Author: admin

ಮಂಗಳೂರು,ಆ. 08 : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಇದರ ರಾಜ್ಯ ಸಮಿತಿಯ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಹೋರಾಟಗಾರ ಎಂ. ದೇವದಾಸ್ ಅವರಿಗೆ ಗೌರವ ನುಡಿ ನಮನ ಕಾರ್ಯಕ್ರಮವನ್ನು ಆಗಸ್ಟ್ 10ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಉರ್ವಸ್ಟೋರ್ನ ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದು, ರಾಜ್ಯ ಸಂಚಾಲಕ ಎಂ. ಸೋಮಶೇಖರ್ (ಹಾಸನ) ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘಟನೆಯ ರಾಜ್ಯ ಹಾಗೂ ಜಿಲ್ಲಾ ಮುಖಂಡರು ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು ಮಾತನಾಡಿ, ಡಿಸಿ ಮನ್ನಾ ಭೂಮಿ ಹಂಚಿಕೆ ವಿಚಾರದಲ್ಲಿ ಎಂ. ದೇವದಾಸ್ ಅವರು ತೀವ್ರ ಹೋರಾಟ ನಡೆಸಿದ್ದು, ಅವರ ಹೋರಾಟವನ್ನು ಸಂಘಟನೆಯ ಮೂಲಕ ಮುಂದುವರಿಸಲಾಗುವುದು…

Read More

ಮಂಗಳೂರು, ಆ. 08 : ಕುಂದಾಪುರ ಮೂಲದವರು ವೃತ್ತಿ ನಿಮಿತ್ತ ಮಂಗಳೂರಿನಲ್ಲಿ ನೆಲೆಸಿದ್ದರೂ ತಮ್ಮ ಭಾಷೆ, ಸಂಸ್ಕೃತಿ, ಆಚರಣೆ ಹಾಗೂ ಸಂಪ್ರದಾಯವನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ಆಶ್ರಯದಲ್ಲಿ ‘ವಿಶ್ವ ಕುಂದಾಪ್ರ ದಿನಾಚರಣೆ’ ಹಾಗೂ ‘ಕುಂದಾಪ್ರ ಕನ್ನಡ ಹಬ್ಬ–2026’ ಅನ್ನು ಆಗಸ್ಟ್ 9ರಂದು ಮಂಗಳೂರಿನ ಉರ್ವಸ್ಟೋರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿಯ ಅಧ್ಯಕ್ಷೆ ಮಾಲತಿ ಎಸ್.ಶೆಟ್ಟಿ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 7.30ರಿಂದ ರಾತ್ರಿ 8.30ರವರೆಗೆ ವಿವಿಧ ಸಾಂಸ್ಕೃತಿಕ, ಕ್ರೀಡಾ ಹಾಗೂ ಆರೋಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12.30ರವರೆಗೆ ವಾಮಂಜೂರಿನ ಕಾಯ ಹೆಲ್ತ್ ಕೇರ್ ಡಯಾಗ್ನೋಸಿಸ್ ಆ್ಯಂಡ್ ಕ್ಲಿನಿಕ್ ವತಿಯಿಂದ ಉಚಿತ ರಕ್ತ ತಪಾಸಣಾ ಶಿಬಿರ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಎನ್‌ಎಸ್‌ಎಸ್ ಘಟಕದ ವತಿಯಿಂದ ವೈದ್ಯ ಡಾ.ಅವಿನ್ ಆಳ್ವ ಅವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ…

