Author: admin

ಮಂಗಳೂರು, ನ. 27 : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಸಾಕ್ಷಿ ದೂರುದಾರ,ಬಳಿಕ ಆರೋಪಿಯಾಗಿ ಬಂಧನಕ್ಕೆ ಒಳಗಾದ ಚಿನ್ನಯ್ಯನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಈ ಪ್ರಕರಣದಲ್ಲಿ ನ್ಯಾಯಾಲಯ 1 ಲಕ್ಷ ರೂ. ವೈಯಕ್ತಿಕ ಬಾಂಡ್ ಮತ್ತು 12 ಷರತ್ತುಗಳನ್ನು ವಿಧಿಸಿದೆ. ಎಸ್‌ಐಟಿ ಸಲ್ಲಿಸಿದ ಮಧ್ಯಂತರ ಆರೋಪಪಟ್ಟಿಯ ನಂತರ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಚಿನ್ನಯ್ಯ ಪರ ವಕೀಲರು ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ  ಸಲ್ಲಿಸಿದ್ದರು. ಜಾಮೀನು ಮಂಜೂರು ಮಾಡುವ ವೇಳೆ, ನ್ಯಾಯಾಲಯವು ಆರೋಪಿ ಪೂರ್ವಾನುಮತಿ ಇಲ್ಲದೆ ಜಿಲ್ಲೆ ಅಥವಾ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗುವಂತಿಲ್ಲ ಎಂದು ಸೂಚಿಸಿತು. ಹಾಗೆನೇ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಅಥವಾ ಸಂದರ್ಶನ ನೀಡಲು ನಿರ್ಬಂಧಿತರಾಗಿದ್ದಾರೆ.

Read More

ಮಂಗಳೂರು, ನ. 26 : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನ. 25,ಮಂಗಳವಾರಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, ನಮ್ಮ ಬಂಟರು ವಿಶ್ವದೆಲ್ಲೆಡೆ ಇದ್ದಾರೆ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ ಎಂದರು. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತಾಡಿ, ಜಿಲ್ಲೆಯ ಬೇರೆಲ್ಲಾ ಸಂಘಗಳಿಗೆ ಮಾದರಿಯಾಗಿ ನಮ್ಮ ಜಿಲ್ಲೆಗೆ ಗೌರವ ತಂದ ಸಂಘ ಏನಾದರೂ ಇದ್ದರೆ ಅದು ಬಂಟರ ಸಂಘ. ಬಂಟ ಸಮಾಜದ ಜೊತೆಗೆ ಎಲ್ಲ ಸಮಾಜವನ್ನು ಜೊತೆಗೆ ಕೊಂಡೊಯ್ಯುವ ಶಕ್ತಿ ಈ ಸಂಘಕ್ಕಿದೆ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲ ವರ್ಗದ ಜನರನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲುವ ಮೂಲಕ ಸಾಮರಸ್ಯವನ್ನು ಸ್ಥಾಪಿಸುವ ಮಹತ್ತರ ಜವಾಬ್ದಾರಿ ಸಾಮಾಜಿಕ ಸಂಘಟನೆಗಳಿವೆ.…

Read More

ಮಂಗಳೂರು,ನ.25 : ಮಂಗಳೂರಿನ ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು ರೂ.10 ಕೋಟಿ ವ್ಯವಹಾರ ವಹಿವಾಟಿನ ಸಾಧನೆ ಮತ್ತು ತನ್ನ ಬೆಳ್ತಂಗಡಿ ಶಾಖೆಯಲ್ಲಿ 14ನೇ ಎಟಿಎಂ ಅನ್ನು ಉದ್ಘಾಟನಾ ಕಾರ್ಯಕಮ ನ. 22, ಶನಿವಾರದಂದು ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್‌ನಲ್ಲಿ ನಡೆಯಿತು. ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ 14ನೇ ಎಟಿಎಂ ಅನ್ನು ಗುರುವಾಯೆನೆಕೆರೆಯ ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ಅವರು ಉದ್ಘಾಟಿಸಿದರು. ಎಟಿಎಂ ಅನ್ನು ಬದ್ಯಾರ್ನ ಫಾ| ಎಲ್.ಎಂ.ಪಿಂಟೊ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟಿನ ಆಡಳಿತಾಧಿಕಾರಿ ವಂದನೀಯ ಫಾ| ರೋಶನ್ ಕ್ರಾಸ್ತಾರವರು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಉಜಿರೆಯ ಅನುಗ್ರಹ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂದನೀಯ ಫಾ| ವಿಜಯ್ ಲೋಬೊ ಅವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ,…

