Author: admin

ಉಳ್ಳಾಲ, ಆ.18 : ಉಳ್ಳಾಲ ದರ್ಗಾ ವಠಾರದಲ್ಲಿರುವ ಮದನಿ ಸಭಾಂಗಣದಲ್ಲಿ ಉಳ್ಳಾಲ ದರ್ಗಾ ನೂತನ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಪ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಕಾಂದಪುರಂ ಅವರು ಶನಿವಾರ ಅಧಿಕಾರ  ಸ್ವೀಕರಿಸಿದರು. ಹಾಗೆನೇ ಅವರು ಉಳ್ಳಾಲ ಜುಮಾ ಮಸ್ಜಿದ್ ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ವತಿಯಿಂದ ಉಳ್ಳಾಲ ದರ್ಗಾ ವಠಾರದಲ್ಲಿ ನಡೆದ ಸಯ್ಯಿದ್ ಮದನಿ ಶರೀಅತ್ ಕಾಲೇಜು ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ನೂತನ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಪ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಕಾಂದಪುರಂ ಅವರು, ಗುರುಗಳ,ಹಿರಿಯರ ಆಶೀರ್ವಾದದಿಂದ ಧಾರ್ಮಿಕ ಶಿಕ್ಷಣ ಪಡೆದ ಬಳಿಕ ಧಾರ್ಮಿಕ ಶಿಕ್ಷಣ ನೀಡುವತ್ತ ಹೆಜ್ಜೆ ಇಟ್ಟೆ. ಅದರಿಂದ ಇಲ್ಲಿಯವರೆಗೆ ತಲುಪಿದೆ, ಮಡವೂರು ಶೈಖ್ ರವರ ಸೂಚನೆ ಮೇರೆಗೆ ಮರ್ಕಝ್ ಕಾಲೇಜು ಸ್ಥಾಪನೆ ಮಾಡಲಾಯಿತು. ಈ ಕಾಲೇಜು ಸ್ಥಾಪನೆ ಮಾಡುವ ಮೂಲಕ ಜವಾಬ್ದಾರಿಯುತವಾದ ಸ್ಥಾನ ವಹಿಸಿಕೊಂಡಿದ್ದೇನೆ ಎಂದು ಅವರು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಉಳ್ಳಾಲ ಜುಮಾ ಮಸ್ಜಿದ್  ಸಮುದಾಯಕ್ಕೆ…

Read More

ಮಂಗಳೂರು,ಆ.17 : ನಗರದ ಫಾದರ್ ಮುಲ್ಲರ್  ಕನ್ನೆನ್ಶ್ ನ್ ಸೆಂಟರ್ನಲ್ಲಿ ಇಂದಿರಾ ಆಸ್ಪತ್ರೆಯ 25ನೇ ವಾರ್ಷಿಕೋತ್ಸವ ಸಮಾರಂಭ ಜರುಗಿತು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ  ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಇದೆ. ಆದರೆ ಜನರ ಆವಶ್ಯಕತೆಗಳನ್ನು ಪೂರೈಸಲು ಜತೆಯಾಗಿ ಖಾಸಗಿ ಆಸ್ಪತ್ರೆಗಳ ಕೊಡುಗೆಯೂ ಮುಖ್ಯವಾಗಿದೆ. ಆಸ್ಪತ್ರೆಯಲ್ಲಿ ವಿಜ್ಞಾನ, ಸಹಾನುಭೂತಿಯ ಸೇವೆ ಎರಡೂ ಸಮರ್ಪಕವಾಗಿ ಇರಬೇಕು. ಆಸ್ಪತ್ರೆಯ ವೈದ್ಯರು, ಇತರ ಸಿಬ್ಬಂದಿಗಳು ಉತ್ತಮ ಸೇವೆ ನೀಡಿದ್ದಲ್ಲಿ ಆ ಆಸ್ಪತ್ರೆ, ವೈದ್ಯರು, ಇತರ ಸಿಬ್ಬಂದಿಯನ್ನು ಜನ ಮರೆಯೋದಿಲ್ಲ.ಅದ್ದರಿಂದ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳು ಉತ್ತಮ ಸೇವೆ ನೀಡಬೇಕು. 25 ವಷ೯ಳಿಂದ ವೈದ್ಯಕೀಯ ಸೇವೆಯನ್ನು ನೀಡುತ್ತಾ ಬಂದಿರುವ ಇಂದಿರಾ ಆಸ್ಪತ್ರೆಯ ಸೇವಾ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು. ಮುಖ್ಯ ಅತಿಥಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಅವರು ಮಾತನಾಡಿ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ಜನರ ವಿಶ್ವಾಸ ಗಳಿಸಿರುವ ಇಂದಿರಾ ಆಸ್ಪತ್ರೆಯು ತನ್ನ…

