Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಸೆ. 28 : ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ 317 ಡಿ ವತಿಯಿಂದ ಲಯನ್ಸ್ ಸದಸ್ಯರು ಮತ್ತು ಆಯ್ದ ಹುಲಿ ವೇಷ ತಂಡಗಳಿಂದ ಸಿಂಹದ ಕಲೊಟು ಪಿಲಿ ಗೊಬ್ಬು 3ನೇ ಆವೃತ್ತಿ ಸೆ. 27, ಶನಿವಾರ ಕದ್ರಿ ಮೈದಾನದಲ್ಲಿ ನಡೆಯಿತು. ಹುಲಿ ವೇಷ ಕುಣಿತಗಳ ಮೆರವಣಿಗೆ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಿಂದ ಕದ್ರಿ ಬಯಲು ರಂಗಮಂಟಪಕ್ಕೆ ಆಗಮಿಸಿತು. ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲಾ 317 ಇದರ ಗವರ್ನರ್ ಅರವಿಂದ ಶೆಣೈ ಮತ್ತು ಮಮತಾ ಶೆಣೈ ದಂಪತಿ ಇತರ ಗಣ್ಯರೊಂದಿಗೆ ಸೇರಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ ಅವರು ಹುಲಿ ಕುಣಿತ ಆಯೋಜಿಸುವ ಮೂಲಕ ತುಳುನಾಡಿನ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು. ಸಭಾ ಕಾರ್ಯಕ್ರಮದಲ್ಲಿ ಹುಲಿವೇಷಕ್ಕೆ ಸಂಬಂಧಪಟ್ಟ ಒಂಭತ್ತು ಮಂದಿ ಆಯ್ದ ದಿಗ್ಗಜರನ್ನು ಕಾರ್ಯಕ್ರಮದಲ್ಲಿ ಸಮ್ಮಾನಿಸಯಿತು.ಅಂದು ಬೆಳಿಗ್ಗೆ ಬಿಜೈ ನೋಡು ಭಟ್ಟಗುಡ್ಡೆಯಲ್ಲಿರುವ ಶ್ರೀ ರಾಮಕೃಷ್ಣ ಭಜನಾ ಮಂದಿರದಲ್ಲಿ ಊದು ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ…
ಮಂಗಳೂರು, ಸೆ. 27 : ಬೆಂದೂರ್ ಚರ್ಚ್ ಸಭಾಂಗಣದಲ್ಲಿ ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಪ್ಟೆಂಬರ್ 21ರಂದು ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು. ಫ್ಲೋರಾ ಕ್ಯಾಸ್ಟೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ ಮತ್ತು ವಿಶ್ವ ದಾಖಲೆಗಾಗಿ ಅವರನ್ನು ಅಭಿನಂದಿಸಲಾಯಿತು. ಅವರ ಅಸಾಧಾರಣ ಸಾಧನೆಗಾಗಿ ಪ್ರತಿಷ್ಠಿತ ‘ಕಾಸ್ಕ್ ಮೊತಿಯಾಂ’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸಾನ್ಸಿಯಾ ಅವರ ಕೊಂಕಣಿ ಪರಂಪರೆಯ ನುಡಿನಮನ, ಪ್ರಜ್ವಲ್ ಮತ್ತು ಶವಿಲ್ ಅವರ ‘ಗುಮಟ್’ ವಾದನ, ಮೆಲ್ವಿಟಾ ಹಾಗೂ ತಂಡದಿಂದ ದೆಖ್ಣಿ ನಾಚ್, ರೋಮಿತ್ ಹಾಗೂ ತಂಡದಿಂದ ತೊಣಿಯೊ ನಾಚ್ ನಂತಹ ಜಾನಪದ ನೃತ್ಯಗಳು ಪ್ರದರ್ಶಿಸಲ್ಪಟ್ಟವು. ಫ್ರ್ಯಾಂಕ್ಲಿನ್ ಅವರ ‘ ಮಾಂಡೊ’ ಗಾಯನವು ಉತ್ಸವಕ್ಕೆ ಶಾಸ್ತ್ರೀಯ ಗೋವಾ ಸೊಬಗನ್ನು ನೀಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಪ್ರತಿಮಾ ಅವರನ್ನು ಗೌರವಿಸಲಾಯಿತು.…
