Author: admin

ಮಂಗಳೂರು, ಮಾ. 30 : ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಅರ್ಕುಳ ಬ್ರಿಡ್ಜ್ ಬಳಿ ರವಿವಾರ ನಡೆದಿದೆ. ಮೃತರನ್ನು ಪರಂಗಿಪೇಟೆಯ ನಿವಾಸಿ ಮುಹಮ್ಮದ್ ಆಶ್ಫಕ್ (22) ಎಂದು ಗುರುತಿಸಲಾಗಿದೆ. ವರದಿ ಪ್ರಕಾರ ರವಿವಾರ ಬೆಳಗ್ಗೆ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ಗೆ ಹಿಂದಿನಿಂದ ಬರುತ್ತಿದ್ದ ದ್ವಿಚಕ್ರ ವಾಹನ ಅರ್ಕುಳ ಸೇತುವೆ ಬಳಿ ಇರುವ ಫರ್ನಿಚರ್ ಅಂಗಡಿಯೊಂದರ ಬಳಿ ಢಿಕ್ಕಿ ಹೊಡೆದಿದ್ದು, ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು,ತಕ್ಷಣ ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆ ದಾಖಲಿಸುವ ಹೊತ್ತಿಗೆ ಗಾಯಾಳು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ಮಾ.29 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು, ಈ ಕಾಮಗಾರಿಯ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹು ದಿನಗಳ ಬೇಡಿಕೆಯಂತೆ ಈ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ, ಸ್ಥಳೀಯ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಮಂಗಳೂರು, ಮಾ.28 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟ ಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಶಿಲುಬೆಯ ಯಾತ್ರೆ ಈ ಬಾರಿ ಮಾ.31ರಂದು ನಡೆಯಲಿದೆ ನಡೆಯಲಿದೆ ಎಂದು ಪೇಜಾರ್ ವಲಯದ ಪ್ರಧಾನ ಧರ್ಮಗುರು ವಂ. ಫಾ. ರೂಡಾಲ್ಫ್ ರವಿ ಡೇಸಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಿರಂತರ ಪ್ರಾರ್ಥನೆ, ಸ್ತುತಿ ಆರಾಧನೆ ಹಾಗೂ ದೇವರ ವಾಕ್ಯದ ಮನನ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾರಿಸ್ಮಾಟಿಕ್ ಸಂಚಾಲನ ಈ ಕಾರ್ಯಕ್ರಮ ನಡೆಸಿಕೊಡಲಿದ್ದು, 3 ಗಂಟೆಗೆ ಭಕ್ತಿ ಆಚರಣೆ, 3.30ಕ್ಕೆ ಪವಿತ್ರ ಪ್ರಸಾದದ ಆರಾಧನೆ ನಡೆಲಿದೆ. ಸಂಚಾಲನದ ನಿರ್ದೇಶಕ ವಂ. ಕ್ಲಿಫರ್ಡ್ ಫೆರ್ನಾಂಡಿಸ್ ಕಾರ್ಯ ನೆರವೇರಿಸಲಿದ್ದಾರೆ ಎಂದರು. ಸಂಜೆ 5 ಗಂಟೆಗೆ ಪವಿತ್ರ ಬಲಿಪೂಜೆ ಹಾಗೂ 6 ಗಂಟೆಗೆ ಶಿಲುಬೆಯ ಹಾದಿ ಬಳಿಕ…

