕೆ ಬರುವಾಗ ಆಕಸ್ಮಿಕವಾಗಿ ಕೈಜಾರಿ ಪುನಃ ಬಾವಿಗೆ ಬಿದ್ದಿದ್ದಾರೆ. ಅವರನ್ನು ಬಾವಿಯಿಂದ ಮೇಲಕ್ಕೆತ್ತಿ,ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮೇ 30ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು,ಮೇ.30 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯು 20ಲಕ್ಷ ರೂ. ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಈ ಪ್ರದೇಶಕ್ಕೆ ತೊಂದರೆ ಉಂಟಾಗುತ್ತಿದ್ದ ಬಗ್ಗೆ ಸ್ಥಳೀಯರು ಮಾಡಿದ ಮನವಿಯಂತೆ ಲಭ್ಯ ಅನುದಾನಗಳನ್ನು ಬಳಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಕಿರಣ್ ಮರೋಳಿ, ಮನೋಹರ್ ಶೆಟ್ಟಿ ಕದ್ರಿ, ರುಕ್ಮಯ್ಯ, ರಾಘು, ಅರುಣ್ ಶೆಟ್ಟಿ, ರಾಜೇಶ್ ಅಲಂಗಾರ್, ಮಾಲತಿ, ಶರತ್, ಸುಲೋಚನಾ, ವತ್ಸಲಾ, ವಾಲ್ಟರ್ ಪಿಂಟೋ, ಶೇಖರ್ ಪೂಜಾರಿ, ಸ್ಟೆಲ್ಲಾ ಲೋಬೋ, ಸ್ಟೀವನ್ ಲೋಬೋ, ಜಗದೀಶ್ ಸಾಲ್ದಾನ, ರೇಷ್ಮಾ ಪಿಂಟೋ, ಬೆನೆಡಿಕ್ಟ್ ಮಸ್ಕರೆನ್, ವಾರ್ಡಿನ ಪ್ರಮುಖರು, ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಬೆಂಗಳೂರು, ಮೇ 29 : ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಲೋಕಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ ಅವರಿಗೆ ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು.
ಮಂಗಳೂರು,ಮೇ.29 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿಯು ಜೂನ್ 4ರಿಂದ 13ರವರೆಗೆ ನಗರದ ಸೆಂಟ್ ಸೆಬಾಸ್ಟಿಯನ್ ಸೆಂಟೆನರಿ ಸಭಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯನ್ನು ಭಾರತೀಯ ಬ್ರಿಡ್ಜ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಬ್ರಿಡ್ಜ್ ಅಸೋಸಿಯೇಷನ್ ತತ್ವಾವಧಾನದಲ್ಲಿ, ಮಂಗಳೂರಿನ ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ಆಯೋಜಿಸಿದೆ ಎಂದು ಅಸೋಸಿಯೇಷನ್ ಅಧ್ಯಕ್ಷೆ ಮಾರ್ಜೊರಿ ಟೆಕ್ಸೇರಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ದೇಶದ ವಿವಿಧ ಭಾಗಗಳಿಂದ ಹಾಗೂ ಪೋಲೆಂಡ್ ದೇಶದಿಂದ ವಿಶ್ವ ಚಾಂಪಿಯನ್ ಆಟಗಾರರಾದ ಬುರಾಸ್ ಕ್ರಿಸ್ಟೋಫ್ ಜರ್ಜಿ, ಡೊಮಿನಿಕ್ ಫಿಲೋಫೋವಿಚ್ ಜಾಕೋಬ್ ಪಾತೇಹುವಾ ಮತ್ತು ಪ್ಯಾಟ್ರಿಕ್ ಪಾತೇಹುವಾ ಸೇರಿದಂತೆ ಸುಮಾರು 450ಕ್ಕೂ ಅಧಿಕ ಖ್ಯಾತ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ಕ್ರೀಡಾಕೂಟವು ಮಂಗಳೂರನ್ನು ಭಾರತದ ಮತ್ತು ವಿಶ್ವದ ಬ್ರಿಡ್ಜ್ ನಕಾಶೆಯಲ್ಲಿ ಗುರುತಿಸುವಂತೆ ಮಾಡಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ಡೆರೆಕ್ ರೇಗೊ ಹಾಗೂ ಸದಸ್ಯ…











