Author: admin

ಮಂಗಳೂರು, ನ.09: ಮೆಸ್ಕಾಂ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ಕಚೇರಿಯು ನಗರದ ಬಿಜೈಯ ಮೆಸ್ಕಾಂ ಕಾರ್ಪೊರೇಟ್ ಕಚೇರಿ ಮೆಸ್ಕಾಂ ಭವನದಲ್ಲಿ ನ.07,ಶುಕ್ರವಾರ ಉದ್ಘಾಟನೆಗೊಂಡಿತು. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ ಕುಮಾರ್ ಆರ್. ಅವರು ನೂತನ ಕಚೇರಿಯನ್ನು ಉದ್ಘಾಟಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜಯರಾಜ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಮಾಜಿ ಶಾಸಕ ಜೆ.ಅರ್. ಲೋಬೋ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ರಾಜ್ಯ ಪರಿಸರ ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೊ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರ ದೇವರಾಜ್, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್, ನಮಿತಾ ಹರೀಶ್ ಕುಮಾರ್, ಅಪೇಕ್ಷಾ ಸುಶೀತ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.…

Read More

ಬಂಟ್ವಾಳ, ನ. 08 : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಕನಕ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಬೂಡ ಅಧ್ಯಕ್ಷರಾದ ಬೇಬಿ ಕುಂದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಾವುದೇ ಜಯಂತಿ, ಆಚರಣೆಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯದೆ ಯುವ ಸಮುದಾಯಕ್ಕೆ ದಾರ್ಶನಿಕ ಪುರುಷರ ಜೀವನ ಚರಿತ್ರೆಯ ದರ್ಶನವಾಗುವ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಕಾರ್ಯಕ್ರಮಗಳು ನಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ vಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಉಪ ತಹಶಿಲ್ದಾರ್ ನವೀನ್ ಬೆಂಜನಪದವು ಕನಕ ಜಯಂತಿ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.

Read More

ಮಂಗಳೂರು, ನ. 07 : ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್  ಸೊಸೈಟಿ ಲಿ.ನ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವ ಸಮಾರೋಪ ಸಮಾರಂಭ ನ.9ರಂದು ನಗರದ ಕೊಟ್ಟಾರ ಚೌಕಿ ಆಡಳಿತ ಕಚೇರಿ ಬಳಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಕಟಪಾಡಿ ಪಡುಕುತ್ಯಾರು ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ ಶ್ರೀ ವಿಶ್ವಕರ್ಮ ಪೀಠದ ಜಗದ್ಗುರು ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ದೀಪ ಪ್ರಜ್ವಲನೆ ನಡೆಸಿ, ಆಶೀರ್ವಚನ ನೀಡುವರು ಎಂದರು. ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್ಪಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ  ರಾಜೇಂದ್ರ ಕುಮಾರ್ ಅವರು  ಉದ್ಘಾಟಿಸ ಲಿರುವರು.ನವೀಕೃತ ಆಡಳಿತ ಕಚೇರಿಯನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಶಿಲ್ಪಿ ಡಾ. ಅರುಣ್ ಯೋಗಿರಾಜ್ ಅವರು…

Read More

ಬೆಂಗಳೂರು, ನ. 06 : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದುಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕರಾವಳಿ ಮೂಲದ ಹರೀಶ್ ರಾಯ್ ಅವರು ಕನ್ನಡ ಚಿತ್ರರಂಗದಲ್ಲಿ ಖಳನಟರಾಗಿ ಹೊರಹೊಮ್ಮಿದ್ದರು. ‘ಓಂ’, ‘ಜೋಡಿ ಹಕ್ಕಿ’, ‘ತಾಯವ್ವ’, ‘ನಲ್ಲ’, ‘ಜಾಫರ್ ಅಲಿಯಾಸ್ ಮುರ್ಗಿ ಜಾಫರ್’, ‘ಭೂಗತ’, ‘ರಾಜ್ ಬಹದ್ದೂರ್’, ‘ಸಂಜು ವೆಡ್ಸ್ ಗೀತಾ’, ‘ಕೆಜಿಎಫ್ ಚಾಪ್ಟರ್ 1 ಮತ್ತು 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿನಯಿಸಿದ್ದರು. ಹರೀಶ್ ರಾಯ್ ಅವರು ತಮಿಳು ಚಿತ್ರರಂಗದಲ್ಲಿಯೂ ಅಭಿನಯಿಸಿದ್ದರು. ಕೆಲವು ವರ್ಷಗಳ ಹಿಂದೆ ಒಂದು ಪ್ರಕರಣದ ಹಿನ್ನೆಲೆ ಜೈಲು ಪಾಲಾಗಿದ್ದ ಸಂದರ್ಭದಲ್ಲೂ, ತಮ್ಮ ಜೀವನದ ಕಷ್ಟದ ದಿನಗಳನ್ನು ಅವರು ಸ್ವತಃ ಸ್ಮರಿಸಿಕೊಂಡು ಭಾವುಕರಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Read More

