Subscribe to Updates
Get the latest creative news from FooBar about art, design and business.
Author: admin
ಮಂಗಳೂರು: ಜ.30; ಮುಲುಂಡ್ ಕ್ರಿಯೇಶನ್ಸ್ ನ ನಾಗರಾಜ್ ಎಸ್. ಮುಳಗುಂದ ನಿರ್ಮಾಣದ ಒಲವಿನ ಪಯಣ ಚಿತ್ರ ಫೆ.21ರಂದು ಬಿಡುಗಡೆ ಗೊಳ್ಳಲಿದೆ ಎಂದು ನಿರ್ದೇಶಕ ಕಿಶನ್ ಬಲಾಡ್ ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚಿತ್ರದ ನಾಯಕ ನಟನಾಗಿ ಸುನೀಲ್, ನಟಿಯಾಗಿ ಪ್ರಿಯ ಹೆಗ್ಡೆ, ಖುಶಿ ಅಭಿನಯಿಸಿದ್ದಾರೆ. ಜೀವನ್ ಗೌಡ ಛಾಯಾಗ್ರಹಕರಾಗಿ, ಕೀರ್ತಿರಾಜ್ ಸಂಕ ಲನ, ಗುರುಪ್ರಸಾದ್ ಕಲರಿಸ್ಟ್, ನವೀನ್ ಎಸ್ ಎಫ್ ಎಕ್ಸ್ ಸಾಯಿ ಸರ್ವೇಶ್ ಸಂಗೀತ, ಪೋಷಕ ಕಲಾವಿದರಾಗಿ ಪದ್ಮಜಾ ರಾವ್, ಬಲ ರಾಜ್ವಾಡಿ, ನಾಗೇಶ್ ಮಯ್ಯ, ಪೃಥ್ವಿರಾಜ್, ಸುಧಾ ಕರ ಬನ್ನಂಜೆ, ಸೂರ್ಯಕಿರಣ್ ಧನಂಜತ್, ಸಮೀಕ್ಷಾ, ಬೇಬಿ ರಿಧಿ ಅಭಿನಯಿಸಿದ್ದಾರೆ. ಒಲವಿನ ಪಯಣ ಇದೊಂದು ಹಳ್ಳಿಯ ಮಧ್ಯಮ ವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆಯಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರಾದ ನಾಗರಾಜ್ ಮುಳಗುಂದ, ನಟರಾದ ಸುನೀಲ್, ನಟಿ ಯರಾದ ಕುಶಿ, ಪ್ರಿಯ ಹೆಗ್ಡೆ, ಕಲಾವಿದ ನಾಗೇಶ್ ಮಯ್ಯ ಉಪಸ್ಥಿತರಿದ್ದರು
ಬಾಗಲಕೋಟೆ, ಜ.29 : ಮುಧೋಳ ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡು ರಸ್ತೆಯಲ್ಲಿ ಒಂದು ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಸಂಭವಿಸಿದೆ. ಗಂಗಾವತಿ ಬಳಿ ಸಾಗಿದ 30 ಟನ್ ಅಕ್ಕಿಯೊಂದಿಗೆ ಲಾರಿ ಕೊಲ್ಲಾಪುರಕ್ಕೆ ಹೊರಟಿದ್ದಾಗ, ರಾಜ್ಯ ಹೆದ್ದಾರಿ ಮಧ್ಯದಲ್ಲೇ ಲಾರಿ ಬೆಂಕಿಗಾಹುತಿಯಾಗಿದೆ. ಲಾರಿ ಟಯರ್ ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಮಂಗಳೂರು,ಜ.28 : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ. ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಒದಗಿಸುವ ಉದ್ದೇಶವನ್ನು ಹೊಂದಿವೆ. ಇಂಗ್ಲಿಷ್ನಲ್ಲಿ ನಡೆಯುವ ಈ ಕೋರ್ಸ್ ಪದವಿಪೂರ್ವ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತವೆ.ಈ KCET ಕೋರ್ಸುಗಳು ಪ್ರಾದೇಶಿಕ ಮಾರುಕಟ್ಟೆಗಳಲ್ಲಿ ತನ್ನ ನೆಲೆಗಳನ್ನು ವಿಸ್ತರಿಸುವ ಮತ್ತು ರಾಜ್ಯಗಳ ಪದವಿಪೂರ್ವ ಮಂಡಳಿಗಳ ವಿದ್ಯಾರ್ಥಿಗಳೊಂದಿಗೆ ಸಿಬಿಎಸ್ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಗುಣಮಟ್ಟದ ತರಬೇತಿಯನ್ನು ಒದಗಿಸುವ ಆಕಾಶ್ ಅವರ ಕಾರ್ಯತಂತ್ರದ ಭಾಗವಾಗಿದೆ ರಾಜ್ಯ ಇಂಜಿನಿಯರಿಂಗ್ ಪ್ರವೇಶಗಳು ಮತ್ತು ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳೆರಡಕೂ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸುಗಳು ಸಮಗ್ರವಾದ ಸಾಧನವಾಗಿ ಸಹಾಯಕವಾಗುತ್ತವೆ. ವಾರ್ಷಿಕ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆಯನ್ನು ಬರೆಯುತ್ತಿದ್ದು…
ಮಂಗಳೂರು,ಜ.28 : ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ಸಿನೆಮಾ ಜನರಿಗೆ ಮನೋರಂಜನೆ ನೀಡುವಲ್ಲಿ ಒಂದು ಉತ್ತಮ ಚಲನಚಿತ್ರ. ಈ ಚಲನ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಎರಡು ವಾರದ ಒಳಗೆ ಟಿಕೆಟ್ ದಾಖಲೆ ತೋರಿಸುವವರಿಗೆ ರೋಹನ್ ಕಾರ್ಪೊರೇ ಷನ್ ಪ್ರೊಜೆಕ್ಟ್ ಬುಕ್ ಮಾಡುವವರಿಗೆ ಶೇ 10 ವಿನಾಯಿತಿ ನೀಡಲಾಗುವುದು ಎಂದು ಚಲನ ಚಿತ್ರವನ್ನು ಅರ್ಪಿಸುತ್ತಿರುವ ರೋಹನ್ ಕಾರ್ಪೊರೇ ಷನ್’ನ ಎಂ.ಡಿ ಹಾಗೂ ಚೇರ್ ಮ್ಯಾನ್ ರೋಹನ್ ಮೊಂತೆರೊ ಮಂಗಳವಾರ ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ. ಚಲನಚಿತ್ರದ ನಿರ್ದೇಶಕ ಮಾತನಾಡಿ ರೋಹನ್ ಕಾರ್ಪೊರೇ ಷನ್’ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ. ಆರ್ ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಮಂಗಳೂರಿನ ರೂಪವಾಣಿ, ಭಾರತ್ ಮಾಲ್’ನ ಬಿಗ್ ಸಿನಿಮಾಸ್, ಪಿವಿಆರ್,ಸಿನಿಪೊಲಿಸ್, ಭಾರತ್ ಸಿನಿಮಾಸ್ ದೇರಳಕಟ್ಟೆ,…
ಮಂಗಳೂರು,ಜ.28 : ಅಡ್ಯಾರು ಗ್ರಾಮದ ಗ್ರಾಮದೇವರಾದ ಮಹಾಲಿಂಗೇಶ್ವರ ಕ್ಷೇತ್ರವು ಊರ ಪರವೂರ ಭಕ್ತರ ಸಹಕಾರದೊಂದಿಗೆ ಬೈದ್ಯಾವುಗುತ್ತು ಕುಟುಂಬಿಕರ ವಂಶ ಪಾರಂಪರಿಕ ಆಡಳಿತದೊಂದಿಗೆ ಈ ಪುಣ್ಯ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಬಹಳ ಸುಂದರವಾಗಿ ಮೂಡಿಬಂದಿದ್ದು, ಮಾರ್ಚ್ 1 ರಿಂದ 14ರವರೆಗೆ ತನಕ ತಂತ್ರಿವರೇಣ್ಯರಾದ ವಾಮಂಜೂರು ಶ್ರೀ ಅನಂತ ಉಪಾಧ್ಯಾಯ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ,ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಾರ್ಚ್ 