Author: admin

ಮಂಗಳೂರು, ಫೆ. 26 : ಮಕ್ಕಳಿಗೆ ಪವಿತ್ರ ಬೈಬಲ್ ನ  ಶುಭಸಂದೇಶವನ್ನು ಆಕರ್ಷಕವಾಗಿ ತಲುಪಿಸುವ ನಿಟ್ಟಿನಲ್ಲಿ, “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಎಂಬ ವಿಶಿಷ್ಟ ಪುಸ್ತಕವನ್ನು ಫೆಬ್ರವರಿ 19ರಂದು ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ವಿಭೂತಿ ಬುಧವಾರದ ಮರುದಿನವೇ ಈ ಕಾರ್ಯಕ್ರಮ ನಡೆದಿದ್ದು, ಇದು ಚಾತುರ್ಮಾಸದ ಆರಂಭವನ್ನು ಸ್ಮರಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಪುಣ್ಯಕ್ಷೇತ್ರದ ನಿರ್ದೇಶಕರಾದ ವಂ| ಸ್ಟೀಫನ್ ಪೆರೇರಾ ಅವರು, ನವೀನ ಮತ್ತು ಮಕ್ಕಳಿಗೆ ಹತ್ತಿರವಾಗುವ ವಿಧಾನಗಳ ಮೂಲಕ ಅವರಲ್ಲಿ ನಂಬಿಕೆಯನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಸರಳ ನಿರೂಪಣೆ ಮತ್ತು ಸೃಜನಶೀಲ ಚಿತ್ರಣಗಳ ಮೂಲಕ ಮಕ್ಕಳು ಸುಲಭವಾಗಿ ಅರ್ಥಮಾಡಿಕೊಳ್ಳುವಂತೆ ಮತ್ತು ಸಂತೋಷದಿಂದ ದೇವರ ವಾಕ್ಯವನ್ನು ಓದುವಂತೆ ಈ ಪುಸ್ತಕವನ್ನು ರೂಪಿಸಲಾಗಿದೆ. ಈ ಪುಸ್ತಕವು ಮಕ್ಕಳು ಯೇಸುವಿನ ಹಾದಿಯಲ್ಲಿ ಸಾಗಲು ಮತ್ತು ಈಸ್ಟರ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಪುಸ್ತಕದ ಲೇಖಕರು ಹಾಗೂ ಧ್ಯಾನ ಸಾಧನ ಕೇಂದ್ರದ ನಿರ್ದೇಶಕರಾದ ವಂ| ರಿಚರ್ಡ್ ಮಿನೇಜಸ್ ಅವರು…

Read More

ಮಂಗಳೂರು,ಫೆ.26  : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಸ್ಥಳೀಯ ಬಿಜೆಪಿ ಮುಖಂಡರಾದ ಚಂದ್ರಶೇಖರ ಬಜಾಲ್ ರವರ ವಿಶೇಷ ಮನವಿ ಮೇರೆಗೆ ಈ ಕಾಮಗಾರಿ ನಡೆಯುತ್ತಿದೆ. ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು ನನ್ನ ಗಮನದಲ್ಲಿದೆ. ಮೊದಲು ಇಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಿಸಿ ನಂತರ ರಸ್ತೆ ನಿರ್ಮಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುಕೇಶ್, ಸುರೇಶ್ ರಾವ್, ಶಿವಾನಂದ, ರಹೀಮ್, ಲಕ್ಷ್ಮಿ, ಸರಸ್ವತಿ, ಶಿವಾಜಿ ರಾವ್, ಶೈಲೇಶ್, ಶಿವಾನಂದ,…

