Author: admin

ನವದೆಹಲಿ: ದೇಶಾದ್ಯಂತ ಜೂನ್ ತಿಂಗಳಿಂದ ಕೋವಿಡ್ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ. ಜೂನ್ ನಿಂದ ಎರಡು ತಿಂಗಳ ಅವಧಿಯಲ್ಲಿ ಪ್ರತಿ ಮನೆಗೂ ಲಸಿಕೆ ಅಭಿಯಾನವನ್ನು ನಡಸಬೇ ಕು. ಕೋವಿಡ್ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಇನ್ನೂ ಲಸಿಕೆ ಪಡೆದುಕೊಳ್ಳದೇ ಇರುವವರಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮುಂದುವರಿಸಬೇಕು ಎಂದು ತಿಳಿಸಲಾಗಿದೆ.

Read More

ಮುಂಬೈ: ಬಾಲಿವುಡ್ ನಟಿ, ಐಟಂ ಗರ್ಲ್ ತಮ್ಮ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಸ್ವಯಂವರದ ಮೂಲಕ ರಿತೇಶ್ ಎಂಬಾತನನ್ನು ವರಿಸಿದ್ದ ಬಾಲಿವುಡ್ ಐಟಂ ಗರ್ಲ್  ರಾಖಿ ಸಾವಂತ್ ನಂತರ ಅವರಿಂದ ದೂರವಗಿದ್ದರು.ಆನಂತರ ತಮಗೆ ಇನ್ನೊಬ್ಬರೊಂದಿಗೆ ಮದುವೆಯಾವಾಗಿರುವುದಾಗಿ ಹೇಳಿಕೊಂಡು, ಆತನನ್ನು ಎಲ್ಲರಿಗೂ ಪರಿಚಯಿಸಿದ್ದರು.ಆದರೆ ನಂತರ ಇದು ಸುಳ್ಳು  ಎಂದು ತಿಳಿಯಿತು. ಇದೀಗ ರಾಖಿ ಸಾವಂತ್ ಮತ್ತೆ ಸುದ್ದಿಯಲ್ಲಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ತಮಗೆ ಹೊಸ ಪ್ರೇಮಿ ಸಿಕ್ಕಿರುವುದಾಗಿ ರಾಖಿ ಸಾವಂತ್ ಹೇಳಿಕೊಂಡಿದ್ದಾರೆ. ಅವರ ಹೊಸ ಪ್ರೇಮಿ ಮೈಸೂರಿನ ಆದಿಲ್ ಎಂಬವರು ಆಗಿರುತ್ತಾರೆ.ಮೈಸೂರಿನ ಆದಿಲ್ ಎಂಬವರು ತನಗೆ ಬಿಎಂಡಬ್ಲ್ಯೂ ಕಾರ್ ನೀಡಿ ಪ್ರಪೋಸ್ ಮಾಡಿದ್ದಾರೆ ಎಂದು ರಾಖಿ ಸಾವಂತ್ ತಿಳಿಸಿದ್ದಾರೆ.

Read More

ಬೆಂಗಳೂರು: ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಸಿ.ಹೆಚ್‌.ಪ್ರತಾಪ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಸೋಮವಾರದಂದು ಬೆಂಗಳೂರಿನ ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗಗಕ್ಕೆ ವರ್ಗಾಯಿಸಲಾಗಿದೆ. ಇದೀಗ ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ದಿಯವರನ್ನು ನೇಮಕ ಮಾಡಲಾಗಿದೆ.

Read More

ನ್ಯೂಯಾರ್ಕ್ : ನ್ಯೂಯಾರ್ಕ್ನನಲ್ಲಿನ  ಬಫಲೋದ ಸೂಪರ್ಮಾರ್ಕೆಟ್ ನಲ್ಲಿ. ದುಷ್ಕರ್ಮಿಯೊಬ್ಬ  ರೈಫಲ್ನಿಂದ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10 ಮಂದಿ  ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಬಂದೂಕುಧಾರಿ ವ್ಯಕ್ತಿಯೊಬ್ಬ ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ ಸೂಪರ್ ಮಾರ್ಕೆಟ್ ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿ 10 ಮಂದಿಯನ್ನು ಕೊಂದಿದ್ದಾನೆ. ಈ  ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಏಕಾಏಕಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ದಾಳಿ ಕೃತ್ಯವನ್ನು ಕ್ಯಾಮೆರಾದಲ್ಲಿ ಲೈವ್ ಸ್ಟ್ರೀಮ್ ಮಾಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ 1,000 ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಹೆಚ್ಚುವರಿ 1,000 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಹಾಗೂ ಇವಿ  ಚಾರ್ಜಿಂಗ್ ಕೇಂದ್ರಗಳನ್ನು ಉತ್ತೇಜಿಸಲು ವಿಶೇಷ ಡ್ರೈವ್ ನಡೆಸಲಾಗುವುದು ಎಂದರು. ಇವಿ ಚಾರ್ಜಿಂಗ್  ಕೇಂದ್ರಗಳನ್ನು ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ,ಜಿಲ್ಲಾ ಕೇಂದ್ರಗಳಲ್ಲಿ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಾಪಿಸಲಾಗುವುದು ಎಂದು  ತಿಳಿಸಿದ್ದಾರೆ.

