Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಸೆ.17 : ನಾಳೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಖಾತೆ ಸಚಿವ ಯು.ಟಿ.ಖಾದರ್ ಅವರು ಮಂಗಳೂರಿನ ಪ್ರಜಾ ಸೌಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯ ವಿವಿಧ ಸಮಸ್ಯೆಗಳಿಗೆ ಬೆಂಗಳೂರಿನಿಂದಲೇ ಪರಿಹಾರ ಕಂಡುಕೊಳ್ಳುವ ಬದಲು ಸಚಿವ ಸಂಪುಟವೇ ಮಂಗಳೂರಿನಲ್ಲಿ ಸಭೆ ನಡೆಸುವುದರಿಂದ ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಸಾಧ್ಯವಾಗಲಿದೆ. ಕಾನೂನಿನ ವ್ಯಾಪ್ತಿಯಲ್ಲಿ ಜಿಲ್ಲೆಗೆ ಅಗತ್ಯವಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಜನರ ಬೇಡಿಕೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾದರೆ ಮಂಗಳೂರಿನಲ್ಲೇ ನಡೆಸಬೇಕು ಎಂದು ತಾನು ಮುಖ್ಯಮಂತ್ರಿಯವರಲ್ಲಿ ಈ ಹಿಂದೆ…
ಮಂಗಳೂರು, ಸೆ.17 : ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಬೇಕೆಂದು ನಮ್ಮ ಕನಸಾಗಿತ್ತು. ಅದು ಈಗ ನಿಜವಾಗಿದೆ. ಕಡಲ ತಡಿಯಲ್ಲಿ ಸಂಪುಟ ಸಭೆ ನಡೆದರೆ ಇಲ್ಲಿನ ಒಂದಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯವಿದೆ. ಈ ಹಿಂದೆ ಅನೇಕ ಸಂದರ್ಭದಲ್ಲಿ ಇಲ್ಲಿ ಸಚಿವ ಸಂಪುಟ ಸಭೆ ನಡೆಯಬೇಕೆಂದು ಮನವಿಯನ್ನು ಮಾಡಿದ್ದೆ. ಅಂತಿಮವಾಗಿ ಇಂದು ಸಂಪುಟ ಸಭೆ ನಡೆಯುವಲ್ಲಿಗೆ ಬಂದು ನಿಂತಿದೆ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಯಲ್ಲಿ ಮಾತಾಡಿದ ಅವರು, ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆ ಕರಾವಳಿ ಅಭಿವೃದ್ಧಿಗೆ ಒತ್ತು ನೀಡಲಿದೆ. ಕರಾವಳಿ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡುಇಟ್ಟುಕೊಂಡು ಸಚಿವ ಸಂಪುಟ ಸಭೆ ನಡೆಯಲಿದೆ. ಅಭಿವೃದ್ಧಿಯ ವಿಚಾರ ಬಂದಾಗ ಇಲ್ಲಿನ ಎಲ್ಲ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಪಕ್ಷಬೇಧ ಮರೆತು ಕಾರ್ಯ ನಿರ್ವಹಿಸುತ್ತಾರೆ ಅನ್ನುವುದಕ್ಕೆ ಈ ಸಂಪುಟ ಸಭೆ ಪ್ರಮುಖ ಉದಾಹರಣೆಯಾಗಿದೆ.ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ, ತಲಪಾಡಿಯಿಂದ ಬೈಂದೂರು…