1ರಂದು ಸಂಜೆ ಗಂಟೆ 3.30ಕ್ಕೆ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತಸರ ರಾಘವೇಂದ್ರ ಶಾಸ್ತ್ರಿಗಳಿಂದ ಉದ್ಘಾಟಿಸಲ್ಪಡುವ ಹಸಿರು ಹೊರಕಾಣಿಕೆ ಶೋಭಾಯಾತ್ರೆಯು ಅಡ್ಯಾರು ಸೋಮನಾಥ ಕಟ್ಟೆಯಿಂದ ಹೊರಟು ರಾಜಮಾರ್ಗದಲ್ಲಿ ಸಾಗಿ ಶ್ರೀ ಕ್ಷೇತ್ರವನ್ನು ತಲುಪಲಿದೆ. ಮಾರ್ಚ್ 6ರಂದು ಬೆಳಗ್ಗೆ ಗಂಟೆ 11.05ರಿಂದ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ,ಮಹಾಕಾಳಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ ಆಗಿ ಮಾರ್ಚ್ 9ರಂದು ಬೆಳಗ್ಗೆ ಗಂಟೆ 11.05ಕ್ಕೆ ಬ್ರಹ್ಮಕಲಶಾಭಿಶೇಕ ನೆರವೇರಲಿದೆ. ಅದೇ ದಿನ ಸಂಜೆ…
ಮಂಗಳೂರು,ಜ.27 ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಜಾಯಿಂಟ್ ಬದಲಾವಣೆಗಾಗಿ ರೋಬೋಟ್ ಅನ್ನು ಸ್ಮಿತ್ + ನೆಪ್ಯೂದವರ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿ ಯನ್ನು ಬಿಡುಗಡೆ ಮಾಡಿದ್ದು ಅದನ್ನು ನಮ್ಮ ಅಧ್ಯಕ್ಷರಾದ ಡಾ. ಎ.ಜೆ. ಶೆಟ್ಟಿ ಉದ್ಘಾಟನೆ ಮಾಡಿದ್ದಾರೆ ಎಂದು ಎ.ಜೆ. ಆಸ್ಪತ್ರೆ ಮತ್ತು ರೀಸರ್ಚ್ ಸೆಂಟರ್ ನ ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಈ ತಂತ್ರಜ್ಞಾನದ ಮೂಲಕ ರೋಗಿಯ ಚಿಕಿತ್ಸೆ ಯನ್ನು ನಿಖರತೆಯೊಂದಿಗೆ ಕಾರ್ಯ ಗತಗೊಳಿಸಲು ಸಹಾಯ ಮಾಡು ತ್ತದೆ, ಇದರಿಂದ ರೋಗಿಗಳಿಗಾಗಿ ಉತ್ತಮ ಶಸ್ತ್ರಚಿಕಿತ್ಸಾ ಫಲಿತಾಂಶಗಳು ಮತ್ತು ವೇಗವಾದ ಚೇತರಿಕೆಗೆ ದಾರಿ ನೀಡು ತ್ತದೆ. ಈ ವ್ಯವಸ್ಥೆ ಪ್ರಗತಿಶೀಲ 3ಡಿ ಚಿತ್ರಣ ಮತ್ತು ಸಮಯಕ್ಕೆ ತಕ್ಕ ನವೀಕರಣವನ್ನು ಬಳಸುತ್ತಿದ್ದು ಶಸ್ತ್ರಚಿಕಿತ್ಸಕರಿಗೆ ವೈಯಕ್ಷಿಕ ಶಸ್ತ್ರಚಿಕಿತ್ಸಾ ಯೋಜನೆಗಳನ್ನು ರಚಿಸಲು ಮತ್ತು ಅತೀ ದಕ್ಷವಾದ ಸ್ಥಿರತೆಯೊಂದಿಗೆ ಸಕ್ರಿಯ ಇಂಪ್ಲಾಂಟ್ ತಂತ್ರವನ್ನು ಸಾಧಿಸಲು ಅವಕಾಶ ನೀಡುತ್ತದೆ.ಈ ಸಲಕರಣೆ ಮೊಣಕಾಲು, ಭಾಗಶಃ ಮೊಣಕಾಲು ಮತ್ತು ಸೊಂಟದ ಬದಲಿ ಶಸ್ತ್ರಚಿಕಿತ್ಸೆಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ…
