Author: admin

ಮಂಗಳೂರು, ಜೂ. 24 : ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ 2007ರಲ್ಲಿ ಆರಂಭಗೊಂಡ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳದ 16ನೇ ಆವೃತ್ತಿಯು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಸುತ್ತಮುತ್ತಲಿನ 4 ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸುವ ವಿಶ್ವಾಸಾರ್ಹ ವೇದಿಕೆಯಾಗಿ ಆಳ್ವಾಸ್ ಪ್ರಗತಿ ಬೆಳೆದಿದೆ ಎಂದರು. ಸಿಎಸ್‌ಆರ್ ಅಂಗವಾಗಿ ಆಯೋಜಿಸಲಾಗುವ ಪ್ರಗತಿ ಉದ್ಯೋಗ ಮೇಳವು ಉದ್ಯೋಗಾಕಾಂಕ್ಷಿಗಳು ಹಾಗೂ ಕಂಪನಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಇದುವರೆಗೆ ಪ್ರತಿಷ್ಠಾನವು 22 ಉದ್ಯೋಗ ಮೇಳಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. 66,432 ಅಭ್ಯರ್ಥಿಗಳು ಶಾರ್ಟ್‌ಲಿಸ್ಟ್ ಆಗಿದ್ದು, 40,848 ಮಂದಿಗೆ ಸ್ಥಳದಲ್ಲಿಯೇ ಉದ್ಯೋಗ ಆಫರ್ ದೊರೆತಿದೆ ಎಂದು ತಿಳಿಸಿದರು. ಈ ಬಾರಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ…

Read More

ಮಂಗಳೂರು, ಜೂ. 24 :114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು ವ್ಯವಹಾರ ವಹಿವಾಟು 22.89 ಶೇಕಡಾ ಏರಿಕೆಯೊಂದಿಗೆ 1,535 ಕೋಟಿ ರೂ. ಮೈಲಿಗಲ್ಲು ತಲುಪಿದೆ . ಬ್ಯಾಂಕಿನ ನಿವ್ವಳ ಮೌಲ್ಯ 83.76 ಕೋಟಿ ರೂ.ಗಳಿಂದ 91.80 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಎನ್‌ಆರ್ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಎಂಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಅನಿಲ್ ಲೋಬೊ ಅವರು ಬ್ಯಾಂಕಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಆಡಳಿತ ಮಂಡಳಿಯ ನೇತೃತ್ವದಲ್ಲಿ ಎಂಸಿಸಿ ಬ್ಯಾಂಕಿನ ಕಾರ್ಯವ್ಯಾಪ್ತಿ ಸಂಪೂರ್ಣ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ಬ್ಯಾಂಕ್ ಸಂಪೂರ್ಣ ಕೋರ್ ಬ್ಯಾಂಕಿಂಗ್ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಿಸುತ್ತಿದೆ. ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸಮಾನವಾಗಿ ವಿವಿಧ ಹಣಕಾಸು ಉತ್ಪನ್ನಗಳು ಹಾಗೂ ಸೇವೆಗಳನ್ನು ಒದಗಿಸುತ್ತಿರುವ ಬ್ಯಾಂಕ್, ರಾಜ್ಯಾದ್ಯಂತ ಶಾಖಾ ಜಾಲ ವಿಸ್ತರಣೆಗೆ ಆದ್ಯತೆ ನೀಡುತ್ತಿದೆ ಎಂದರು. 2018ರಲ್ಲಿ…

Read More

ಮಂಗಳೂರು, ಜೂ. 23: ಮಂಗಳೂರು ಐಎಎಸ್, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ ಮಾರ್ಗದರ್ಶಿ – ಕ್ರ್ಯಾಕಿಂಗ್ ದಿ ಯುಪಿಎಸ್‌ಸಿ ಎಕ್ಸಾಮಿನೇಶನ್ ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ರೊಯ್ ಕ್ಯಾಸ್ಟೆಲಿನೊ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ನಾಗರಿಕ ಸೇವಾ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ, ಪ್ರೇರಣೆ ಹಾಗೂ ಸ್ಪಷ್ಟ ದಿಕ್ಕುನಿರ್ದೇಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಮಕೃಷ್ಣ ಮಿಷನ್, ಮಂಗಳೂರು ಇದರ ಕಾರ್ಯದರ್ಶಿಗಳಾದ ಸ್ವಾಮಿ ಜಿತಕಾಮಾನಂದಜಿ,…

