Subscribe to Updates
Get the latest creative news from FooBar about art, design and business.
Author: admin
ಬೈಂದೂರು, ಜೂ. 02 : ಪ್ರವಾಸಕ್ಕೆಂದು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಮೃತರನ್ನು ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿ ನಗರದಿಂದ ಒಟ್ಟು 7 ಮಂದಿ ಮುರುಡೇಶ್ವರ, ಕನ್ಯಾಕುಮಾರಿ ಪ್ರವಾಸಕ್ಕೆ ತೆರಳಿದ್ದರು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ಅವರು ವಿಶ್ರಾಂತಿ ಪಡೆಯಲು ನಿಲ್ಲಿಸಿದ್ದ ಸಂದರ್ಭದಲ್ಲಿ ಮನೆಯವರೆಲ್ಲಾ ಊಟದ ತಯಾರಿಯಲ್ಲಿರುವ ವೇಳೆ ಇಬ್ಬರು ಮಕ್ಕಳು ಪಕ್ಕದಲ್ಲಿರುವ ನದಿಗೆ ಸ್ನಾನಕ್ಕೆ ತೆರಳಿದ್ದರು. ನದಿಯ ಆಳ ಇರುವ ಜಾಗದಲ್ಲಿ ಈಜಲು ತೆರಳಿದ ಕಾರಣ ನೀರಿನ ಆಳ ತಿಳಿಯದೆ ಆಯುಷ್ ಮುಳುಗಿದ್ದಾನೆ ಎನ್ನಲಾಗಿದೆ. ತಕ್ಷಣ ಇನ್ನೊಬ್ಬ ಸಹೋದರ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಆದರೆ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ನದಿ ಆಳ ಇರುವ ಕಾರಣ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸುಮಾರು ಒಂದು…
ಮಂಗಳೂರು, ಜೂ. 01 : ಪಶ್ಚಿಮ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳು ಇಂದಿನಿಂದ ಬಹುತೇಕ ಸ್ಥಗಿತಗೊಳ್ಳಲಿವೆ. ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದೆ. ಅದ್ದರಿಂದ ಅವುಗಳ ರಕ್ಷಣೆಗಾಗಿ 61 ದಿನಗಳ ಕಾಲ ಯಾಂತ್ರೀಕೃತ ಬೋಟ್ಗಳು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ ಯಾಂತ್ರಿಕ ದೋಣಿಗಳು ಸಮುದ್ರಕ್ಕೆ ಇಳಿದರೆ ಮೀನುಗಳ ಸಂತಾನೋತ್ಪತ್ತಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ 61 ದಿನಗಳ ಕಾಲ ನಿಷೇಧ ಹೇರಲಾಗಿದೆ. ಈ ಅವಧಿಯಲ್ಲಿ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಹೆಚ್ಚಿನ ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳು ಮುಂದಿನ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದ್ದರೂ ಸಾಂಪ್ರದಾಯಿಕ ನಾಡದೋಣಿಗಳಿಗೆ ಮೀನುಗಾರಿಕೆ ಮುಂದುವರಿಸಲು ಅನುಮತಿ ನೀಡಲಾಗಿದೆ. ನಾಡದೋಣಿ ಮತ್ತು ಬಲೆಗಳನ್ನು ಬಳಸುವ ಮೀನುಗಾರರು 10 ಅಶ್ವಶಕ್ತಿಯ ಇಂಜಿನ್ ಅನ್ನು ಬಳಸಿ ಸಮುದ್ರದ ಬದಿ, ನದಿ ತೀರದಲ್ಲಿ ಮೀನುಗಾರಿಕೆ ನಡೆಸಬಹುದಾಗಿದೆ.
