Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಡಿ. 23 : : ಎಂ.ಆರ್.ಜಿ. ಗ್ರೂಪ್ ನ ಆಶಾ-ಪುಕಾಶ್ ಶೆಟ್ಟಿ ಅವರ ಸಹಾಯ ಪ್ರದಾನ ಸಮಾರಂಭ ‘ನೆರವು-2025’ ಡಿ. 25ರಂದು ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದೆ. 7ನೇ ವರ್ಷದ ಈ ಸಮಾರಂಭದಲ್ಲಿ ಸುಮಾರು 4 ಸಾವಿರ ಕುಟುಂಬಗಳು ಹಾಗೂ 100ಕ್ಕೂ ಅಧಿಕ ಸಂಘ-ಸಂಸ್ಥೆಗಳಿಗೆ ಒಟ್ಟು 9.5 ಕೋಟಿ ಮೊತ್ತದ ನೆರವು ವಿತರಿಸಲಾಗುವುದು ಎಂದು ಯೋಜನೆಯ ಪವರ್ತಕರಾದ ಎಂ.ಆರ್.ಜಿ. ಗ್ರೂಪ್ನ ಚೇರ್ಮನ್ ಡಾ. ಪುಕಾಶ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆರವು’ ಯೋಜನೆ ಈ ವರ್ಷ ಏಳನೇ ವರ್ಷವನ್ನು ಪೂರೈಸುತ್ತಿದೆ. ಯೋಜನೆ ಇನ್ನೂ ಮೂರು ವರ್ಷಗಳ ಕಾಲ ಮುಂದುವರಿಯಲಿದ್ದು, ದಶಮಾನೋತ್ಸವದ ಬಳಿಕ ಫಲಾನುಭವಿಗಳನ್ನು ಒಗ್ಗೂಡಿಸಿ ಯೋಜನೆಗೆ ಸಾಮೂಹಿಕ ಸ್ವರೂಪ ನೀಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಮುಂದಿನ ದಿನಗಳಲ್ಲಿ ಪ್ರತಿವರ್ಷ ಕನಿಷ್ಠ 14 ಸಾವಿರ ಕುಟುಂಬಗಳಿಗೆ ನೆರವು ನೀಡುವ ಸಾಧ್ಯತೆ ಉಂಟಾಗಲಿದೆ ಎಂದರು. ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ…
ಮಂಜೇಶ್ವರ,ಡಿ.22 : ಇಲ್ಲಿನ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಕಾರ್ಯಕ್ರಮ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು. ಅತೀ ವಂದನೀಯ ಬಿಷಪ್ ಹೇಮಚಂದ್ರ ಕುಮಾರ್, ಒಫ಼್ ಚರ್ಚ್ ಒಫ಼್ ಸೌತ್ ಇಂಡಿಯಾ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ, ಆಚರಣೆಗೆ ಮುನ್ನ ಕ್ಯಾಂಪಸ್ಗೆ ಭೇಟಿ ನೀಡಿದರು, ಅವರು ನಿವಾಸಿಗಳನ್ನು ಆಶೀರ್ವದಿಸಿದರು ಮತ್ತು ಪ್ರೀತಿ, ಕರುಣೆ ಮತ್ತು ಮಾನವೀಯ ಕಾರ್ಯಗಳ ಅದ್ಭುತ ಸಂದೇಶವನ್ನು ನೀಡಿದರು. ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಸಂತ್ ಶೆಟ್ಟಿ ಅತಿಥಿಯಾಗಿ ಉಪಸ್ಥಿತಿ ಇದ್ದು, ಕ್ರಿಸ್ತ ಮತ್ತು ಕೃಷ್ಣರನ್ನು ಹೋಲಿಸುವ ಸಂದೇಶ ಹೊಂದಿರುವ ಮಾತುಗಳನ್ನು ಆಡಿದರು.ಬ್ರದರ್ ಜೋಸೆಫ್ ಕ್ರಾಸ್ತಾ ಅವರ ಸೇವೆ ಶ್ಲಾಘ ನೀಯ ಎಂದರು. ದೆಹಲಿಯ ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಮತ್ತು ಬಾಂಬೆಯ ಪಿಟಿಐ ಕನ್ಸಲ್ಟೆನ್ಸಿಯ ಮಾಲೀಕರು ಜೋಸೆಫ್ ಎಲಿಯಾಸ್ ಮಿನೆಜಸ್, ಅವರು ತಮ್ಮ ಕಾವ್ಯಾತ್ಮಕ ಶೈಲಿಯಲ್ಲಿ ತಮ್ಮ ಅನುಭವ ಹಾಗೂ ಭಾವನೆಗಳನ್ನು ಹಂಚಿಕೊಂಡರು. ನೂತನವಾಗಿ ಆಯ್ಕೆಯಾದ ಕಾಸರಗೋಡು ಜಿಲ್ಲಾ…
