Author: admin

ಬಂಟ್ವಾಳ, ಎ.13 : ಪೊಳಲಿ ಶ್ರೀ ರಾಜರಾಜೇಶ್ವರಿ  ದೇವಸ್ಥಾನದಲ್ಲಿ ಒಂದು ತಿಂಗಳಿನಿಂದ ನಡೆಯುತ್ತಿರುವ  ವಾರ್ಷಿಕ ಜಾತ್ರೆಯಲ್ಲಿ ಎ. 10, ಗುರುವಾರ ಸಂಜೆ ಶ್ರೀ ರಾಜರಾಜೇಶ್ವರಿ  ದೇವಿಯ ಮಹಾರಥೋತ್ಸವವು  ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ರಥೋತ್ಸವದ ದಿನ ಬೆಳಗ್ಗೆ ದೇವರಿಗೆ ಪ್ರಾರ್ಥನೆ  ನಡೆದು ಮಹಾಪೂಜೆಯ ಬಳಿಕ ರಥಾರೋಹಣ ನಡೆಯಿತು. ಮಧ್ಯಾಹ್ನ ರಥಕ್ಕೆ ವಿಶೇಷ ಪೂಜೆ ನಡೆದು ಸಂಜೆ ರಥದಲ್ಲಿರುವ ದೇವರಿಗೆ ಪೂಜೆ ನಡೆದ ಬಳಿಕ ಗುತ್ತಿನವರು ಹಾಗೂ ಭಕ್ತರು ತೆಂಗಿನ ಕಾಯಿ ಒಡೆದು ರಥ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಚೆಂಡಿನ ಗದ್ದೆಗೆ ಎಳೆಯಲಾಯಿತು. ಬಳಿಕ ರಂಗು ರಂಗಿನ ಸುಡುಮದ್ದು ಪ್ರದರ್ಶನ ನಡೆಯಿತು. ರಥೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಅಮ್ಮುಂಜೆಗುತ್ತು ಡಾ| ಮಂಜಯ್ಯ ಶೆಟ್ಟಿ, ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದಜಿ, ಶಾಸಕ ರಾಜೇಶ್ ನ್ಯಾಕ್ ಉಳಿಪಾಡಿಗುತ್ತು, ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ, ಪವಿತ್ರಪಾಣಿ ಪಿ.ಮಾಧವ ಭಟ್,…

Read More

ಗುರುಪುರ,ಎ. 12 : ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು – ಅಡ್ಡೂರು ಜೋಡುಕರೆ ಕಂಬಳ “ಗುರುಪುರ ಕಂಬಳೋತ್ಸವ”ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತಾಡಿದರು. ಗುರುಪುರ ಕಂಬಳೋತ್ಸವ ಸಮಿತಿಯ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತಾಡಿ, ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ, ಜಾನಪದ ಕ್ರೀಡೆಯಾಗಿರದೆ ನಮ್ಮ ಸಂಸ್ಕೃತಿಯಾಗಿದೆ. ತಲಪಾಡಿಯಿಂದ ಮುಲ್ಕಿ ವರೆಗಿನ ಬೀಚ್ ರಸ್ತೆ ಗಳನ್ನು ಅಭಿವೃದ್ಧಿ ಪಡಿಸಿ ಬೀಚ್ ಪ್ರಾವಾಸೋದ್ಯಮಕ್ಕೆ ಒತ್ತು ನೀಡಬೇಕು ಎಂದು ಉಪ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು. ಕಂಬಳ ಸಮಿತಿಯ ವತಿಯಿಂದ ನೇಗಿಲು ಹಸ್ತಾಂತರಿಸಿ ಉಪಮುಖ್ಯಮಂತ್ರಿ ಅವರನ್ನು ಸನ್ಮಾನಿಸಲಾಯಿತು. ಕಂಬಳ…

