Subscribe to Updates
Get the latest creative news from FooBar about art, design and business.
Author: admin
ಕಠ್ಮಂಡು, ಆ. 31 : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ಪವರ್ ಮ್ಯಾನ್ಗಳನ್ನು ನೇಮಕಾತಿ ಮಾಡಿಕೊಂಡಿದೆ. ಈ ನೇಮಕಾತಿಯ ಬಳಿಕವೂ 165 ಪವರ್ ಮ್ಯಾನ್ಗಳ ಕೊರತೆ ಇರಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹರೀಶ್ ಕುಮಾರ್ ಕೆ. ಅವರು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮೆಸ್ಕಾಂನಲ್ಲಿ ಖಾಲಿ ಇರುವ ಪವರ್ಮೇನ್ ಹುದ್ದೆಗಳ ಭರ್ತಿ ಮಾಡಲು 430 ಹುದ್ದೆಗಳಿಗೆ ನೋಟಿಫಿಕೇಶನ್ ಆಗಿತ್ತು. ಈ ಪೈಕಿ 395 ಮಂದಿಯ ನೇಮಕವಾಗಿದ್ದು, ಅವರಿಗೆ ಈಗಾಗಲೇ ನೇಮಕಾತಿ ಪತ್ರ ನೀಡಲಾಗಿದೆ ಎಂದರು. ನಾಲ್ಕು ಜಿಲ್ಲೆಗಳ ವ್ಯಾಪ್ತಿಗೊಳಪಟ್ಟ ಮೆಸ್ಕಾಂನಲ್ಲಿ ಪವರ್ಮೆನ್ಗಳಳಿಗೆ ಸುರಕ್ಷತೆಯ ದೃಷ್ಟಿಯಿಮದ ಕೆಲಸ ನಿರ್ವಹಿಸಲು 705 ಸಂಖ್ಯೆಯ ನಾನ್ ಕಾನ್ಟ್ಯಾಕ್ಟ್ ವೋಲ್ಟೇಜ್ ಡಿಟೆಕ್ಟರ್ಸ್(ಎನ್ಸಿವಿಡಿ)ಅನ್ನು ನೀಡಲಾಗಿದೆ ಎಂದು ತಿಳಿಸಿದರು. ಆನೆ ಕಾರಿಡಾರ್ ಇರುವ ಕಡೆ ಹಾಗೂ ಇತರ ಕಾಡು ಪ್ರದೇಶಗಳ ಬಳಿ ವಿದ್ಯುತ್ ಮಾರ್ಗವನ್ನು ಕವರ್ಡ್ ಕಂಡಕ್ಟ (ವಿದ್ಯುತ್ ತಂತಿಗೆ ಸುರಕ್ಷಾ ಕವಚ ಇರಲಿದೆ) ಆಗಿ ಮಾರ್ಪಡಿಸಲಾಗುವುದು. ಪುತ್ತೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು-1 ಮತ್ತು 2, ಕೊಪ್ಪ,…
ಕಠ್ಮಂಡು, ಆ. 30 : ನೇಪಾಳ-ಚೀನಾ ಗಡಿಯ ಸಮೀಪದ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಹೆಚ್ಚಿನ ಜನರನ್ನು ರಕ್ಷಿಸಲಾಗಿದ್ದು, 2,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಹಿಮನದಿ ಕುಸಿದು ಲ್ಹೆಂಡೆ ಖೋಲಾ ನದಿಗೆ ಭಾರಿ ಪ್ರಮಾಣದ ಮಂಜುಗಡ್ಡೆ, ಬಂಡೆಗಳು ಹರಿದು ಬಂದು ಭೋಟೆ ಕೋಶಿ ನದಿಗೆ ನೀರು ನುಗ್ಗಿದೆ. ಇದರ ಪರಿಣಾಮ ರಸುವಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ.ಪ್ರವಾಹದಿಂದಾಗಿ ಇದುವರೆಗೆ 626 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿರುವ ಹಿನ್ನೆಲೆ, ನೇಪಾಳ ಸರ್ಕಾರದ ಮನವಿಯ ಮೇರೆಗೆ ವೈದ್ಯಕೀಯ ಸಿಬ್ಬಂದಿ ಮತ್ತು ಸುರಂಗ ರಕ್ಷಣಾ ತಜ್ಞರನ್ನು ಒಳಗೊಂಡ 11 ಸದಸ್ಯರ ಭಾರತೀಯ ತಂಡವು ಶನಿವಾರ ನೇಪಾಳಕ್ಕೆ ತಲುಪಿದೆ.