Read More

ಮಂಗಳೂರು, ನ. 24 : ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ನ. 28ರಂದು ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ. ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಅವರು ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ ಎಂದು ನಟ ಅರ್ಜುನ್ ಕಾಪಿಕಾಡ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದರು. ನಟ ಕವೀಶ್ ಶೆಟ್ಟಿ ಮಾತಾಡಿ, ಕನ್ನಡ ಮತ್ತು ಮರಾಠಿ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿರುವ ಈ ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ ಅವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ ಪ್ರಕಾಶ್ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ಬಹಳ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಸಡಗರ ರಾಘವೇಂದ್ರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ ಎಂದರು. ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಮಾತಾಡಿ ತುಳು ಚಿತ್ರರಂಗದ ನಟ ಅರ್ಜುನ್ ಕಾಪಿಕಾಡ್ ಈ ಚಿತ್ರದಲ್ಲಿ ಒಬ್ಬ ಖಡಕ್ ಆರ್ಮಿ ಆಫೀಸರ್ ಪಾತ್ರದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದಾರೆ. ಹಾಗೆ ಮರಾಠಿ…

Read More

ಕಾಪು, ನ. 23 : ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಮೃತಪಟ್ಟ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಕಾಪು ಪಡುಗ್ರಾಮದ ನಿವಾಸಿ ಸಕೇಂದ್ರ ಪೂಜಾರಿ (52) ಎಂದು ಗುರುತಿಸಲಾಗಿದೆ. ಬಸ್ ಉಚ್ಚಿಲ ತಲುಪಿದಾಗ, ಸಕೇಂದ್ರ ಪೂಜಾರಿ ಅವರು ಮುಂಭಾಗದ ಬಾಗಿಲಿನ ಬಳಿ ಇಳಿದುಕೊಳ್ಳಲು ಸಿದ್ಧವಾಗಿದ್ದ ವೇಳೆ, ಚಾಲಕನು ಎದುರು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕಲು ನಿರ್ಲಕ್ಷ್ಯದಿಂದ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ. ಇದರಿಂದಾಗಿ ಸಕೇಂದ್ರ ಬಾಗಿಲಿನ ಮೂಲಕ ಹೊರಗೆ ಎಸೆಯಲ್ಪಟ್ಟು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ನ. 22 : ನಗರದ ಉರ್ವ ಸ್ಟೋರ್ನ ತುಳುಭವನದ ಸಿರಿ ಚಾವಡಿಯಲ್ಲಿ ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ನೀಡಿದ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಗೌರವ ಸೂಚಕವಾಗಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮವನ್ನು ಶ್ರೀ ರೋಶನ್ ಮಾಡ್ತಾ ನಿರೂಪಿಸಿದರು. ಈ ಸಂದರ್ಭದಲ್ಲಿ ಅದಾನಿ ಗ್ರೂಪ್ನ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ.ಸಿ.…

