Author: admin

ಬೆಂಗಳೂರು,ನ.16 : ಡಾ. ಲೀಲಾ ಮೋಹನ್ ಪಿ.ವಿ.ಆರ್. ತಾವೇ ನಿರ್ಮಿಸಿರುವ ಜೊತೆ ನಾಯಕನಾಗಿ ಅಭಿನಯಿಸಿರುವ “ನಾಯಿ ಇದೆ ಎಚ್ಚರಿಕೆ” ಚಿತ್ರವನ್ನು ಇದೇ ನವಂಬರ್ 28ರಂದು ರಾಜ್ಯದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡಲು ಸಿದ್ಧತೆಗಳನ್ನು ಮಾಡಿಕೊಂಡಿರುತ್ತಾರೆ. ಡಾ. ಲೀಲಾ ಮೋಹನ್ ಪಿ.ವಿ.ಆರ್. ಮೂಲತಃ ಬೆಂಗಳೂರಿನವರಾಗಿದ್ದು , ಇವರು ವೈದ್ಯರು, ಲೇಖಕರು, ಮ್ಯಾರಥಾನ್ ರನ್ನರ್ , ನಟರು ಆಗಿರುತ್ತಾರೆ. ಎಂ.ಬಿ.ಬಿ.ಎಸ್ ಮತ್ತು ಎಂ.ಡಿ ಪದವಿಗಳನ್ನು ಪೂರ್ಣಗೊಳಿಸಿದ ನಂತರ ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಯನ್ನು ಸಲ್ಲಿಸಿರುತ್ತಾರೆ. ಸರ್ಜಾಪುರ ಬಳಿ ಇರುವ ರೇನ್‌ಬೋ ಆಸ್ಪತ್ರೆ , ಮದರ್‌ಹುಡ್ ಆಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಪರಾಮರ್ಶಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಹೆಚ್ ಎಸ್ ಆರ್ ಲೇಔಟ್‌ನಲ್ಲಿ ಪಡಿತೇಮ್ ಹೆಲ್ತ್ ಕೇರ್ ಎಂಬ ಡೇ ಕೇರ್ ವೈದ್ಯಕೀಯ ಕೇಂದ್ರದ ಸಂಸ್ಥಾಪಕರುತ್ತಾರೆ. ಡಾ. ಲೀಲಾ ಮೋಹನ್ ಅವರು ಧೂಮಪಾನ ಮತ್ತು ನಿಕೋಟಿನ್ ವ್ಯಸನದಿಂದ ಹೊರಬರುವುದು ಹೇಗೆ ಎಂಬುದನ್ನು ಪುಸ್ತಕ ಮೂಲಕ ತಂದಿದ್ದು, ಕ್ರೀಡೆ ಮತ್ತು ಮ್ಯಾರಥಾನ್ ಓಟದಲ್ಲಿ ಮ್ಯಾರಥಾನ್ ರನ್ನರ್ ಆಗಿರುವ…

Read More

ಮಂಗಳೂರು, ನ. 15 : ಅಖಿಲ ಭಾರತದ 72ನೇ ಸಪ್ತಾಹವು ಭಾನುವಾರ ಮಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಶನಿವಾರ ಸಂಜೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು ಕಳೆದ 30 ವರ್ಷಗಳಿಂದ ನಡಿತಾ ಇರುವ ಸಹಕಾರ ಸಪ್ತಾಹ ಜನರಿಗೆ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ಧ ಸಹಕಾರ ಸಂಘಗಳು…