Read More

ಮಂಗಳೂರು, ಜೂ.23 : ಬಾಲಿವುಡ್ನ ಖ್ಯಾತ ನಟ  ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ…

Read More

ಮಂಗಳೂರು, ಜೂ.23 : ಕಲ್ಕೂರ ಪ್ರತಿಷ್ಠಾನ, ಮಂಗಳೂರು, ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಸಾವಯವ ಕೃಷಿಕರೇ ಬೆಳೆಸಿರುವ ವಿಶಿಷ್ಟ ತಳಿಗಳ ಸಮೃದ್ಧ ಫಲಗಳಾದ ಮಾವು – ಹಲಸು ಮೇಳ ಜೂ. 20 ಶನಿವಾರ ಕದ್ರಿ ಕಂಬಳ, ಮಲ್ಲಿಕಾ ಬಡಾವಣೆಯಲ್ಲಿರುವ  ಮಂಜು ಪ್ರಸಾದ ಆವರಣದಲ್ಲಿ ನಡೆಯಿತು. ಮೇಳವನ್ನು ಮಂಗಳಾದೇವಿ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಜೀ  ಅವರು  ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾವು – ಹಲಸು ಮೇಳವನ್ನುಇಲ್ಲಿನ  ಮಂಜು ಪ್ರಸಾದ ಆವರಣದಲ್ಲಿ ಆಯೋಜಿಸಲಾಗಿದೆ ಇದೊಂದು ಉತ್ತಮ ಕಾರ್ಯ.ಸಸ್ಯ ಶ್ಯಾಮಲೆಯಾದ ಪ್ರಕೃತಿ ಮಾತೆಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿ ಸುವುದು ಮುಖ್ಯವಾಗಿದೆ  ಎಂದರು. ಕಾರ್ಯಕ್ರಮದಲ್ಲಿ ವೈದ್ಯ ಡಾ| ಜೀವರಾಜ್ ಸೊರಕೆ, ಶರವು ರಾಘವೇಂದ್ರ ಶಾಸ್ತ್ರಿ ಕದ್ರಿ, ಡಾ| ಪ್ರಭಾಕರ ಅಡಿಗ,  ಡಾ| ಹರಿಕೃಷ್ಣ ಪುನರೂರು, ಡಾ| ಎಂ. ಪ್ರಭಾಕರ ಜೋಶಿ ಮತ್ತಿತರರು ಉಪಸ್ಥಿತರಿದ್ದರು. ಮೇಳದಲ್ಲಿ ರಾಮನಗರ ಕುಣಿಗಲ್  ಹಾಗೂ ಸ್ಥಳೀಯ  ಭಾಗದ ಕೃಷಿಕರ ಹಲಸು ಮತ್ತು  ಹಲಸಿನ ಮೌಲ್ಯವರ್ಧಿತ…