Read More

ಮಂಗಳೂರು,ಫೆ.25 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಸುಮಾರು 17 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕ್ರಿಯಾಯೋಜನೆ ಮೂಲಕ ಮಂಜೂರಾದ ಈ ಕೇಂದ್ರದಲ್ಲಿ ಬೋಧನಾ ಕೊಠಡಿ, ಕಿಚನ್, ಶೌಚಾಲಯ ಸಹಿತ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ.ಇಲ್ಲಿಗೊಂದು ಅಂಗನವಾಡಿ ಕೇಂದ್ರ ಬೇಕೆಂದುಮ. ನ.ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿಯವರು  ಅನೇಕ ಬಾರಿ ಮನವಿ ಮಾಡಿದ್ದರು.ಶೀಘ್ರದಲ್ಲಿ ಕಾಮಗಾರಿ ಮುಗಿದು ಇಲ್ಲಿನ ಮಕ್ಕಳು ಅಂಗನವಾಡಿಯಲ್ಲಿ ಆಡಿ ಬೆಳೆಯಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ಪುಷ್ಪರಾಜ್ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶ್ವೇತಾ, ನಾರಾಯಣ ಶೆಟ್ಟಿ, ಪುಂಡಲೀಕ ಸುವರ್ಣ, ರಾಜರತ್ನ ಸನಿಲ್, ದೇವದಾಸ್ ಶೆಟ್ಟಿ, ರಾಜಗೋಪಾಲ್, ಪ್ರಮೋದ್ ಕೊಟ್ಟಾರಿ, ನಿತಿನ್, ಕಿಶನ್, ಅಶೋಕ್, ದಿನೇಶ್, ಪೂಜಾ, ಉಷಾ, ಸುಂದರಿ,…

Read More

ಮಂಗಳೂರು, ಫೆ.24: ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ ಹಾಗೂ 77 ಮಂದಿ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ಸಹಕಾರಿ ರಂಗದಲ್ಲಿ ಡಾ.ಎಂ.ಎನ್ .ರಾಜೇಂದ್ರ ಕುಮಾರ್ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾಡಿರುವ ಸಾಧನೆ ಶ್ಲಾಘನೀಯವಾದುದು ಎಂದರು. ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಡಾ। ಎಂ. ವೀರಪ್ಪ ಮೊಯಿಲಿ ಅವರು ಮಾತಾಡಿ, 64 ಕೋಟಿ ರೂ ಠೇವಣಿಯಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ಈಗ 7,000 ಕೋಟಿ ರೂ.ಗೂ ಅಧಿಕ ಠೇವಣಿ ಸಂಗ್ರಹ ಮಾಡಲು ಸಾಧ್ಯವಾಗಿದೆ. ಬ್ಯಾಂಕ್ 25 ಶಾಖೆಗಳಿಂದ 113 ಶಾಖೆಗಳಿಗೆ ಏರಿಕೆ ಯಾಗಿದೆ.ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಅವರ ನೇತೃತ್ವದಲ್ಲಿ ಬ್ಯಾಂಕ್ ಎತ್ತರಕ್ಕೆ ಬೆಳೆಯಲಿ ಎಂದು ಹೇಳಿದರು. ಅಭಿವಂದನೆ ಸ್ವೀಕರಿಸಿ ಮಾತಾಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು,…

Read More

ಕಠ್ಮಂಡು, ಫೆ. 23 : ಪ್ರಯಾಣಿಕರಿದ್ದ ಬಸ್ಸೊಂದು ನದಿಗೆ ಉರುಳಿ ಬಿದ್ದಿರುವುದರಿಂದ 18 ಜನ ಸಾವನ್ನಪ್ಪಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯ ಗಜುರಿ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ. ಈ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಧಾಡಿಂಗ್ ಜಿಲ್ಲೆಯ ಗಜುರಿ ಸಮೀಪ ತ್ರಿಶೂಲಿ ನದಿಗೆ ಪ್ರಯಾಣಿಕರ ಬಸ್ ಉರುಳಿದೆ. ಪೋಖರಾದಿಂದ ಕಠ್ಮಂಡುವಿಗೆ ಬರುತ್ತಿದ್ದ ಬಸ್ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಪೃಥ್ವಿ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಇಳಿಜಾರಿನಲ್ಲಿ ಉರುಳಿ ನದಿಯ ದಡದಲ್ಲಿ ಬಿದ್ದಿದೆ. ಬಸ್‌ನಲ್ಲಿ ಒಟ್ಟು 40 ರಿಂದ 45 ಪ್ರಯಾಣಿಕರು ಇದ್ದರು.ಅಪಘಾತ ಸ್ಥಳದಿಂದ 18 ಮೃತದೇಹಗಳನ್ನು ಹೊರತೆಗೆದಿರುವುದಾಗಿ ನೇಪಾಳ ಸಶಸ್ತ್ರ ಪೊಲೀಸ್ ಪಡೆ ವಕ್ತಾರ ಬಿಷ್ಣು ಪ್ರಸಾದ್ ಭಟ್ಟ ಮಾಹಿತಿ ನೀಡಿದ್ದಾರೆ. ಬಸ್ಸಿನಿಂದ 28 ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನೇಪಾಳ ಸೇನೆ, ನೇಪಾಳ ಸಶಸ್ತ್ರ ಪೊಲೀಸ್…