ಬಂಟ್ವಾಳ,ನ. 05 : ವೀರಕಂಭ ಗ್ರಾಮ ಪಂಚಾಯತ್ ನ 2025 – 26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಅಧ್ಯಕ್ಷೆ ಲಲಿತ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಜರಗಿತು. ಗ್ರಾಮ ಸಭೆ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ಭಾಗವಹಿಸಿದ್ದರು. ಇಲಾಖೆವಾರು ಮುಖ್ಯಸ್ಥರುಗಳಾದ ಅರೋಗ್ಯ ಇಲಾಖೆ, ಕೃಷಿ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ,, ಶಿಶು ಅಭಿವೃದ್ಧಿ ಇಲಾಖೆ,ಕಂದಾಯ ಇಲಾಖೆಯವರು ತಮ್ಮ ತಮ್ಮ ಇಲಾಖೆಯ ಇಲಾಖಾ ಮಾಹಿತಿ ನೀಡಿದರು. ಈ ವೇಳೆ ಗ್ರಾಮಸ್ಥರಿಂದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ದಿನೇಶ್ ಪೂಜಾರಿ,, ನಿಶಾಂತ್ ರೈ, ಸಂದೀಪ್ ಪೂಜಾರಿ, ಜಯಪ್ರಸಾದ್, ಮೀನಾಕ್ಷಿ, ಅಬ್ದುಲ್ ರೆಹಿಮಾನ್,,ಜಯಂತಿ, ಉಮಾವತಿ, ಶೀಲಾ ನಿರ್ಮಲ ವೇಗಸ್ ಮೊದಲಾದವರು ಉಪಸ್ಥಿತರಿದ್ದರು. ವೀರಕಂಭ ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಗ್ರಾಮ ಪಂಚಾಯತ್…

Read More

ಕುಂದಾಪುರ, ನ. 04 : ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿ ಓರ್ವ ಮಾಲಾಧಾರಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಇನ್ನೋರ್ವ ಮಾಲಾಧಾರಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಮಾಲಾಧಾರಿಯಾಗಿದ್ದ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ. ನವಂಬರ್ 2 ರಂದು ಮುಂಜಾನೆ 5.30ರ ಹೊತ್ತಿಗೆ ಸುಮಾರು 15 ಜನ ಅಯ್ಯಪ್ಪ ಮಾಲಾಧಾರಿಗಳು ಕೋಟೇಶ್ವರ ಮಾರ್ಗವಾಗಿ ಮಂದಾರ್ತಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾಗ ಕಣ್ಣುಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನವು ಸುರೇಂದ್ರ ಅವರಿಗೆ  ಢಿಕ್ಕಿಯಾಗಿ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ರು ಗಾಯಗೊಂಡಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ನ. 03 : ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜು, ಶೈನ್ಎ ಫೌಂಡೇಶನ್ ಸಹಯೋಗದಲ್ಲಿ ನ.6 ರಿಂದ 8 ರವರೆಗೆ ‘ಸಿನರ್ಜಿಯಾ 2025’ ಎಂಬ ರಾಷ್ಟ್ರೀಯ ಸೃಜನಾತ್ಮಕ ನವೋದ್ಯಮ ಮೇಳವನ್ನು ಹಮ್ಮಿಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಎಸ್. ಇಂಜಗನೇರಿ   ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ನ.6ರಂದು ಕಾರ್ಯಕ್ರಮದ ಉದ್ಘಾಟನೆಯನ್ನು ಡೆನ್ಮಾರ್ಕ್ನ ಇಜಿಡಿಕೆ ಸಂಸ್ಥೆಯ ಅಲನ್ ಬೆಕ್ ನೆರವೇರಿಸುವರು. ಎಚ್‌ಆರ್ ಮುಖ್ಯಸ್ಥೆ ಟಿನಾ ಬೊಡಿನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನ.8ರಂದು ಬೆಳಗ್ಗೆ 8 ಗಂಟೆಗೆ ಸಿನೆರ್ಜಿಯಾದ ಪ್ರಮುಖ ಕಾರ್ಯಕ್ರಮವಾದ ಏರ್‌ಶೋ ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭದಲ್ಲಿ ಅತ್ಯುತ್ತಮ ವಿಜ್ಞಾನ ಮಾದರಿಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯ ನಡೆಯಲಿದೆ ಎಂದು ಅವರು ವಿವರಿಸಿದರು. ಸಿನರ್ಜಿಯಾ 2025ರ ಕಾರ್ಯಕ್ರಮದಲ್ಲಿ 12ನೆ ವರ್ಷದ ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ ನಡಿ ಪ್ರೌಢಶಾಲಾ ಮತ್ತು ಪಿಯು ವಿದ್ಯಾರ್ಥಿಗಳಿಗೆ ನವೀನ ಆಲೋಚನೆಗಳ ಮಾದರಿಗಳ ಪ್ರದರ್ಶನಕ್ಕೆ ಅವಕಾಶವಿದೆ. ಆಯ್ಕೆಯಾದ ತಂಡಗಳಿಗೆ 2 ಲಕ್ಷ ರೂ.…

