Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಎ. 28 : ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಛೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ತಾ. ಎ.24 ರಂದು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಫಾ| ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನೀರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಹಾಜರಿದ್ದರು. ಅವರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿದರು. ಬಳಿಕ ಮಾತಾಡಿದ ಪೌಸ್ತಿನ್ ಲೋಬೊ ಅವರು, ತಮ್ಮ ಜೀವನದುದ್ದಕ್ಕೂ ಸರಳ ಮತ್ತು ವಿನಮ್ರ ಜೀವನಶೈಲಿಯನ್ನು ನಡೆಸುವ ಮೂಲಕ ಸಂತ ಫ್ರಾನ್ಸಿಸ್ ಅಸ್ಸಿಸಿಯ ಹೆಜ್ಜೆಗಳನ್ನು ಅಕ್ಷರಶ: ಅನುಸರಿಸಿದರು. ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಪ್ರಗತಿಪರರಾಗಿದ್ದರು ಮತ್ತು ಅನಗತ್ಯ ಮತ್ತು ಅಪ್ರಸ್ತುತ ಅಭ್ಯಾಸಗಳನ್ನು ತೆಗೆದುಹಾಕುವಲ್ಲಿ ನಂಬಿಕೆ ಇಟ್ಟಿದರು. ಪ್ರಪಂಚದಾದ್ಯಂತ ಯುದ್ದಗಳು ಮತ್ತು ಸಂಘರ್ಷಗಳಿಂದಾಗಿ ಬಳಲುತ್ತಿರುವ ಮಾನವಕುಲದ ಬಗ್ಗೆ ಅವರು ಆಳವಾದ ಸಹಾನಭೂತಿಯನ್ನು ಹೊಂದಿದ್ದರು. ಅವರು ಜನರಲ್ಲಿ ಅಂತರ್ ಧರ್ಮೀಯ ಸಾಮರಸ್ಯವನ್ನು ಪ್ರತಿಪಾದಿಸಿದರು ಮತ್ತು ಶಾಂತಿಯನ್ನು ತರಲು ಬಯಸಿದರು ಎಂದು ಅವರು ಹೇಳಿದರು. ಬ್ಯಾಂಕಿನ ನಿರ್ದೇಶಕಿ ಶ್ರೀಮತಿ ಐರಿನ್ ರೆಬೆಲ್ಲೊ…
ಮಂಗಳೂರು, ಎ.27: ನಗರದ ಎಸ್ಸಿಎಸ್ ಹಾಸ್ಪಿಟಲ್ ಪಕ್ಕದಲ್ಲಿ ಎ ಯುನಿಟ್ ಆಫ್ ಡಾಕ್ಟರ್ಸ್ ಎಂ ಆರ್ ಐ ಪ್ರೈವೇಟ್ ಲಿಮಿಟೆಡ್ ನ ಸುಸಜ್ಜಿತ,ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಎಕ್ಸೆಲ್ ಎಂ ಆರ್ ಐ ಡಯಾಗ್ನೋಸ್ಟಿಕ್ಸ್ ಕೇಂದ್ರವು ಭಾನುವಾರ ಉದ್ಘಾಟನೆಗೊಂಡಿತು. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ನೂತನ ಡಯಾಗ್ನೋಸ್ಟಿಕ್ಸ್ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ.ವೇದವ್ಯಾಸ ಕಾಮತ್, ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಮುಖ್ಯ ಅತಿಥಿಯಾಗಿದ್ದರು. ಸಮಾರಂಭದಲ್ಲಿ ಕೇಂದ್ರದ ಸ್ಥಾಪಕ ನಿರ್ದೇಶಕರಾದ ಡಾ.ಆಲಮ್ ನವಾಝ್ ಮತ್ತು ಡಾ.ವರ್ಗೀಸ್ ಜೋ, ಡಾ.ಹೆರಾಲ್ಡ್ ಮಸ್ಕರೇನಸ್, ತಜ್ಞ ವೈದ್ಯರಾದ ಡಾ.ಜಯಕೃಷ್ಣನ್, ಡಾ.ಕೆ.ಆರ್.ಕಾಮತ್, ಡಾ.ಶೋಭಿತಾ, ಡಾ.ಮುನೀರ್ ಅಹ್ಮದ್, ಡಾ.ರಿಝ್ವಾನ್ ಅಹ್ಮದ್, ಡಾ.ಹಸೀಬ್ ಅಮನ್, ಡಾ.ಮುರಳೀಧರ್ ಎಡಿಯಾಲ್, ಡಾ.ಆರ್.ಎಲ್.ಕಾಮತ್, ಡಾ.ಭಾಸ್ಕರ ಶೆಟ್ಟಿ, ಡಾ.ದಿವಾಕರ, ಡಾ.ಜೀವರಾಜ ಸೊರಕೆ, ಡಾ.ತಾಜುದ್ದೀನ್, ಡಾ.ಥಾಮಸ್, ಡಾ.ಸಲೀಮ್ ಉಪಸ್ಥಿತರಿದ್ದರು.