Read More

ಮಂಗಳೂರು, ಎ. 12: ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಬರಲ್ ಫಾರಂ ವತಿಯಿಂದ ಎ. 18, 19, 20ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ‘ಬ್ಯಾರಿ ಸೌಹಾರ್ದ ಉತ್ಸವ’ವನ್ನು ಆಯೋ ಜಿಸಲಾಗಿದೆ ಎಂದು ಫಾರಂ ಅಧ್ಯಕ್ಷ ಜಿ.ಎ. ಬಾವಾ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಎ. 18ರಂದು ಸಂಜೆ 4ಕ್ಕೆ ಉತ್ಸವ ಉದ್ಘಾಟನೆಗೊಳ್ಳಲಿದೆ, ಎ.20ರಂದು ಸಂಜೆ 7ಕ್ಕೆ ಸಮಾರೋಪಗೊಳ್ಳಲಿದೆ. ಈ ಮೂರು ದಿನಗಳಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳ ನಡೆಯಲಿದೆ ಎಂದು ಹೇಳಿದರು. ಎ. 19ರಂದು ಬೆಳಗ್ಗೆ 10ಕ್ಕೆ ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ರಾಜ್ಯದ ಪ್ರಮುಖ ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎ. 20ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಶೈಕ್ಷಣಿಕ ಮೇಳ ನಡೆಯಲಿದೆ, ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಕಾಲೇಜು ಮತ್ತು ಜಾಗತಿಕ ಉದ್ಯೋಗ ಬೇಡಿಕೆ ಇರುವ ಕೋರ್ಸ್ ಗಳ ಮಾಹಿತಿ, ಸ್ಪರ್ಧಾತ್ಮಕ ಪರೀಕ್ಷೆಯ ಮಾರ್ಗದರ್ಶನ ಮತ್ತು ಕೌನ್ಸೆಲಿಂಗ್ಗಳ…

Read More

ಮಂಗಳೂರು, ಏ.11 : ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಈ ಚಿತ್ರಕ್ಕೆ ಅಶ್ವಥ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಮೀರಾ ತುಳು  ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದು ಹೇಳಿದರು. ನಟ, ನಿರ್ದೇಶಕ ರಾಹುಲ್ ಮಾತನಾಡಿ ನಗರದಲ್ಲೀಗ ಫ್ಲೆಕ್ಸ್ ಗಳನ್ನು ಅಳವಡಿಸಲು ಮಹಾನಗರ ಪಾಲಿಕೆ ನಿಷೇಧ ಏರಿರುವುದರಿಂದು ತುಳು ಸಿನಿಮಾರಂಗದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ ತುಳುಸಿನಿಮಾ ರಂಗದ ನಿರ್ಮಾಪಕರು ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದರು. ನಿರ್ಮಾಪಕ ಲಂಚುಲಾಲ್ ಕೆ…

Read More

ಮಂಗಳೂರು, ಏ.11 : ಕುಲಾಲ ಪ್ರತಿಷ್ಠಾನ ಮಂಗಳೂರು ವತಿಯಿಂದ ‘ಕುಲಾಲ ಪರ್ಬ’ ಕಾರ್ಯಕ್ರಮ ಏ.13 ರಂದು ಮಧ್ಯಾಹ್ನ 2 ಗಂಟೆಯಿಂದ ಉರ್ವಸ್ಟೋರ್ ಬಳಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಆಡಳಿತ ಟ್ರಸ್ಟಿ ಬಿ. ಸುರೇಶ್ ಕುಲಾಲ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 2 ಗಂಟೆಗೆ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ. ಕುಲಾಲ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಗಳಾಗಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಪ್ರಧಾನ ಅರ್ಚಕ ಶಿವಾನಂದ ಕನ್ನಡ, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಾಜಿ ಅಧ್ಯಕ್ಷ ಎಂ.ಪಿ. ಬಂಗೇರ, ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಮಮತಾ ಅಣ್ಣಯ್ಯ ಕುಲಾಲ್, ಓಲ್ಡ್ ಕೆಂಟ್ ರಸ್ತೆ ಶ್ರೀ ದೇವಿ ದೇವಸ್ಥಾನ ಅಧ್ಯಕ್ಷ ಸದಾಶಿವ ಕುಲಾಲ್ ಅತ್ತಾವರ, ನ್ಯಾಯವಾದಿ ರಾಮ್ ಪ್ರಸಾದ್ ಎಸ್., ಕುಲಾಲ ಕುಂಬಾರರ ಯುವ ವೇದಿಕೆ ರಾಜ್ಯಾಧ್ಯಕ್ಷ ಗ೦ಗಾಧರ…