ಮಂಗಳೂರು, ಡಿ.21 : ದಕ್ಷಿಣ ಕನ್ನಡ ಜಿಲ್ಲಾಡಳಿತ , ಸ್ಥಳೀಯ ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಒಂದು ತಿಂಗಳು ನಡೆಯಲಿರುವ ಕರಾವಳಿ ಉತ್ಸಾವಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ಶನಿವಾರ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು,ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರ 2 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.ಪ್ರಥಮ ಬಾರಿಗೆ ರಾಜ್ಯ ಸರಕಾರ ಕರಾವಳಿ ಉತ್ಸಾವಕ್ಕೆ ದೊಡ್ಡ ಪ್ರಮಾಣದ ಅನುದಾನ ಕೊಟ್ಟಿದೆ .ಕರಾವಳಿ ಉತ್ಸವ ಒಂದು ತಿಂಗಳುಗಳ ಕಾಲ ನಡೆಯಲಿದೆ. ಈ ದಿನಗಳಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ, ಕ್ರೀಡಾ ಮತ್ತು ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ,ಐವನ್ ಡಿ ಸೋಜ,ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂಎ ಗಫೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,…
ಮಂಗಳೂರು, ಡಿ.20 : ಮಂಗಳೂರಿನ ಶಕ್ತಿನಗರದಲ್ಲಿರುವ ರಮಾಶಕ್ತಿ ಮಿಷನ್ ನಲ್ಲಿ ಡಿ. 25 ರಿಂದ 29ರವರೆಗೆ 5 ದಿನಗಳ ಕಾಲ ಲೋಕ ಕಲ್ಯಾಣಕ್ಕಾಗಿ ಶ್ರೀ ಸಹಸ್ರ ಚಂಡಿಕಾಯಾಗ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ಸುಧಾ ಪ್ರಸಾದ್ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವೇದ ಶಾಸ್ತ್ರಾನುಸಾರ ನಿರ್ಮಿತ 10 ಹೋಮ ಕುಂಡಗಳಲ್ಲಿ ಸುಮಾರು 130ಕ್ಕೂ ಹೆಚ್ಚು ಖುತ್ವಿಕರು ನಿರಂತರ ಯಾಗದಲ್ಲಿ ಪಾಲ್ಗೊಳ್ಳುತ್ತಾರೆ. ವೈದಿಕ ಪಂಡಿತರಾದ ಶ್ರೀ ಲಕ್ಷ್ಮೀ ನಾರಾಯಣ ಸೋಮಯಾಜಿ ಅವರು ಈ ಯಾಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ದಿನಾಂಕ 29 ರಂದು ನಡೆಯುವ ಮಹಾ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಶ್ರಂಗೇರಿ ಶಾರದಾ ಮಠದ ಪೀಠಾಧಿಪತಿಯಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಡಿ.23ರಂದು ಹೊರಕಾಣಿಕೆ ನಡೆಯಲಿದೆ. 25ರಂದು ಗಣಹೋಮ,26 ಶುಕ್ರವಾರದಂದು ಲಕ್ಷ್ಮೀನಾರಾಯಣ ಹ್ರದಯ ಹೋಮ,27ಶನಿವಾರದಂದು ನವಗ್ರಹ ಸಹಿತ ಮಹಾಮ್ರತ್ಯುಂಜಯ ಹೋಮ,28 ರಂದು ಧನ್ವಂತರಿ ಹೋಮ ಹಾಗೂ 29ರಂದು ಮಹಾ ಚಂಡಿಕಾ ಹೋಮ ನಡೆಯಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉದಯ್.ಡಿ.ಭಟ್ಕಳ್ ಅಧ್ಯಕ್ಷರು,ಡಾ.ಪೂರ್ಣಿಮಾ ಬಾಳಿಗ,ಅಶೋಕ್…
