Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಸೆ. 23 : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ವಿವಿಧ ಪ್ರಕರಣದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಅವರು ಆದೇಶ ಹೊರಡಿಸಿದ್ದಾರೆ. ಪುತ್ತೂರು ಸಹಾಯಕ ಆಯುಕ್ತ ಎಸಿ ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಿರುವುದಾಗಿ ವರದಿಯಾಗಿದೆ. ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ, ಸೆ. 23 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ ಸೆ. 14ರಿಂದ ಮೊದಲ್ಗೊಂಡು ಸೆ 21ರಂದು ಸಮಾಪನಗೊಂಡ 27ನೇ ವರ್ಷದ ಭಜನ ಕಮಟದ ಪ್ರಯುಕ್ತ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರೋಪ ಸಮಾರಂಭ ನಡೆಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ, ಓಂಕಾರದಿಂದ ಸೃಷ್ಟಿತ ಭಜನೆಯು ಬದುಕಿನ ಸಾಮರಸ್ಯಕ್ಕೆ ಪ್ರೇರಣೆಯಾಗಿದೆ.ಭಗವಂತನ ಅನುಸಂಧಾನಕ್ಕೆ ಭಜನೆ ಪ್ರೇರಣೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ವೀರೇಂದ್ರ ಹೆಗ್ಗಡೆ ಮಾತನಾಡಿ, ಕಳೆದ 85 ವರ್ಷದಿಂದ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯುತ್ತಿದೆ. ಕ್ಷೇತ್ರದಲ್ಲಿ ಯಾವ ಜಾತಿ, ಮತ ಕಟ್ಟುಪಾಡಿನ ನಿರ್ಬಂಧವಿಲ್ಲ ಭಜನೆಯೆಂಬ ಭಕ್ತಿಯ ಶಕ್ತಿಯಲ್ಲಿ ಸಾಮರಸ್ಯ ಅಡಗಿದೆ ಎಂದರು. ಸಮಾರೋಪ ಸಮಾರಂಭದಲ್ಲಿ ಮಾಣಿಲ – ಮೋಹನದಾಸ ಶ್ರೀಧಾಮದ ಶ್ರೀ ಪರಮಹಂಸ ಸ್ವಾಮೀಜಿ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ಉಪಾಧ್ಯಕ್ಷೆ ಡಾ| ಹೇಮಾವತಿ ವೀ. ಹೆಗ್ಗಡೆ, ಸಂಸದ ಕ್ಯಾ|…
ಮಂಗಳೂರು, ಸೆ.22 : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ರ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಸೆ.22, ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಮಾತನಾಡಿ, ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಸಪ್ಟೆಂಬರ್ 30 ರ ಮಂಗಳವಾರದಂದು ನಾಲ್ಕನೇ ವರ್ಷದ ಪಿಲಿಪರ್ಬವು ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಸುತ್ತಾ, ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದರು. ಕಾರ್ಯಕ್ರಮದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ,…
ಮಂಗಳೂರು, ಸೆ.22 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಿಂದ ಅಕ್ಟೋಬರ್ 3ರವರೆಗೆ ಮಂಗಳೂರು ದಸರಾ ನವರಾಯತ್ರಿ ಉತ್ಸವ ಜರುಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಕೋಶಾಧಿಕಾರಿಯಾದ ಪದ್ಮರಾಜ್ ಆರ್ ಅವರು ಶನಿವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಸೆ.22ರಂದು ಬೆಳಗ್ಗೆ 8.30ಕ್ಕೆ ಗುರು ಪ್ರಾರ್ಥಯೊಂದಿಗೆ ಪುಣ್ಯಾಹ ಹೋಮ ನವಕಲಶಾಭಿಷೇಕ ನಡೆದು ಪೂರ್ವಾಹ್ನ 12ಗಂಟೆಗೆ ನವದುರ್ಗೆಯರು, ಮಹಾಗಣಪತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ಯೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 3ರ ತನಕ ಕೇಂದ್ರದ ಮಾಜಿ ಸಚಿವರು, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ದಸರಾ (ನವರಾತ್ರಿ ಮಹೋತ್ಸವ) ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಬಣೆಯಿಂದ ಜರುಗಲಿದೆ ಎಂದು ಹೇಳಿದರು. ಸೆ.22ರಂದು ಬೆಳಗ್ಗೆ 11.30ಕ್ಕೆ ಧಾರ್ಮಿಕ ಕಾರ್ಯಕ್ರಮಗಳು ಮಂಗಳೂರು ರಾಮಕೃಷ್ಣ ಮಿಶನ್ ನ ಅಧ್ಯಕ್ಷರಾದ ಜಿತಕಾಮಾನಂದಜಿ ಮಹಾರಾಜ್, ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ಅವರ ಹಸ್ತದಿಂದ ಬಿ.ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ ಚಾಲನೆಗೊಳ್ಳಲಿದೆ., ಸೆ.21ರಂದು ಸಂಜೆ…
ಉಜಿರೆ, ಸೆ. 21 :: ಮಂಗಳೂರು, ಬೆಂಗಳೂರು, ಹಾಸನ, ಉಡುಪಿ, ಉಜಿರೆ, ಧಾರವಾಡ ಹಾಗೂ ಮೈಸೂರಿನಲ್ಲಿರುವ ಕೆ.ಜಿ. ಯಿಂದ ಪಿ.ಜಿ ವರೆಗಿನ ೫೬ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಉಡುಪಿಯ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಹಿರಿಯ ವಿದ್ಯಾರ್ಥಿ ಡಾ. ಎಂ. ಮೋಹನ ಆಳ್ವ ಮಾತನಾಡಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತನ್ನ ಬದುಕಿನ ಮಾರ್ಗದರ್ಶಕರು ಹಾಗೂ ಗುರುಗಳಾಗಿದ್ದು ತಾನು ಅವರ ಅಭಿಮಾನಿ, ಶಿಷ್ಯನಾಗಿರುತ್ತೇನೆ..ಪಾರಂಪರಿಕ ಚಿಕಿತ್ಸಾ ಪದ್ಧತಿಗಳಾದ ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗಾಭ್ಯಾಸಗಳಿಗೆ ಹೆಗ್ಗಡೆಯವರ ಸೇವೆ ಮತ್ತು ಕೊಡುಗೆಯನ್ನು ಧನ್ಯತೆಯಿಂದ ಸ್ಮರಿಸಿದರು. ಹಾಸನ ಮತ್ತು ಬೆಂಗಳೂರಿನಲ್ಲಿರುವ ಎಸ್.ಡಿ.ಎಮ್. ಆಯುರ್ವೇದ ಕಾಲೇಜುಗಳು ಮತ್ತು ಆಸ್ಪತ್ರೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿವೆ. ಉಜಿರೆ ಮತ್ತು ಧರ್ಮಸ್ಥಳದಲ್ಲಿರುವ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕೂಡಾ ಉತ್ತಮ ಸೇವೆಯಲ್ಲಿ ಚಿರಪರಿಚಿತವಾಗಿವೆ ಎಂದರು. ಪೂನಾದ ಕಾನೂನು ಕಾಲೇಜಿನ ಡೀನ್ ಹಾಗೂ ಮಂಗಳೂರಿನ ಎಸ್.ಡಿ.ಎಮ್.…
ಮಂಗಳೂರು, ಸೆ. 19 : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಬಂಟ, ನಾಡವರನ್ನು ಪ್ರತ್ಯೇಕವಾಗಿ ಪರಿಗಣಿಸಬಾರದು. ಇವೆರಡೂ ಒಂದೇ ಜಾತಿ, ಸಮುದಾಯವಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ಅದನ್ನು ಸಷ್ಟವಾಗಿ ಕಾಣಿಸಬೇಕು ಎಂದು ಬಂಟರ ಯಾನ ನಾಡವರ ಮಾತೃಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಗುರುವಾರ ಬಂಟರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಸಮೀಕ್ಷೆಗೆ ವಿರೋಧವಿಲ್ಲ. ಆದರೆ ನಮ್ಮ ಹೆಸರು ಉಲ್ಲೇಖ ಸ್ಪಷ್ಟವಾಗಿರಬೇಕು. ಸಮೀಕ್ಷೆಗೆ ಬರುವಾಗ ಸಮುದಾಯದವರು ಮೊಬೈಲ್ ಆಪ್ ನಲ್ಲಿರುವ 8ನೇ ಕಾಲಂನಲ್ಲಿ ಧರ್ಮ ಎಂದಿರುವ ಜಾಗದಲ್ಲಿ ಹಿಂದೂ ಎಂದು ನಮೂದಿಸಿ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-0227) ರಂತೆ ಬಂಟ್ ಎಂದು ನಮೂದಿಸಬೇಕು. 11ನೇ ಕಾಲಂನಲ್ಲಿ ಸಮಾನಾರ್ಥದ (ಪರ್ಯಾಯ) ಹೆಸರು ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-1026)ರಂತೆ ನಾಡವ ಎಂದು ನಮೂದಿಸಬೇಕು. ಇದೇ ರೀತಿ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A- 1026)…
