Subscribe to Updates
Get the latest creative news from FooBar about art, design and business.
Author: admin
ಮೆಕ್ಸಿಕೋ, ನ. 02 : ಇಲ್ಲಿನ ಸೊನಾರಾ ರಾಜ್ಯದಲ್ಲಿರುವ ಒಂದು ಸೂಪರ್ ಮಾರ್ಕೆಟ್ ನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಕನಿಷ್ಠ 23 ಮಂದಿ ಸಾವನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಸೂಪರ್ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಸಮಯದಲ್ಲಿ ಮಾರ್ಕೆಟ್ ಒಳಗೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದರು. ಮಾರ್ಕೆಟ್ ಹೊರಗೆ ನಿಲ್ಲಿಸಿದ್ದ ಹಲವು ಕಾರುಗಳಿಗೂ ಬೆಂಕಿ ತಗುಲಿ ಅವು ಸಂಪೂರ್ಣ ಸುಟ್ಟು ಹೊಗಿವೆ ಎಂಬುದಾಗಿ ಪ್ರತ್ಯಕ್ಷ ಸಾಕ್ಷಿಗಳು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಶ್ರಮದ ನಂತರ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಸ್ಥಳೀಯ ಆಡಳಿತ ತನಿಖೆಯನ್ನು ಆರಂಭಿಸಿವೆ ಎಂದು ವರದಿಯಾಗಿದೆ.
ಮಂಗಳೂರು, ನ. 01 : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ 70ನೇ ಕನ್ನಡ ರಾಜ್ಯೋತ್ಸವ ವನ್ನು ನವೆಂಬರ್ 1, ಶನಿವಾರ ಆಚರಿಸಲಾಯಿತು. ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿ ದರು. ಬಳಿಕ ಮಾತನಾಡಿದ ಅವರು, ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರಾಗಲಿ, ಕರ್ನಾಟಕದಲ್ಲಿ ಇರುವವರೆಲ್ಲರೂ ಕನ್ನಡಿಗರೇ ಆಗಿರುತ್ತಾರೆ.ಕನ್ನಡಿಗರಿಗೆ ಕನ್ನಡ ಭಾಷೆ ಮೇಲೆ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು ಎಂದು ಹೇಳಿದರು. ನಗರ ವ್ಯಾಪ್ತಿಯಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಲಪಾಡಿಯಿಂದ ಸುರತ್ಕಲ್ ವರೆಗೆ ರಿಂಗ್ ರೋಡ್ ನಿರ್ಮಿಸಲು ಸರಕಾರ ಯೋಜನೆ ರೂಪಿಸಲಿದೆ ಎಂದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ವಿವಿಧ ಸಂಘ ಸಂಸ್ಥೆಗಳು ಸೇರಿ 95 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ದ.…
ಮಂಗಳೂರು,ಅ31 : ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಜಿಲ್ಲಾ ಖಜಾಂಚಿ ಬಾಲಕೃಷ್ಣ ಹೆಗ್ಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ, ಡೈರೆಕ್ಟರಿ ಸಂಪಾದಕಿ ಗೀತಾ ಕಲ್ಯಾಣಪುರ, ನ್ಯಾನ್ಸಿ ಮಸ್ಕರೆನಸ್, ದಯಾವತಿ ಮೆಂಡೋನ್, ಲಿಡಿಯಾ ಡಿ’ಕೋಸ್ಟಾ, ಹೇಮಾ ರಾವ್, ಸೀಮಾ ಮಯ್ಯಾ ಮತ್ತು ಮೊಹಿದಿನ್ ಕುಂಞಿ ಉಪಸ್ಥಿತರಿದ್ದರು.
