Author: admin

ಉಳ್ಳಾಲ, , ಅ. 30 : ಸ್ಕೂಟರ್ ಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್  ರಸ್ತೆಗೆಸೆಯಲ್ಪಟ್ಟು ಸವಾರ ಮೃತಪಟ್ಟಿರುವ ಘಟನೆ ರಾ.ಹೆ.66 ರ ಅಡಂ ಕುದ್ರು ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಬೊಕ್ಕಪಟ್ಣ ಬೆಂಗ್ರೆ ನಿವಾಸಿ ನಾಗೇಶ್ ಪುತ್ರನ್(62) ಮೃತರು. ನಾಗೇಶ್ ಪುತ್ರನ್ ಅವರು ಅಡಂಕುದ್ರು ಎಂಬಲ್ಲಿ ತೊಕ್ಕೊಟ್ಟುವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು, ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರ ಗಾಯಗೊಂಡಿದ್ದಾರೆ. ನಾಗೇಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಅ. 29 : ದಾಯ್ಜಿವರ್ಲ್ಡ್ ಮೀಡಿಯಾ ಹಾಗೂ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಓಂಕಾಲಜಿ (MIO) ಸಹಯೋಗದಲ್ಲಿ ‘ಕ್ಯಾನ್ಸರ್ ಗೆಲ್ಲೋಣ’ ಎಂಬ ಒಂದು ವರ್ಷದ ಕ್ಯಾನ್ಸರ್ ಜಾಗೃತಿ ಅಭಿಯಾನವನ್ನು ಶನಿವಾರ ಆರಂಭಿಸಿದೆ. ಈ ಉಪಕ್ರಮದ ಮೂಲಕ ಕ್ಯಾನ್ಸರ್ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಗುಣಮುಖತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ. ಉದ್ಘಾಟನಾ ಭಾಷಣದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತಾಡಿ, ಸಕಾರಾತ್ಮಕ ದೃಷ್ಟಿಕೋನದಿಂದ ಸಾಮಾಜಿಕ ಜಾಗೃತಿ ಸೃಷ್ಟಿಸಲು ದಾಯ್ಜಿವರ್ಲ್ಡ್ ಮತ್ತು ಎಂಐಒ ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿ ಅಭಿಯಾನ ಆರಂಭಿಸಿದೆ.ಈ ಜನಹಿತೈಷಿ ಉಪಕ್ರಮ ಸಮಾಜದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವಪೂರ್ಣ ಬದಲಾವಣೆ ತರಲಿದೆ ಎಂದು ಹೇಳಿದರು. ವಾಲ್ಟರ್ ನಂದಳಿಕೆ ಅವರು ಮಾತಾಡಿ, ಮಾಜಿ ಸೇನಾ ಕ್ಯಾಪ್ಟನ್ ಮತ್ತು ಎಂಐಒವಿನ ನಿಷ್ಠಾವಂತ ವೈದ್ಯರೊಂದಿಗೆ ಇರುವುದು ಗೌರವದ ವಿಷಯ. ಸೇನೆಯು ನಮ್ಮ ರಾಷ್ಟ್ರವನ್ನು ರಕ್ಷಿಸುತ್ತದೆ ಮತ್ತು ವೈದ್ಯರು ಜೀವನವನ್ನು ರಕ್ಷಿಸುತ್ತಾರೆ. ನಾವು ‘ಕ್ಯಾನ್ಸರ್ ಗೆಲ್ಲೋಣ’ ಅನ್ನುವ ಅಭಿಯಾನವನ್ನು ಆರಂಭಿಸುತ್ತಿದ್ದೇವೆ.ಇದು ತಡೆಗಟ್ಟುವ ತಂತ್ರಗಳು, ಚಿಕಿತ್ಸೆಯ ಮಾಹಿತಿ, ಉಳಿದವರ…

Read More

ನೈರೋಬಿ, ಅ. 28 : ಕೀನ್ಯಾದ ಕ್ವಾಲೆಯಲ್ಲಿ 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ 12 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ. ಮಂಗಳವಾರ ಬೆಳಿಗ್ಗೆ ವಿಮಾನವು ಡಯಾನಿಯಿಂದ ಕಿಚ್ವಾ ಟೆಂಬೊ ಕಡೆಗೆ ತೆರಳುತ್ತಿತ್ತು. ಈ ವಿಮಾನದಲ್ಲಿ 12 ಮಂದಿ ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಸುಮಾರು ಬೆಳಿಗ್ಗೆ 8:30ರ ಹೊತ್ತಿಗೆ ವಿಮಾನ ಪತನಗೊಂಡಿದೆ ಎಂದು ಕೀನ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ ಮಾಹಿತಿ ನೀಡಿದೆ. ಸದ್ಯ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