ಬೈಂದೂರು, ಡಿ. 19 : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರು ದೋಣಿಯಿಂದ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರು ಉಪ್ಪುಂದ ಗ್ರಾಮದ ಮಡಿಕಲ್ ಬಳಿ ನಡೆದಿದೆ. ಮೃತರನ್ನು ಹರಿಶ್ಚಂದ್ರ ಖಾರ್ವಿ ಎಂದು ಗುರುತಿಸಲಾಗಿದೆ. ಇವರು ಸೋಮವಾರ ಸಂಜೆ ದೋಣಿಯಲ್ಲಿ ಇತರ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದು, ಸಮುದ್ರ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದಾಗ ದೋಣಿಯಿಂದ ಆಯತಪ್ಪಿ ನೀರಿಗೆ ಬಿದ್ದಿದ್ದು,ಕೂಡಲೇ ಅವರನ್ನು ಇತರ ಮೀನುಗಾರರು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿ ದ್ದಾರೆ. ಆದರೆ ಹರಿಶ್ಚಂದ್ರ ಖಾರ್ವಿ ಅವರು ಡಿ.18ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ, ಡಿ. 18 : ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಎರಡನೇ ಬಾರಿ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಅವರನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಸಹಾಯಕ ಆಯುಕ್ತರು ಮರು ಪರಿಶೀಲನೆ ಮಾಡಿ ಇದೀಗ ಮತ್ತೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ ಆದರೆ ಈ ಸಂದರ್ಭ ಮಹೇಶ್ ಶೆಟ್ಟಿಅವರು ಮನೆಯಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ.
ಮಂಗಳೂರು, ಡಿ.18 : ಅಡ್ಯಾರು ಗ್ರಾಮ ಪಂಚಾಯತ್ ,ಪ್ರಕೃತಿ ಸಂಜೀವಿನಿ ಒಕ್ಕೂಟ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಇದರ ಸಂಯುಕ್ತ ಆಶ್ರಯದಲ್ಲಿ ಡಿ 2೦ ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯ ತನಕ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಅಡ್ಯಾರು ಗ್ರಾಮೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಅಡ್ಯಾರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಅಬ್ದುಲ್ ಜಲೀಲ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಅಂದುಪೂರ್ವಾಹ್ನ 9 ರಿಂದ ಮಕ್ಕಳ ಪಥ ಸಂಚನದ ಬಳಿಕ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಅವರು ನೆರವೇರಿಸಲಿದ್ದಾರೆ . ಅಧ್ಯಕ್ಷತೆಯನ್ನು ಅಡ್ಯಾರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಅಬ್ದುಲ್ ಜಲೀಲ್ ವಹಿಸಲಿರುವವರು . ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ , ಅಡ್ಯಾರು ಗ್ರಾಮ ಪಂಚಾಯತ್ ಇದರ ಉಪಾಧ್ಯಕ್ಷರಾದ ಝೋಹರಾ ಭಾಗವಹಿಸಲಿದ್ದಾರೆ…