Read More

ಮಂಗಳೂರು, ನ. 21 : ನರರೋಗ, ಮಾನಸಿಕ ಅಸ್ವಸ್ಥತೆ, ಅಲೈಮರ್, ಪಾರ್ಶ್ವವಾಯು ಹಾಗೂ ಕ್ಯಾನ್ಸರ್ ಸೇರಿದಂತೆ ದೀರ್ಘಕಾಲೀನ ಕಾಯಿಲೆಗಳೊಂದಿಗೆ ಹೋರಾಟ ನಡೆಸುತ್ತಿರುವವರಿಗೆ ಸಹಾಯಕವಾಗುವ ಉದ್ದೇಶದಿಂದ ಕಾಸರಗೋಡಿನ ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕದ ಉದ್ಘಾಟನೆ  ನವೆಂಬರ್ 23, 2025, ಭಾನುವಾರ ಮಧ್ಯಾಹ್ನ 2 ಗಂಟೆಗೆ ಸಾಯಿ ನಿಕೇತನ ಸೇವಾಶ್ರಮದಲ್ಲಿ ನಡೆಯಲಿದೆ ಎಂದು ನವಚೇತನ ಕೇರ್ ಸೆಂಟರ್‌ನ ಸಂಸ್ಥಾಪಕ ಹಾಗೂ ಭಟ್ ಬಯೋಟೆಕ್ ಚೇರ್‌ಮನ್ ಡಾ. ಶ್ಯಾಂ ಭಟ್‌  ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವೇಗದ ಜೀವನಶೈಲಿ, ಕುಟುಂಬಗಳ ಆರೈಕೆ ಸವಾಲು, ಹಾಗೂ ಮನೆಯಲ್ಲಿನ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ದೀರ್ಘಕಾಲೀನ ಕಾಯಿಲೆಗಳ ನಿತ್ಯ ನಿರ್ವಹಣೆ ಕಷ್ಟಕರವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮನೆಯಿಂದ ಹೊರಗೆ ಆದರೆ ಮನೆ ವಾತಾವರಣದಲ್ಲಿ, 24×7 ವೈದ್ಯಕೀಯ ಮೇಲ್ವಿಚಾರಣೆಯೊಂದಿಗೆ ಆರೈಕೆ ಒದಗಿಸುವ ವ್ಯವಸ್ಥೆ ಜನರಿಗೆ ಅಗತ್ಯವಾಗಿದೆ. ಈ ಬೇಡಿಕೆಯನ್ನು ಮನಗಂಡು ನವಚೇತನ ಕೇರ್ ಸೆಂಟರ್‌ನ್ನು ದೈಗೋಳಿಯಲ್ಲಿ ಸ್ಥಾಪಿಸುತ್ತಿದ್ದೇವೆ ಎಂದರು. ನವಚೇತನ ಕೇರ್ ಸೆಂಟರ್‌ 18 ಹಾಸಿಗೆ ಸಾಮರ್ಥ್ಯದ…

Read More

ಮಂಗಳೂರು,ನ. 21 : ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ ಸಾಹಿತ್ಯದ ಬಗ್ಗೆ ಒಲವು ಮೂಡಿಸಲು ಪ್ರೌಢಶಾಲಾವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. ಡಿಸೆಂಬರ್ 07 ರಂದು ಭಾನುವಾರ ಬೆಳಿಗ್ಗೆ 8.45 ರಿಂದ ಸಂಜೆ 4.00 ಗಂಟೆ ತನಕ ಮಂಗಳೂರಿನ ಶಕ್ತಿನಗರ ದಲ್ಲಿರುವ ಕಲಾಂಗಣ ಮೈದಾನದಲ್ಲಿ ಈ ಸಮ್ಮೇಳನ ನಡೆಯಲಿದೆ ಎಂದು ಮಾಂಡ್ ಸೊಭಾಣ್ ನ ಅಧ್ಯಕ್ಷರಾದ ಲುವಿಸ್ ಜೆ.ಪಿಂಟೋ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಢಿಯಲ್ಲಿ ಮಾತಾಡಿದ ಅವರು,ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೊಕಿಂ ಸ್ಟ್ಯಾನಿ ಆಲ್ವಾರಿಸ್ ಸಮ್ಮೇಳನದ ಮೆರವಣಿಗೆಯನ್ನು ಉದ್ಘಾಟಿಸುವರು. ಸಮ್ಮೇಳನದ ಅಧ್ಯಕ್ಷತೆಯನ್ನು ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಹಿತಿ ವಂ. ಪ್ರಶಾಂತ್ ಮಾಡ್ತಾ ವಹಿಸಲಿರುವರು. 9 ನೇ ತರಗತಿಯ ವಿದ್ಯಾರ್ಥಿನಿ ಸಂಜನಾ ರಿವಾ ಮತಾಯಸ್ ಆಶಯ ಭಾಷಣವನ್ನು ಮಾಡಲಿರುವರು. ‘ಮಕ್ಕಳ ಸಾಹಿತ್ಯದ ಭವಿಷ್ಯ’ ಎಂಬ ವಿಷಯದ ಮೇಲೆ ವಿಚಾರಗೋಷ್ಠಿ…