ಉಳ್ಳಾಲ, , ಅ. 30 : ಸ್ಕೂಟರ್ ಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ರಸ್ತೆಗೆಸೆಯಲ್ಪಟ್ಟು ಸವಾರ ಮೃತಪಟ್ಟಿರುವ ಘಟನೆ ರಾ.ಹೆ.66 ರ ಅಡಂ ಕುದ್ರು ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಬೊಕ್ಕಪಟ್ಣ ಬೆಂಗ್ರೆ ನಿವಾಸಿ ನಾಗೇಶ್ ಪುತ್ರನ್(62) ಮೃತರು. ನಾಗೇಶ್ ಪುತ್ರನ್ ಅವರು ಅಡಂಕುದ್ರು ಎಂಬಲ್ಲಿ ತೊಕ್ಕೊಟ್ಟುವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು, ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡಿದ್ದಾರೆ. ನಾಗೇಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಅ. 29 : ದಾಯ್ಜಿವರ್ಲ್ಡ್ ಮೀಡಿಯಾ ಹಾಗೂ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಓಂಕಾಲಜಿ (MIO) ಸಹಯೋಗದಲ್ಲಿ ‘ಕ್ಯಾನ್ಸರ್ ಗೆಲ್ಲೋಣ’ ಎಂಬ ಒಂದು ವರ್ಷದ ಕ್ಯಾನ್ಸರ್ ಜಾಗೃತಿ ಅಭಿಯಾನವನ್ನು ಶನಿವಾರ ಆರಂಭಿಸಿದೆ. ಈ ಉಪಕ್ರಮದ ಮೂಲಕ ಕ್ಯಾನ್ಸರ್ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಗುಣಮುಖತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ. ಉದ್ಘಾಟನಾ ಭಾಷಣದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತಾಡಿ, ಸಕಾರಾತ್ಮಕ ದೃಷ್ಟಿಕೋನದಿಂದ ಸಾಮಾಜಿಕ ಜಾಗೃತಿ ಸೃಷ್ಟಿಸಲು ದಾಯ್ಜಿವರ್ಲ್ಡ್ ಮತ್ತು ಎಂಐಒ ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿ ಅಭಿಯಾನ ಆರಂಭಿಸಿದೆ.ಈ ಜನಹಿತೈಷಿ ಉಪಕ್ರಮ ಸಮಾಜದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವಪೂರ್ಣ ಬದಲಾವಣೆ ತರಲಿದೆ ಎಂದು ಹೇಳಿದರು. ವಾಲ್ಟರ್ ನಂದಳಿಕೆ ಅವರು ಮಾತಾಡಿ, ಮಾಜಿ ಸೇನಾ ಕ್ಯಾಪ್ಟನ್ ಮತ್ತು ಎಂಐಒವಿನ ನಿಷ್ಠಾವಂತ ವೈದ್ಯರೊಂದಿಗೆ ಇರುವುದು ಗೌರವದ ವಿಷಯ. ಸೇನೆಯು ನಮ್ಮ ರಾಷ್ಟ್ರವನ್ನು ರಕ್ಷಿಸುತ್ತದೆ ಮತ್ತು ವೈದ್ಯರು ಜೀವನವನ್ನು ರಕ್ಷಿಸುತ್ತಾರೆ. ನಾವು ‘ಕ್ಯಾನ್ಸರ್ ಗೆಲ್ಲೋಣ’ ಅನ್ನುವ ಅಭಿಯಾನವನ್ನು ಆರಂಭಿಸುತ್ತಿದ್ದೇವೆ.ಇದು ತಡೆಗಟ್ಟುವ ತಂತ್ರಗಳು, ಚಿಕಿತ್ಸೆಯ ಮಾಹಿತಿ, ಉಳಿದವರ…
ನೈರೋಬಿ, ಅ. 28 : ಕೀನ್ಯಾದ ಕ್ವಾಲೆಯಲ್ಲಿ 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ 12 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ. ಮಂಗಳವಾರ ಬೆಳಿಗ್ಗೆ ವಿಮಾನವು ಡಯಾನಿಯಿಂದ ಕಿಚ್ವಾ ಟೆಂಬೊ ಕಡೆಗೆ ತೆರಳುತ್ತಿತ್ತು. ಈ ವಿಮಾನದಲ್ಲಿ 12 ಮಂದಿ ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಸುಮಾರು ಬೆಳಿಗ್ಗೆ 8:30ರ ಹೊತ್ತಿಗೆ ವಿಮಾನ ಪತನಗೊಂಡಿದೆ ಎಂದು ಕೀನ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ ಮಾಹಿತಿ ನೀಡಿದೆ. ಸದ್ಯ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಮಂಗಳೂರು,ಅ. 