Author: admin

ಬೆಂಗಳೂರು, ಆ. 30 : ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಗಂಧಕ ಇರುವುದನ್ನು ಚಂದ್ರನ ಅಂಗಳದಲ್ಲಿ ಸಂಚರಿಸುತ್ತಿರುವ ಚಂದ್ರಯಾನ-3 ರೋವರ್(ಪ್ರಜ್ಞಾನ್) ನಲ್ಲಿರುವ ಲೇಸರ್ ಇಂಡ್ಯೂಸ್ ಬ್ರೇಕ್ಡೌನ್ ಸ್ಪೆಕ್ಟ್ರೋಸ್ಕೋಪ್ ಉಪಕರಣವು ಪತ್ತೆ ಮಾಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮಂಗಳವಾರ ತಿಳಿಸಿದೆ. ನಿರೀಕ್ಷಿಸಿದಂತೆ, ಪ್ರಗ್ಯಾನ್ ರೋವರ್, ಅಲ್ಯೂಮಿನಿಯಂ, ಕ್ಯಾಲ್ಸಿಯಂ, ಕಬ್ಬಿಣ, ಕ್ರೋಮಿಯಂ, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕವನ್ನು ಪತ್ತೆ ಮಾಡಿದೆ ಎಂದು ಇಸ್ರೋ ಹೇಳಿದೆ. ಲಿಬ್ (ಲೇಸರ್ ಇಂಡ್ಯೂಸ್ ಬ್ರೇಕ್‌ಡೌನ್ ಸ್ಪೆಕ್ರೋಸ್ಕೋಪ್) ಉಪಕರಣವನ್ನು ಬೆಂಗಳೂರಿನ ಎಲೆಕ್ಟ್- ಆಪ್ಟಿಕ್ಸ್ ಸಿಸ್ಟಮ್ ಪ್ರಯೋಗಾಲಯ ಅಭಿವೃದ್ಧಿಪಡಿಸಿತ್ತು.

Read More

ಉಳ್ಳಾಲ, ಆ. 29: ಸ್ನೇಹಿತರ ಜತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಮೃತರನ್ನು ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್ ಆಚಾರ್ಯ(36) ಎಂದು ಗುರುತಿಸಲಾಗಿದೆ. ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಬೈಂದೂರು, ಆ. 28 : ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ನೀರು ಪಾಲಾದ ಘಟನೆ ರವಿವಾರ ಅಳ್ವೆಗದ್ದೆಯಲ್ಲಿ ನಡೆದಿದೆ. ಮೃತರನ್ನು ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಎಂದು ಗುರುತಿಸಲಾಗಿದೆ. ಕೆಲ ದಿನಗಳಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಕೈರಂಪಣಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಸಮುದ್ರ ಪಾಲಾಗಿದ್ದಾರೆ ಎನ್ನಲಾಗಿದೆ.

Read More

ಮಂಗಳೂರು, ಆ. 27 : ಟಿಪ್ಪರ್ ಮತ್ತು ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ನಲ್ಲಿ ನಡೆದಿದೆ. ಮೃತರನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಶರಫುದ್ದೀನ್ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

Read More

ಸ್ಯಾನ್ ಡಿಯಾಗೋ, ಆ. 26 ; ಅಮೆರಿಕದ ನೌಕಾಪಡೆಯ ಮೆರೈನ್ ಕಾರ್ಪ್ಸ್ ಎಫ್/ಎ-18 ಹಾರ್ನೆಟ್ ಫೈಟರ್ ಜೆಟ್ ಪತನಗೊಂಡು ಒಬ್ಬ ಪೈಲೆಟ್ ಸಾವನ್ನಪ್ಪಿದ ಘಟನೆ ಸ್ಯಾನ್ ಡಿಯಾಗೋ ದಲ್ಲಿ ನಡೆದಿದೆ. ಅಪಘಾತದ ಸ್ಥಳವು ಮೆರೆನ್ ಕಾರ್ಪ್ ಏರ್ ಸ್ಟೇಷನ್ ಮಿರಾಮರ್ ಬಳಿ ಇದೆ. ಗುರುವಾರ ಮಧ್ಯರಾತ್ರಿ ಫೈಟರ್ ಜೆಟ್ ಪತನಗೊಂಡಿದೆ.ಅಪಘಾತದ ನಂತರ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ತಂಡ ಖಚಿತಪಡಿಸಿದೆ. ಫೈಟರ್ ಜೆಟ್ ಪತನದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