ಬೆಂಗಳೂರು,ಜ.26 : ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಜನ ನಾಯಗಂ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ. ಹೆಚ್. ವಿನೋದ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ದಳಪತಿ ವಿಜಯ್ ಜನ ನಾಯಗಂ 69ನೇ ಚಿತ್ರವಾಗಿದೆ. ಸಿನಿಮಾದಿಂದ ನಿವೃತ್ತಿ ಹೊಂದುವ ಮುನ್ನ ವಿಜಯ್ ನಟಿಸಲಿರುವ ಕೊನೆಯ ಚಿತ್ರ ಇದಾಗಿದೆ. ಈ ಸಿನಿಮಾದಲ್ಲಿ ವಿಜಯ್ ಜೊತೆ ಪೂಜಾ ಹೆಗ್ಡೆ ನಾಯಕಿ. ಬಾಲಿವುಡ್ ನಟ ಬಾಬಿ ಡಿಯೋಲ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಮಮಿತಾ ಬೈಜು, ಡಿಜೆ ಅರುಣಾಚಲಂ ಮುಂತಾದ ತಾರಾಗಣ ಕೂಡ ಚಿತ್ರದಲ್ಲಿದ್ದಾರೆ. ಅನಿರುದ್ಧ್ ಸಂಗೀತ ನೀಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ಬೃಹತ್ ಬಜೆಟ್ನಲ್ಲಿ ನಿರ್ಮಿಸುತ್ತಿದೆ. ಸತ್ಯನ್ ಸೂರ್ಯನ್ ಛಾಯಾಗ್ರಹಣ, ಅನಲ್ ಅರಸು ಸಾಹಸ, ಪ್ರದೀಪ್ ಇ ರಾಘವ್ ಸಂಕಲನ, ಸೆಲ್ವಕುಮಾರ್ (ಕಲಾ ನಿರ್ದೇಶನ) ಮುಂತಾದ ದೊಡ್ಡ ತಾಂತ್ರಿಕ ತಂಡದೊಂದಿಗೆ ಜನ ನಾಯಗಂ 69ನೇ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರ ಈ ವರ್ಷ ಅಕ್ಟೋಬರ್ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ನಂತರ ವಿಜಯ್…
ಮಂಗಳೂರು ಜ.26 : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ಪತ್ರಿಕಾ ಭವನದಲ್ಲಿ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತಾನಾಡಿದ ಮಾಜಿ ಸಚಿವ,ಲ್ಯಾಂಡ್ಲಿಂಕ್ಸ್ ಸಂಸ್ಥೆಯ ಸಿಇಒ ಕೃಷ್ಣ ಜೆ. ಪಾಲೆಮಾರ್ ಅವರು ನನ್ನ ಉದ್ದಿಮೆಯಲ್ಲಿ ಮೂರು ಬಾರಿ ಸಂಪೂರ್ಣವಾಗಿ ಸೋತಿದ್ದೇನೆ. ಆದರೆ ಮುಂದೆ ಇದರಿಂದ ಹೊರಬರಲಿದ್ದೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸವಾಲನ್ನು ಸ್ವೀಕರಿಸಿ ಮುಂದೆ ಬಂದಿದ್ದೇನೆ. ಹಾಗಾಗಿ ಜೀವನದಲ್ಲಿ ಎದುರಾಗುವ ಸೋಲು ಹಾಗೂ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಶಾಲೆಗೆ ಹೋಗುತ್ತಿದ್ದ ಸಂದರ್ಭ ಮೋರ್ಗನ್ಸ್ಗೇಟ್ನ ಗೇರುಬೀಜ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ತಾನು ಮುಂದೊಂದು ದಿನ ಆ ಇಡೀ ಆಸ್ತಿಯನ್ನೇ ಖರೀದಿಸುವಷ್ಟು ಶಕ್ತನಾಗುತ್ತೇನೆಂಬ ಕನಸು ಕಂಡಿರಲಿಲ್ಲ. ಆದರೆ ಅದು ಇಂದು ಸಾಧ್ಯವಾಗಿದೆ ಎಂದವರು ಹೇಳಿದರು. ಸಣ್ಣ ಪುಟ್ಟ ವ್ಯವಹಾರ ನಡೆಸುತ್ತಿದ್ದ ಸಂದರ್ಭ ರಿಯಲ್ ಎಸ್ಟೇಟ್ ಆರಂಭಿಸಿದಾಗ ಸಿ.ಎಲ್. ಡಿಸೋಜಾ ಎಂಬವರು ಗಾಡ್ಫಾದರ್ ಆಗಿ ಬೆಂಬಲ ನೀಡಿದ ಕಾರಣ ವ್ಯವಹಾರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ನೆನಪಿಸಿಕೊಂಡ…