Read More

ಮಂಗಳೂರು,ಅ. 27 : ನಗರದ ನ್ಯೂ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಪಂದ್ಯಾವಳಿ ಸೋಮವಾರ ಉದ್ಘಾಟಿನೆಗೊಂಡಿತು. ಬಳಿಕ ಮಾತಾಡಿದ ಅವರು, ದಕ ಜಿಲ್ಲೆಯ ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯ ಮೊದಲ ಬಾರಿ ನಡೆಯುತ್ತಿದೆ. ಇಲ್ಲಿನ ಒಳಾಂಗಣ ಕ್ರೀಡಾಂಗಣಕ್ಕೆ ಹಿಂದಿನ ಅವಧಿಯಲ್ಲಿ ಅಡಿಗಲ್ಲು ಹಾಕಿದ್ದು ನಾನೇ. ಉದ್ಘಾಟನೆ ನಾನೇ ಮಾಡಿತ್ತಿದ್ದೇನೆ ಎಂದರು. ಜನಸಂಖ್ಯೆಯಲ್ಲಿ ದೇಶ ಜಗತ್ತಿನಲ್ಲೇ ನಂಬರ್ ವನ್ ಸ್ಥಾನದಲ್ಲಿದೆ. ಆದರೆ ಒಪಿಂಪಿಕ್ ಪದಕಗಳಲ್ಲಿ ಹಿಂದಿದೆ. ಹಾಗಾಗಿಯೇ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವ್ಯವಸ್ಥೆ ಮಂಗಳೂರಿನ ಉರ್ವಾದ ಈ ಒಳಾಂಗಣ ಕ್ರೀಡಾಂಗಣದ ಮೂಲಕ ಮಾಡಲಾಗಿದೆ ಎಂದರು. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಮನೋಜ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವೇದಿಕೆಯಲ್ಲಿ ಮಾಜಿ…

Read More

ಪುತ್ತೂರು, ಅ. 26  : ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20 ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ತಾಲೂಕಿನ ನಿವಾಸಿ, ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ ಈ ಸಂಬಂಧ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ.25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ಭಾಷಣವನ್ನು…

Read More

ಬಂಟ್ವಾಳ, ಅ. 25 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್ (25) ಎಂಬವರು ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್, ಕಾರಿನಲ್ಲಿದ್ದ ಶೇಷ, ಮಹೇಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಂಜಯ್ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ವಾಪಸ್ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

Read More

ಮಂಗಳೂರು, ಅ. 24 : ತುಳು ನಾಟಕ ಕಲಾವಿದರ ಒಕ್ಕೂಟ ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಕಿಶೋರ್ ಡಿ. ಶೆಟ್ಟಿ ವಹಿಸಿದ್ದರು. ಮುಂದಿನ 2 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು ತಾರಾನಾಥ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷಣ್ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ ಕೊಪ್ಪಲ ಕದ್ರಿ, ಕ್ಷೇಮನಿಧಿ ಪ್ರಧಾನಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್ ಶರವು, ಜೊತೆ ಕಾರ್ಯದರ್ಶಿ ತುಳಸೀ ದಾಸ್ ಉರ್ವ, ಸಲಹಾ ಸಮಿತಿ ಸದಸ್ಯರಾಗಿ ತಮ್ಮ ಲಕ್ಷ್ಮ್ಮಣ್ , ಶರತ್ ಶೆಟ್ಟಿ ಮುಂಡ್ಕೂರು, ಶೋಭಾಶೆಟ್ಟಿ, ಪ್ರಚಾರ ನಿರ್ದೇಶಕರಾಗಿ ರತ್ನದೇವ್…