Read More

ಮಹಾನಗರ,ಅ, 17: ನಗರದ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.10,ಶನಿವಾರ ನಡೆಯಿತು.ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಸ್ವೀಕರಿಸಿ ಮಾತನಾಡಿದ ನಿವೃತ್ತ ಮೇಜರ್ ಜನರಲ್ ಸತೀಶ್ ಭಂಡಾರಿ ಅವರು, ಸೇನಾ ಸಾಧನಗಳ ತಯಾರಿಯ ಸಂಶೋ ಧನೆ ಮತ್ತು ಅಭಿವೃದ್ಧಿಯ 40ರಷ್ಟು ಹಾಗೂ ಉತ್ಪಾದಿಸುವ ಸುಮಾರು 30 ಕಂಪೆನಿಗಳು ನಮ್ಮಲ್ಲಿವೆ, ಹಾಗಾಗಿ ದೇಶ ಶೇ.75ರಷ್ಟು ಸ್ವಾವಲಂಬಿಯಾಗಿದೆ ಎಂದರು. ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತ ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿ ಅವರನ್ನು ಪ್ರತಿಷ್ಠಾನದ ವತಿ ಯಿಂದ ಸ ನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಶೆಟ್ಟಿ ಅವರು, ನಾನು ಅದೃಷ್ಟವಂತ ಎಂದು ಕೆಲವರು ಹೇಳುತ್ತಾರೆ. ನನ್ನ ಅದೃಷ್ಟದಿಂದ ನನ್ನ ಉದ್ಯಮ ಎತ್ತರಕ್ಕೆ ಬೆಳೆದಿದೆ . ಅಲ್ಲದೆ ಬಂಟ ಸಮಾಜದ ಹಿರಿಯರ ಸಾಧನೆಯಿಂದ ನಾನು…