ಮಂಡ್ಯ, ಏ.26 : ಚಲಿಸುತ್ತಿದ್ದ ಖಾಸಗಿ ಬಸ್ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ. 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗಿನ ಜಾವ 5 ಗಂಟೆಗೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಸಮೀಪ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದ್ದು, ಕೂಡಲೇ ಬಸ್ ಚಾಲಕ ಬಸ್ನಲ್ಲಿದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲಗೇಜ್ ಸಹಿತ ಕೆಳಗೆ ಇಳಿಸಿದ್ದಾರೆ.ಬಳಿಕ ಬಸ್ ಧಗಧಗನೇ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ನ ಬೆಂಕಿಯನ್ನು ನಂದಿಸಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಎ. 26: ನಗರದ 32 ಮಂದಿ ತಜ್ಞ ವೈದ್ಯರ ತಂಡವು ಸುಸಜ್ಜಿತ,ಅತ್ಯಾಧುನಿಕ ಎಂ ಆರ್ ಐ ಸೌಲಭ್ಯದಿಂದ ಕೂಡಿದ ಎಕ್ಸೆಲ್ ಎಂ ಆರ್ ಐ ಡಯಾಗ್ನೊಸ್ಟಿಕ್ ಕೇಂದ್ರವನ್ನು ನಗರದಲ್ಲಿ ಆರಂಭಿಸು ತ್ತಿದ್ದು, ಎ. 27ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದೆ ಎಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಾ. ಜೋ ವರ್ಗೀಸ್ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ| ಜೋ ವರ್ಗೀಸ್ ಅವರು, ಎಂ ಆರ್ ಐ ಸ್ಕ್ಯಾನ್ ಮೂಲಕ ದೇಹದ ಯಾವ ಮೂಲೆಯಲ್ಲೂ ಇರುವಂತಹ ಅತೀಸೂಕ್ಷ್ಮ ತೊಂದರೆಗಳನ್ನೂ ವೀಕ್ಷಿಸಿ, ಪರಿಹರ ಕಂಡುಕೊಳ್ಳಲು ಸಾಧ್ಯ. ಅಂತಹ ಅತ್ಯಾಧುನಿಕ ಎಂ ಆರ್ ಐ ಮೆಷಿನ್ ಗಳನ್ನು ಈ ಎಕ್ಸೆಲ್ ಎಂ ಆರ್ ಐ ಕೇಂದ್ರ ದಲ್ಲಿ ಅಳವಡಿಸಲಾಗಿದೆ ಎಂದವರು ಹೇಳಿದರು. ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್ ಯು.ಟಿ. ಖಾದರ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್. ಆರ್. ತಿಮ್ಮಯ್ಯ ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಡಾ| ಆಲಂ ನವಾಝ್, ಡಾ| ಹೆರಾಲ್ಡ್…
ಉಡುಪಿ, ,ಏ.25 :ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕೆಯಿಂದ ಉಡುಪಿಯಲ್ಲಿ ಪ್ರತಿಭಟನೆ ಮತ್ತು ಮೆರವಣಿಗೆ ನಡೆಯಿತು.