Author: admin

ಬೆಳ್ತಂಗಡಿ,ಮಾ.17 : ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ಆದೇಶದಂತೆ, 6 ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾರ್ಚ್ 16ರಂದು ಆದೇಶ ಹೊರಡಿಸಿದ್ದಾರೆ.ಗಡಿಪಾರು ಅವಧಿಯು ಮಾರ್ಚ್16ರಿಂದ ಸೆಪ್ಟಂಬರ್ 16ರವರೆಗೆ 6 ತಿಂಗಳು ಕಾಲಾವಧಿಯನ್ನು ಹೊಂದಿದೆ . ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರುಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು. ಹೊಸ ಆದೇಶ ಹೊರಡಿಸಲು 3 ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.

Read More

ಮಂಗಳೂರು,ಮಾ.16 : ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ ಇದರ ವಿವಿಧ ಅಭಿವೃದ್ಧಿ ಯೋಜನೆಗಗಳಿಗೆ ಆಧಾರವಾಗಿ ಸಂಗೀತಗಾರ ಕೆವಿನ್ ಮಿಸ್ಕಿತ್ ಇವರ 54ನೇ ಕೊಂಕಣಿ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಸರಿಯಾಗಿ ಮಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ . ಈ ಪ್ರಯುಕ್ತ ಪ್ರಚಾರ ಘೊಷಣೆಯ ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಸ್ನೇಹಾಲಯ ಸಂಸ್ಥೆಯ ಮಂಗಳೂರಿನ ಪ್ರಧಾನ ಕಛೇರಿಯಲ್ಲಿ ನಡೆಯಿತು. ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರು ಆಗಿರುವ ಜೋಸೆಫ್ ಕ್ರಾಸ್ತಾ ಪೊಸ್ಟರ್ ಬಿಡುಗಡೆ ಮಾಡಿ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಿದರು. ಸಭಾರಂಭದಲ್ಲಿ ಸ್ನೇಹಾಲಯದ ಹಲವು ಅಭಿಮಾನಿಗಳ ಉಪಸ್ಥಿಯಲ್ಲಿ = ಶೆಲ್ಡಾನ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಒಲಿವಿಯಾ ಕ್ರಾಸ್ತಾ, ಸಂಗೀತಗಾರ ಕೆವಿನ್ ಮಿಸ್ಕಿತ್, ಸಲಹೆಗಾರರಾದ ಜಿಯೋ ಡಿ ಸಿಲ್ವ, ಅಗ್ರಾರ್, ಜಾಕ್ಸನ್ ಕಿನ್ನಿಗೋಳಿ ಹಾಗು ಇತರರು ಹಾಜರಿದ್ದರು.