ಮಂಗಳೂರು, ಸೆ.17: ರಾಜ್ಯ ದೇವಾಡಿಗರ ಸಂಘದ ವತಿಯಿಂದ ಸೆ.20ರಂದು ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಬೆಳಗ್ಗಿನಿಂದ ರಾತ್ರಿಯವರೆಗೆ ನಿರಂತರವಾಗಿ ನಡೆಯಲಿದೆ ಎಂದು ರಾಜ್ಯ ದೇವಾಡಿಗ ಸಂಘದ ಪ್ರ.ಕಾರ್ಯದರ್ಶಿ ವೀಣಾ ಗಣೇಶ್ ಅವರು ಪ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ. ಕೆ.ವಿ. ದೇವಾಡಿಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಕೆ.ವಿ. ದೇವಾಡಿಗ, ಶತಮಾನೋತ್ಸವ ಆಚರಣೆ ಗೌರವಾಧ್ಯಕ್ಷರಾದ ಹರೀಶ್ ಶೇರಿಗಾರ್, ಮುಖ್ಯ ಅತಿಥಿಗಳಾಗಿ ಡಾ.ದೇವರಾಜ್ ಕೆ., ಶತಮಾನೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಕರುಣಾಕರ ಎಂ.ಹೆಚ್., ವಿಶ್ವ ದೇವಾಡಿಗ ಮಹಾಮ೦ಡಲದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ, ಶ್ರೀ ಏಕನಾಥೇಶ್ವರಿ ದೇವಸ್ಥಾನ ಟ್ರಸ್ಟ್ ಬಾರ್ಕೂರು ಇದರ ಅಧ್ಯಕ್ಷ ಅಣ್ಣಯ್ಯ ಬಿ.ಶೇರಿಗಾರ್,ಕುವೆಂಪು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಡಾ. ಬಿ.ಎಸ್.ಶೇರಿಗಾರ್ ವಿಶ್ವ ದೇವಾಡಿಗ ಮಹಾಮಂಡಲದ…
ಮಂಗಳೂರು, ಸೆ.16 : ಪಂಚರಂಗಿ ಬ್ಯಾನರ್ ಅಡಿಯಲ್ಲಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ಅವರ ನಿರ್ಮಾಣದ ‘ಅಮರ್ಥ’ ಕನ್ನಡ ಚಿತ್ರ ಸೆ.18ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಗುರು ಹೆಗ್ಡೆ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ಮೇಘನಾ ರಾಜ್ ಸರ್ಜಾ ಹಾಗೂ ಗುರು ಹೆಗ್ಡೆ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಂ ಅವರು ನಿರ್ದೇಶನವನ್ನು ಮಾಡಿದ್ದಾರೆ. ಶಿರ್ವ ಸೇರಿದಂತೆ ಕರಾವಳಿಯ ವಿವಿಧ ಭಾಗಗಳಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ ಎಂದರು. ಚಿತ್ರದ ನಟಿ ಮೇಘನಾ ರಾಜ್ ಸರ್ಜಾ ಮಾತನಾಡಿ, ಶ್ರೀನಗರ ಕಿಟ್ಟಿ ಅವರೊಂದಿಗೆ ಮೂರನೇ ಚಿತ್ರ ಇದಾಗಿದೆ ಎಂದು ತಿಳಿಸಿದರು. ನಟ ಶ್ರೀನಗರ ಕಿಟ್ಟಿ ಮಾತನಾಡಿ, ಗುರು ಹೆಗ್ಡೆ ಅವರು ಚಿತ್ರದಲ್ಲಿ ನಿರ್ಮಾಪಕ, ನಿರ್ದೇಶಕ, ನಟನೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಂಜುಭಾಷಿಣಿ ಶೆಟ್ಟಿ, ಆರಾಧನಾ ಭಟ್, ವಿನಯ್ ಪ್ರೀತಂ,…