ಜೋಡುಕಟ್ಟೆಯಿಂದ ಪ್ರಾರಂಭವಾದ ರ್ಯಾಲಿಯು ಉಡುಪಿ ಸರ್ವಿಸ್ ಬಸ್ ನಿಲ್ದಾಣದಲ್ಲಿ ಮುಕ್ತಾಯಗೊಂಡಿತು. ಬೆಳಗಾವಿಯ ನಿಪ್ಪಾಣಿಯಿಂದ ಬಂದ ಶ್ರೀ ಅರುಣಾನಂದತೀರ್ಥ ಸ್ವಾಮೀಜಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ಬಲಿಯಾದವರಿಗೆ ನ್ಯಾಯ ಮತ್ತು ಭಯೋತ್ಪಾದನೆಯ ವಿರುದ್ಧ ಬಲವಾದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು, ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲು ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಸೇರಿದಂತೆ ಅನೇಕ ಜನರು ಭಾಗವಹಿಸಿದ್ದರು.
ಮಂಗಳೂರು, ಎ.25 : ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂದು ಪತ್ರಿಕಾ ಪ್ರಕಟನೆಯಲ್ಲಿ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಿಳಿಸಿದ್ದಾರೆ. ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ. ಕಥೊಲಿಕ್ ಸಭಾ ಮಂಗ್ಳುರ್…
ಮಂಗಳೂರು, ಎ.24 : ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಎಪ್ರಿಲ್ 22ರಂದು ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು. ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಮೆಡಿಸಿನ್ ವಿಭಾಗದ ಡಾ| ಶ್ರೀನಿವಾಸ್ ಮತ್ತು ಡಾ| ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ಪಿ. ಎಲ್ ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು.
ಮಂಗಳೂರು, ಎ.24 : ನವೋದಯ ಗ್ರಾಮ ವಿಕಾಸ ಚಾರಿ ಟೇಬಲ್ ಟ್ರಸ್ಟ್ ಮತ್ತು ನವೋದಯ ಸ್ವಸಹಾಯ ಗುಂಪುಗಳ 25ನೇ ವರ್ಷಾಚರಣೆಯ ‘ರಜತ ಸಂಭ್ರಮ’ ಮೇ10 ರಂದು ಬಂಗಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಸಂಸ್ಥಾಪಕ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರು ಎಸ್ಸಿಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನವೋದಯ ಸ್ವಸಹಾಯ ಗುಂಪುಗಳ 25ನೇ ವರ್ಷಾಚರಣೆಯ ರಜತ ಸಂಭ್ರಮ ಕುರಿತ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರು, ಮೇ.10 ರಂದು ನಡೆಯುವ ಸಮಾವೇಶದಲ್ಲಿ 1.5 ಲಕ್ಷ ಮಹಿಳಾ ಸದಸ್ಯೆಯರು ಸಮವಸ್ತ್ರ ಧರಿಸಿ ಭಾಗವಹಿಸುವರು, ಇಡೀ ದೇಶಕ್ಕೆ ಮಹಿಳಾ ಸ್ವಾವಲಂಬನೆಯ ವಿಷಯದಲ್ಲಿ ಸಮಾವೇಶದ ಮೂಲಕ ಸಂದೇಶ ನೀಡಲಾಗುವುದು ಎಂದರು. ಮೇ.10 ರ ಬೆಳಗ್ಗೆ 10ಕ್ಕೆ ಬಂಗಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾವೇಶದ ಉದ್ಘಾಟನೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಮಹಾರಾಷ್ಟ್ರ ಮುಖ್ಯ ಮಂತ್ರಿ ದೇವೇಂದ್ರ ಫಡ್ನವಿಸ್…