Read More

ಮಂಗಳೂರು, ನ. 15 : ತಯಾರಿಸಲ್ಪಟ್ಟ ನಂದಿನಿ ಸೀಡ್ಸ್ ಡಿಲೈಟ್ ಮತ್ತು ಗುವಾ ಚಿಲ್ಲಿ ಲಸ್ಸಿ ಉತ್ಪನ್ನಗಳು ನ. 16ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜರಗಲಿರುವ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆ ಸಂದರ್ಭ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದಾಗಿ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಕೊಡವೂರು ಅವರು ಕುಲಶೇಖರದ ನಂದಿನಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಮಾಹಿತಿ ನೀಡಿದ ಅವರು, ನಂದಿನಿ ಹೊಸ ಉತ್ಪನ್ನಗಳನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಹಾಲು ಒಕ್ಕೂಟವು ನ.17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ನಂದಿನಿ ಪಾರ್ಲರ್, ಪ್ರಾಂಚೈಸಿ ಮತ್ತು ಡೀಲರ್ ಕೇಂದ್ರಗಳಲ್ಲಿ ಮೊದಲು ಬಂದ ಗ್ರಾಹಕರಿಗೆ ದಾಸ್ತಾನು ಮುಗಿಯುವವರೆಗೆ ಉಚಿತವಾಗಿ ನಂದಿನಿ ಸೀಡ್ಸ್ ಡಿಲೈಟ್ ಮತ್ತು ಗುವಾ ಚಿಲ್ಲಿ ಲಸ್ಸಿ ನೀಡಲಾಗುತ್ತದೆ. ಅವಿಭಜಿತ ಜಿಲ್ಲೆಯ ನಂದಿನಿ ಗ್ರಾಹಕರು ನೂತನ ಉತ್ಪನ್ನಗಳನ್ನು ಖರೀದಿಸಿ ಹಾಲು ಉತ್ಪಾಕರನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಪೋತ್ಸಾಹಿಸಬೇಕು ಎಂದು…

Read More

ಮಂಗಳೂರು, ,ನ. 14 : ನಗರದ ನಂತೂರು ಬಳಿ  ಹುಂಡೈ ವೆರ್ನ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ದಾರಿ ಮಧ್ಯೆ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರಿಗೆ ಸ್ಥಳೀಯರು ಸೇರಿ ಬೆಂಕಿಯನ್ನು‌ ನಂದಿಸಲು ಪ್ರಯತ್ನಿಸಿದ್ದಾರೆ. ಬಳಿಕ ಪಾಲಿಕೆ ನೀರು ಸರಬರಾಜು ಟ್ಯಾಂಕರ್ ಸ್ಥಳಕ್ಕೆ ಆಗಮಿಸಿದ್ದು. ಟ್ಯಾಂಕರ್ ಸಿಬ್ಬಂದಿ ನೀರು ಹಾಯಿಸುವ ಮೂಲಕ ಕಾರಿನಲ್ಲಿ ಉಂಟಾದ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಘಟನೆ ನಡೆದ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದಾರೆ.