Read More

ಮಂಗಳೂರು, ಜೂ.22 : ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಅಧಿಕಾರಿಗಳು, ನೌಕರರು, ಸಿಐಎಸ್‌ಎಫ್ ಸಿಬ್ಬಂದಿ, ಕುಟುಂಬ ಸದಸ್ಯರು, ಬಂದರು ಬಳಕೆದಾರರು ಹಾಗೂ ವಿವಿಧ ಪಾಲುದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವನ್ನು ಎನ್‌ಎಂಪಿಎ ಉಪಾಧ್ಯಕ್ಷೆ ಎಸ್. ಶಾಂತಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎನ್‌ಎಂಪಿಎ ಉಪಾಧ್ಯಕ್ಷೆ ಎಸ್. ಶಾಂತಿ ಅವರು ಮಾತಾಡಿ, ದೈಹಿಕಆರೋಗ್ಯ, ಮಾನಸಿಕ ಸ್ಟೈರ್ಯ ಕಾಯ್ದುಕೊಳ್ಳಲು ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.ಯೋಗ ದಿನಾಚರಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಎನ್‌ಎಂಪಿಎ ಕುಟುಂಬವನ್ನು ಅವರು ಅಭಿನಂದಿಸಿದರು. ಯೋಗ ಶಿಕ್ಷಕ ಕಿಶೋರ್ ಸುವರ್ಣ ಅವರ ಪರಿಣಿತ ಮಾರ್ಗದರ್ಶನದಲ್ಲಿ ಭಾಗವಹಿಸಿದವರು ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಉಸಿರಾಟದ ವ್ಯಾಯಾಮಗಳನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಎನ್‌ಎಂಪಿಎ ಕಾರ್ಯದರ್ಶಿ ಜಿಜೋ ಥಾಮಸ್, ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೇಖಪಾಲಕ ವೀರರಾಘವನ್, ಟ್ರಾಫಿಕ್ ಮ್ಯಾನೇಜರ್ ಕೆ. ರಾಜೇಂದ್ರ ಕುಮಾರ್, ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ದೀಪಕ್ ರಾಥ್, ಮುಖ್ಯ ವೈದ್ಯಾಧಿಕಾರಿ…

Read More

ಮಂಗಳೂರು, ಜೂ.21 : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಜೂನ್ 16 ರಂದು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿ ಪರಿಷತ್ತನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಇವರು ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದರು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್, ಉಪಾಧ್ಯಕ್ಷೆ ಕು. ಸಿಂಚನ, ವಿವಿಧ ಕ್ಷೇತ್ರದ ಕಾರ್ಯದರ್ಶಿಗಳು ಮತ್ತು ಇತರ ಪದಾಧಿಕಾರಿಗಳಿಗೆ ಗಣ್ಯರು ಬ್ಯಾಡ್ಜ್ಗಳನ್ನು ವಿತರಿಸಿ ಗೌರವಿಸಿದರು. ನಂತರ ಕಾಲೇಜಿನ ಪ್ರಾಂಶುಪಾಲರಾದ ಮೆಲ್ವಿನ್ ವಾಸ್ ಇವರು ನೂತನ ಸದಸ್ಯರಿಗೆ ತಮ್ಮ…