Read More

ಮಂಗಳೂರು, ನ. 20 : ನವಂಬರ್ 21 ರಂದು “ವಾದಿರಾಜ ವಾಲಗ ಮಂಡಳಿ” ಕನ್ನಡ ಚಲನಚಿತ್ರಕ್ಕೆ ಉರ್ವ ಮಾರಿಯಮ್ಮನ ಸಾನಿಧ್ಯದಲ್ಲಿ ಮುಹೂರ್ತ ನಡೆಯಲಿದೆ ಎಂದು ಚಲನ ಚಿತ್ರ ನಿರ್ಮಾಪಕ ಡಾ ಎಂ.ಎನ್. ರಾಜೇಂದ್ರಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ಹಾಗೇನೇ, ನಿರ್ದೇಶಕ ಎಂ.ಡಿ.ಶ್ರೀಧರ ಅವರ ನಿರ್ದೇಶನದಲ್ಲಿ “ಗಲಾಟೆ” ಎಂಬ ಸಿನೆಮಾ ನಟ ಪ್ರಜ್ವಲ್ ದೇವರಾಜ್ ಹಾಗೂ ಬಹುತಾರಾಗಣದಲ್ಲಿ ನಿರ್ಮಾಣವಾಗಿದ್ದು, ಇದು ಬಹುಪಾಲು ವಿದೇಶದಲ್ಲಿ ಚಿತ್ರೀಕರಣಗೊಂಡಿದೆ. ಈ “ಗಲಾಟೆ” ಚಲನಚಿತ್ರ ‘ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆಯ ಮೊದಲ ಚಲನಚಿತ್ರವಾಗಿದೆ ಎಂದರು. ‘ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆ ತುಳುನಾಡಿನ ಸಂಸ್ಥೆಯಾಗಿರುವುದರಿಂದ ತುಳುಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ “ಡಾಕ್ಟ್ರಾ.ಭಟ್ರಾ?” ಎನ್ನುವ ತುಳು ಸಿನೆಮಾ ಮುಹೂರ್ತ ಮಾಡಲಾಗಿದ್ದು, ಈ ಸಿನೆಮಾ ಮುಂದಿನ ವರ್ಷ ತೆರೆಕಾಣಲಿದೆ  ಎಂದು  ತಿಳಿಸಿದರು. ಈ ಮಧ್ಯೆ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ನಿರ್ದೇಶಕ, ಕಾಂತಾರ ಸಿನೆಮಾದ…

Read More

ಬಂಟ್ವಾಳ, ,ನ. 19 :ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಯುವ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಬುಧವಾರ ನಡೆದಿದೆ. ಸಹ ಸವಾರ ಗಂಭೀರವಾಗಿ ಗಾಯಗೊಂ ಡಿರುತ್ತಾರೆ. ಮೃತಳನ್ನು ಕಡಬದ ಸುನಿಲ್ ಎಂಬವರ ಪುತ್ರಿ ಅನನ್ಯ (21) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ ಗುರುವಾಯನಕೆರೆ ನಿವಾಸಿ ಪೃಥ್ವಿ ಆಗಿರುತ್ತಾನೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಪೂಂಜಾಲಕಟ್ಟೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More