Read More

ಬೆಂಗಳೂರು,ನ.13 : ಶರೀಫ್ ಮೊಹಮ್ಮದ್ ಅವರು ಕ್ಯೂಬ್ಸ್ ಎಂಟರ್ಟೈನ್ ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುವ ಭವ್ಯ ಆಕ್ಷನ್ ಥ್ರಿಲ್ಲರ್ ‘ಕಾಟ್ಟಾಲನ್’ ಮಲಯಾಳಂ ಚಿತ್ರ ವಿದೇಶಿ ವಿತರಣಾ ಒಪ್ಪಂದವನ್ನು ಪಡೆದುಕೊಂಡಿದೆ. ಫಾರ್ಸ್ಫಿ ಲ್ಮ್ಸ್ ಸಹಯೋಗದೊಂದಿಗೆ ಈ ಚಿತ್ರವು ಅಂತರಾಷ್ಟ್ರೀಯ ಬಿಡುಗಡೆಗೆ ಸಜ್ಜಾಗುತ್ತಿದೆ. ಪ್ರಮುಖ ಪಾತ್ರದಲ್ಲಿ ಆಂಟೋನಿ ವರ್ಗೀಸ್ ಪೆಪೆ ನಟಿಸಿರುವ ‘ಕಾಟ್ಟಾಲನ್’ ಚಿತ್ರವು ‘ಮಾರ್ಕೋ’ ನಂತರ, ಶರೀಫ್ ಮೊಹಮ್ಮದ್ ನಿರ್ಮಿಸಿರುವ ಕ್ಯೂಬ್ಸ್ ಎಂಟರ್ಟೈನ್ಮೆಂಟ್ಸ್ನ ಮತ್ತೊಂದು ದೊಡ್ಡ ಬಜೆಟ್ ಚಿತ್ರವಾಗಿದೆ ಎಂದು ಚಿತ್ರತಂಡ ಹೇಳಿದೆ. ಥೈಲ್ಯಾಂಡ್‌ನಲ್ಲಿ ನಡೆದ ಚಿತ್ರೀಕರಣದ ವೇಳೆ, ಆನೆ ಒಳಗೊಂಡಿದ್ದ ಅತಿ ತೀವ್ರವಾದ ಆಕ್ಷನ್ ದೃಶ್ಯವೊಂದರಲ್ಲಿ ನಾಯಕ ನಟ ಆಂಟೋನಿ ವರ್ಗೀಸ್ ಅವರು ಗಾಯಗೊಂಡಿದ್ದರು.’ಕಾಟ್ಟಾಲನ್’ ಚಿತ್ರದ ಆಕ್ಷನ್ ಸೀಕ್ವೆನ್ಸ್‌ಗಳಿಗೆ ಸ್ಟಂಟ್ ಮಾಸ್ಟರ್ ಕೆಚಾ ಖಾಂಫಕ್ಡೀ ಮತ್ತು ಅವರ ತಂಡವು ಮೇಲ್ವಿಚಾರಣೆ ನಡೆಸಿದ್ದಾರೆ. ಒಂಗ್-ಬಕ್ ಚಿತ್ರಗಳ ಮೂಲಕ ಖ್ಯಾತಿ ಪಡೆದ ಆನೆ “ಪಾಂಗ್” ಕೂಡ ‘ಕಾಟ್ಟಾಲನ್’ನಲ್ಲಿ ಕಾಣಿಸಿಕೊಳ್ಳಲಿದೆ.ಕಾಂತಾರ ಮತ್ತು ಮಹಾರಾಜ ಚಿತ್ರದಸಂಗೀತ ನಿರ್ದೇಶಕರು ಅಜನೀಶ್ ಲೋಕನಾಥ್ ಇವರ ಸಂಗೀತವಿದೆ. ಪುಷ್ಪಾ ಮತ್ತು ಜೈಲರ್…

Read More

ಮಂಗಳೂರು, ನ.12 : ಮಂಗಳೂರು ಮಹಾನಗರ ಪಾಲಿಕೆಯ 29 ನೇ ಕಂಬ್ಳ ವಾರ್ಡ್ ನ ಪಿ.ವಿ.ಎಸ್ ವೃತ್ತದಿಂದ ಲಕ್ಷ್ಮೀ ನಗರ ವಸತಿ ಸಂಕೀರ್ಣ ಸಂಪರ್ಕ ರಸ್ತೆಯು ರೂ 5.ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್ ರವರು ರಸ್ತೆಯನ್ನು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಲೀಲಾವತಿ ಪ್ರಕಾಶ್ ರವರು ವಿಶೇಷ ಮುತುವರ್ಜಿ ವಹಿಸಿದ್ದರ ಪರಿಣಾಮ ಈ ರಸ್ತೆಯು ಕಾಂಕ್ರೀಟೀಕರಣಗೊಂಡಿದ್ದು ವಿಶೇಷವಾಗಿ ಲಕ್ಷ್ಮೀನಗರ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಅನುಕೂಲವಾಗಿರುವುದು ಸಂತಸದ ಸಂಗತಿ ಎಂದರು. ಇದೇ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಪುಷ್ಪರಾಜ್ ಬಿ.ಎನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯದರ್ಶಿ ಸತೀಶ್ ಇರಾ ರವರನ್ನು ಶಾಸಕರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಜಿಲ್ಲಾ ವಕ್ತಾರರಾದ ರಾಜಗೋಪಾಲ್ ರೈ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಕೊಡಿಯಾಲ್ ಬೈಲ್, ಮಂಡಲದ ಕಾರ್ಯಾಲಯ…