ಮಂಗಳೂರು, ಸೆ.15 :ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವನ್ನು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,ಬಂಟ್ಸ್ ಹಾಸ್ಟೆಲ್ ನಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ಗಣೇಶೋತ್ಸವ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯುತ್ತಿದೆ. ಸತತ 2ನೇ ಬಾರಿ ಈ ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ತನಗೆ ದೊರೆದಿದೆ ಎಂದು ಅವರು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾತನಾಡಿ, ಪ್ರಧಾನ ಮಂತ್ರಿಗಳ ಸ್ವಚ್ಛ ಭಾರತದ ಆಶಯದಂತೆ ಪರಿಸರಕ್ಕೆ ಪೂರಕವಾಗಿ ಎಲ್ಲ ಗಣೇಶೋತ್ಸವಗಳು ನಡೆಯುವಂತಾಗಲಿ ಎಂದರು. ಧ್ವಜಾವರೋಹಣಗೈದ ಗ್ರೂಪ್ ಕ್ಯಾಪ್ಟನ್ ಎಸ್.ಎಂ.ಅಡ್ಯoತಾಯ ಅವರು ಕಾರ್ಯಕ್ರಮದಲ್ಲಿ ಮಾತನಾಡದರು.ಮಾತೃ ಸಂಘದ ಮಾಜಿ ಉಪಾಧ್ಯಕ್ಷ ರವೀಂದ್ರನಾಥ ಜಿ ಹೆಗ್ಡೆ ನಳಿನಿ ಆರ್ ಹೆಗ್ಡೆ ತೆನೆ ವಿತರಿಸಿದರು. ಅತಿಥಿಗಳಾಗಿ ಗೀತಾ ಅಡ್ಯoತಾಯ, ಮಾಳವಿಕಾ ಜಯಾನಂದ್, ದಂಬೆಕಾನ ಸದಾಶಿವ ರೈ, ಪದ್ಮನಾಭ ರೈ, ಬಜಪೆ ಬಂಟರ ಸಂಘದ ಅಧ್ಯಕ್ಷ…
ಮಂಗಳೂರು, ಸೆ.14 : ಬಂಟರ ಯಾನೆ ನಾಡವರ ಮಾತೃಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆಯುವ 20 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ಅವರ ನೇತೃತ್ವದಲ್ಲಿ, ಬಾಲಾಂಭಟ್ ದೇವಸ್ಥಾನದ ಹಿರಿಯ ಅರ್ಚಕರಾದ ಗಿರಿಧರ್ ಭಟ್ ಅವರ ಮಾರ್ಗದರ್ಶನದಲ್ಲಿ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಶ್ರೀ ಸಿದ್ದಿ ವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರಕ್ಕೆ ತರಲಾಯಿತು.. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಪ್ರತಿಷ್ಠಾನದ ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಯೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೆ ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ಕೃಷ್ಣಪ್ರಸಾದ್ ರೈ ಬೆಳ್ಳಿಪಾಡಿ, ಡಾ…