Read More

ಮಂಗಳೂರು,ಫೆ.22 : ಫೆ.27ರಂದು ಬಿರ್ದ್ ದ ಕಂಬುಲ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಸಿನಿಮಾ ನಿರ್ದೇಶಕ ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮಾತಾಡಿ, ನಾನು 50 ಸಿನಿಮಾಗಳನ್ನು ಎಲ್ಲ ಭಾಷೆಯಲ್ಲೂ ಮಾಡಿದ್ದೆ. ನನಗೆ ಒಮ್ಮೆ ಗುಣಪಾಲ ಕಡಂಬ ಅವರು ಪುತ್ತೂರು ಕಂಬಳಕ್ಕೆ ಕರೆದಿದ್ರು. ಈ ವೇಳೆ ಕಂಬಳ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡ್ಬೇಕು ಅಂತ ಯೋಚನೆ ಬಂತು. ಹೀಗಾಗಿ ಅರುಣ್ ರೈ ಅವರಲ್ಲಿ ಸಿನಿಮಾ ಬಗ್ಗೆ ಹೇಳಿದ್ದೆ. ಅಲ್ಲಿಂದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಪರ್ಕಿಸಿ ಸಿನಿಮಾಕ್ಕೆ ಸಂಭಾಷಣೆ ಬರೆಯಲು ಹೇಳಿದೆವು. ಅಲ್ಲಿಂದ ಶುರುವಾದ ಈ ಸಿನಿಮಾ ಜರ್ನಿ ಈಗ…

Read More

ಮಂಗಳೂರು, ಫೆ.21: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಗೀತ ಭಾರತಿ ಫೌಂಡೇಶನ್ನ ಕಾರ್ಯದರ್ಶಿ ಡಾ.ಉಷಾಪ್ರಭಾ ಎನ್.ನಾಯಕ್ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉತ್ಕೃಷ್ಟ ಮಟ್ಟದ ‘ಶಾಸ್ತ್ರೀಯ ಗಾಯನ ಜುಗಲ್‌ಬಂಧಿ ’ ಮತ್ತು ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮಗಳು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದೆ ಎಂದರು. ಪೂರ್ವಾರ್ಧದಲ್ಲಿ ಯಲ್ಲಾಪುರದ ವಿಭಾ ಹೆಗ್ಡೆ ಮತ್ತು ಬೆಂಗಳೂರಿನ ಶಿವಾನಿ ಮಿರಾಜ ಇವರಿಂದ ಶಾಸ್ತ್ರೀಯ ಗಾಯನ ‘ಜುಗಲ್ ಬಂಧಿ’ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಹಾರ್ಮೋನಿಯಂನಲ್ಲಿ ಮಂಗಳೂರಿನ ಮೇಧಾ ಜಿ ಭಟ್ ಮತ್ತು ಭೋಪಾಲ್ನ ವಿಜೇತಾ ಹೆಗ್ಡೆ ಅವರು ತಬ್ಲಾದಲ್ಲಿ ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು. ಉತ್ತಾರಾರ್ಧದಲ್ಲಿ ಮುಂಬೈನ ಡಾ.ಸಂಗೀತ ಶಂಕರ್, ರಾಗಿಣಿ ಶಂಕರ್ ಮತ್ತು ನಂದಿನಿ ಶಂಕರ್ ಅವರಿಂದ ‘ವಯೋಲಿನ್ ಟ್ರಿಯೋ’…

Read More

ಮಂಗಳೂರು, ಫೆ.20 : ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಲಿದೆ ಎಂದುm ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು ಎಸ್ ಸಿಡಿಸಿಸಿ ಬ್ಯಾಂಕ್ ನ ಪ್ರದಾನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಫೆ. 24ರಂದು ಪೂರ್ವಾಹ್ನ 10.30 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದರು. ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಅಭಿವಂದನಾ ಭಾಷಣ ಮಾಡಲಿದ್ದಾರೆ, ಶಾಸಕ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ…