Read More

ಮಂಗಳೂರು,ನ.11 : ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8, ಶನಿವಾರ ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಸಿತು. ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ, ಬ್ಯಾಂಕಿನ ನ್ಯೂನತೆಗಳನ್ನು ಗುರುತಿಸುವಲ್ಲಿ ಮತ್ತು ಸಿಬ್ಬಂದಿಯನ್ನು ಹೆಚ್ಚಿನ ದಕ್ಷತೆಯತ್ತ ಮಾರ್ಗದರ್ಶನ ಮಾಡುವಲ್ಲಿ ನಾಯಕತ್ವ ವಹಿಸಿದ್ದಕ್ಕಾಗಿ ಆಡಳಿತ ಕಛೇರಿಯ ಎಲ್ಲಾ ವಿಭಾಗದ ಮುಖ್ಯಸ್ಥರ ಪ್ರಯತ್ನಗಳನ್ನು ಶ್ಲಾಘಿಸಿದರು.ಸಿಬ್ಬಂದಿ ಸದಸ್ಯರು ತಮ್ಮ ಗುರಿಗಳನ್ನು ಸಾಧಿಸಲು ವೃತ್ತಿಪರತೆ ಮತ್ತು ಬದ್ಧತೆಯೊಂದಿಗೆ ಕೆಲಸ ಮಾಡಬೇಕು. ಶಾಖಾ ವ್ಯವಸ್ಥಾಪಕರು ಮತ್ತು ಹಿರಿಯ ಅಧಿಕಾರಿಗಳು ತಮ್ಮ ಶಾಖೆಯ ಸಿಬ್ಬಂದಿಗೆ ಬ್ಯಾಂಕಿನ ಪ್ರಗತಿಗೆ ಅನುಗುಣವಾಗಿ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಬ್ಯಾಂಕಿನ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ಸಂಪೂರ್ಣವಾಗಿ ತರಬೇತಿ ನೀಡಬೇಕು.ಸ್ಥಳೀಯ ಸಮುದಾಯದೊಂದಿಗೆ ವಿಶ್ವಾಸವನ್ನು ಬಲಪಡಿಸಲು ಮತ್ತು ಆಳವಾದ ಸಂಪರ್ಕವನ್ನು ನಿರ್ಮಿಸಲು ಬ್ಯಾಂಕಿನ ಸಾರ್ವಜನಿಕ ಸಂಪರ್ಕ ಪ್ರಯತ್ನಗಳನ್ನು…

Read More

ಮಂಗಳೂರು,ನ.11: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮಡಿಕಲ್ ಕಾಲೇಜು ಮತ್ತು ಗ್ಲೋಬಲ್ ಹೋಮಿಯೋಪಥಿಕ್ ಫೌಂಡೇಷನ್ ವತಿಯಿಂದ ಅಂತಾರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘ಎಕ್ಸ್ ಫ್ಲೋರಾ-2025’ ಕಾರ್ಯಕ್ರಮ ನ. 14ರಿಂದ 16ರ ವರೆಗೆ ಕಂಕನಾಡಿಯ ಫಾದರ್ ಮುಲ್ಲರ್  ಕನ್ನೆನ್ನನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ ಎಂದು ಸೋಮವಾರ ಫಾದರ್ ಮುಲ್ಲರ್ ಸೇವಾ ಸಂಸ್ಥೆ ನಿರ್ದೇಶಕರಾದ ರೆವರೆಂಡ್ ಫಾದರ್ ಫೌಸ್ಕಿನ್ ಲ್ಯೂಕಾಸ್ ಲೋಬೋ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ನ. 14ರಂದು ಮಧ್ಯಾಹ್ನ 12ಕ್ಕೆ ಉದ್ಘಾಟನೆ ನಡೆಯಲಿದ್ದು ರಾಜ್ಯದ ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಕಮಲ ಬಾಯಿ ಬಿ.. ದಕ್ಷಿಣ ಆಫ್ರಿಕಾದ ದರ್ಬನ್ ತಾಂತ್ರಿಕ ವಿಶ್ವವಿದ್ಯಾನಿಲಯದ ಹೋಮಿಯೋಪಥಿ ವಿಭಾಗ ಮುಖ್ಯಸ್ಥೆ ಡಾ| ಹ್ಯಾಶ್ಲಿ ರೋಸ್, ಯುಕೆ ಫಂಕ್ಷನಲ್ ಶಿಫ್ಟ್ ಕನ್ಸಲ್ಟಿಂಗ್ ನ ನಿರ್ದೇಶಕ ಡಾ| ಕೀಮ್ ಅಂಟೊನಿ ಭಾಗವಹಿಸಲಿದ್ದಾರೆ. ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ವಂ| ಫಾವುಸ್ತಿನ್ ಲೂಕಸ್ ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕಮಲಾ ಬಾಯಿ ಬಿ. (KAS), ಮುಖ್ಯ ಆಡಳಿತಾಧಿಕಾರಿ, ಆಯುಷ್…