Read More

ಮೆಕ್ಸಿಕೋ, ನ. 02 : ಇಲ್ಲಿನ ಸೊನಾರಾ ರಾಜ್ಯದಲ್ಲಿರುವ ಒಂದು ಸೂಪರ್ ಮಾರ್ಕೆಟ್ ನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಕನಿಷ್ಠ 23 ಮಂದಿ ಸಾವನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಸೂಪರ್ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಸಮಯದಲ್ಲಿ ಮಾರ್ಕೆಟ್ ಒಳಗೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದರು. ಮಾರ್ಕೆಟ್ ಹೊರಗೆ ನಿಲ್ಲಿಸಿದ್ದ ಹಲವು ಕಾರುಗಳಿಗೂ ಬೆಂಕಿ ತಗುಲಿ ಅವು ಸಂಪೂರ್ಣ ಸುಟ್ಟು ಹೊಗಿವೆ ಎಂಬುದಾಗಿ ಪ್ರತ್ಯಕ್ಷ ಸಾಕ್ಷಿಗಳು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಶ್ರಮದ ನಂತರ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಸ್ಥಳೀಯ ಆಡಳಿತ ತನಿಖೆಯನ್ನು ಆರಂಭಿಸಿವೆ ಎಂದು ವರದಿಯಾಗಿದೆ.

Read More

ಮಂಗಳೂರು, ನ. 01 : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ 70ನೇ ಕನ್ನಡ ರಾಜ್ಯೋತ್ಸವ ವನ್ನು ನವೆಂಬರ್ 1, ಶನಿವಾರ ಆಚರಿಸಲಾಯಿತು. ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿ ದರು. ಬಳಿಕ ಮಾತನಾಡಿದ ಅವರು, ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರಾಗಲಿ, ಕರ್ನಾಟಕದಲ್ಲಿ ಇರುವವರೆಲ್ಲರೂ ಕನ್ನಡಿಗರೇ ಆಗಿರುತ್ತಾರೆ.ಕನ್ನಡಿಗರಿಗೆ ಕನ್ನಡ ಭಾಷೆ ಮೇಲೆ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು ಎಂದು ಹೇಳಿದರು. ನಗರ ವ್ಯಾಪ್ತಿಯಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಲಪಾಡಿಯಿಂದ ಸುರತ್ಕಲ್ ವರೆಗೆ ರಿಂಗ್ ರೋಡ್ ನಿರ್ಮಿಸಲು ಸರಕಾರ ಯೋಜನೆ ರೂಪಿಸಲಿದೆ ಎಂದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ವಿವಿಧ ಸಂಘ ಸಂಸ್ಥೆಗಳು ಸೇರಿ 95 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ದ.…

Read More

ಮಂಗಳೂರು,ಅ31 : ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಜಿಲ್ಲಾ ಖಜಾಂಚಿ ಬಾಲಕೃಷ್ಣ ಹೆಗ್ಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ, ಡೈರೆಕ್ಟರಿ ಸಂಪಾದಕಿ ಗೀತಾ ಕಲ್ಯಾಣಪುರ, ನ್ಯಾನ್ಸಿ ಮಸ್ಕರೆನಸ್, ದಯಾವತಿ ಮೆಂಡೋನ್, ಲಿಡಿಯಾ ಡಿ’ಕೋಸ್ಟಾ, ಹೇಮಾ ರಾವ್, ಸೀಮಾ ಮಯ್ಯಾ ಮತ್ತು ಮೊಹಿದಿನ್ ಕುಂಞಿ ಉಪಸ್ಥಿತರಿದ್ದರು.

Read More