ಮಂಗಳೂರು, ಸೆ.13 : ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ಕಾಪಿಕಾಡ್ (ದೇವ್) ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಚಿತ್ರದ ನಿರ್ದೇಶಕ ಅರ್ಜುನ್ ಕಾಪಿಕಾಡ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಟಾಸ್” ಸಿನಿಮಾದ ಕಥೆ,ಚಿತ್ರಕಥೆ, ಸಂಭಾಷಣೆ, ಹಾಡುಗಳು ದೇವದಾಸ್ ಕಾಪಿಕಾಡ್ ಅವರದ್ದಾಗಿದೆ. ನಿರ್ದೇಶನವನ್ನುಅರ್ಜುನ್ ಕಾಪಿಕಾಡ್ ಅವರು ಮಾಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ ಎಂದರು. ಚಿತ್ರದನಿರ್ಮಾಪಕರು ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್ ಪೂಜಾರಿ, ಸಹ ನಿರ್ದೇಶಕರು ಯಶಾಂತ್ ಕಲ್ಲಡ್ಕ, ರಾಕೇಶ್ ಬಿ.ಜೆ.ವಿಕ್ರಮ್ ದೇವಾಡಿಗ, ಸಹಾಯಕ ನಿರ್ದೇಶಕರು ಸೌರವ್, ರಾಮ್ ,ಸುಜಿತ್ ,ವಿನೋದ್ ,ಆಶಿಷ್ ರಾವ್ ಛಾಯಾಗ್ರಹಣ ಜೋಯೆಲ್ ಶಮನ್ ಡಿ’ಸೋಜಾ, ಸಹಾಯಕ ಛಾಯಾಗ್ರಾಹಕರು ಅಮನ್ ಪ್ರಖ್ಯಾತ್, ಕಲಾ ನಿರ್ದೇಶನ ರಾಜೇಶ್ ಕೊಳಕೆ, ರಾಜೇಶ್ ಬಾಂಧ್ಯೋಡ್, ಸಂಕಲನ ಯಶ್ವಿನ್ ಕೆ.…
ಮಂಗಳೂರು, ಸೆ.12 : ಅಡಿಕೆ ಹಾಳೆಯಿಂದ ತಯಾರಿಸುವ ತಟ್ಟೆಗಳಲ್ಲಿ ಅಡಿಕೆಗೆ ಸಂಬಂಧಿಸಿದ ಹಾನಿಕಾರಕ ಅಂಶಗಳ ಪ್ರಮಾಣ ಅತ್ಯಂತ ಕಡಿಮೆ ಇದೆ.ಹಲವು ಪ್ರತಿಷ್ಠಿತ ಪ್ರಯೋಗಾಲಯಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಅಡಿಕೆಯಲ್ಲಿರುವ ಅರೆಕೋಲಿನ್ ಪ್ರಮಾಣ ಕಡಿಮೆ ಕಂಡುಬಂದಿದೆ ಎಂದು ‘ಅಗ್ರಿ ಲೀಫ್’ ಸಹ ಸಂಸ್ಥಾಪಕ ಅವಿನಾಶ್ ರಾವ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ಹಾಳೆ ತಟ್ಟೆಗಳ ಸುರಕ್ಷತೆ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ವಿವಿಧ ಸಂಶೋಧನಾ ಸಂಸ್ಥೆಗಳ ಸಹಯೋಗದಲ್ಲಿ ಅಧ್ಯಯನ ನಡೆಸಲಾಗಿದೆ. ಎನ್ವೈಪಿಎ, ಮಣಿಪಾಲ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಸಹಕಾರದೊಂದಿಗೆ ಸುಮಾರು ₹50–60 ಲಕ್ಷ ವೆಚ್ಚದಲ್ಲಿ ಸಂಶೋಧನೆ ನಡೆಸಲಾಗಿದೆ ಎಂದರು. ಖ್ಯಾತ ವಿಜ್ಞಾನಿ ಹಾಗೂ ಅಡಿಕೆ ಬೆಳೆ ಸಂಶೋಧಕ ಗೋಪಾಲ್ ಮರಾಠೆ ಮಾತನಾಡಿ, ಅಡಿಕೆ ಹಾಳೆಗಳಲ್ಲಿ ಅರೆಕೋಲಿನ್, ಅರೆಕಡೀನ್, ಗುವಾಕೋಲಿನ್ ಸೇರಿದಂತೆ ಸಂಬಂಧಿತ ಅಂಶಗಳ ಪ್ರಮಾಣವನ್ನು ವೈಜ್ಞಾನಿಕವಾಗಿ ಪರೀಕ್ಷಿಸಲಾಗಿದೆ. ಪರೀಕ್ಷೆಗಳಿಂದ ಅಡಿಕೆಯಲ್ಲಿ ಕಂಡುಬರುವ ಪ್ರಮಾಣಕ್ಕೆ ಹೋಲಿಸಿದರೆ ಹಾಳೆಯಲ್ಲಿ ಇವುಗಳ ಪ್ರಮಾಣ…