ಮಂಗಳೂರು, ಸೆ. 19 : ಶ್ರೀ ರಾಮ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಮಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಸೆ.12, ಶುಕ್ರವಾರ ನಡೆಯಿತು. ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮಕ್ಕೆ ಸಂಸದ ದಕ. ಜಿಲ್ಲಾ ಸಂಸದ ಕ್ಯಾ ಬೃಜೇಶ್ ಚೌಟ ಚಾಲನೆ ನೀಡಿ ಮಾತಾಡಿದ ಅವರು, ನಮ್ಮ ದೇಶದಲ್ಲಿ ಶೇ. 65ರಷ್ಟು ಯುವ ಸಮೂಹವು ಇದೆ. ಈ ಯುವ ಸಮೂಹದ ಸಮಯಗಳು ದೇಶ ಕಟ್ಟುವ ಕಾರ್ಯಕ್ಕೆ ವಿನಿಯೋಗ ಆಗಬೇಕಾಗಿದೆ.ಉಳ್ಳವರು ಮು೦ದೆ ಬಂದು ವಿದ್ಯಾರ್ಜನೆಗೆ ನೈತಿಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಸಾಮಾಜಿಕ ಕಲಾ ಮತ್ತು ಕ್ರೀಡಾ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕಂತ ಮಹಾಲಿಂಗ ನಾಯಕ್ ಅಮೈ, ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ವಿಜೇತ ಕುಮಾರಿ ರೆಮೋನಾ ಇವೆಟ್ ಪರೇರಾ, ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿಗಳಾದ ಮೋಹನ್ (ಸೆನ್ ಪೊಲೀಸ್ ಠಾಣೆ…
ಮಂಗಳೂರು, ಸೆ. 18 : ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿಸಲಿವೆ ಎಂದು ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯ ಪ್ರಧಾನ ಸಂಯೋಜಕರಾದ ಕೆ ರಾಜೇಶ್ ಶೆಟ್ಟಿ ಶಬರಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಸೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ನಗದು ಸಹಿತ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಪ್ರಧಾನ ಅತಿಥಿಗಳಾಗಿ ಖ್ಯಾತ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರ ಭಾಗವಹಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿ ಜಿಲ್ಲಾ ಗವರ್ನರ್ ಕುಡ್ಲಿ ಅರವಿಂದ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಹುಮಾನ ವಿತರಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ವೇದಮೂರ್ತಿ…
ಮಂಗಳೂರು, ಸೆ. 18 : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ 18ನೇ ವಾರ್ಷಿಕ ಸಮಾರಂಭದ ಪ್ರಯುಕ್ತ ಸ್ವರ ಕುಡ್ಡ ಗ್ರಾಂಡ್ ಫಿನಾಲೆ ಹಾಗೂ ವಾರ್ಷಿಕ ಸಮಾರಂಭ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಾ ಮಾದರಿ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದರು. ಪತ್ರಕರ್ತ ವಾಲ್ಟರ್ನಂದಳಿಕೆ ಮಾತನಾಡಿ, ಸಂಗೀತ ಕಲಾವಿದರು ತಮ್ಮ ಸಂಗೀತದ ಮೂಲಕ ಜನರನ್ನು ರಂಜಿಸುತ್ತಾರೆ. ತುಳುನಾಡಿನಲ್ಲಿ ಕಲಾವಿದರಿಗೆ ಬೆಲೆ ಕಟ್ಟುವುದಕ್ಕಿಂತ ಬೆಲೆ ನೀಡುವವರಿದ್ದಾರೆ. ಜನರಿಗೆ ಮನೋರಂಜನೆ ನೀಡುವುದು ಸುಲಭವಲ್ಲ ಎಂದರು. ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದ ಹಿರಿಯ ಕಲಾ ಸಾಧಕರಾದ ತೊನ್ನೆ ಪುಷ್ಕಳ ಕುಮಾರ್, ಐವನ್ ಸೀಕ್ವೆರಾ, ಹನೀಫ್ ಪರ್ಲಿಯಾ ಪರವಾಗಿ ಹುಸೈನ್ ಕಾಟಿಪಳ್ಳ ಅವರಿಗೆ ಕರಾವಳಿ ಸಂಗೀತ…
ಸುಳ್ಯ, ಸೆ. 15 : ತೆಂಗಿನ ಮರದಿಂದ ಕಾಯಿಯನ್ನು ಕೀಳುತ್ತಿದ್ದಾಗ ಅಲ್ಯೂಮೀನಿಯಂ ದೋಟಿ ವಿದ್ಯುತ್ ಲೈನಿಗೆ ತಾಗಿ ಶಾಕ್ ಹೊಡೆದು ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಸಾವನಪ್ಪಿದ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ದೋಟಿ ತೋಟದ ಬದಿಯಲ್ಲಿ ಹಾದು ಹೋಗಿರುವ ಎಚ್.ಟಿ. ಲೈನ್ಗೆೆ ತಾಗಿ ದೋಟಿಯ ಮೂಲಕ ವಿದ್ಯುತ್ ಹರಿದು ರಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.