Read More

ಬ್ರಹ್ಮಾವರ, ಮಾ. 15 : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ಮಾ.13, ಶುಕ್ರವಾರ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ ಪೂಜಾರಿ ಎಂದು ಗುರುತಿಸಲಾಗಿದೆ. ಮಾ.13ರಂದು ಮಧ್ಯಾಹ್ನ ವೇಳೆ ಶಿರೂರು ಮೂರು ಕೈ ಕಡೆಯಿಂದ ಕೊಕ್ಕರ್ಣೆ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ನಾಯಿ ಅಡ್ಡ ಬಂದಿದ್ದು, ಚಾಲಕ ನರಸಿಂಹ ಪೂಜಾರಿ ರಿಕ್ಷಾವನ್ನು ಒಮ್ಮೆಲೆ ಎಡಕ್ಕೆ ಚಲಾಯಿಸಿದ್ದರಿಂದ, ರಿಕ್ಷಾದ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮಾ.14ರಂದು ಮೃತಪಟ್ಟರು ಎಂದು ವರದಿಯಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು.ಮಾ.14 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 57ನೇ ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿಗೊಳ್ಳಲಿದ್ದು, ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಇತ್ತೀಚಿಗೆ ಗುದ್ದಲಿ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ರೇವತಿ ಶ್ಯಾಂ ಸುಂದ‌ರ್ ಶೆಟ್ಟಿ, ಪ್ರಮುಖರಾದ ದೀಪಕ್ ಪೈ, ಅಮಿತ್, ಶಬರಿ ಶೆಟ್ಟಿ, ಶೈಲೇಶ್ ಶೆಟ್ಟಿ, ಅರುಣ್ ಕೊಟ್ಟಾರಿ, ಅನಿಲ್ ಕೊಟ್ಟಾರಿ, ಜಯಶ್ರೀ ಕೊಟ್ಟಾರಿ, ದೀಪಕ್ ಸುವರ್ಣ, ಉಷಾ, ಗಾಯತ್ರಿ, ಶೈಲೇಶ್ ಶೆಟ್ಟಿ, ಸುರೇಶ್, ಪ್ರವೀಣ್ ನಿಡ್ಡೆಲ್, ಲಲಿತಾ ಕೊಟ್ಟಾರಿ, ನಿತಿನ್, ವಿಖ್ಯಾತ್ ಶೆಟ್ಟಿ, ವಿನಯ್, ಸೇರಿದಂತೆ ಪರಿಸರದ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಬೆಳ್ತಂಗಡಿ, ಮಾ. 13 : ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟಿನ ಗುಂಡ್ಯ ಸಮೀಪ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧರ್ ಮರಕಡ, ಜನಾರ್ದನ ಕೆರಿಮಾರ್ ಸಾವನ್ನಪ್ಪಿದ್ದು ಸುರೇಶ್ ಎಂಬವರು ಗಂಭೀರವಾಗಿ ಗಾಯಗೊಂಡ ದ್ದು ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಸುಳ್ಯ, ಮಾ. 12 : ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರೊಬ್ಬರು ಗುರುವಾರ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಬೇರ್ಯ ನಿವಾಸಿ ಮಂಜು ಪಿ (42) ಎಂದು ಗುರುತಿಸಲಾಗಿದೆ. ಮಂಜು ಅವರು ಕಾಲೇಜಿನಲ್ಲಿ ಮಧ್ಯಾಹ್ನ ತನಕ ತರಗತಿ ನಡೆಸಿ ಬಳಿಕ ತಲೆನೋವು ಎಂದು ವಿದ್ಯಾರ್ಥಿಗಳಲ್ಲಿ ಹೇಳಿದ್ದು, ಆ ಬಳಿಕ ಸ್ಥಳೀಯ ಖಾಸಗಿ ಮೆಡಿಕಲ್ ಗೆ ತೆರಳಿ ಔಷಧ ಖರೀದಿಸಲು ಹೋದಾಗ ಅಲ್ಲೆ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Read More

ಮಂಗಳೂರು, ಮಾ.11 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ 8 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಈ ಹಿಂದೆ ಇಲ್ಲಿ ಭೇಟಿ ನೀಡಿದ್ದಾಗ ಸ್ಥಳೀಯರು ಈ ಕಾಮಗಾರಿಯ ಅಗತ್ಯತೆ ಬಗ್ಗೆ ಗಮನಕ್ಕೆ ತಂದಿದ್ದರು. ಅದರಂತೆ ಅನುದಾನಗಳನ್ನು ಹೊಂದಿಸಿಕೊಂಡು ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಯಲಿದೆ ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಶೈಲೇಶ್ ಬಿ ಶೆಟ್ಟಿ , ಹಿರಿಯ ಕಾರ್ಯಕರ್ತರಾದ ಪುಂಡಲೀಕ ಸುವರ್ಣ, ನಾರಾಯಣ ಶೆಟ್ಟಿ, ದೇವದಾಸ ಶೆಟ್ಟಿ, ರಾಜರತ್ನ ಸನಿಲ್, ವಾರ್ಡ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಗಣೇಶ್ ಕೊಟ್ಟಾರಿ, ಪ್ರಮೋದ್ ಕೊಟ್ಟಾರಿ, ದಿನೇಶ್ ಕುಲಾಲ್, ಸೋಮಶೇಖರ್, ಕಾರ್ಯದರ್ಶಿ ಲೋಕೇಶ್, ನಾರಾಯಣ ಕುಂದರ್ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ತರುಣ್, ಪ್ರೇಮಲತಾ ನಾಯ್ಕ, ಕಿಶನ್, ಮಧು ಕುಲಾಲ್, ಪ್ರವೀಣ್ ಪಟ್ನ, ರಾಜೀವ್ ಪೂಜಾರಿ,…

