Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಮಾ.31 : ನಾಡಿನಾದ್ಯಂತ ಮಾ.30ರಂದು ಯುಗಾದಿ ಹಬ್ಬವನ್ನು ಆಚರಿಸಲಾಯಿತು, ಮಕ್ಕಳು, ತಾಯಂದಿರು ಮನೆಯಲ್ಲಿ ರಂಗೋಲಿ ಬಳಿದು ಸ್ನಾನ ಮಾಡಿ ಯುಗಾದಿ ಹಬ್ಬವನ್ನು ಆಚರಿಸಿದರು. ದೇವಸ್ಥಾನಗಳಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ನಡೆದವು.. ದಕ್ಷಿಣ ಭಾರತೀಯರಲ್ಲಿ ಇದರ ಆಚರಣೆ ಹೆಚ್ಚು. ಉತ್ತರ ಭಾರತೀಯರು ಈ ದಿನವನ್ನು ಚೈತ್ರ ನವರಾತ್ರಿಯ ಮೊದಲ ದಿನವೆಂದು ಆಚರಿಸುತ್ತಾರೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಮಹಾರಾಷ್ಟ್ರ ಕಡೆ ಗುಡಿ ಪಾಡ್ವ ಎಂದು ಕರೆಯುತ್ತಾರೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭವನ್ನು ಹಾರೈಸಿದ್ದಾರೆ. ಯುಗಾದಿ ಹಬ್ಬದ ಅಡುಗೆ ದಿನ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ.
ಮಂಗಳೂರ, ಮಾ.,31 : ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು. ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆಯಿಂದ, ಎಬಿ ಶೆಟ್ಟಿ ವೃತ್ತದಿಂದ, ಮಂಕಿಸ್ಮಾಂಡ್ ಮುಖಾಂತರ ಮಂಗಳಾದೇವಿ ದೇವಸ್ಥಾನ ಶಮಿ ಕಟ್ಟೆಯಾಗಿ ಫಸ್ಟ್ ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆ ಇದಾಗಿದ್ದು “ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ಎಂದು ನಾಮಕರಣವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ರಮೇಶ್ ಕಂಡೆಟ್ಟು, ಮಾಜಿ ಮೇಯರ್ ಗಳಾದ ಮನೋಜ್ ಕುಮಾರ್ ಕೋಡಿಕಲ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಮಾಜಿ ಉಪ ಮೇಯರ್…
ಮಂಗಳೂರು, ಮಾ. 30 : ರೋಟರಿ ಕ್ಲಬ್, ಮಂಗಳೂರು ಸೆಂಟ್ರಲ್ ಮತ್ತು ರೋಟಾಪಕ್ಸ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ 22ನೇ ವಾರ್ಷಿಕ ಮತ್ತು 2025ನೇ ಸಾಲಿನ ಪ್ರತಿಷ್ಠಿತ ‘ವಂದನಾ ಪ್ರಶಸ್ತಿ’ಯನ್ನು ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಹೊಟೇಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸೇವೆ ಪರಿಗಣಿಸಿ ಪ್ರದಾನಿಸಲಾಯಿತು. ಬಳಿಕ ಡಾ| ಪ್ರಕಾಶ್ ಶೆಟ್ಟಿ ಮಾತನಾಡಿ, ನನಗೆ ಪ್ರಶಸ್ತಿಗಳು ದೊರೆಯಲು ಕಾರಣ ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ವ್ಯವಹಾರ ದಕ್ಷತೆ, ಪ್ರಾಮಾಣಿಕತೆ, ಶ್ರಮ, ಗ್ರಾಹಕರ ವಿಶ್ವಾಸ, ಮಿತ್ರರ ಸಹಕಾರ, ಪ್ರೋತ್ಸಾಹ ಕಾರಣ ಎಂದರು. ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಡಾ| ದೇವದಾಸ್ ರೈ ಮಾತನಾಡಿ, ವಂದನಾ ಪ್ರಶಸ್ತಿಯು ತಮ್ಮ ಸಂಸ್ಥೆಯ ವೃತ್ತಿಪರ ಸೇವೆ ಯೋಜನೆಯ ಅಂಗವಾಗಿದ್ದು, ಈ ವಾರ್ಷಿಕ ಪ್ರಶಸ್ತಿಯನ್ನು ಸಾಧಕರನ್ನು ಗುರುತಿಸಿ ವಿವಿಧ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದರು. ರೋಟಲ್ಯಾಕ್ಸ್ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ ಅವರು ಪ್ರಶಸ್ತಿ ವಿಜೇತರ ಪರಿಚಯಿಸಿದರು. ರೋಟರಾಕ್ಟ್ ಸಂಸ್ಥೆಯ ಜಿಲ್ಲಾ…