Read More

ಕಾರ್ಕಳ, ಆ.24: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಎಂದು ಗುರುತಿಸಲಾಗಿದೆ. ರಜನೀಶ ಅವರು ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಉಡುಪಿಯ ಆಸ್ವತ್ರೆಯೊಂದಕ್ಕೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿದ್ದರು. ಆ.. 20 ಭಾನುವರ ಏಕಾಎಕಿ ವಾಂತಿ ಜ್ವರ ಉಲ್ಬಣಗೊಂಡಿದ್ದು ಉಡುಪಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಐಜ್ವಾಲ್, ಆ 23 : ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ ಘಟನೆ ಮಿಜೋರಾಂನಲ್ಲಿ ನಡೆದಿದೆ. ಬುಧವಾರ ಐಜ್ವಾಲ್ ಸಮೀಪದ ಸಾಯಿರಾಂಗ್ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಇದರ ಪರಿಣಾಮ 17 ಮಂದಿ ಸಾವನ್ನಪ್ಪಿ ಹಲವರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ನೀಡುವುದಾಗಿ ಘೋಷಿಸಿದ್ದಾರೆ.

Read More

ಕಾಸರಗೋಡು, ಆ. 22 : ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ಇಬ್ಬರು ನೌಕರರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆ. 20, ರವಿವಾರ ನೀಲೇಶ್ವರ ದ ತೈಕಡಪ್ಪುರದಲ್ಲಿ ನಡೆದಿದೆ. ಮೃತರನ್ನು ರಾಜೇಶ್ (35) ಮತ್ತು ರಕ್ಷಣಾ ಬೋಟ್ ನ ನೌಕರ ಸನೀಶ್ ( 32) ಎಂದು ಗುರುತಿಸಲಾಗಿದೆ. ಮೀನು ಹಿಡಿಯುತ್ತಿದ್ದ ವೇಳೆ ರಾಜೇಶ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದು , ಅವರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ ಸನೀಶ್ ಕೂಡಾ ನೀರುಪಾಲಾಗಿದ್ದಾರೆ. ಕರಾವಳಿ ಪೊಲೀಸರು, ಸ್ಥಳೀಯರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

Read More

ಬೆಳಗಾವಿ, ಆ. 21: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಹಲವು ಪ್ರಯತ್ನಗಳ ನಂತರವೂ ಸಫಲತೆ ಸಿಗದ ಹಿನ್ನೆಲೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ ನಡೆದಿದೆ. ಮೃತರನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ (24) ಎಂದು ಗುರುತಿಸಲಾಗಿದೆ. ಶಿವಾಜಿ ಪಾನಡೆ ಅವರು ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಕಂಡಿದ್ದನು. ಅದಕ್ಕಾಗಿ ಹಲವು ಬಾರಿ ಮಾಡಿದ ಪ್ರಯತ್ನಗಳು ಕೈಗೂಡಿರಲಿಲ್ಲ. ಕನಸು ನನಸಾಗದ ಕೊರಗಿನಲ್ಲಿ ಶಿವಾಜಿ ಅವರು ತನ್ನ ಮನೆಯಲ್ಲಿನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ ಎನ್ನಲಾಗಿದೆ. ನಿಪ್ಪಾಣಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ, ಆ. 19: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ನಿವಾಸಿ, ಬಾಯಾರು ಮುಳಿಗದ್ದೆ ಹೆದ್ದಾರಿ ಎ.ಯು.ಪಿ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಎನ್.ಗೋವಿಂದ ಭಟ್ (89) ಅವರು ಆ, 16 ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. 21-08-1934ರಲ್ಲಿ ಜನಿಸಿದ ಇವರು, ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾದ ಬಳಿಕ ಅದೇ ಶಾಲೆಯ ಮಿತ್ರ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.ಕರೋಪಾಡಿ ವ್ಯವಸಾಯಿಕ ಸಹಕಾರಿ ಬ್ಯಾಂಕಿನಲ್ಲಿ ಎರಡು ಬಾರಿ ನಿರ್ದೇಶಕರಾಗಿ ನಿರ್ವಹಿಸಿದ್ದಾರೆ.

Read More