Read More

ಬ್ರಹ್ಮಾವರ, ,ಅ. 23 : ಚಿರತೆಯೊಂದು ಚಲಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ  ಸವಾರ ನಿಯಂತ್ರಣ ತಪ್ಪಿ ಗಂಭೀರವಾಗಿ ಗಾಯಗೊಂಡು, ಚಿರತೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ ನಲ್ಲಿ ಅ. 20, ಸೋಮವಾರ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ನಾಂಚಾರ್ ನಿವಾಸಿ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಭಾಸ್ಕರ್ ಶೆಟ್ಟಿ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಚಿರತೆಯೊಂದು ಒಮ್ಮೆಲೇ ಅಡ್ಡ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿ ಬೈಕ್ ಚಿರತೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಿರತೆ ಸ್ಥಳದಲ್ಲೇ ಸಾವನಪ್ಪಿದೆ. ಬೈಕ್ ಸವಾರ  ಭಾಸ್ಕರ್ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಹೆಬ್ರಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಆ. 22 : ಮಂಗಳೂರಿನ ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿಯಲ್ಲಿ, ಅಕ್ಟೋಬರ್ 21, ಮಂಗಳವಾರ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್‌ಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಕಾರ್ಯಕ್ರಮವು ದೀಪ ಬೆಳಗಿಸುವಿಕೆಯೊಂದಿಗೆ ಪ್ರಾರಂಭವಾಯಿತು. ಮುಖ್ಯ ಅತಿಥಿ ನಜ್ಮಾ ಫಾರೂಕ್ ಮತ್ತು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಅವರು ದೀಪವನ್ನು ಬೆಳಗಿಸಿದರು. ಆಚರಣೆಯ ಭಾಗವಾಗಿ, ಶಾಖೆಯಲ್ಲಿನ ಗ್ರಾಹಕರು ದೀಪಗಳನ್ನು ಬೆಳಗಿಸಿದರು. ಎಮ್‌ಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ,, ದೀಪಾವಳಿ ಕೇವಲ ಬೆಳಕಿನ ಹಬ್ಬವಲ್ಲ, ಏಕತೆ, ಕೃತಜ್ಞತೆ ಮತ್ತು ನವೀಕರಣದ ಆಚರಣೆ ಎಮ್‌ಸಿಸಿ ಬ್ಯಾಂಕ್, ಸಮುದಾಯ ಬ್ಯಾಂಕ್ ಎಂದು ಗುರುತಿಸಲ್ಪಟ್ಟಿದ್ದರೂ, ಎಲ್ಲಾ ಸಮುದಾಯಗಳ ಜನರಿಗೆ ತನ್ನ ಸೇವೆಗಳನ್ನು ಹೆಮ್ಮೆಯಿಂದ ಒದಗಿಸುತ್ತಿದೆ. ಏಕತೆ ಮತ್ತು ಹಬ್ಬದ ಉತ್ಸಾಹದಲ್ಲಿ, ಎಮ್‌ಸಿಸಿ ಬ್ಯಾಂಕ್ ತನ್ನ ಮಂಗಳೂರು ಶಾಖೆಯಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಎಲ್ಲಾ 21 ಶಾಖೆಗಳಲ್ಲಿ ಏಕಕಾಲದಲ್ಲಿ…

Read More

ಮಂಗಳೂರು, ಆ. 21 : ತಾಲೂಕಿನ ಪೇಜಾವರ ಕೆಂಜಾರಿನಲ್ಲಿರುವ ಕಪಿಲಾ ಗೋ ಶಾಲೆಯಲ್ಲಿ ಅ. 22ರಂದು 108 ಕಪಿಲಾ ಗೋವುಗಳಿಗೆ ಸಾರ್ವಜನಿಕ ಪೂಜೆಯನ್ನು ಆಯೋಜಿಸಲಾಗಿದೆ ಎಂದು ಕಪಿಲಾ ಗೋ ಶಾಲೆಯ ಮುಖ್ಯಸ್ಥ ಪ್ರಕಾಶ್ ಶೆಟ್ಟಿ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವುಗಳಿಗೆ ಸಾರ್ವಜನಿಕ ಪೂಜೆಯು ಬೆಳಗ್ಗೆ 6ರಿಂದ 11.30ರ ವರೆಗೆ ನಡೆಯಲಿದೆ. ಗೋವಿನ ಸಂತತಿ ರಕ್ಷಣೆಗಾಗಿ 2012ರಲ್ಲಿ 2 ಗೋವುಗಳಿಂದ ಆರಂಭವಾದ ಈ ಗೋ ಶಾಲೆಯಲ್ಲಿ ಸುಮಾರು 700ರಷ್ಟು ಗೋವುಗಳಿವೆ, ಕಪಿಲಾ ಗೋ ಶಾಲೆಯಲ್ಲಿ ಗೋಮಾತೆಯ ಸೇವೆಯೇ ಹೊರತು ಉದ್ಯಮ ನಡೆಸಲಾಗುತ್ತಿಲ್ಲ ಎಂದು ಹೇಳಿದರು. ಕಪಿಲಾ ಗೋ ಶಾಲೆಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹಾಗೂ ಉದ್ಯಮಿ ಸುರೇಶ್ ಶೆಟ್ಟಿ ಮಾತನಾಡಿ, ಗೋ ಶಾಲೆಯಲ್ಲಿ ಗೋವುಗಳು ಸಂಖ್ಯೆ ಹೆಚ್ಚುತ್ತಿರುವುದರಿಂದ ಗೋವುಗಳು ನಿರಾಳವಾಗಿ ನಡೆದಾಡಲು ಸ್ಥಳದ ಕೊರತೆ ಇದೆ. ಅದ್ದರಿಂದ ಸುಮಾರು 50 ಸಾವಿರ ಚ.ಅಡಿ ವಿಸ್ತೀರ್ಣದ ಗೋ ಶಾಲೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. 4 ಕೋ.ರೂ ವೆಚ್ಚದ ಯೋಜನೆಯ…

Read More