ಮಂಗಳೂರು,ಆ.28: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಸೆಪ್ಟೆಂಬರ್ 4ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ 44 ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿರುವ ಈ ಮಕ್ಕಳ ಉತ್ಸವದಲ್ಲಿ ಈ ಬಾರಿ ಒಟ್ಟು 44 ವಿಭಾಗಗಳಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. 12 ವೇದಿಕೆಗಳಲ್ಲಿ ಏಕಕಾಲದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 9ರಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಸೆ.4ರಂದು ಬೆಳಗ್ಗೆ 9 ಗಂಟೆಗೆ ಶ್ರೀಕೃಷ್ಣ ವರ್ಣ ವೈಭವ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮಹಿಳೆಯರು ಸಾಂಪ್ರದಾಯಿಕವಾಗಿ ಹಾಡುಗಳನ್ನು ಹಾಡುತ್ತಾ ಕಡಗೋಲಿನಿಂದ ಮೊಸರು ಕಡೆದು ಬೆಣ್ಣೆ ತೆಗೆಯುವ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ…
ಮಂಗಳೂರು, ಆ.27.: ಮಣಿಪಾಲ ಆರೋಗ್ಯ ಕಾರ್ಡ್ 2026, ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆ ಮಣಿಪಾಲದ ಪ್ರಸ್ತುತ ಕುಲಾಧಿಪತಿಗಳಾದ ಡಾ. ರಾಮ ದಾಸ್ ಎಂ. ಪೈ ಅವರ ಮಾರ್ಗದರ್ಶ ನದಲ್ಲಿ 2000ನೇ ಇಸವಿಯಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಕಳೆದ 26 ವರ್ಷಗಳಲ್ಲಿ ಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಆರಂಭಿಕ ವರ್ಷದಲ್ಲಿ ಕೇವಲ 3,200 ಕುಟುಂಬಗಳನ್ನು ಮಾತ್ರ ಹೊಂದಿದ್ದ ಈ ಯೋಜನೆಯು ಈಗ ಗಣನೀಯವಾಗಿ ವಿಸ್ತರಿ ಸಿದೆ. ಕಳೆದ ಹಣಕಾಸು ವರ್ಷದಲ್ಲಿ ಸುಮಾರು 2 ಲಕ್ಷ ಕುಟುಂಬಗಳು ನೋಂದಾಯಿಸಿಕೊಂಡಿದ್ದು, ಪ್ರಸ್ತುತ ಕರ್ನಾಟಕ ಮತ್ತು ಕೇರಳ ರಾಜ್ಯಗಳಾದ್ಯಂತ ಸುಮಾರು 6.5 ಲಕ್ಷ ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಎಂದವರು ಹೇಳಿದರು. ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಎ.…