ಉಡುಪಿ, ಮೇ. 31 : ವ್ಯಕ್ತಿಯೊಬ್ಬರು ತನ್ನ ತೋಟದಲ್ಲಿರುವ ಬಾವಿಯ ಕೆಸರು ತೆಗೆಯಲು ಹೋಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ನಡೆದಿದೆ. ಮೃತರನ್ನು ಬೆಳ್ವೆ ಗ್ರಾಮದ ಪದ್ದು ಕುಂಬಾರ(75) ಎಂದು ಗುರುತಿಸ ಲಾಗಿದೆ. ಪದ್ದು ಕುಂಬಾರ ಇವರು ಮೇ 27ರಂದು ಮನೆಯ ತೋಟದಲ್ಲಿರುವ ಬಾವಿಯ ಕೆಸರನ್ನು ತೆಗೆಯಲು ಬಾವಿಗೆ ಇಳಿದಿದ್ದರು. ಕೆಲಸ ಮುಗಿಸಿ, ಹಗ್ಗದ ಸಹಾಯದಿಂದ ಮೇಲಕ್ಕೆ ಬರುವಾಗ ಆಕಸ್ಮಿಕವಾಗಿ ಕೈಜಾರಿ ಪುನಃ ಬಾವಿಗೆ ಬಿದ್ದಿದ್ದಾರೆ. ಅವರನ್ನು ಬಾವಿಯಿಂದ ಮೇಲಕ್ಕೆತ್ತಿ,ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮೇ 30ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು,ಮೇ.30 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯು 20ಲಕ್ಷ ರೂ. ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಈ ಪ್ರದೇಶಕ್ಕೆ ತೊಂದರೆ ಉಂಟಾಗುತ್ತಿದ್ದ ಬಗ್ಗೆ ಸ್ಥಳೀಯರು ಮಾಡಿದ ಮನವಿಯಂತೆ ಲಭ್ಯ ಅನುದಾನಗಳನ್ನು ಬಳಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಕಿರಣ್ ಮರೋಳಿ, ಮನೋಹರ್ ಶೆಟ್ಟಿ ಕದ್ರಿ, ರುಕ್ಮಯ್ಯ, ರಾಘು, ಅರುಣ್ ಶೆಟ್ಟಿ, ರಾಜೇಶ್ ಅಲಂಗಾರ್, ಮಾಲತಿ, ಶರತ್, ಸುಲೋಚನಾ, ವತ್ಸಲಾ, ವಾಲ್ಟರ್ ಪಿಂಟೋ, ಶೇಖರ್ ಪೂಜಾರಿ, ಸ್ಟೆಲ್ಲಾ ಲೋಬೋ, ಸ್ಟೀವನ್ ಲೋಬೋ, ಜಗದೀಶ್ ಸಾಲ್ದಾನ, ರೇಷ್ಮಾ ಪಿಂಟೋ, ಬೆನೆಡಿಕ್ಟ್ ಮಸ್ಕರೆನ್, ವಾರ್ಡಿನ ಪ್ರಮುಖರು, ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಬೆಂಗಳೂರು, ಮೇ 29 : ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಲೋಕಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ ಅವರಿಗೆ ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು.
ಮಂಗಳೂರು,ಮೇ.29 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿಯು ಜೂನ್ 4ರಿಂದ 13ರವರೆಗೆ ನಗರದ ಸೆಂಟ್ ಸೆಬಾಸ್ಟಿಯನ್ ಸೆಂಟೆನರಿ ಸಭಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯನ್ನು ಭಾರತೀಯ ಬ್ರಿಡ್ಜ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಬ್ರಿಡ್ಜ್ ಅಸೋಸಿಯೇಷನ್ ತತ್ವಾವಧಾನದಲ್ಲಿ, ಮಂಗಳೂರಿನ ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ಆಯೋಜಿಸಿದೆ ಎಂದು ಅಸೋಸಿಯೇಷನ್ ಅಧ್ಯಕ್ಷೆ ಮಾರ್ಜೊರಿ ಟೆಕ್ಸೇರಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ದೇಶದ ವಿವಿಧ ಭಾಗಗಳಿಂದ ಹಾಗೂ ಪೋಲೆಂಡ್ ದೇಶದಿಂದ ವಿಶ್ವ ಚಾಂಪಿಯನ್ ಆಟಗಾರರಾದ ಬುರಾಸ್ ಕ್ರಿಸ್ಟೋಫ್ ಜರ್ಜಿ, ಡೊಮಿನಿಕ್ ಫಿಲೋಫೋವಿಚ್ ಜಾಕೋಬ್ ಪಾತೇಹುವಾ ಮತ್ತು ಪ್ಯಾಟ್ರಿಕ್ ಪಾತೇಹುವಾ ಸೇರಿದಂತೆ ಸುಮಾರು 450ಕ್ಕೂ ಅಧಿಕ ಖ್ಯಾತ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ಕ್ರೀಡಾಕೂಟವು ಮಂಗಳೂರನ್ನು ಭಾರತದ ಮತ್ತು ವಿಶ್ವದ ಬ್ರಿಡ್ಜ್ ನಕಾಶೆಯಲ್ಲಿ ಗುರುತಿಸುವಂತೆ ಮಾಡಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ಡೆರೆಕ್ ರೇಗೊ ಹಾಗೂ ಸದಸ್ಯ…
ಮಂಗಳೂರು,ಮೇ.28 : ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಹೇಳಿದರು. ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು.ಜನರು, ಸಮುದಾಯಗಳು ಮತ್ತು ರಾಷ್ಟ್ರಗಳ ನಡುವಿನ ಸಂಘರ್ಷಗಳಲ್ಲಿ ಸಂಧಾನ ಹಾಗೂ ರಾಜಿ ಸೂತ್ರಗಳು ಕೆಲಸ ಮಾಡಬಹುದು, ಆದರೆ ಪ್ರಕೃತಿಯೊಂದಿಗೆ ಇವುಗಳು ನಡೆಯುವುದಿಲ್ಲ. “ಪ್ರಕೃತಿಯನ್ನು ಸಮೀಪಿಸಲು ಇರುವ ಏಕೈಕ ಪರಿಣಾಮಕಾರಿ ಮಾರ್ಗವೆಂದರೆ, ಅಹಂಕಾರವನ್ನು ತೊರೆದು, ತಲೆಬಾಗಿ, ವಿನಯ, ಸ್ನೇಹ ಮತ್ತು ಪೂಜ್ಯಭಾವನೆಯಿಂದ ತುಂಬಿದ ಹೃದಯದೊಂದಿಗೆ ಆಕೆಯನ್ನು ಆರಾಧಿಸುವುದಾಗಿದೆ” ಎಂದರು. ಮಾನವರು ಈ ಭೂಮಿ, ಅದರ ನೈಸರ್ಗಿಕ ಸಂಪನ್ಮೂಲಗಳು ಮತ್ತು ಸಮೃದ್ಧಿಯನ್ನು ಸಹಜೀವಿಗಳು ಹಾಗೂ ಇತರ ಪ್ರಾಣಿ-ಪಕ್ಷಿಗಳೊಂದಿಗೆ ಸಾಮೂಹಿಕವಾಗಿ ಹಂಚಿಕೊಂಡು ಬದುಕಬೇಕು ಎಂಬ ಜಾಗೃತಿಯೇ ನಿಜವಾದ ಸಹಬಾಳ್ವೆಗೆ ಅಡಿಪಾಯವಾಗಿದೆ ಎಂದು ಅಮ್ಮ ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಮುಖ್ಯ…
ಮಂಗಳೂರು,ಮೇ.27 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 22ನೇ ಕದ್ರಿ ಪದವು ವಾರ್ಡಿನ ಕೊಪ್ಪಲಕಾಡು ಶಂಕರಭವನ ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಯು ರೂ. 25ಲಕ್ಷ ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗಕ್ಕೆ ಅತೀ ಅಗತ್ಯವಿರುವ ಚರಂಡಿ ನಿರ್ಮಾಣ ಕಾಮಗಾರಿಗೆ ಮಾಜಿ ಮೇಯರ್ ಹಾಗೂ ಸ್ಥಳೀಯ ನಿಕಟಪೂರ್ವ ಪಾಲಿಕೆ ಸದಸ್ಯರಾದ ಜಯಾನಂದ ಅಂಚನ್ ರವರು ವಿಶೇಷ ರೀತಿಯಲ್ಲಿ ಶ್ರಮ ವಹಿಸಿದ್ದಾರೆ. ಸ್ಥಳೀಯರು ಸಹ ಈ ಬಗ್ಗೆ ಅನೇಕ ಬಾರಿ ಮನವಿ ಮಾಡಿದ್ದು ಲೋಕೋಪಯೋಗಿ ಇಲಾಖೆಯಿಂದ ಅನುದಾನಗಳನ್ನು ಹೊಂದಿಸಿಕೊಂಡು ಕಾಮಗಾರಿಗೆ ಚಾಲನೆ ನೀಡುತ್ತಿರುವುದು ಸಂತಸ ತಂದಿದೆ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಪ್ರಭು, ಅಶೋಕ್, ಸೌಮ್ಯ ಧನರಾಜ್, ಗೋಪಾಲ ಶೆಟ್ಟಿ, ವಿನಯ್, ಪ್ರವೀಣ್ ನಿಡ್ಡೇಲ್, ಮಧುಸೂಧನ್ ಕುಲಾಲ್, ಸೇರಿದಂತೆ ಸ್ಥಳೀಯರು, ವಾರ್ಡಿನ ಬಿಜೆಪಿ ಕಾರ್ಯಕರ್ತರು, ಉಪಸ್ಥಿತರಿದ್ದರು.