Read More

ಮಂಗಳೂರು, ಜೂ. 20 : ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯ 2009 ರಿಂದ ಮಾನಸಿಕ ಅಸ್ವಸ್ಥರ ರಕ್ಷಣೆ, ಶೂಶ್ರುಷೆ, ಔಷೋದೊಪಚಾರ ಆರೋಗ್ಯ, ಪುನರ್ವಸತಿ ಒದಗಿಸುವ ನಿರಂತರ ಸೇವೆ ನೀಡುತ್ತಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯು ಹತ್ತು ಹಲವು ಯೋಜನೆಗಳ ಅನುಷ್ಠಾನ, ಪ್ರಸ್ತುತ ದಾಖಲಿರುವ 375 ನಿವಾಸಿಗಳ ಅಗತ್ಯತೆಗಳು, ಮನೋರೋಗ ಚಿಕಿತ್ಸೆ ಡಿ ಎ ಡಿಕ್ಷನ್ ಹಾಗೂ ವಿಶೇಷ ಅಗತ್ಯವುಳ್ಳ ಕುಟುಂಬ ಸದಸ್ಯರ ಶಿಕ್ಷಣ ಹಾಗೂ ಇತರ ಯೋಜನೆಗಳ ಸಹಾಯಾರ್ಥ ಕಾರ್ಯಕ್ರಮದ ರೂವಾರಿ ಕೆವಿನ್ ಮಿಸ್ಕಿತ್ ಅವರ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಇದೇ ಭಾನುವಾರ 21-6-2026 ರಂದು ಮಂಗಳೂರಿನ ಟಾನ್ ಹಾಲ್ ನಲ್ಲಿ ಸಂಜೆ 6.00 ಘಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು,ಜೂ. 20  : ಕಲ್ಕೂರ ಪ್ರತಿಷ್ಠಾನ, ಮಂಗಳೂರು, ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಸಾವಯವ ಕೃಷಿಕರೇ ಬೆಳೆಸಿರುವ ವಿಶಿಷ್ಟ ತಳಿಗಳ ಸಮೃದ್ಧ ಫಲಗಳಾದ ಮಾವು – ಹಲಸು ಮೇಳ ಜೂ. 20 ಶನಿವಾರ ಹಾಗೂ 21 ಆದಿತ್ಯವಾರದಂದು 2 ದಿನಗಳ ಕಾಲ ಮುಂಜಾನೆ 7ರಿಂದ ಸಂಜೆ 7ರ ವರೆಗೆ ಕದ್ರಿ ಕಂಬಳ, ಮಲ್ಲಿಕಾ ಬಡಾವಣೆಯಲ್ಲಿರುವ “ಮಂಜು ಪ್ರಸಾದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆರಂಭದ ದಿನ ಸಭಾಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ಶ್ರೀ ಶ್ರೀ ಜಿತಕಾಮಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಶರವು ಶ್ರೀ ರಾಘವೇಂದ್ರ ಶಾಸ್ತ್ರಿ ದೀಪ ಪ್ರಜ್ವಲನೆ ಮಾಡಲಿರುವರು. ಡಾ| ಎಂ.ಬಿ. ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಜೀವರಾಜ ಸೊರಕೆಯವರು ಉದ್ಘಾಟನೆ ಮಾಡಲಿದ್ದು, ಶಾಸಕರಾದ ಡಿ. ವೇದವ್ಯಾಸ ಕಾಮತ್ ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಿರುವರು ಎಂದರು. ಎರಡನೇ ದಿನದ ಕಾರ್ಯಕ್ರಮದ ಅಂಗವಾಗಿ…

Read More

ಮಂಗಳೂರು,ಜೂ. 19  : ಕರ್ನಾಟಕ ನಾಯರ್ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್. ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಅಜಯಕುಮಾರ್ , ಉಪಾಧ್ಯಕ್ಷರಾಗಿ ವಾಸಂತಿ ನಾಯರ್, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್, ಬೋರ್ಡ್ ಮೆಂಬರುಗಳಾಗಿ ವಿಜಯಕುಮಾರ್, ಎಮ್.ವಿ. ರಾಜನ್, ಎ.ಎಸ್.ಮೋಹನ್ ರವರು, ಸಮಿತಿಯ ಸದಸ್ಯರಾಗಿ ಜೋತಿಷ್ ಕುಮಾರ್, ಜಯಲಕ್ಷ್ಮೀ ಚಂದ್ರಮೋಹನ್ , ಮಣಿಕಂಠನ್, ವಿನೋದ್‌ವಿನೋದ್‌ರಾಜ್, ಹರೀಶ್ ಗೋವಿಂದ್, ದೇವರಾಜ್ , ವಿನಯನ್ ನಾಯರ್ ಆಯ್ಕೆಗೊಂಡರು. ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸುಜಾತಾ ನಾಯರ್, ಕಾರ್ಯದರ್ಶಿಯಾಗಿ ಶ್ರೀಜಾ ನಂಬಿಯಾರ್, ಹಾಗೂ ಖಜಾಂಚಿಯಾಗಿ ಗೋಪಿಕಾ ರಾಣಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾ ವಿಜಯಕುಮಾರ್, ಜತೆಕಾರ್ಯದರ್ಶಿಯಾಗಿ ಅನಿತಾ ಜಯಚಂದ್ರನ್ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಉಡುಪಿ ಘಟಕ ಸಜಿ ಪಿಳ್ಳೈ ಹಾಗೂ ವೀಕ್ಷಕರಾಗಿ ಮೋಹನ್ ದಾಸ್, ಉಡುಪಿ ಅವರು…

Read More