Read More

ಮಂಗಳೂರು, ಮಾ.27 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 6ರಿಂದ12ರ ತನಕ ವಿವಿಧ ವೈದಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಆಶಿಕ್ ಬಲ್ಲಾಳ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ತಿವೊಡಲು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏಪ್ರಿಲ್ 12 ಆದಿತ್ಯವಾರ ಪೂ. 8:20ರಿಂದ 10:00 ಗಂಟೆಯೊಳಗಿನ ವೃಷಭ ಲಗ್ನ ಸುಮುಹೂರ್ತದಲ್ಲಿ ನೆರವೇರಲಿದೆ. ಈ ಮಹೋತ್ಸವದ ಅಂಗವಾಗಿ ಏಪ್ರಿಲ್ 6 ರಿಂದ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿವೆ. ಅದರೊಂದಿಗೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಆಯೋಜಿಸಲಾಗಿವೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮೊಕೇಸ್ತರಾದ ಡಾ.ನರೇಶ್ ರೈ,ದೆಪ್ಪುಣಿಗುತ್ತು ,ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ವಿಠಲ ಆಳ್ವ, ದೀಪಕ್ ಪೂಜಾರಿ, ಸದಸ್ಯರಾದ ಜಗದೀಶ್ ಶೆಟ್ಟಿ ಮುರ ಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು,ಮಾ.26 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ ಗೆ ವಿಶೇಷ ಅನುದಾನದಲ್ಲಿ ಮೇಲ್ಛಾವಣಿ ಅಳವಡಿಸಲಾಗುತ್ತಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಶಿಲನ್ಯಾಸ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಆಟೋ ಚಾಲಕರು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರ ಈ ಹಿಂದಿನ ಮನವಿ ಮೇರೆಗೆ ಇಲ್ಲಿ ಸುಸಜ್ಜಿತ ಮೇಲ್ಛಾವಣಿ ನಿರ್ಮಾಣವಾಗಲಿದೆ ಎಂದರು. ಈ ಸಂದರ್ಭದಲ್ಲಿ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ, ಸ್ಥಳೀಯ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಸುಳ್ಯ, ಮಾ. 25 : ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಮೆಸ್ಕಾಂನಲ್ಲಿ ಗುತ್ತಿಗೆ ಆಧಾರದ ಮೇಲೆ ಮೀಟರ್ ರೀಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿ ನಡೆದಿದೆ. ಮೃತರನ್ನು ಲೋಕನಾಥ (35) ಎಂದು ಗುರುತಿಸಲಾಗಿದೆ. ಲೋಕನಾಥ ಅವರು ಸುಳ್ಯದಿಂದ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಬೈಕ್ ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು,ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಮಂಗಳೂರು,ಮಾ.25  : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯು ಸುಮಾರು 25 ಲಕ್ಷ ರೂ. ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಮ.ನ.ಪಾ ಸದಸ್ಯರಾದ ಕಿಶೋರ್ ಕೊಟ್ಟಾರಿ, ನಿತಿನ್ ಕುಮಾರ್, ರವಿಶಂಕರ್ ಮಿಜಾರು, ಜಯಕುಮಾರ್ , ನವೀನ್ ಶೆಣೈ, ಮಾಧವ ಭಟ್, ಸುನಿಲ್ ಕಾರ್ಮಿಕ ಕಾಲೋನಿ, ಡೋಲ್ಪಿ ಡಿಸೋಜ, ರಮೇಶ್, ಕರ್ಣ, ನಟರಾಜ್ ಆಳ್ವ, ನೀರಜ್ ಕಕ್ಕೆಬೆಟ್ಟು, ಪ್ರವೀಣ್ ಆಚಾರಿ, ಗುರು, ಲೆಸ್ಲಿ, ಮೆಲ್ವಿ, ವಾಲ್ಟಿ, ಫ್ರ್ಯಾಂಕ್ಲಿ, ಫಿಲಿಪ್, ಪ್ರೀತಮ್, ಮಣಿ ನೀತಿನಗರ, ವಾಜಿ, ಜೋಸಿ ಸಿಕ್ವೆರ ಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು,ಮಾ.23 : ಬಾಬಿ ಚೆಮ್ಮನೂರು ಇಂಟರ್ನ್ಯಾಶನಲ್ ಜ್ಯುವೆಲ್ಲರ್ಸ್ ನ  58ನೇ ಶೋರೂಮ್ ನಗರದ ಕ್ಲಾಕ್ ಟವರ್ ಬಳಿ ಭಾನುವಾರ ಉದ್ಘಾಟನೆಗೊಂಡಿತು. ಶೋರೂಮ್ ಅನ್ನು ನಟ ರಾದ ಇಮ್ರಾನ್ ಹಶ್ಮಿ, ರಿಯಲ್ ಸ್ಟಾರ್ ಉಪೇಂದ್ರ ಅವರು ಉದ್ಘಾಟಿಸಿದರು ಈ ಸಂದರ್ಭ ಮಾತನಾಡಿದ ಇಮ್ರಾನ್ ಹಶ್ಮಿ, ಬಾಬಿ ಚೆಮ್ಮನೂರು ಜ್ಯುವೆಲ್ಲರ್ಸ್ ತನ್ನ 57 ಶೋರೂಮ್ ಗಳ ಬಳಿಕ 58ನೇ ಶೋರೂಮ್ ಆರಂಭಿಸಿದೆ.ಅವರ ಉದ್ಯಮ ಮಂಗಳೂರಲ್ಲಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ರಿಯಲ್ ಸ್ಟಾರ್ ಉಪೇಂದ್ರ ಅವರು ಹೊಸ ಶೋರೂಮ್ ಗೆ ಶುಭ ಹಾರೈಸಿದರು. ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರಿನಲ್ಲಿ ಚೆಮ್ಮನೂರ್ ಜ್ಯುವೆಲ್ಲರಿಯ ಇನ್ನಷ್ಟು ಶೋರೂಮ್ ಗಳು  ಬರಲಿ, ಅದಕ್ಕೆ ಸಹಕಾರ ನೀಡುವುದಾಗಿ ಹೇಳಿದರು. ಇದೇ ಸಂದರ್ಭ ಬಾಬಿ ಚೆಮ್ಮನೂರು ಅವರು ಬಡ ರೋಗಿಗಳಿಗೆ ಬೋಚೆ ಫ್ಯಾನ್ಸ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆರ್ಥಿಕ ಸಹಾಯ ವಿತರಿಸಿದರು. ಕಾರ್ಯಕ್ರಮದಲ್ಲಿ ಜ್ಯುವೆಲ್ಲರಿ ಸಂಸ್ಥೆಯ ಮಾಲೀಕ ಬಾಬಿ ಚೆಮ್ಮನೂರು, ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ಮಾಜಿ ಮೇಯರ್ ಮನೋಜ್ ಕೋಡಿಕಲ್,…