Read More

ಮಂಗಳೂರು,ಜು.16: ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಇಎನ್ಟಿ, ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ -ಇಂಡಿಯನ್ ಅಕಾಡೆಮಿ ಆಫ್ ಓಟೋರಿಗೋಲಾರಿಂಗೋಲಜಿ, ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸೆಯ 10ನೇ ರಾಷ್ಟ್ರೀಯ ಸಮ್ಮೇಳನ ಡಾ| ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್ನಲ್ಲಿ ಆ..8,ಗುರುವಾರ ನಡೆಯಿತು. ಐಎಒಎಚ್ ಎನ್ಎಸ್ 2024 ಮಂಗಳೂರು ಸಮ್ಮೇಳನವನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್  ಎಜುಕೇಶನ್ನ ಸಹ ಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್ ಅವರು ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ವೈದ್ಯರು, ರೋಗಿಗಳಿಗೆ ಚಿಕಿತ್ಸೆನೀಡುವವಿಧಾನದಲ್ಲೂ ಅಧುನಿಕ ಆವಿಷ್ಕಾರಗಳನ್ನು ಅರಿತುಕೊಳ್ಳಬೇಕು. ಆ ನಿಟ್ಟಿನಲ್ಲಿ ಕೆಎಂಸಿ ವೈದ್ಯ ಕೀಯ ಕಾಲೇಜು ನಿರಂತರವಾಗಿ ವಿವಿಧ ವಿಭಾಗ, ವಿಚಾರಗಳಿಗೆ ಸಂಬಂಧಿಸಿದ ಸಮ್ಮೇಳನ, ಸಿಎಂಇ ಗಳನ್ನು ಆಯೋಜಿಸಿ ತಜ್ಞರನ್ನು ಕರೆಸಿ ಅವರಿಂದ ಉಪನ್ಯಾಸಗಳನ್ನು ನೀಡುತ್ತಿದೆ ಎಂದರು. ಡಾ| ಮೋಹನ್ ಕಾಮೇಶ್ವರಂ ಮಾತನಾಡಿ, ಅಕಾಡೆಮಿ ಹುಟ್ಟು ಹಾಕಿದ ಉದ್ದೇಶಗಳಿಗೆ ಅನುಸಾರವಾಗಿ 10 ವರ್ಷ ಗಳಿಂದ ಕೆಲಸ ಮಾಡುತ್ತಿದ್ದು, ಯಶಸ್ವಿಯಾಗಿ ಕೆಲಸ ಮಾಡುತ್ತಿದೆ. ಓಟೋ ರಿನೋಲಾರಿಂಗೋಲಜಿ ಕ್ಷೇತ್ರಕ್ಕೆ ಬರುವ…

Read More

ಮಂಗಳೂರು , ಆ.16: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ , ತುಳುಭವನದಲ್ಲಿ ‘ಆಟಿದ ಗೇನ’ ಕಾರ್ಯಕ್ರಮ ಆ.4,ಭಾನುವಾರ ನಡೆಯಿತು. ಆಟಿದ ಗೇನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆ ಸಹಾ ಯಕ ನಿರ್ದೇಶಕ ಬಿ.ಎ ಖಾದರ ಅವರು ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಇಂದಿನ ಆಧುನಿಕತೆಯ ನಡುವೆಯೂ ತುಳು ನಾಡಿನ ಹಲವಾರು ಸಂಸ್ಕೃತಿಗಳು ಇನ್ನೂಉಳಿದುಕೊಂಡಿದೆ. ಇಂದಿನ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯ ಮಾಡಿಕೊಡಬೇಕಾದ ಅವಶ್ಯಕತೆಯಿದೆ ಎಂದರು. ತುಳು ಸಾಹಿತಿ, ಡಾ|| ಇಂದಿರಾ ಹೆಗ್ಗಡೆ ಅವರು ಮಾತನಾಡಿ, ಆಟಿ ಅಂದರೆ ಅನಿಷ್ಟದ ತಿರುಳು ಎಂದು ಪರಿಗಣಿತ. ಧಾರ್ಮಿಕ ಇತರೇ ಶುಭ ಸಮಾರಂಭಗಳು ನಡೆಯುವುದು ಕಡಿಮೆ. ಈ ವೇಳೆ ಭೂಮಿಗೆ ಬಿತ್ತುವ ಹಾಗೆ ಇಲ್ಲ ಆಟಿ ತಿಂಗಳು ನಿಧಾನವಾಗಿ ಸಾಗಿದರೆ ಸೋಣ ತಿಂಗಳು ಕುದುರೆಯಂತೆ ಓಡುತ್ತದೆ ಎಂಬ ಮಾತಿದೆ. ಹಿಂದಿನ ಕಾಲದಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ…