ಮಂಗಳೂರು, ಸೆ.11 : ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನುಲೈಟ್ಹೌಸ್ ಹಿಲ್ ರೋಡ್ ಕ್ಯಾಂಪಸ್ನಲ್ಲಿ ಸೆ.14 ಮತ್ತು 15 ರಂದು ಆಚರಿಸಲು ಸಜ್ಜಾಗಿದೆ ಎಂದು ಕೆಎಂಸಿ ಮಂಗಳೂರು ಡೀನ್ ಡಾ.ಬಿ. ಉಣ್ಣಿಕೃಷ್ಣನ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಚತುರ್ಥಿ ಉತ್ಸವವು ಕೆಎಂಸಿ ಸಮುದಾಯದ ಏಕತೆ, ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯದ ಸಂಕೇತವಾಗಿದ್ದು, ಪ್ರತಿವರ್ಷ ಉತ್ಸಾಹದಿಂದ ಆಚರಿಸಲಾಗುತ್ತಿದೆ ಎಂದರು. ಕೆಎಂಸಿ ಮಂಗಳೂರಿನ ಅಸೋಸಿಯೇಟ್ ಡೀನ್ ಡಾ.ಶೀತಲ್ ಉಳ್ಳಾಲ್ ಅವರು ಮಾತನಾಡಿ, ಸಂಭ್ರಮಾಚರಣೆಯು ಸೆ. 14 ಸೋಮವಾರ ಬೆಳಿಗ್ಗೆ 9:00 ಗಂಟೆಗೆ ಲೈಟ್ಹೌಸ್ ಹಿಲ್ ರೋಡ್ ಕ್ಯಾಂಪಸ್ನಲ್ಲಿ ಗಣೇಶ ಸ್ಥಾಪನಾ ಪೂಜೆಯೊಂದಿಗೆ ಪ್ರಾರಂಭವಾಗಲಿದೆ. ಸೆ. 15 ಮಂಗಳವಾರ ಸಂಜೆ 6ಕ್ಕೆ ಭವ್ಯಶೋಭಾಯಾತ್ರೆ ನಡೆಯಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಎಂಸಿ ಮಂಗಳೂರಿನ ಅಸೋಸಿಯೇಟ್ ಡೀನ್ ಡಾ. ಮಂಗಳಾ ಎಂ.ಪೈ, ಡಾ.ಅಶ್ಫಾಕ್ ಮೊಹಮ್ಮದ್ ಹಾಗೂ ವಿದ್ಯಾರ್ಥಿ ಸಂಘದ ಪ್ರಮುಖರಾದ ಅನನ್ಯಾ ಹೆಗ್ಗೇರಿ ಉಪಸ್ಥಿತರಿದ್ದರು.
ಮಂಗಳೂರು, ಸೆ.10 : ಅಡಿಕೆ ಮಾರುಕಟ್ಟೆಯ ಏರಿಳಿತ ಹಾಗೂ ಕೊಕ್ಕೊ ವಲಯದ ಸವಾಲುಗಳ ನಡುವೆಯೂ ಕ್ಯಾಂಪ್ಕೊಸಂಸ್ಥೆಯು 2025-26ನೇ ಸಾಲಿನಲ್ಲಿ 3,735 ಕೋಟಿ ರೂ. ಒಟ್ಟು ದಾಖಲೆಯ ವ್ಯವಹಾರ ವಹಿವಾಟು ಮತ್ತು 49.62 ಕೋಟಿ ರೂ. ತೆರಿಗೆಪೂರ್ವ ಲಾಭ ದಾಖಲಿಸಿದೆ. 2025-26ನೇ ಸಾಲಿಗೆ ಸದಸ್ಯರಿಗೆ ಶೇ. 14ರಷ್ಟು ಡಿವಿಡೆಂಡ್ ನೀಡಲು ನಿರ್ದೇಶಕ ಮಂಡಳಿ ಶಿಫಾರಸು ಮಾಡಿದೆ ಎಂದು ಅಧ್ಯಕ್ಷ ಸತೀಶ್ ಚಂದ್ರ ಎಸ್ ಆರ್ ಅವರು ನಗರದ ಕ್ಯಾಂಪ್ಕೊ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ 2,924.32 ಕೋಟಿ ರೂ. ಮೌಲ್ಯದ 58,742.76 ಮೆ.ಟನ್ ಅಡಿಕೆ ಖರೀದಿಸಿದ್ದು, 2,985.19 ಕೋಟಿ ರೂ. ಮೌಲ್ಯದ 59,088.64 ಮೆ.ಟನ್ ಅಡಿಕೆ ಮಾರಾಟ ಮಾಡಿದೆ ಎಂದರು. ಆಮದು ಅಡಿಕೆಯಿಂದ ದೇಶೀಯ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಹಾಗೂ ಆಮದು ಅಡಿಕೆಯನ್ನು ದೇಶೀಯ ಉತ್ಪನ್ನದೊಂದಿಗೆ ಮಿಶ್ರಣ ಮಾಡುವ ಪ್ರಕರಣಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು. ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ…