Read More

ಉಡುಪಿ, ಆ. 08 : ಮುದರಂಗಡಿಯ ಉದ್ಯಮಿ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಡೇವಿಡ್ ಡಿ’ಸೋಜಾ ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ ನಡೆದಿದೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವರದಿ ಪ್ರಕಾರ, ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಅವರ ಕಚೇರಿಯ ಬಳಿ ಆ. 07 ರಂದು ಮಧ್ಯಾಹ್ನ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಡೇವಿಡ್ ಡಿಸೋಜಾರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ.ಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರು  ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು,ಆ. 07  : ಅಸೋಸಿಯೇಷನ್ ಆಫ್ ಸದರ್ನ್ ಯುರಾಲಜಿಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ 37ನೇ ವಾರ್ಷಿಕ ಸಮ್ಮೇಳನ ‘SZUSICON 2026’ ಆಗಸ್ಟ್ 7ರಿಂದ 9ರವರೆಗೆ ಮಂಗಳೂರಿನ ಮೇರಿಹಿಲ್‌ನಲ್ಲಿರುವ ಪಾಲೇಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ.ಪ್ರಶಾಂತ್ ಮಾರ್ಲ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನವನ್ನು ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಮಂಗಳೂರು ಯುರಾಲಜಿ ಫೋರಂ ಜಂಟಿಯಾಗಿ ಆಯೋಜಿಸುತ್ತಿವೆ. ಯುರಾಲಜಿ (ಮೂತ್ರಶಾಸ್ತ್ರ) ಕ್ಷೇತ್ರದಲ್ಲಿ ಜ್ಞಾನ ವಿನಿಮಯ, ಸಂಶೋಧನೆ ಹಾಗೂ ಇತ್ತೀಚಿನ ವೈದ್ಯಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ಇದು ಪ್ರಮುಖ ಶೈಕ್ಷಣಿಕ ವೇದಿಕೆಯಾಗಲಿದೆ ಎಂದು ಹೇಳಿದರು. ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳಿಂದ ಹಿರಿಯ ಯುರಾಲಜಿಸ್ಟ್‌ಗಳು, ಯುರಾಲಜಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು, ವೈದ್ಯಕೀಯ ತಜ್ಞರು ಹಾಗೂ ಯುರಾಲಜಿಕಲ್ ಶಸ್ತ್ರಚಿಕಿತ್ಸಾ ಉಪಕರಣಗಳ ತಯಾರಕರು ಮತ್ತು ಪೂರೈಕೆದಾರರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ.ಬಿ.ಎಂ.ಝೀಶಾನ್ ಹಮೀದ್ ಅವರು ಮಾಹಿತಿ ನೀಡಿದರು. ಸಮ್ಮೇಳನದ ಸಂಘಟನಾ…

Read More

ಬೆಂಗಳೂರು, ಆ. 05 : 19 ಶಾಸಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟ ಸಚಿವರಾಗಿ ಆ. 03, ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರೋಣ ಕ್ಷೇತ್ರದ ಜಿ.ಎಸ್.ಪಾಟೀಲ್ ಅವರ ಹೆಸರನ್ನು ಘೋಷಿಸಲಾಗಿದೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರನ್ನು ಅಂತಿಮಗೊಳಿಸಲಾಗಿದೆ. ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಪ್ರಕಟಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,…

Read More

ಮಂಗಳೂರು,ಆ.04 : ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ತಯಾರಾದ ಸಂದೀಪ್ ಬೆದ್ರ ನಿರ್ದೇಶನದ ‘ಪಿಕ್ಚರ್‘ಚಲನಚಿತ್ರವು ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಿಡಿ, ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ನಾಯಕನಟರಾಗಿ ನಟಿಸಿದ್ದಾರೆ. ನಾಯಕಿ ನಟಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ ಎಂದು ಹೇಳಿದರು. ಚಿತ್ರದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಸಾಯಿಕೃಷ್ಣ ಭೋಜರಾಜ್ ವಾಮಂಜೂರ್, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್ ಮುಂತಾದವರು ನಟಿಸಿದ್ದಾರೆ ಎಂದರು. ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ‘ಪಿಕ್ಚರ್’ ಚಲನಚಿತ್ರ ನಿರ್ಮಾಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಶಿಲ್ಪಾ ಗಣೇಶ್ ಅವರೂ ಜಸ್ಕರಣ್ ಸಿಂಗ್ ಜೊತೆಗೂಡಿ ‘ಗೋಕುಲದ ರಾಧೆ’ ಎಂಬ ಹಾಡನ್ನು ಹಾಡಿದ್ದಾರೆ. ಚಿತ್ರದಲ್ಲಿ ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಛಾಯಾಚಿತ್ರಗ್ರಹಣ, ರಾಜು ಆರ್ಯನ್…