ಮಂಗಳೂರು ಜ.26 : ನಗದದ ಸುಲ್ತಾನ್ ಬತ್ತೇರಿಯಲ್ಲಿರುವ ಸ್ವಸ್ತಿಕ್ ವಾಟರ್ ಪ್ರಂಟ್ ನಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಅತಿಥಿಯಾಗಿದ್ದ ನಗರ ಪೊಲೀಸ್ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಮಾತಾನಾಡಿ, ಜೆಸಿಐ ಸಂಸ್ಥೆಯಿಂದ ನಡೆಯುತ್ತಿರುವ ಸಾಮಾಜಿಕ ಸೇವಾ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು. ನೂತನ ಅಧ್ಯಕ್ಷ ಯತೀಶ್ ಕೆ.ಎಸ್., ಮಾತಾನಾಡಿ, ಜೆಸಿಐ ಸಂಸ್ಥೆ ನನಗೆ ಸಮಾಜ ಸೇವೆ, ಶಿಸ್ತು ಸೇರಿ ಬಹಳಷ್ಟು ಕಳಿಸಿದೆ ಮತ್ತು ನನ್ನ ಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ಹೇಳಿದರು. ಸಮಾರಂಭದಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಡಾ.ರಾಘವೇಂದ್ರ ಹೊಳ್ಳ, ನೂತನ ಅಧ್ಯಕ್ಷ ಯತೀಶ್ ಕೆ.ಎಸ್., ನಿಕಟಪೂರ್ವ ಅಧ್ಯಕ್ಷೆ ದೀಪಾ ರಾವ್, ನಿಯೋಜಿತ ಕಾರ್ಯದರ್ಶಿ ಭೂಮಿಕಾ ಪೂಜಾರಿ, ಅಲ್ವಿನ್ ಸಿಕ್ವೆರ ಮತ್ತಿತ್ತರರು ಉಪಸ್ಥಿತರಿದ್ದರು.ಸಭೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬೆಂಗಳೂರು, ಜ.26 : ಎರಡು ಹೊಸ ಧಾರಾವಾಹಿಗಳನ್ನು ಕಲರ್ಸ್ ವಾಹಿನಿಯಲ್ಲಿ ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ. 27 ರಂದು ಪ್ರಸಾರವಾಗಲಿವೆ. ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30 ಕ್ಕೆ ಪ್ರಸಾರ ಆಗಲಿದೆ. ಕಾಂಟ್ರಾಕ್ಟ್ ಮದುವೆ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರ ಆಗಲಿದೆ. ವಧು ಧಾರಾವಾಹಿಯಲ್ಲಿ ವಧು ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ವಧು ಮನುಷ್ಯ ಸಂಬಂಧಗಳನ್ನು ಪ್ರೀತಿಸುವ ಮತ್ತು ಗೌರವಿಸುವ ಕಥೆ ಈ ಧಾರಾವಾಹಿಯಲ್ಲಿದೆ. ಸಾರ್ಥಕ್ ಪಾತ್ರದಲ್ಲಿ ಲಕ್ಷಣ ಧಾರಾವಾಹಿಯ ಅಭಿಷೇಕ್ ಶ್ರೀಕಾಂತ್, ವಧು ಪಾತ್ರದಲ್ಲಿ ದುರ್ಗಾಶ್ರೀ ಮತ್ತು ಪ್ರಿಯಾಂಕಾ ಪಾತ್ರದಲ್ಲಿ ಸೋನಿ ಮುಲೇವಾ ನಟಿಸಲಿದ್ದಾರೆ. ಹೆಸರಾಂತ ಕಲಾವಿದರಾದ ವಿನಯಾ ಪ್ರಸಾದ್, ಸುಧಾ ಬೆಳವಾಡಿ, ರವಿ ಭಟ್, ರವಿ ಕುಮಾರ್ ಮತ್ತು ರೇಖಾ ಸಾಗರ್ ಅವರು ಅಭಿನಹಿಸಿದ್ದಾರೆ. ಯಜಮಾನ ಧಾರಾವಾಹಿಯಲ್ಲಿ ರಘು ಒಬ್ಬ ಸ್ವಾರ್ಥವಿಲ್ಲದ ಸರಳ ವ್ಯಕ್ತಿ, ಇವರಿಗೆ ತನ್ನ ಕುಟುಂಬದ ಪ್ರೀತಿ…