Read More

ಬೆಂಗಳೂರು : ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್ ಪ್ರಕರಣಗಳು ಇದೀಗ ಮತ್ತೆ ಅಲ್ಪ ಜೀವ ಪಡೆದುಕೊಂಡಿದೆ. ಕೊರೊನಾ ವೈರಸ್ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ನಿಯಂತ್ರಣ ಕ್ರಮಗಳು ಕೂಡ ಸಡಿಲಗೊಂಡಿತ್ತು. ಆದರೆ ಇದೀಗ ಕರ್ನಾಟಕದಲ್ಲಿ  ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ . ಅದ್ದರಿಂದ ಇದೀಗ ಮತ್ತೆ ಕೆಲವು ನಿರ್ಬಂಧಗಳತ್ತ ಸರಕಾರ ಮುಖಮಾಡಿದೆ. ಹರಿಯಾಣ , ದೆಹಲಿ, ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ಸ್ವಲ್ಪ ಹೆಚ್ಚಳವಾಗುತ್ತಿವೆ. ಅಲ್ಲದೆ ಇದೀಗ ಕರ್ನಾಟಕ ರಾಜ್ಯದಲ್ಲಿಯೂ ಕೊರೊನಾ ವೈರಸ್ ಪ್ರಕರಣಗಳು ಏರಿಕೆಯಾಗುತ್ತಿವೆ. ಅದ್ದರಿಂದ ಈ ರಾಜ್ಯಗಳಲ್ಲಿ ಮಾಸ್ಕ್ ಧರಿಸಲು ಮತ್ತೆ ಸೂಚಿಸಲಾಗಿದೆ. ಇದರ ಅನುಸರಣೆ ಮಾಡದಿದ್ದರೆ ದಂಡ ಪ್ರಯೋಗಕ್ಕೆ ಆದೇಶಿಸಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಉಲ್ಬಣವನ್ನು ಕಡಿಮೆ ಮಾಡಲು, ಪೂರ್ವಭಾವಿ ಹೆಜ್ಜೆಯಾಗಿ, ರಾಜ್ಯ ಕೋವಿಡ್- 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಮಾರ್ಗಸೂಚಿ ಆದೇಶವನ್ನು ಹೊರಡಿಸಲಾಗಿದೆ. ಮಾರ್ಗಸೂಚಿಯ ಪ್ರಕಾರ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ, ಪ್ರಯಾಣ ಸಮಯದಲ್ಲಿ…

Read More

ಮಂಗಳೂರು :ಪೊಳಲಿ  ಜಾತ್ರೆ ಎಂದರೆ ಒಂದೆರಡು ದಿನಗಳ ಸಂಭ್ರಮವಲ್ಲ ಇದು ಒಂದು ತಿಂಗಳ ಕಾಲ ನಡೆಯುವ ಉತ್ಸವವಾಗಿದೆ. ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ. ಐದು ದಿನಗಳ ಕಾಲ‌ ನಡೆಯುವ ಚೆಂಡು ಉತ್ಸವ ಭಕ್ತರ ಆಕರ್ಷಣೆಯ ಕಾರ್ಯಕ್ರಮವಾಗಿದ್ದು, ಕಾಲ್ಚೆಂಡು ಆಟದ ರೀತಿ ದೇವಳದ ಎದುರಿನ ಗದ್ದೆಯಲ್ಲಿ ರಬ್ಬರ್ ಚೆಂಡಿನಲ್ಲಿ ಭಕ್ತರು ಆಟ ಆಡುತ್ತಾರೆ ಈ ಬಾರಿಯಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ  ವಾರ್ಷಿಕ ಜಾತ್ರೆಯು  07-04-2022 ರಿಂದ  14-04-2022ರ ತನಕ ಸಂಭ್ರಮದಿಂದ ಜರುಗಿತು.  ಏಪ್ರಿಲ್ 14, ಗುರುವಾರ ರಾತ್ರಿ ಕ್ಷೇತ್ರದ ಪ್ರಧಾನ ದೈವ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆದಿದ್ದು,ಸಂಪೋಕ್ಷಣೆ,ಮಂತ್ರಾಕ್ಷತೆಯೊಂದಿಗೆ ಈ ಬಾರಿಯ ಪೊಳಲಿ ಜಾತ್ರಾ ಮಹೋತ್ಸವವು ಸಮಾಪನಗೊಂಡಿದೆ. ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನಡೆದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಪರವೂರ ಭಕ್ತಭಿಮಾನಿಗಳು ಭಾಗವಹಿಸಿದ್ದರು.

Read More

ನವದೆಹಲಿ: ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ  ಸಂಪರ್ಕ ಒದಗಿಸುವ ವಿಮಾನ ಹಾರಾಟ ಮೇ 1ರಿಂದ ಆರಂಭಗೊಳ್ಳಲಿದೆ. ಮೇ 1ರಿಂದ ವಾರದಲ್ಲಿ  4 ದಿನ ಮಂಗಳೂರು ನಗರಕ್ಕೆ ಮತ್ತು ಮೇ 3 ರಿಂದ ವಾರದ ಮೂರು ದಿನ ಮೈಸೂರಿಗೆ ವಿಮಾನಯಾನ ಆರಂಭಗೊಳ್ಳಲಿದೆ. ಹುಬ್ಬಳ್ಳಿಯಿಂದ ಮಂಗಳೂರು- ಮೈಸೂರಿಗೆ ವಿಮಾನ ಹಾರಾಟ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್  ಜೋಶಿ ಅವ್ರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

Read More

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್‌ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಆರ್‌ ರಮೇಶ್‌ ಅವರು, ಅಧ್ಯಕ್ಷ ರಹೀಂ ಉಚ್ಚಿಲ್‌ ಅವರನ್ನು ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

Read More

ಉಡುಪಿ : ಖಾಸಗಿ ಬಸ್ ನಿರ್ವಾಹಕರು ಟೈಮಿಂಗ್ ವಿಷಯದಲ್ಲಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್‌ಗಳ ಕಂಡಕ್ಟರ್‌ಗಳು ಟೈಮಿಂಗ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಸಿಟಿ ಬಸ್ ನಿಲ್ದಾಣದಲ್ಲೇ ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟ ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

Read More