Read More

ಮಂಗಳೂರು,ಆ.03 : ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು, ತ್ಯಾಗ ಮತ್ತು ಸಮಾಜಮುಖಿ ಸೇವೆಯ ಕುರಿತಾದ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ಕೃತಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಇಂದು ಬ್ಯಾಂಕ್ ನ ಸಭಾಂಗಣದಲ್ಲಿ ಬಿಡುಗಡೆ ಗೊಳಿಸಿದರು. ಬಳಿಕ ಮಾತನಾಡಿದ ಡಾ.ರಾಜೇಂದ್ರ ಕುಮಾರ್ ಅವರು, ಬ್ಯಾಂಕಿನ ಪ್ರಧಾನ ಕಚೇರಿಯ ಸಿಬ್ಬಂದಿಯಾಗಿರುವ ಎಸ್. ಜಗದೀಶ್ಚಂದ್ರ ಅಂಚನ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ಮೊಳಹಳ್ಳಿ ಶಿವರಾವ್ ಅವರು ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿ, ಪುತ್ತೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಲೇ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜೀವನಗಾಥೆ ಇಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಲಿ ಎಂಬ ನಿಟ್ಟಿನಲ್ಲಿ ಈ ಕೃತಿಯನ್ನು ರಚಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ನಿರ್ದೇಶಕ ಶಶಿಕುಮಾರ್ ರೈ ಬಾಳ್ಯೊಟ್ಟು, ನಬಾರ್ಡ್ನ ಜಿಎಂ ಸಂಗೀತ, ಅಶೋಕ್ ಕುಮಾರ್ ಶೆಟ್ಟಿ, ರಮೇಶ್,…

Read More

ಲಿಮಾ, ಆ. 02 : ಪೆರುವಿನ ನಾಜ್ಕಾ ನಗರದ ಹೊರ ವಲಯದಲ್ಲಿ ಪ್ರವಾಸಿಗರಿದ್ದ ವಿಮಾನವೊಂದು ಪತನಗೊಂಡು 13 ಮಂದಿ ಸಾವನ್ನಪ್ಪಿದ ಘಟನೆ  ನಡೆದಿದೆ. ಪೆರುವಿನ ನಾಝ್ಕಾ ಲೈನ್ಸ್ ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸಣ್ಣ ವಿಮಾನ ಶನಿವಾರ ನಾಝ್ಕಾ ನಗರದ ಹೊರವಲಯದ ಪತನಗೊಂಡಿದೆ. ವಿಮಾನದಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ಲಿಮಾದಿಂದ ದಕ್ಷಿಣಕ್ಕೆ ಸುಮಾರು 240 ಕಿಲೋಮೀಟರ್ ದೂರದಲ್ಲಿರುವ ಪಿಸ್ಕೋ ವಿಮಾನ ನಿಲ್ದಾಣದಿಂದ ವಿಮಾನವು ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 11 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Read More

ಕಡಬ, ಆ.01 : ಮಳೆ ಮತ್ತು ಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ನಡೆದಿದೆ. ಮೃತರನ್ನು ಯಾದವ ಗೌಡ (66) ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೀಸಿದ ಮಳೆ ಮತ್ತು ಗಾಳಿಗೆ ಅಡಿಕೆಮರ ಮುರಿದು ಬಿದ್ದು ಯಾದವ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜು. 31 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸ ಲಾಗುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ -2026 ಉದ್ಯೋಗ ಮೇಳ ಆ. 7 ಮತ್ತು 8ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2026ರಲ್ಲಿ ಐಟಿ, ಐಟಿಐಎಸ್, ಆರೋಗ್ಯ ಮತ್ತು ಔಷಧ, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಉತ್ಪಾದನಾ ವಲಯ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಕ್ಷೇತ್ರಗಳ ಸೇರಿದಂತೆ 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. 2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ಎಲ್ಲ ವಿಭಾಗದವರು ಉದ್ಯೋಗ…

Read More