Read More

ಮಂಗಳೂರು, ಆ. 16: ಥೈಲ್ಯಾಂಡಿನಲ್ಲಿ ನಡೆದ ಸ್ಪರ್ಧೆಯೊಂದರಲ್ಲಿ ಮಂಗಳೂರಿನ ವರುಣ್ ಎಂಬ  ಬಾಲಕ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆ ಫ್ಯಾಷನ್, ಮಾಡೆಲಿಂಗ್ ಹಾಗೂ ಪ್ರತಿಭಾ ಪ್ರದರ್ಶನವನ್ನು ಒಳಗೊಂಡಿರುತ್ತದೆ ಎಂದು ವಿಜೆ ಡಿಕ್ಸನ್ ಬುಧವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದ , ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ, ನೇಪಾಳ ಸೇರಿದಂತೆ ಹಲವಾರು ದೇಶಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದ ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ  ಸ್ಪರ್ಧೆಯಲ್ಲಿ ಜಯಗಳಿಸಿದ್ದಾರೆ ಎಂದರು. ಸುದ್ದಿಗೋಷ್ಟಿಯಲ್ಲಿ  ತಾಯಿ ಲಿಡ್ವಿನ್ ಡಿಕೋಸ್ಟಾ, ವಿನಾಲ್ ಡಿಕೋಸ್ಟಾ ಉಪಸ್ಥಿತರಿದ್ದರು.

Read More

ಮಂಗಳೂರು,ಆ.16 :ನಗರದ ನೆ ಹರೂ ಮೈದಾನದಲ್ಲಿ ಜಿಲ್ಲಾಡಳಿತದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆ.15ರ ಮಂಗಳವಾರ ನಡೆಯಿತು. ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಸಮಾರ೦ಭದಲ್ಲಿ ಮಾತಾಡಿದ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಆ.15 ,ಇಂದು ನಮಗೆಲ್ಲ ಸಂತಸದ ದಿನ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರಿಗೆ ಹಾಗೂ ಹುತಾತ್ಮರಿಗೆ ಗೌರವ ಸಲ್ಲಿಸಲು, ಸ್ವಾತಂತ್ರ್ಯ ಭಾರತದಲ್ಲಿ ನಡೆದು ಬಂದ ದಾರಿಯನ್ನು ಹಾಗೂ ಅದರ ಏಳುಬೀಳುಗಳನ್ನು ಸ್ಮರಿಸುತ್ತಾ, ದೇಶದ ಉಜ್ವಲ ಭವಿಷ್ಯಕ್ಕಾಗಿ ಕನಸುಕಟ್ಟಿಕೊಳ್ಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಈ ಸಂದರ್ಭದಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ಘಟನೆಗಳನ್ನು ಮತ್ತು ಮುಖ್ಯ ಆಶಯಗಳನ್ನು ನಾವು ಸ್ಮರಿಸಬೇಕು ಎಂದು ಅವರು ಹೇಳಿದರು. ಸಮಾರ೦ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ…

Read More

ಮಂಗಳೂರು,ಆ.15 : ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನಗಳ ಯುವರ್ ಪ್ರೆಸ್ಟೀಜ್ ಶೋ ರೂಮ್ ನ ಉದ್ಘಾಟನಾ ಸಮಾರಂಭವು ಆಗಸ್ಟ್ 16, ಶುಕ್ರವಾರ ಜೆಪ್ಪಿನಮೊಗರುವಿನಲ್ಲಿ ನಡೆಯಲಿದೆ ಎಂದು ಸಂಸ್ಥಾಪಕರಾದ ಶಂಶುದ್ದೀನ್ ಅವರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಯುವರ್ ಪ್ರೆಸ್ಟೀಜ್ ಮೊದಲ ಶೋ ರೂಮ್ ದೇರಳಕಟ್ಟೆಯಲ್ಲಿ ಪ್ರಾರಂಭವಾಯಿತು. ನಂತರ ಪಾಂಡೇಶ್ವರಕ್ಕೆ ವಿಸ್ತರಣೆಯಾಯಿತು. ತದನಂತರ ಮೂಡಬಿದ್ರಿ, ಪುತ್ತೂರಿನಲ್ಲಿ ಶೋ ರೂಮ್ ಪ್ರಾರಂಭವಾಯಿತು. ಯುವರ್ ಪ್ರೆಸ್ಟೀಜ್ ಶೋ ರೂಮ್ ನ ಸಂಸ್ಥಾಪಕರು ಶಂಶುದ್ದೀನ್, ಸಹ-ಸಂಸ್ಥಾಪಕರಾಗಿ ಬಶೀರ್. ಇತರ ಪಾಲುದಾರರು ; ಮಿಸ್ಟರ್ ಅದಿಲ್ ಮತ್ತು ಮಿಸ್ಟರ್ ಇಟ್ಬಾಲ್ (ಅಕ್ಕು ಪ್ರೆಜ್, ಮೂಡಬಿದ್ರಿ), ಮಿಸ್ಟರ್ ಸಲ್ಮಾನ್ ಮತ್ತು ಮಿಸೈಲ್ ಅಶ್ರಫ್ (ಡಿಪೋ), ಮಿಸ್ಟರ್ ಶಾಝ್ (ಪ್ರೋ ಪುಜ್, ಪುತ್ತೂರು), ಮಿಸ್ಟರ್ ರಶೀದ್ & ಮಿಸ್ಟರ್ ಫಜಲ್ ಆಗಿರುತ್ತಾರೆ ಎಂದು ಸಂಸ್ಥಾಪಕರಾದ ಶಂಶುದ್ದೀನ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