Read More

ಮಂಗಳೂರು,ಮಾ.22 : ಮಂಗಳೂರಿನ ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಐಎಂಐಟಿ (AIMIT) ಕೇಂದ್ರದ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ನ ಎಂಬಿಎ (MBA) ವಿಭಾಗವು, ಮಾರ್ಚ್ 16 ರಂದು ಬೀರಿಯಲ್ಲಿರುವ ಎಐಎಂಐಟಿ ಕೇಂದ್ರದ ಆರ್ಥರ್ ಶೆಣಯ್ ಸಭಾಂಗಣದಲ್ಲಿ ತನ್ನ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಅನ್ನು ಆಯೋಜಿಸಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಜೀವನ್ ಡೆರಿಕ್ ಡಿಸೋಜ ಅವರು, ಮಾನವ ಸಂಪನ್ಮೂಲ ನಿರ್ವಹಣೆಯ ಮೇಲೆ ಜನರೇಟಿವ್ ಎಐ ಮತ್ತು ಏಜೆಂಟಿಕ್ ಎಐನಂತಹ ಉದಯೋನ್ಮುಖ ತಂತ್ರಜ್ಞಾನಗಳ ಪರಿವರ್ತಕ ಪ್ರಭಾವದ ಕುರಿತು ಮಾತಾಡಿದರು. ಭವಿಷ್ಯದ ವೃತ್ತಿಜೀವನವನ್ನು ರೂಪಿಸುವಲ್ಲಿ ವೃತ್ತಿಪರ ನೆಟ್‌ವರ್ಕಿಂಗ್ನ ಪ್ರಾಮುಖ್ಯತೆಯನ್ನು ಅವರು ಒತ್ತಿಹೇಳಿದರು. ನಿರ್ದೇಶಕರಾದ ಡಾ. ಫಾದರ್ ಕಿರಣ್ ಕೊತಾ ಅವರು ತಮ್ಮ ಭಾಷಣದಲ್ಲಿ, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಲು ಮತ್ತು ಫಲಿತಾಂಶಗಳನ್ನು ಲೆಕ್ಕಿಸದೆ ತಮ್ಮನ್ನು ತಾವು ವಿಜೇತರೆಂದು ಪರಿಗಣಿಸಲು ಒತ್ತಾಯಿಸಿದರು. ಜೆಸ್ಯೂಟ್ ಮಿಷನ್ ಮತ್ತು ಆದರ್ಶಗಳು ಇಂದಿನ ಜವಾಬ್ದಾರಿಯುತ ಮ್ಯಾನೇಜ್‌ಮೆಂಟ್ ಅಭ್ಯಾಸಗಳ ಕೇಂದ್ರಬಿಂದುವಾಗಿರುವ ‘ಟ್ರಿಪಲ್ ಬಾಟಮ್ ಲೈನ್’ (ಜನರು, ಭೂಮಿ ಮತ್ತು…

Read More

ಕಾರ್ಕಳ, ಮಾ. 21 : ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಗುರುವಾರ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಬೈಕ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು,ತೀವ್ರವಾಗಿ ಗಾಯಗೊಂಡು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More