Read More

ಉಪ್ಪಿನಂಗಡಿ, ಮಾ. 10 : ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ರವಿವಾರ ನಡೆದಿದೆ. ಮೃತರನ್ನು ಬಂದಾರು ಗ್ರಾಮದ ಕುರಾಯ ನಿವಾಸಿ,ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂದು ಗುರುತಿಸಲಾಗಿದೆ. ಚಿದಾನಂದ ಗೌಡ ಅವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ , ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಜೇಶ್ವರ,ಮಾ. 09  : ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾರ್ಚ್, 8 ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ  ಅರ್ಥಪೂರ್ಣ ಮತ್ತು ಉತ್ಸಾಹಭರಿತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಗಣ್ಯ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಪರಿಸರ ಜಾಗೃತಿಯನ್ನು ಪ್ರತಿಬಿಂಬಿಸುವಂತೆ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಟ್ರಸ್ಟಿಗಳು, ಸುತ್ತಮುತ್ತಲಿನ ಮಹಿಳೆಯರು, ಸಿಬ್ಬಂದಿ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಿದರು. ವ್ಯಸನಮುಕ್ತಿ ಕೇಂದ್ರದ ವ್ಯವಸ್ಥಾಪಕರಾದ ರಾಕೇಶ್ ಲೋಬೋ ಅವರು ಸ್ವಾಗತ ಭಾಷಣ ಮಾಡಿ ಅಂತರಾಷ್ಟ್ರೀಯ ಮಹಿಳಾ ದಿನದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಗಳಾದ ಅಜಿತಾ ಕೆ. ಮತ್ತು ಇರ್ಫಾನಾ ಇಕ್ಬಾಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ನ ಸ್ಥಾಪಕಿ ಮತ್ತು ನಿರ್ದೇಶಕಿ ಪ್ರೊಫೆಸರ್ ಹಿಲ್ಡಾ ರಾಯಪ್ಪನ್ ಅವರಿಗೆ ಸಮಾಲೋಚನೆ ಮತ್ತು ಸಾಮಾಜಿಕ ಸೇವೆಯಲ್ಲಿ ನೀಡಿದ  ಕೊಡುಗೆಯನ್ನು ಗೌರವಿಸಿ ವಿಶೇಷ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅವರು ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿ, ಸ್ನೇಹಾಲಯದ ಸ್ಥಾಪಕರಾದ…

Read More

ಮಂಗಳೂರು,ಮಾ. 08 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನಲ್ಲಿ 5.28 ಕೋಟಿ ರೂ. ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಬೆಳೆಯುತ್ತಿರುವ ಮಂಗಳೂರು ಶಿಕ್ಷಣ ಕ್ಷೇತ್ರದಲ್ಲಿಯೂ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ವಿದ್ಯಾರ್ಜನೆಗೆ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಇಂತಹ ವಸತಿ ನಿಲಯಗಳು ಹೆಚ್ಚಾದಷ್ಟು ದೂರದ ಊರಿನ ವಿದ್ಯಾರ್ಥಿಗಳಿಗೆ ಸದುಪಯೋಗವಾಗುತ್ತದೆ. ಶೀಘ್ರದಲ್ಲಿ ಈ ಕಾಮಗಾರಿ ಮುಗಿಯಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶ್ರೀಮತಿ ಶಕೀಲಾ ಕಾವ, ಪ್ರಮುಖರಾದ ನಿತಿನ್ ಕುಮಾರ್, ರವಿಶಂಕರ್ ಮಿಜಾರು, ಜಯಕುಮಾರ್, ಕಮಲಾಕ್ಷಿ, ಧೃತೇಶ್, ವೆಂಕಟೇಶ್ ಕದ್ರಿ, ಸುಂದರ ಶೆಟ್ಟಿ ಕದ್ರಿ, ಚೇತನಾ, ಶಿಲ್ಪಾ, ಗಂಗಾಧರ್ ಕದ್ರಿ, ಉಷಾ, ಗೀತಾ, ಭಾಸ್ಕರ್, ಚಿನ್ನಪ್ಪ, ನವೀನ್, ಹರೀಶ್, ಚಂದ್ರಕಾಂತ್, ಹರಿಣಾಕ್ಷ ,…

Read More