ಮಂಗಳೂರು, ಆ.27 : ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ನಡೆಯಿತು.ಸಭೆಯನ್ನು ಶಶಿಧರ ಶೆಟ್ಟಿ ಬರೋಡ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾಗಿ 25 ಕೋಟಿ ರೂಪಾಯಿಗೂ ಮಿಕ್ಕಿ ಪರಿಹಾರ ಧನವನ್ನು ಬಡವರಿಗೆ ವಿತರಿಸಿದ್ದಾರೆ. ಒಳ್ಳೆಯ ಕೆಲಸಗಳಿಂದ ಬಂಟ ಸಮಾಜ ಇತರ ಸಮಾಜಕ್ಕೆ ಮಾದರಿಯಾಗಬೇಕು ಎಂದು ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು, ಬರೋಡ ಶಶಿ ಕ್ಯಾಟರಿಂಗ್ ನ ಮಾಲಕರಾದ ಶಶಿಧರ ಶೆಟ್ಟಿ ಬರೋಡ ತಿಳಿಸಿದರು. ಒಕ್ಕೂಟದ ನಿರ್ದೇಶಕ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಮಾಜಪರ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಐಕಳ ಹರೀಶ್ ಶೆಟ್ಟಿಯವರ ಸಂಘಟನೆ ಮತ್ತು ಪದಾಧಿಕಾರಿಗಳ ಕೆಲಸ ಕಾರ್ಯಗಳಿಂದ ಒಕ್ಕೂಟ ಹಲವು ಕೋಟಿ ರೂ.ಗಳನ್ನು ಬಡವರ ವಿವಿಧ ಕಾರ್ಯಗಳಿಗೆ ವಿನಿಯೋಗಿಸಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ…
ಮಂಗಳೂರು, ಆ.25 : ಮಂಗಳೂರು ಪ್ರೊಡಕ್ಕಿವಿಟಿ ಕೌನ್ಸಿಲ್ ವತಿಯಿಂದ ರೋಟರಿ ಕ್ಲಬ್ ಮಂಗಳೂರು ಸಹಯೋಗದಲ್ಲಿ ಮಂಗಳೂರಿನ ರೆಡ್ ಕ್ರಾಸ್ ಪ್ರೇರಣಾ ಹಾಲ್ ನಲ್ಲಿ ಆ.20,ಶುಕ್ರವಾರ ಎಂಪಿಸಿ ರೋಟರಿ ಕೋಸ್ಟೈಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್ – 2026 ಸಮಾವೇಶ ನಡೆಯಿತು. ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ಸೃಷ್ಟಿಸುವವರಾಗಬೇಕು. ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 1 ರಷ್ಟು ಜನರಿಗೆ ಮಾತ್ರ ಸರಕಾರದಿಂದ ಉದ್ಯೋಗ ಒದಗಿಸಲು ಸಾಧ್ಯ. ಉಳಿದ ಶೇಕಡಾ 99 ರಷ್ಟು ಮಂದಿಗೆ ಖಾಸಗಿ ಅಥವಾ ಸ್ವಂತ ಉದ್ಯೋಗವೇ ಪ್ರಮುಖ ಅವಕಾಶವಾಗಿದೆ ಎಂದರು. ಎಂಪಿಸಿ ಕಾನ್ ಕೇವ್ ನಿರ್ದೇಶಕ ಹಾಗು ಮಹಾಪೋಷಕ ಸಿಎ ಎಸ್.ಎಸ್ ನಾಯಕ್ ಅವರು ಮಾತನಾಡಿ, ಕರಾವಳಿ ಕರ್ನಾಟಕದ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ಹಾಗೂ ಸ್ಟಾರ್ಟ್ಅಪ್ಗಳಿಗೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮ…
ಮಂಗಳೂರು , ಆ. 24 : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್), ‘ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್’ ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ.ಕಳೆದ 16 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳನ್ನು ನೋಂದಾಯಿಸಿದೆ ಎಂದು ಶಾಖಾ ಮುಖ್ಯಸ್ಥ ಸೂರಜ್ ಪ್ರಭು ಅವರು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ ಮುಖ್ಯ ವೈಶಿಷ್ಟ್ಯಗಳು ಕೇವಲ ವಿಜ್ಞಾನಾಧಾರಿತ ಮೌಲ್ಯಮಾಪನ ಅಂಕಗಳನ್ನು ನೀಡದೆ, ವಿದ್ಯಾರ್ಥಿಯ ವಿಷಯ ಜ್ಞಾನ, ವಿಶ್ಲೇಷಣಾತ್ಮಕ ಸಾಮರ್ಥ್ಯ ಮತ್ತು ಪರೀಕ್ಷಾ ನಡವಳಿಕೆಯನ್ನು ವೈಜ್ಞಾನಿಕವಾಗಿ ವಿಶ್ಲೇಷಿಸುವ ‘ನೈದಾನಿಕ ಮೌಲ್ಯಮಾಪನ’ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದರು. ಪರೀಕ್ಷೆಯ ನಂತರ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿವರವಾದ ವರದಿ ಸಿಗಲಿದೆ. ಅರ್ಹ ವಿದ್ಯಾರ್ಥಿಗಳಿಗೆ ಆಕಾಶ್ ಸಂಸ್ಥೆಯ ಕ್ಲಾಸ್ರೂಮ್, ಹೈಬ್ರಿಡ್ ಮತ್ತು ಡಿಜಿಟಲ್ ಕೋರ್ಸ್ಗಳಿಗೆ 100% ವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ₹2.5 ಕೋಟಿ ನಗದು ಬಹುಮಾನ ಅತ್ಯುತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು ₹2.5 ಕೋಟಿ ಮೌಲ್ಯದ ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು. ಎಇಎಸ್ಎಲ್ನ…
ಮಂಗಳೂರು, ಆ. 23: ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ ಯಲ್ಲಿ 2416 ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ದೊರಕಿದೆ. 6183 ಜನರನ್ನುಮುಂದಿನ ಉದ್ಯೋಗ ಸಂದರ್ಶನಕ್ಕೆಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, 332 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು, 15,539 ಅಭ್ಯರ್ಥಿಗಳು ಭಾಗವಹಿಸಿದ್ದರು. ಮೇಳದಲ್ಲಿ ಭಾಗವಹಿಸಿದ್ದ 301 ಕಂಪನಿಗಳ ಫಲಿತಾಂಶಗಳನ್ನು ವೆಬ್ಸೈಟ್ (www.alvaspragati.com )ನಲ್ಲಿ ಪ್ರಕಟಿಸಲಾಗಿದೆ. ಉಳಿದ ಕಂಪನಿಗಳ ಹಾಗೂ ಅಭ್ಯರ್ಥಿಗಳ ಫಲಿತಾಂಶಗಳನ್ನು ನೇಮಕಾತಿ ಸಂಸ್ಥೆಗಳಿಂದ ಮಾಹಿತಿ ಲಭ್ಯವಾದಂತೆ ಪ್ರಕಟಿಸಲಾಗುವುದು. ಉದ್ಯೋಗ ಮೇಳದಂದು ಸ್ಥಳದಲ್ಲೇ ನೋಂದಣಿ ಮಾಡಿದಂತಹ ಎಸೆಸೆಲ್ಸಿ, ಪಿಯುಸಿಹಾಗೂ ಐಟಿಐ ಅಭ್ಯರ್ಥಿಗಳ ನೇಮಕಾತಿ ವಿವರಗಳನ್ನು ಆಳ್ವಾಸ್ ತಂಡದಿಂದ ದೂರವಾಣಿ ಕರೆ ಹಾಗೂ ಎಸ್ಎಂಎಸ್ ಮೂಲಕ ನೇರವಾಗಿ ತಲುಪಿಸಲಾಗುತ್ತದೆ ಎಂದು ತಿಳಿಸಿದರು. ಉತ್ಪಾದನಾ ಕ್ಷೇತ್ರದ 75 ಕಂಪನಿಗಳು ಭಾಗವಹಿಸಿ 523 ಮಂದಿಯನ್ನು…