Read More

ಮಂಗಳೂರು,ಏ.11: ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊ ರೇಷನ್ ಲಿ.(ಐಆರ್‌ಸಿಟಿಸಿ) ಮಂಗಳೂರು ಹಾಗೂ ಸುತ್ತಮುತ್ತಲಿನ ಮತ್ತು ಪ್ರದೇಶಗಳ ಪ್ರವಾಸಿಗರು ಯಾತ್ರಾರ್ಥಿಗಳ ಅನುಕೂಲಕ್ಕಾಗಿ, ಐಆರ್ ಸಿಟಿಸಿ ಮಂಗಳೂರಿನಿಂದ ಹೊರಡುವ ಹೊಸ ರೈಲು ಮತ್ತು ವಿಮಾನ ಪ್ರಯಾಣ ಪ್ಯಾಕೇಜ್‌ಗಳನ್ನು ಪರಿಚಯಿಸಿದೆ ಎಂದು ಪ್ರವಾಸೋದ್ಯಮ ಜಂಟಿ ಜನರಲ್ ಮ್ಯಾನೇಜರ್ ಸ್ಯಾಮ್ ಜೋಸೆಫ್ ಪಿ. ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಐಆರ್ ಸಿಟಿಸಿ ಅಯೋಧ್ಯೆ ದರ್ಶನದೊಂದಿಗೆ ವಾರಣಾಸಿ ಎಂಬ ವಿಶೇಷ ವಿಮಾನ ಪ್ಯಾಕೇಜ್ ನೀಡಲಿದೆ. ಈ ಪ್ರವಾಸವು ಮಂಗಳೂರು ವಿಮಾನ ನಿಲ್ದಾಣದಿಂದ ಮೇ 6ರಂದು ಹೊರಡಲಿದೆ. ಮಂಗಳೂರಿನಿಂದ ವಾರಣಾಸಿ, ಅಯೋಧ್ಯೆ, ಪ್ರಯಾಗ್ ರಾಜ್ ಏರ್ ಟೂ ರ್ ಪ್ಯಾಕೇಜ್ ಬೆಲೆ ಪ್ರತಿ ವ್ಯಕ್ತಿಗೆ 36,700 ರೂ. ಆಗಲಿದೆ. ವಿಶೇಷ 6 ದಿನಗಳ ವಿಮಾನ ಪ್ರಯಾಣ ಪ್ಯಾಕೇಜ್ ಗಳೊಂದಿಗೆ ಮಂಗಳೂರಿನಿಂದ ಕಾಶ್ಮೀರ ಏರ್ ಟೂ ರ್  ‌ಪ್ಯಾಕೇಜ್ ಇದ್ದು, ಮಂಗಳೂ ರಿನಿಂದ ಆ.25ರಂದು ಹೊರಡಲಿದೆ. ಬೆಲೆಯು  ಪ್ರತಿ ವ್ಯಕ್ತಿಗೆ 51,700 ರೂ.ನಿಂದ ಪ್ರಾರಂಭವಾಗುತ್ತವೆ…

Read More

ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಎ.18 ರಿಂದ 26ರ ವರೆಗೆ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ, ನೂತನ ಬ್ರಹ್ಮರಥ ಸಮರ್ಪಣೆ ಬ್ರಹ್ಮರಥೋತ್ಸವ, ಭಜನಾ ಸಂಭ್ರಮೋತ್ಸವ, ನಾಗಮಂಡಲೋತ್ಸವ, ಜಾರಂದಾಯ ದೈವದ ನೇಮೋತ್ಸವವು ಜರುಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಗುರುವಾರ ದೇವಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ಎ.18ರಂದು ಹಸಿರು ಹೊರೆಕಾಣಿಕೆ ವಾಹನ ಜಾಥಾ ಮೆರವಣಿಗೆ ನಡೆಯಲಿದೆ. ಇಡ್ಯಾ ಶ್ರೀ ಮಹಾಲಿಂಗೇಶ್ವ ದೇವಸ್ಥಾನದ ವಠಾರದಿಂದ ಸಂಜೆ 3:30ಕ್ಕೆ ಆರಂಭಗೊಳ್ಳಲಿರುವ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಳದ ಅನುವಂಶಿಕ ಮೊತ್ತೇಸರರಾದ ವೇ.ಮೂ. ಐ. ರಮಾನಂದ ಅವರು ಚಾಲನೆ ನೀಡಲಿದ್ದಾರೆ. ಇಡ್ಯಾದಿಂದ ಚೊಕ್ಕಬೆಟ್ಟು ಮಾರ್ಗವಾಗಿ ಕೃಷ್ಣಾಪುರ 5ನೇ ಬ್ಲಾಕ್ ಯುವಕ ಮಂಡಳಕ್ಕೆ ತಲುಪಿ ಬಳಿಕ 4:30ಕ್ಕೆ ಅಲ್ಲಿಂದ ಭವ್ಯ ಶೋಭಾಯಾತ್ರೆಯ ಮೂಲಕ ಹೊರೆಕಾಣಿಕೆ ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನಕ್ಕೆ ತಲುಪಲಿದೆ ಎಂದರು.…