ಮಂಗಳೂರು, ಎ. 23 : ಕಾಟಿಪಳ್ಳ ಗಣೇಶಪುರ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ, ಪರಿವಾರ ದೇವರಿಗೆ ಸಹಸ್ರಕುಂಭ ಬ್ರಹ್ಮಕಲಶಾಭಿಷೇಕ ಎ. 21,ಸೋಮವಾರ ನಡೆಯಿತು.ದೇವಳದ ತಂತ್ರಿ ಬ್ರಹ್ಮಶ್ರೀ ದೇರೆಬೈಲ್ ಡಾ.ಶಿವಪ್ರಸಾದ್ ತಂತ್ರಿ ನೇತೃತ್ವ ವಹಿಸಿದ್ದರು. ಬೆಳಗ್ಗೆ ತುಲಾಭಾರ, ಮಹಾಪೂಜೆ, ಬಲಿ ಹೊರಟು ಉತ್ಸವ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷ ಯಾದವ ಕೋಟ್ಯಾನ್, ಕಾರ್ಯಾಧ್ಯಕ್ಷ ಪ್ರಶಾಂತ್ ಮೂಡಾಯಿಕೋಡಿ, ಪ್ರಧಾನ ಕಾರ್ಯದರ್ಶಿ ಪಿ. ಸದಾಶಿವ ಐತಾಳ್, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಕುಮಾರ್ ಭಂಡಾರಿ, ಎ.ವಾದಿರಾಜ, ಜಿ.ಕೆ.ಸುಂದರ್, ಪ್ರಧಾನ ಅರ್ಚಕ ಸುನಿಲ್ ಭಟ್, ದಯಾನಂದ ಹೊನ್ನಯ್ಯ ಕೋಟ್ಯಾನ್, ಅನುರಾಧ, ಹೇಮಾವತಿ, ಗೌರವಾಧ್ಯಕ್ಷರು, ಗೌರವ ಸಲಹೆಗಾರರು, ಮಹಾ ಪೋಷಕರು, ಪದಾಧಿ ಕಾರಿಗಳು, ಉಪ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಸಂಜೆ ಧಾರ್ಮಿಕ ಸಭೆ ನಡೆಯಿತು. ಏ.22ರಂದು ಬೆಳಗ್ಗೆ ನೂತನ ಬ್ರಹ್ಮರಥ ಸಮರ್ಪಣೆ, ಬ್ರಹ್ಮರಥಾರೋಹಣ, ಹಗಲು…
ಮಂಗಳೂರು, ಎ. 23 : ಉಳ್ಳಾಲ ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಇದರ 22 ನೇ ಪಂಚವಾರ್ಷಿಕ 432 ನೇ ವಾರ್ಷಿಕ ಉರೂಸ್ ಸಮಾರಂಭವು ಖಾಝಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಎಪ್ರಿಲ್ 24 ರಿಂದ ಮೇ 18 ವರೆಗೆ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪ್ರಿಲ್ 24 ರಂದು ಅಸರ್ ನಮಾಝ್ ಬಳಿಕ ವಾರ್ಷಿಕ ದ್ವಿಕ್ಸ್ ಮಜಿಸ್ ಹಾಗೂ ಉರೂಸ್ ಉದ್ಘಾಟನೆ ನಡೆಯಲಿದೆ. ಉಳ್ಳಾಲ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ನಡೆಯುವ ಉರೂಸ್ ಕಾರ್ಯಕ್ರಮವನ್ನು ಸಯ್ಯದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಬಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಯ್ಯದ್ ಅಲಿ ಬಾಫಕಿ ತಂಬಳ್, ಇಬ್ರಾಹಿಂ ಖಲೀಲ್ ತಂಜಳ್ ಕಡಲುಂಡಿ, ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಶರೀಅತ್ ಕಾಲೇಜು ಪ್ರಾಂಶುಪಾಲ ಪ್ರೊ.ಅಹ್ಮದ್…