ಮಂಗಳೂರು,ಮೇ.26 : ಮಾತಾ ಅಮೃತಾನಂದಮಯಿ ದೇವಿ ಅವರು ಸಪ್ತ ವರ್ಷಗಳ ಬಳಿಕ ಮಂಗಳೂರಿಗೆ ಆಗಮಿಸುತ್ತಿದ್ದು, ಮೇ 28 ಮತ್ತು 29ರಂದು ನಡೆಯಲಿರುವ ‘ಅಮೃತಸಂಗಮ 2026’ ಹಾಗೂ ಬ್ರಹ್ಮಸ್ಥಾನಂ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಅವರು ಬೋಳೂರಿನ ಮಠದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕೇರಳದ ಹೊರಗೆ ಕರ್ನಾಟಕದಲ್ಲಿ ಆಯ್ಕೆಯಾದ ಏಕೈಕ ಸ್ಥಳ ಮಂಗಳೂರು ಎಂಬುದು ವಿಶೇಷವಾಗಿದೆ. ಮಂಗಳೂರಿನ ಭಕ್ತರ ಮೇಲಿರುವ ಅಮ್ಮನವರ ಅಪಾರ ಮಮತೆಯ ಪ್ರತಿಫಲವೇ ಈ ಆಯ್ಕೆ ಎಂದು ಭಕ್ತರು ಅಭಿಪ್ರಾಯಪಡುತ್ತಿದ್ದಾರೆ ಎಂದರು. 25ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಹಲವು ಸಮಾಜಮುಖಿ ಹಾಗೂ ಮಾನವೀಯ ಸೇವಾ ಯೋಜನೆಗಳಿಗೆ ಚಾಲನೆ ನೀಡುವ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮಂಗಳೂರಿನ ಬೋಳೂರಿನ ಅಮೃತ ವಿದ್ಯಾಲಯಂ ಶಾಲಾ ಮೈದಾನದಲ್ಲಿ 2 ದಿನಗಳ ಕಾಲ ಬೆಳಗ್ಗಿನಿಂದ ರಾತ್ರಿ ತನಕ ವಿವಿಧ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.…
ಮಂಗಳೂರು,ಮೇ.25 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ಕೊಡಿಯಾಲ್ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿ ಲೋಕೋಪಯೋಗಿ ಇಲಾಖೆಯಿಂದ 30 ಲಕ್ಷ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ರಸ್ತೆ ಅಭಿವೃದ್ಧಿಯ ಅಗತ್ಯತೆ ಬಗ್ಗೆ ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ರವರು ನಿರಂತರವಾಗಿ ಪ್ರಯತ್ನಿಸಿದ್ದರು. ಇದೀಗ ಅನುದಾನಗಳನ್ನು ಹೊಂದಿಸಿಕೊಂಡು ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಸ್ಥಳೀಯರಿಗೆ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಮ.ನ.ಪಾ ಸದಸ್ಯ ಮನೋಹರ್ ಶೆಟ್ಟಿ ಕದ್ರಿ, ಬೂತ್ ಅಧ್ಯಕ್ಷರಾದ ಸದಾಶಿವ, ಪ್ರವೀಣ್ ಭಟ್, ಜೀವನ್, ಜಯರಾಜ್ ಶೆಟ್ಟಿ, ವಾಸುದೇವ, ದೇವರಾಣಿ, ಕದ್ರಿ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.