Read More

ಮಂಗಳೂರು, ಏ.9 : ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡಿರುವ ‘ಮೀರಾ’ ತುಳು ಚಲನಚಿತ್ರ ಏ.11ರಂದು ಬಿಡುಗಡೆಯಾಗಲಿದೆ. ‘ಮೀರಾ’ ತುಳು ಸಿನೆಮಾಕ್ಕೆ ಅಶ್ವತ್ಥ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಮೀರಾ ಚಿತ್ರವು ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ. ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ. ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವರ್ಕಾಡಿ, ಯತೀಶ್ ಪೂಜಾರಿ, ಅಶ್ವತ್ವ, ಬೇಬಿ ಲಕ್ಷ್ಯ, ಎಲ್. ಮೊದಲಾದ ಕಲಾವಿದರ ಜತೆ ಮುಂಬೈ ಮೂಲದ ತುಳು ಬ್ಲಾಗ್  ನಟಿ ರಕ್ಷಿತಾ ಶೆಟ್ಟಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರಾವಳಿ ಭಾಗದ ಅನೇಕ ಪ್ರತಿಭೆಗಳೂ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಚಿತ್ರದಲ್ಲಿ 5 ಹಾಡುಗಳಿದ್ದು, ಹಿನ್ನೆಲೆ ಗಾಯಕರಾದ ಮಧುಬಾಲಕೃಷ್ಣನ್ ಸೇರಿದಂತೆ ಹೆಸರಾಂತ ಗಾಯಕರ ಧ್ವನಿಯಲ್ಲಿ ಮೂಡಿ ಬಂದಿದೆ.…

Read More

ಮಂಗಳೂರು, ಏ.9 : ಮಾರ್ಚ್ 28 ರಿಂದ 30 ರವರೆಗೆ ತಮಿಳುನಾಡಿನ ಕರ್ಷಗ ವಿನಾಯಕ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನದಲ್ಲಿ ನಡೆದ ಎಸ್.ಎ.ಇ.ಐ.ಎಸ್.ಎಸ್ ಡೋನ್ ಡೆವಲಪ್ಮೆಂಟ್ ಚಾಲೆಂಜ್ 2025 ಸ್ಪರ್ಧೆಯ ಮೈಕ್ರೋ ಏರ್ ಕ್ರಾಫ್ಟ್  ವಿಭಾಗದಲ್ಲಿ ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಡಾ.ರಿಯೋ ಡಿಸೋಜ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಏರೋ ಮಾಡೆಲಿಂಗ್ ಕ್ಲಬ್ – ಎಸ್ ಜೆಇಸಿ ಏರೋ ಮಾನವರಹಿತ ವೈಮಾನಿಕ ವ್ಯವಸ್ಥೆಗಳಲ್ಲಿ ನಾವೀನ್ಯತೆಗೆ ಒತ್ತು ನೀಡುತ್ತಿದೆ. ಶಾಲೆಗಳಿಗೆ ಭೇಟಿ ನೀಡಿ ಕಾರ್ಯಾಗಾರಗಳನ್ನು ನಡೆಸಿ ವಿದ್ಯಾರ್ಥಿಗಳಲ್ಲಿ ಏರೋ ಮಾಡಲಿಂಗ್ನಲ್ಲಿ ಆಸಕ್ತಿಯನ್ನು ಮೂಡಿಸುತ್ತಿದೆ  ಎಂದರು. ತಂಡದ ನಾಯಕ-ಅಕ್ಷಯ್ ಬಂಗೇರ, ಪೈಲಟ್ – ಮನಿಶ್’ ಎಂ.ಕೆ., ಸೈದ್ಧಾಂತಿಕ ತಂಡ- ಜೀವಿತ್ ಜಿ., ಆದಿತ್ಯ ಆರ್., ಗುರುಮಾಧವ ಎಚ್., ರಾಹುಲ್ ಟಿ.ಪಿ., ವಿನ್ಯಾಸ ತಂಡ- ಜೀವಿತ್ ಜಿ., ಮನ್ನಿಶ್ ಎಂ.ಕೆ., ಅಕ್ಷಯ್ ಬಂಗೇರ, ಲೇಖ್ನಾ ಶೆಟ್ಟಿ,…