ಮಂಗಳೂರು ,ಸೆ. 26 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನಡೆಯಲಿರುವ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ನಂತರ ಮಾತನಾಡಿದ ಅವರು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವು ಅಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ 10 ಹುಲಿವೇಷ ತಂಡಗಳು ಭಾಗವಹಿಸಲಿವೆ. ಪ್ರತಿ ತಂಡವೂ ವೈಭವದ ಮೆರವಣಿಗೆ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿವೆ ಎಂದರು. ಸ್ಪರ್ಧಾಕೂಟದಲ್ಲಿ 6 ತೀರ್ಪುಗಾರರು ಇರಲಿದ್ದು, ನಾಲ್ವರು…
ಮಂಗಳೂರು ,ಸೆ. 26 : ರಾಮಕ್ಷತ್ರಿಯ ಸೇವಾ ಸಂಘ ಮಂಗಳೂರು ವತಿಯಿಂದ ಸೆ. 28 ಆದಿತ್ಯವಾರ ಬೆಳಿಗ್ಗೆ 10ಕ್ಕೆ ನಗರದ ಮೋರ್ಗನ್ಸ್ಗೇಟ್ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ‘ಅಭಿನಂದನಾ ಸಮಾರಂಭ’ ಕಾರ್ಯಕ್ರಮ ನಡೆಯಲಿದೆ ಎಂದು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷರಾದ ಮುರಳಿ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಮಕ್ಷತ್ರಿಯ ಸೇವಾ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾದಾನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಈ ಬಾರಿ ನಮ್ಮ ಸಮುದಾಯ ಮತ್ತು ಇತರ ಸಮುದಾಯದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸುವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರವಿಭಾಗ ಮುಖ್ಯಸ್ಥ ರಾಮಕ್ಷತ್ರಿಯ ಸಮಾಜದ ಡಾ. ಎಚ್. ಪ್ರಭಾಕರ, ಜಿಲ್ಲಾ ವೆನ್ಹಾಲ್ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಭಾರತೀಯ ವೈದ್ಯಕೀಯ ಸಂಘದ ಡಾ.ಬಿ.ಸಿ.…
ಮಂಗಳೂರು, ಸೆ. 25:: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿದೆ, ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗ್ಲೇ ಜಿಎಸ್ ಟಿಯನ್ನು ಸರಳೀಕರಣ ಮಾಡುತ್ತಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು. ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆಯನ್ನು ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿ ಕೊಂಡಿದ್ದರೆ ಜಿಎಸ್ ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯ…
ಉರ್ವ, ಸೆ. 25: ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ 317 ಡಿ ವತಿಯಿಂದ ಲಯನ್ಸ್ ಸದಸ್ಯರು ಮತ್ತು ಆಯ್ದ ಹುಲಿ ವೇಷ ತಂಡಗಳಿಂದ ಸಿಂಹದ ಕಲೊಟು ಪಿಲಿ ಗೊಬ್ಬು 3ನೇ ಆವೃತ್ತಿ ಸೆ. 