27 : ನಗರದ ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025’ ಪಂದ್ಯಾವಳಿ ಸೋಮವಾರ ಉದ್ಘಾಟಿನೆಗೊಂಡಿತು. ಬಳಿಕ ಮಾತಾಡಿದ ಅವರು, ದಕ ಜಿಲ್ಲೆಯ ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯ ಮೊದಲ ಬಾರಿ ನಡೆಯುತ್ತಿದೆ. ಇಲ್ಲಿನ ಒಳಾಂಗಣ ಕ್ರೀಡಾಂಗಣಕ್ಕೆ ಹಿಂದಿನ ಅವಧಿಯಲ್ಲಿ ಅಡಿಗಲ್ಲು ಹಾಕಿದ್ದು ನಾನೇ. ಉದ್ಘಾಟನೆ ನಾನೇ ಮಾಡಿತ್ತಿದ್ದೇನೆ ಎಂದರು. ಜನಸಂಖ್ಯೆಯಲ್ಲಿ ದೇಶ ಜಗತ್ತಿನಲ್ಲೇ ನಂಬರ್ ವನ್ ಸ್ಥಾನದಲ್ಲಿದೆ. ಆದರೆ ಒಪಿಂಪಿಕ್ ಪದಕಗಳಲ್ಲಿ ಹಿಂದಿದೆ. ಹಾಗಾಗಿಯೇ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವ್ಯವಸ್ಥೆ ಮಂಗಳೂರಿನ ಉರ್ವಾದ ಈ ಒಳಾಂಗಣ ಕ್ರೀಡಾಂಗಣದ ಮೂಲಕ ಮಾಡಲಾಗಿದೆ ಎಂದರು. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಮನೋಜ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವೇದಿಕೆಯಲ್ಲಿ ಮಾಜಿ…
ಪುತ್ತೂರು, ಅ. 26 : ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20 ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ತಾಲೂಕಿನ ನಿವಾಸಿ, ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ ಈ ಸಂಬಂಧ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ.25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ಭಾಷಣವನ್ನು…
ಬಂಟ್ವಾಳ, ಅ. 25 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್ (25) ಎಂಬವರು ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್, ಕಾರಿನಲ್ಲಿದ್ದ ಶೇಷ, ಮಹೇಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಂಜಯ್ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ವಾಪಸ್ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಮಂಗಳೂರು, ಅ. 24 : ತುಳು ನಾಟಕ ಕಲಾವಿದರ ಒಕ್ಕೂಟ ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಕಿಶೋರ್ ಡಿ. ಶೆಟ್ಟಿ ವಹಿಸಿದ್ದರು. ಮುಂದಿನ 2 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು ತಾರಾನಾಥ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷಣ್ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ ಕೊಪ್ಪಲ ಕದ್ರಿ, ಕ್ಷೇಮನಿಧಿ ಪ್ರಧಾನಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್ ಶರವು, ಜೊತೆ ಕಾರ್ಯದರ್ಶಿ ತುಳಸೀ ದಾಸ್ ಉರ್ವ, ಸಲಹಾ ಸಮಿತಿ ಸದಸ್ಯರಾಗಿ ತಮ್ಮ ಲಕ್ಷ್ಮ್ಮಣ್ , ಶರತ್ ಶೆಟ್ಟಿ ಮುಂಡ್ಕೂರು, ಶೋಭಾಶೆಟ್ಟಿ, ಪ್ರಚಾರ ನಿರ್ದೇಶಕರಾಗಿ ರತ್ನದೇವ್…