Read More

ಮಧೂರು, ಎ.8: ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಾಲಯದ ಮೂಡಪ್ಪ ಸೇವೆ ತಂತ್ರಿವರ್ಯ ಬ್ರಹಶ್ರೀ ಉಳಿಯತ್ತಾಯ ವಿಷ್ಣು ಆಸೆ ಅವರ ನೇತೃತ್ವದಲ್ಲಿ ಆದಿತ್ಯವಾರ ಬೆಳಿಗ್ಗೆ ಸಂಪನ್ನಗೊಂಡಿತು. ಮೂಡಪ್ಪ ಸೇವೆ ಅಂಗವಾಗಿ ಶನಿವಾರ ರಾತ್ರಿ ಶಯ್ಯಾಕಲ್ಪನೆ, ಕವಾಟ ಬಂಧನದ ಬಳಿಕ ಮುಚ್ಚಲ್ಪಟ್ಟ ಶ್ರೀ ದೇವರ ಗರ್ಭಗೃಹದ ಕವಾಟೋದ್ಘಾಟನೆ ಬೆಳಗ್ಗೆ ನಡೆದು ಗರ್ಭಗೃಹ ಬಾಗಿಲು ತೆರೆಯಲಾಯಿತು. ಈ ವೇಳೆ ಅಪೂಪ ಪರ್ವತದ (ಅಪ್ಪಕಜ್ಜಾಯ) ಮಧ್ಯದಿಂದ ಮೂಡಿಬರುವ ಬೊಡ್ಡಜ್ಜ ಶ್ರೀ ಮಧೂರು ಸಿದ್ಧಿವಿನಾಯಕ ದೇವರ ದಿವ್ಯ ದರ್ಶನದೊಂದಿಗೆ ವಿಶೇಷಾಭಿಷೇಕ, ಪ್ರಸನ್ನ, ಪೂಜೆ, ಅಪೂಪ(ಅಪ್ಪ)ಪ್ರಸಾದ ಮುಸ್ಸಂಜೆಯ ವರೆಗೂ ವಿತರಣೆ ನಡೆಯಿತು. ಬಳಿಕ 128 ಕಾಯಿ, ಅಷ್ಟದ್ರವ್ಯ ಮಹಾಗಣಪತಿಯಾಗ, ಮಹಾಪೂಜೆ ನಡೆಯಿತು. ಸಂಜೆ ಜಳಕದ ಬಲಿ, ಕಟ್ಟೆಪೂಜೆ, ಶ್ರೀ ದೇವರ ಕೆರೆಯಲ್ಲಿ ಅವಭೃತ ಸ್ನಾನ, ದರ್ಶನ ಬಲಿ, ರಾಜಾಂಗಣ ಪ್ರಸಾದ, ಧ್ವಜಾವರೋಹಣ ನಡೆಯಿತು. ಮೂಡಪ್ಪ ಸೇವೆ ವೀಕ್ಷಿಸಲು ರವಿವಾರ ಮುಂಜಾನೆ 1 ರ ವೇಳೆಗೆ ಜನರು ಆಗಮಿಸತೊಡಗಿದ್ದರು.ನೀರ್ಚಾಲ್ ಮಧೂರು ರಸ್ತೆಯ ಏರಿಕ್ಕಳ, ಕೊಲ್ಯಗಳಿಂದ ಸುಮಾರು 3 ಕಿ.ಮೀ. ದೂರದಿಂದ ಕಾಸರಗೋಡು…

Read More