ಬೆಂಗಳೂರು,ಮಾ.29 : tv9 ನೆಟ್ವರ್ಕ್ ಆಯೋಜಿಸಿದ್ದ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮೈ ಹೋಮ್ ಗ್ರೂಪ್ ಉಪಾಧ್ಯಕ್ಷ ಜೂಪಲ್ಲಿ ರಾಮು ರಾವ್ ಅವರು, ವಿಶ್ವಬ್ಯಾಂಕ್ ಮತ್ತು ಐಎಂಎಫ್ ದತ್ತಾಂಶಗಳ ಪ್ರಕಾರ, ಮುಂದಿನ ಎರಡು ಹಣಕಾಸು ವರ್ಷಗಳಲ್ಲಿ ಭಾರತವು ಆರ್ಥಿಕತೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ದೇಶವಾಗಿದೆ. ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಜಗತ್ತು ಭಾರತದ ಕಡೆಗೆ ನೋಡುತ್ತಿದೆ ಎಂದು ಅವರು ಹೇಳಿದರು. ಪಿಎಂ ಗತಿ ಶಕ್ತಿ, ಸ್ಟಾರ್ಟ್ಅಪ್ ಇಂಡಿಯಾ ಮತ್ತು ಉತ್ಪನ್ನ ಆಧಾರಿತ ಪ್ರೋತ್ಸಾಹಕ ಯೋಜನೆಗಳಂತಹ ಕಾರ್ಯಕ್ರಮಗಳು, ಉತ್ಪಾದನೆ ಮತ್ತು ಡಿಜಿಟಲ್ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗುತ್ತಿವೆ. ಡಿಜಿಟಲ್ ಇಂಡಿಯಾ ಅಭಿವೃದ್ಧಿ ಹೊಂದಿದ ದೇಶಗಳಿಗೂ ಮಾದರಿಯಾಗುತ್ತಿದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶವು ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ವಿವರಿಸಿದರು. ಪ್ರಧಾನ ಮಂತ್ರಿ ಮೋದಿ ಅವರು ಮಾತನಾಡಿ,ಭಾರತ ಇಂದು ಏನು ಯೋಚಿಸುತ್ತಿದೆ ಎಂಬುದನ್ನು ಇಡೀ ಜಗತ್ತು ಆಸಕ್ತಿಯಿಂದ ಗಮನಿಸುತ್ತಿದೆ. ಭಾರತವು ವಿಶ್ವ ಕಾರ್ಯಕ್ರಮದಲ್ಲಿ ಭಾಗವಹಿಸುವುದಲ್ಲದೆ,…
ಮಂಗಳೂರು, ಮಾ. 28 : ಮಾ.29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ 43ನೇ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಉಪಕುಲಪತಿ ಪ್ರೊ.ಧರ್ಮ ಅವರು ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಘಟಿಕೋತ್ಸವಕ್ಕೆ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘ ಉಪಾಧ್ಯಕ್ಷರು ಹಾಗೂ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ವಿ.ಎನ್.ರಾಜಶೇಖರನ್ ಪಿಳ್ಳೆ ಮುಖ್ಯ ಅತಿಥಿಯಾಗಿ ಭಾಷಣ ಮಾಡಲಿರುವರು. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉದ್ಯಮಿಗಳಾದ ಎಂ.ಎನ್.ರಾಜೇಂದ್ರ ಕುಮಾರ್, ರೋಹನ್ ಮೊಂತೆರೋ, ಕನ್ಯಾನ ಸದಾಶಿವ ಶೆಟ್ಟಿ ಅವರು ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ ಎಂದು ತಿಳಿಸಿದರು. ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 64 (ಕಲಾ ನಿಕಾಯ-12, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-38, ವಾಣಿಜ್ಯ ನಿಕಾಯ – 11, ಶಿಕ್ಷಣ ನಿಕಾಯ – 03) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್…
ನವದೆಹಲಿ, ಮಾ.28 : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಹುಟ್ಟಿದ ದಿನ ತಾರೀಕು ಏ.14 ರಂದು ದೇಶದಲ್ಲಿರುವ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಜೆಯನ್ನು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಘೋಷಣೆ ಮಾಡಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಪೂಜ್ಯ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ರಜೆಯನ್ನು ಘೋಷಿಸಲಾಗಿದೆ. ಗೌರವಾನ್ವಿತ ಪ್ರಧಾನಿ ಜಿ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ. ದೇಶದ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಏ. 14 ರ ಸೋಮವಾರ ರಜೆ ಇರಲಿದೆ. ಈ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.