Read More

ಮಂಗಳೂರು, ಆ.15: ಉಳ್ಳಾಲ ನೂತನ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಆ.17ರಂದು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ., ಉಳ್ಳಾಲ ಖಾಝಿಯಾಗಿದ್ದ ಸೈಯದ್ ಫಝಲ್ ಕೋಯಮ್ಮ ತಂಙಳ್ ಅವರ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಎ.ಪಿ. ಉಸ್ತಾದ್ ರನ್ನು ಖಾಝಿಯಾಗಿ ಜುಲೈ 20ರಂದು ನೇಮಕ ಮಾಡಲಾಗಿತ್ತು. ಅದರಂತೆ ಖಾಝಿ ಸ್ವೀಕಾರ ಕಾರ್ಯಕ್ರಮ ಆ.17ರಂದು ಬೆಳಗ್ಗೆ 9:30ಕ್ಕೆ ದರ್ಗಾ ವಠಾರದಲ್ಲಿರುವ ಮದನಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಅವರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿ ಮತ್ತು ಸೈಯದ್ ಮದನಿ ಅರಬಿಕ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳಿಗಾಗಿ ನೂತನ ಸುಸಜ್ಜಿತ ಹಾಸ್ಟೆಲ್ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮವೂ ಈ ಸಂದರ್ಭ ಜರುಗಲಿದೆ ಎಂದರು. ಎ.ಪಿ. ಉಸ್ತಾದ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸೈಯದ್ ಕೆ.ಎಸ್.ಆಟಕ್ಕೋಯ ತಂಙಳ್ ಕಾರ್ಯಕ್ರಮ ಉದ್ಘಾಟಿಸುವರು. ಇ.ಸುಲೈಮಾನ್ ಉಸ್ತಾದ್,…

Read More

ಬೆಂಗಳೂರು, ಆ.14 : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ನಟ ದರ್ಶನ್ ಮತ್ತು ಪ್ರಕರಣದ ಇತರೆ ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ಸಂದರ್ಭ ಪೊಲೀಸರ ರಿಮ್ಯಾಂಡ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ಪ್ರಕರಣದ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸಿ ತೀರ್ಪು ನೀಡಿದ್ದಾರೆ. ಬೆಂಗಳೂರು ಜೈಲಿನಲ್ಲಿರುವ ಆರೋಪಿಗಳು ಹಾಗೂ ತುಮಕೂರು ಜೈಲಿನಲ್ಲಿರುವ  ಆರೋಪಿಗಳನ್ನು ಪೊಲೀಸರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಪೊಲೀಸರು, ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಪ್ರಕರಣದ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದರು. ಕೋರ್ಟ್ ಎಲ್ಲಾ ಆರೋಪಿಗಳ…

Read More