Read More

ಮಂಗಳೂರು, ಫೆ. 20 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ನಿ ಅಸೋಸಿಯೇಶನ್ ವತಿಯಿಂದ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ’ಸ್ಮತಿ ಸಂಗಮ 2026′ ಅನ್ನು ಮಾ.1ರಂದು ಮಂಗಳಗಂಗೋತ್ರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಾಜಾರಾಮ್ ರಾವ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ,ಬೆಳಗ್ಗೆ 8.30ರಿಂದ 10.30ರವರೆಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಎ.ಎಂ. ಖಾನ್, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಜಂಟಿ ನಿರ್ದೇಶಕಿ ಕವಿತಾ ಕೆ.ಆರ್., ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧ್ಯಕ್ಷ ಯು.ಕೆ. ಮೋನು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದರು. 11.45ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅಪರಾಹ್ನ 3ಕ್ಕೆ ಬಹುಮಾನ ವಿತರಣೆ ಮತ್ತುಸಮಾರೋಪ ಕಾರ್ಯಕ್ರಮ, ಅಪರಾಹ್ನ 3.30ರಿಂದ ಸಂಜೆ 4.30ರವರೆಗೆ ಹಳೆ ವಿದ್ಯಾರ್ಥಿಗಳ ವಿಭಾಗವಾರು ಸಂವಾದ ನಡೆಯಲಿದೆ.…

Read More

ಮಂಗಳೂರು,ಫೆ.19 : ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗಾಗಿ ಕೆಲಸ ಮಾಡುತ್ತಿರುವ ಉತ್ತರ ಅಮೆರಿಕದ ಕನ್ನಡಿಗರ ಸಂಘಟನೆಯಾಗಿರುವ ‘ನಾವು ವಿಶ್ವ ಕನ್ನಡಿಗರು (ನಾವಿಕ)’ ಇದರ ಆಶ್ರಯದಲ್ಲಿ 2027ರ ಸೆಪ್ಟೆಂಬರ್ 3 ರಿಂದ 5 ನೇ ತಾರೀಕಿನವರೆಗೆ ಅಮೇರಿಕಾದ ಅಟ್ಲಾಂಟಾ ರಾಜ್ಯದ, ಸೌತ ಕನ್ವೆನ್ಸನ್ ಸೆಂಟರ್ ಅಟ್ಲಾಂಟಾದಲ್ಲಿ,”ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ ನಡೆಯಲಿದೆ ಎಂದು ನಾವಿಕ ಸಂಘಟನೆಯ ಅಧ್ಯಕ್ಷೆಯಾದ ಡಾ|ಅನ್ನಪೂರ್ಣ ಭಟ್ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾವಿಕ ಸಂಘಟನೆಯು ಈ ವರ್ಷದ ನವೆಂಬರ್ ತಿಂಗಳಿನಲ್ಲಿ ದುಬೈಯಲ್ಲಿ ಕನ್ನಡ ಸಮ್ಮೇಳನವನ್ನು ನಡೆಸಲು ಈಗಾಗಲೇ ರೂಪುರೇಷೆಯನ್ನು ಹಾಕಲಾಗಿದೆ ಎಂದರು. ಸಂಘವು ವಿಶ್ವದ ಬೇರೆ ಬೇರೆ ಭಾಗಗಳಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ, ಆರ್ಥಿಕತೆ, ಸಾಮಾಜಿಕ ಸುಧಾರಣೆ, ಉದ್ಯಮಶೀಲತೆ, ಪರಿಸರ, ಶಿಕ್ಷಣ, ಮುಂತಾದ ಕ್ಷೇತ್ರಗಳಲ್ಲಿ ದುಡಿದು ಅನುಭವ ಮತ್ತು ಆಲೋಚನೆ ಇರುವ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕನ್ನಡ ಮತ್ತು ಕನ್ನಡಿಗರ ಭವಿಷ್ಯದ ಕಾರ್ಯಸೂಚಿಯನ್ನು ಸಿದ್ಧಪಡಿಸುವ ಉದ್ದೇಶವಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಐಎಂಎ ಜಿಲ್ಲಾ…

Read More