ಮಂಗಳೂರು, ಡಿ.17: ಕೊಂಕಣಿ ಸಾಹಿತಿ, ಲೇಖಕ ಜೆ.ಎಫ್. ಡಿಸೋಜಾರ 18ನೆ ಕಥೆ ಪುಸ್ತಕ ‘ಭಾಂಗಾರಾಚೊ ಕೊಳ್ಸೊ’ ಕೃತಿಯನ್ನು ಸಾಹಿತಿ ರೊನಾಲ್ಡ್ ರೋಚ್ ಕಾಸ್ಸಿಯಾ ಅವರು ಬುಧವಾರ ನಗರದ ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಿದರು. ಜೆ.ಎಫ್. ಡಿಸೋಜಾ ಅವರು ಭಂಗರಾಚಿ ಮಸ್ಲಿ (ಚಿನ್ನದ ಮೀನು), ಭಂಗರಾಚಿ ಕುರಾದ್ (ಚಿನ್ನದ ಕೊಡಲಿ), ಭಂಗಾರಾಚೆ ಚಿತಾಲ್ (ಚಿನ್ನದ ಜಿಂಕೆ), ಭಂಗಾರಾಚೆ ಮೋರ್ (ಚಿನ್ನದ ನವಿಲು), ಭಂಗಾರಾಚೊ ಕೀರ್ (ಚಿನ್ನದ ಗಿಳಿ), ಭಾಂಗಾರಾಚೊ ಬುಡ್ಕುಲೊ (ಚಿನ್ನದ ಮಡಕೆ) ಹಾಗೂ ಇತ್ತೀಚೆಗೆ ಬಿಡುಗಡೆಯಾದ ಭಂಗರಸೋ ಕೊಲ್ಸೋ (ಚಿನ್ನದ ಕೊಡ) ಸೇರಿ18 ಮಕ್ಕಳ ಕಥೆಗಳ ಪುಸ್ತಕಗಳನ್ನು ರಚಿಸಿದ್ದಾರೆ.. ಅವರು ಮಕ್ಕಳ ಕಥೆಗಳು, ಇತರ ಕಥೆ, ಚುಟುಕುಗಳ ಮೂಲಕ ಹಲವು ಪ್ರಶಸ್ತಿ, ಸನ್ಮಾನಗಳನ್ನು ಪಡೆದಿದ್ದಾರೆ. ಎಂದು ಸಾಹಿತಿ ಡಾಲ್ಪಿ ಲೋಬೋ ಅವರು ಕೃತಿಕಾರರ ಬಗ್ಗೆ ಪರಿಚಯ ನೀಡಿದರು. ಈ ಸಂದರ್ಭದಲ್ಲಿ ಮಾರ್ಸೆಲ್ ಡಿಸೋಜಾ, ಜಾನೆಟ್ ಡಿಸೋಜಾ, ಡ್ಯಾಫ್ನಿ ಮಿನೇಜಸ್ ಉಪಸ್ಥಿತರಿದ್ದರು.
ಮಂಗಳೂರು, ಡಿ.16 : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21 ರಂದು ಸುರತ್ಕಲ್ ಬಂಟರ ಭವನದ ಆವರಣದಲ್ಲಿ ‘ಪರ್ವ 2025’ ಫುಡ್ ಫೆಸ್ಟಿವೆಲ್, ಲೈಫ್ ಸ್ಟೈಲ್ ಮತ್ತು ಸೀರೆ ಮೇಳ ನಡೆಯಲಿದೆ ಎಂದು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷರಾದ ಸರೋಜಾ ಟಿ.ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿಗಳಾದ ರಾಜೇಶ್ವರಿ ಡಿ ಶೆಟ್ಟಿ ಮಾತಾಡಿ ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ವಿವಿಧ ಮಳಿಗೆಗಳ ಸೀರೆ ಮಾರಾಟ ಮೇಳ ನಡೆಯಲಿದೆ. ಈ ಸೀರೆ ಮೇಳದಲ್ಲಿ ನವನವೀನ ಮಾದರಿಯ ಕಾಂಚಿಪುರಂ, ರೇಷ್ಮೆ, ಬನಾರಸ್, ಬಂಗಾಲಿ ಕಾಟನ್ ಹಾಗೂ ವಿವಿಧ ಮಾದರಿಯ ಸೀರೆಗಳು ಸಲ್ವಾರ್ ಸೂಟ್, ಖಾದಿ ಭಂಡಾರ, ಕುರ್ತಾಗಳು, ಕಸೂತಿ, ಹಸ್ತಕಲೆ ಬ್ಯಾಗುಗಳು,ಒಂದು ಗ್ರಾಂ ಚಿನ್ನಾಭರಣ ವಿವಿಧ ವಿನ್ಯಾಸದ ಆರ್ಟಿಫಿಶಲ್ ಜ್ಯುವೆಲ್ಲರಿ, ಮಸಾಲೆ ಹುಡಿಗಳು,ಹರ್ಬಲ್ ಉತ್ಪನ್ನಗಳು ಹಾಗೂ ಅನೇಕ ವಿಧವಿಧ ಉತ್ಪನ್ನಗಳ ಅಪೂರ್ವ…
ಮಂಗಳೂರು,ಡಿ. 15 : ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.14ರಂದು ಭಾನುವಾರ ನಿಧನ ಹೊಂದಿದರು. ಶ್ರೀಧರ ರೈ ಅವರು ಸುಂಕದಕಟ್ಟೆ ಮೇಳ, ಕೊಲ್ಲೂರು ಮೇಳ, ಭಗವತೀ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.ರಾಜ ವೇಷ, ಪುಂಡು ವೇಷ, ಬಣ್ಣದ ವೇಷಧಾರಿಯಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರು.