27, ಶನಿವಾರ ಸಂಜೆ 5 ಗಂಟೆಯಿಂದ ಕದ್ರಿ ಮೈದಾನದಲ್ಲಿ ನಡೆಯಲಿದೆ ಎಂದು ಲಯನ್ಸ್ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಸುದರ್ಶನ್ ಪಡಿಯಾರ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4 ಗಂಟೆಗೆ ನಗರದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಿಂದ ಕದ್ರಿ ಬಯಲು ರಂಗಮಂಟಪಕ್ಕೆ ಹುಲಿ ವೇಷ ಕುಣಿತಗಳ ಭವ್ಯ ಮೆರವಣಿಗೆ ಬರಲಿದೆ. ಸಂಜೆ 5 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದೆ.ನವರಾತ್ರಿಯ ಸಮಯ ಆಗಿರುವುದರಿಂದ ಹುಲಿವೇಷಕ್ಕೆ ಸಂಬಂಧಪಟ್ಟ ಒಂಭತ್ತು ಮಂದಿ ಆಯ್ದ ದಿಗ್ಗಜರನ್ನು ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಗುವುದು ಎಂದರು. ಲಯನ್ಸ್ ಜಿಲ್ಲಾ 317 ಇದರ ಗವರ್ನರ್ ಅರವಿಂದ ಶೆಣೈ ಮತ್ತು ಮಮತಾ ಶೆಣೈ ದಂಪತಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಆಳ್ವಾಸ್ ಪ್ರತಿಷ್ಠಾನದ ಮುಖ್ಯಸ್ಥ…
ಮಂಗಳೂರು : ಕೇಂದ್ರ ಸರಕಾರವು ಜಿಎಸ್ಟಿ ದರ ಇಳಿಕೆಯಿಂದ ದೇಶದ ಆರ್ಥಿಕ ಶಕ್ತಿ ವೃದ್ಧಿ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
ಮಂಗಳೂರು, ಸೆ. 25 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಜಿಎಸ್ಟಿ ದರ ಇಳಿಕೆ ಮಾಡಿರುವುದ ರಿಂದ ದೇಶದ ಆರ್ಥಿಕ ಶಕ್ತಿ ವೃದ್ಧಿಸಲಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನವರಾತ್ರಿ ಸಂಭ್ರಮದ ವೇಳೆ ಜಿಎಸ್ಟಿ ಇಳಿಕೆಯ ಮೂಲಕ ಉಳಿತಾಯದ ಉತ್ಸವ ಸಾಕಾರವಾಗುತ್ತಿದೆ. ಜಿಎಸ್ಟಿ ಇಳಿಕೆಯ ಹಿನ್ನೆಲೆಯಲ್ಲಿ ಅ.20ರವರೆಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ಅಭಿಯಾನ ಹಾಗೂ ನಾಗರಿಕರ ಜತೆ ಸಂವಾದ ನಡೆಸಲಾಗುವುದು ಎಂದರು. ಜಿಎಸ್ಟಿ ದರ ಇಳಿಕೆಯಿಂದ ವ್ಯಾಪಾರಿಗಳು, ಉದ್ದಿಮೆದಾರರು, ಗ್ರಾಹಕರಿಗೆ ಅನುಕೂಲವಾಗಲಿದೆ. ಬಿಜೆಪಿ ಆರ್ಥಿಕ ಪ್ರಕೋಷ್ಠದ ಜತೆಗೂಡಿ ಅಂಗಡಿ, ಮಾರುಕಟ್ಟೆಗಳಿಗೆ ತೆರಳಿ ಜನರ ಜತೆ ಸಂವಾದ, ಜಾಗೃತಿ ನಡೆಸಲಾಗುವುದು. ಜಿಎಸ್ಟಿ ಇಳಿಕೆಯ ಪರಿಣಾಮ ಆಹಾರ, ಬಟ್ಟೆ, ವಸತಿ ಕಡಿಮೆ ಬೆಲೆಯಲ್ಲಿ ದೊರೆಯಲಿದೆ. ವಾಹನಗಳ ಬೆಲೆ ಈಗಾಗಲೇ ಇಳಿಕೆಯಾಗಿದೆ. ಹನಿ ನೀರಾವರಿ, ಕೃಷಿ ಯಂತ್ರೋಪಕರಣಗಳ ಬೆಲೆ ಇಳಿಕೆಯಿಂದ ರೈತರಿಗೆ ಅನುಕೂಲವಾಗಲಿದೆ…
ಬೆಂಗಳೂರು, ಸೆ. 24 : ಪದ್ಮಭೂಷಣ, ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ಅವರು ಹೃದಯಾಘಾತದಿಂದ ಸೆ. 24, ಬುಧವಾರ ರಾಗಿದ್ದಾರೆ. ಸಾಹಿತಿ ಎಸ್ಎಲ್ ಭೈರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಲ್. ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟೋತ್ಸಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ರಾಷ್ಟೋತ್ಯಾನ ಆಸ್ಪತ್ರೆ ಕೂಡ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಹಲವಾರು ಕಾದಂಬರಿಗಳು ಮರುಮುದ್ರಣಗಳನ್ನು ಕಂಡಿವೆ. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರು ,ಸೆ. 23 : ಅಸ್ತ್ರ ಬ್ಯಾನರ್ ಅಡಿಯಲ್ಲಿ ಲಾಂಚುಲಾಲ್ ಕೆ.ಎಸ್ ನಿರ್ಮಾಣದಲ್ಲಿ ಮೂಡಿಬಂದ ಮೀರಾ ತುಳು ಸಿನಿಮಾ ಇದೀಗ ಟಾಕೀಸ್ OTT ಆಪ್ ನಲ್ಲಿ ಇದೇ ತಾರೀಖು 26 ನೇ, ಶುಕ್ರವಾರ ಬಿಡುಗಡೆಯಾಗುತ್ತಿದೆ ಎಂದು ಯತೀಶ್ ಪೂಜಾರಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮೀರಾ ಸ್ತಿ ಪ್ರಧಾನವಾದ ತುಳುವಿನ ಸಿನಿಮಾವಾಗಿದೆ. ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡ ಮೀರಾ ಸಿನಿಮಾ ಇದೀಗ ಟಾಕೀಸ್ OTT ಆಪ್ ನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ನಾಯಕಿಯಾಗಿ ಇಶಿತಾ ಶೆಟ್ಟಿ,ಅರವಿಂದ್ ಬೋಳಾರ್, ಜೆ.ಪಿ ತೂಮಿನಾಡು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ಮಂಜು ರೈ ಮುಲೂರು, ರೂಪಾಶ್ರೀ ವರ್ಕಾಡಿ, ಯತೀಶ್ ಪೂಜಾರಿ, ಬೇಬಿ ಲಕ್ಷ್ಯ ಅಭಿನಯಿಸಿದ್ದಾರೆ. ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಅಶ್ವಥ್, ಛಾಯಾಗ್ರಹಣ ಅಜಯ್ ಕೆ.ಎಸ್, ಸಂಗೀತ ರಾಜು ಜಯಪುಕಾಶ್ , ಸಂಕಲನ ಜಾಬಿನ್ಸ್ ಸೆಬಾಸ್ನಿಯನ್ ಮಾಡಿದ್ದಾರೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಲಾಂಚುಲಾಲ್ ಕೆ.ಎಸ್, ನಿರ್ದೇಶಕ ಅಶ್ವಥ್, ಕಲಾವಿದ ಮಂಜು ರೈ ಮುಲೂರು,…
ಮಂಗಳೂರು, ಸೆ. 23 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ಅಂಗವಾಗಿ ನವರಾತ್ರಿ ಮಹೋತ್ಸವಕ್ಕೆ ರಾಮಕೃಷ್ಣ ಮಿಷನ್, ಮಂಗಳೂರು ಇದರ ಅಧ್ಯಕ್ಷರಾದ ಜಿತಕಾಮಾನಂದಜಿ ಮಹಾರಾಜ್ ಮತ್ತು ಬ್ರಹ್ಮಕುಮಾರಿ, ಮಂಗಳೂರು ಇದರ ಮುಖ್ಯಸ್ಥೆ ಬ್ರಹ್ಮಕುಮಾರಿ ವಿಶ್ವೇಶ್ವರಿ ಜಿ ಅವರು ಮಾಜಿ ಕೇಂದ್ರ ಸಚಿವ ಮತ್ತು ದೇವಸ್ಥಾನದ ಅಭಿವೃದ್ಧಿ ಪೋಷಕ ಬಿ. ಜನಾರ್ದನ ಪೂಜಾರಿ ಅವರ ಸಮ್ಮುಖದಲ್ಲಿ ಮಂಗಳೂರು ದಸರಾದ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬೆಳಗ್ಗೆ ಗುರು ಪ್ರಾರ್ಥನೆಯೊಂದಿಗೆ ಒಂಬತ್ತು ದಿನಗಳ ಕಾಲ ಆರಾಧನೆಗೊಳ್ಳ ಲಿರುವ ನವದುರ್ಗೆಯರು, ಮಹಾಗಣಪತಿ, ಆದಿಶಕ್ತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾತನಾಡುತ್ತಾ ಕ್ಷೇತ್ರದಲ್ಲಿ ಪ್ರತಿಷ್ಠಾಪನೆ ಗೊಂಡ ಗಣಪತಿ, ಶಾರದಾ ಮಾತೆ, ಆದಿಶಕ್ತಿ ಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ದಿದಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ, ಮಹಾಗೌರಿ ದೇವಿಯರನ್ನು ದರ್ಶನಕ್ಕಾಗಿ ದೇಶ ವಿದೇಶದ ಭಕ್ತರು ಮಂಗಳೂರಿಗೆ ಆಗಮಿಸುತ್ತಿದ್ದಾರೆ.…