ಮಂಗಳೂರು, ಆ.21 : ತುಳು ಭಾಷೆ, ಸಾಹಿತ್ಯ ಸಂಸ್ಕೃತಿ ಮತ್ತು ಪರಂಪರೆಯನ್ನು ಡಿಜಿಟಲ್ ಜಗತ್ತಿನಲ್ಲಿ ದಾಖಲಿಸುವ ಪ್ರಯತ್ನವಾದ ತುಳು ವಿಕಿ ಪೀಡಿಯಾ ತನ್ನ ಲೈವ್ ಆವೃತ್ತಿಯ 10 ವರ್ಷಗಳನ್ನು ಪೂರೈಸಿದೆ. ಈ ದಶಮಾನೋತ್ಸವದ ಸ್ಮರಣೆ ಹಾಗೂ ಮುಂದಿನ ಹಂತದ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಸೆ.12 ಮತ್ತು 13ರದು ಮಂಗಳೂರಿನಲ್ಲಿ ಕರಾವಳಿ ವಿಕಿ ಮೀಡಿಯನ್ಸ್ ಯೂಸರ್ ಗ್ರೂಪ್ನಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರಾವಳಿ ವಿಕಿ ಮೀಡಿಯನ್ಸ್ ಯೂಸರ್ಸ್ ಗ್ರೂಪ್ನ ಅಧ್ಯಕ್ಷ ಡಾ. ವಿಶ್ವನಾಥ ಬದಿಕಾನ ಅವರು ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.12ರಂದು ಬೆಳಗ್ಗೆ 10 ಗಂಟೆಗೆ ಕರಂಗಲ್ಪಾಡಿಯ ಎಜೆ ಗ್ರಾಂಡ್ ಹೊಟೇಲ್ನಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವ ಗಣಕತಜ್ಞ ಡಾ. ಕೆ.ಪಿ.ರಾವ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತುಳು ವಿಕಿಪೀಡಿಯಾದ 10 ವರ್ಷಗಳ ಪಯಣವನ್ನು…
ಮಂಗಳೂರು, ಆ.21 : ಲೋಕಕಲ್ಯಾಣ, ಸಮೃದ್ಧಿ, ಶಾಂತಿ ಹಾಗೂ ಸರ್ವಜನ ಕ್ಷೇಮದ ಸಂಕಲ್ಪದೊಂದಿಗೆ ಜಗದಾಚಾರ್ಯ ಸ್ವಾಮಿ ಅಖಿಲೇಶ್ಜೀ ಮಹಾರಾಜ್ ಸೇವಾ ಸಂಸ್ಥಾನ ಹಾಗೂ ದಿ ಸ್ಯಾಫ್ರನ್ ಫ್ರಂಟ್ ಸಹಯೋಗದಲ್ಲಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಾಗವನ್ನು ಆಗಸ್ಟ್ 24ರಿಂದ 28ರವರೆಗೆ ಶ್ರೀ ಯೋಗೇಶ್ವರ ಕದ್ರಿ ಮಠದಲ್ಲಿ ಮಹಾಯಾಗ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ ಎಂದು ಕಾರ್ಯಾಧ್ಯಕ್ಷ ದಿನಕರ ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಚಾರ್ಯ ಶ್ರೀ ಲವಕುಶ್ ಮಿಶ್ರಾಜೀ ಅವರ ಪೌರೋಹಿತ್ಯದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನಡೆಯಲಿವೆ. ಜಾತಿ-ಭೇದವಿಲ್ಲದೆ ಎಲ್ಲ ವರ್ಗದ ಜನರು ಭಾಗವಹಿಸುವ ಮೂಲಕ ಕುಟುಂಬ ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮೃದ್ಧಿ ನೆಲೆಸುವುದು ಮಹಾಯಾಗದ ಉದ್ದೇಶವಾಗಿದೆ ಎಂದರು. ಆಗಸ್ಟ್ 24ರಂದು ಬೆಳಗ್ಗೆ 8 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಿಂದ ಶ್ರೀ ಯೋಗೇಶ್ವರ ಕದ್ರಿ ಮಠದವರೆಗೆ ಕಳಶಯಾತ್ರೆ ನಡೆಯಲಿದೆ. ಐದು ದಿನಗಳ ಕಾಲ ಹೋಮ-ಹವನ, ಮಂತ್ರಪಠಣ ಹಾಗೂ ವಿವಿಧ…