Read More

ಮಂಗಳೂರು, ನ. 10 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೆ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಮುಖ್ಯಸ್ಥರಾದ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಭಾನುವಾರ ಚುನಾವಣೆ ನಡೆಸಲಾಯಿತು. ಪುಷ್ಪರಾಜ್ 187 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಗಳಿಸಿದರು. ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ. ಶ್ರೀನಿವಾಸ ನಾಯಕ್ 204 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಅನ್ಸಾರ್ ಇನೋಳಿ 124 ಮತಗಳನ್ನು ಪಡೆದರು. ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರೀಫ್, ವಿಲ್ಫ್ರೆಡ್ ಡಿ ಸೋಜ ಮತ್ತು ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಸತೀಶ್ ಇರಾ, ಸಿದ್ದೀಕ್ ನೀರಾಜೆ, ಸುರೇಶ್ ಪಳ್ಳಿ ಗೆಲುವು ಸಾಧಿಸಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶೋಕ್…

Read More

ಮಂಗಳೂರು, ನ. 10 : ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್  ಸೊಸೈಟಿಯ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವ ಸಮಾರೋಪ ಸಮಾರಂಭ ಭಾನುವಾರ ನಗರದ ಕೊಟ್ಟಾರ ಚೌಕಿ ಆಡಳಿತ ಕಚೇರಿ ಬಳಿ ನಡೆಯಿತು. ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ  ರಾಜೇಂದ್ರ ಕುಮಾರ್ ಅವರು  ಸೊಸೈಟಿಯ ನವೀಕೃತ ವಿಶ್ವಸೌಧ ಕಟ್ಟಡವನ್ನು ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕುಗಳು ಜನರಿಗೆ ಸಾಲ ನೀಡಲು ಹಿಂಜರಿಯುತ್ತಿವೆ. ಆದರೆ ಸಹಕಾರಿ ಸಂಸ್ಥೆಗಳು ಜನರ ಮನೆ ಬಾಗಿಲಿಗೆ ಹೋಗಿ ಉತ್ತಮ ಸೇವೆ ನೀಡುತ್ತಿದೆ. ಹಾಗೆನೇ ಶುಭ ಕಾರ್ಯಗಳು ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ತ್ವರಿತವಾಗಿ ಸಾಲ ನೀಡುತ್ತಾ ಬೆಳೆಯುತ್ತಿವೆ. ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ರಾಜ್ಯಾದ್ಯಂತ ಶಾಖೆಗಳನ್ನು ವಿಸ್ತರಿಸಿ ಇನ್ನಷ್ಟು ಜನರಿಗೆ ಉದ್ದಿಮೆ ಆರಂಭಿಸಲು ನೆರವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿ  ಎಂದರು. ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಪಾಲ್ಕೆ ಬಾಬುರಾಯ…

Read More