ನೇಪಿಟಾವ್, ಮಾ.28 : ಮ್ಯಾನ್ಮಾರ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 60 ಮಂದಿ ಮೃತಪಟ್ಟಿದ್ದು, 250 ಮಂದಿ ಗಾಯಗೊಂಡಿದ್ದಾರೆ.ಮ್ಯಾನ್ಮಾರ್ನಲ್ಲಿ ಸತತ ಎರಡು ಭೂಕಂಪಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮ್ಯಾನ್ಮಾರ್ನ ಮಂಡಲೇಯಲ್ಲಿರುವ ಐಕಾನಿಕ್ ಅವಾ ಸೇತುವೆ ಭೂಕಂಪದಲ್ಲಿ ಕುಸಿದು ಬಿದ್ದಿದೆ.ಹಲವಾರು ಕಟ್ಟಡಗಳು ಕುಸಿದು ರಸ್ತೆಗಳು ಬಿರುಕು ಬಿಟ್ಟಿದೆ.ಮ್ಯಾನ್ಮಾರ್ ಜುಂಟಾ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್ ‘ತುರ್ತುಸ್ಥಿತಿ’ ಘೋಷಿಸಿದ್ದಾರೆ ಮತ್ತು ಅಂತರರಾಷ್ಟ್ರೀಯ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು, ಮಾ. 27 : ಕಾಸರಗೋಡು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಮಾ. 26ರಿಂದ ಎ. 7ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಅಂಗವಾಗಿ ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಹೊರೆಕಾಣಿಕೆ ಸಂಗ್ರಹ ಕೇಂದ್ರ ತೆರೆಯಲಾಗಿದೆ. ಮಾ. 27ರಂದು ಬೆಳಗ್ಗೆ 8.30ಕ್ಕೆ ಶರವು ದೇವಳದಿಂದ ಮಧೂರಿಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಮಧುಸೂದನ ಆಯಾ ರ್ ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 26ರಂದು ಬೆಳಗ್ಗೆ 10ಕ್ಕೆ ಮಹಾದ್ವಾರ ರಾಜಗೋಪುರ ಮತ್ತು ರಾಜಾಂಗಣ ಲೋಕಾರ್ಪ ಣೆಗೊಳ್ಳಲಿದೆ. ಅಪರಾಹ್ನ 3 ಗಂಟೆಗೆ ಮಧೂರು ಪಂಚಾಯತ್ ವ್ಯಾಪ್ತಿಯ ಹೊರೆಕಾಣಿಕೆ ಕ್ಷೇತ್ರಕ್ಕೆ ಸಮರ್ಪಣೆ ಆಗಲಿದೆ. ಬಳಿಕ ಬೇರೆ ಬೇರೆ ಪ್ರದೇಶಗಳಿಂದ ಹೊರಕಾಣಿಕೆ ಕ್ಷೇತ್ರಕ್ಕೆ ಬರುವ ನಿರೀಕ್ಷೆ ಇದೆ.ಬ್ರಹ್ಮಕಲಶೋತ್ಸವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 4 ವೇದಿಕೆಗಳಲ್ಲಿ ಒಟ್ಟು 345 ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ ಎಂದರು. ದಾನಿಗಳಾದ ಸದಾಶಿವ ಶೆಟ್ಟಿಕೂಳೂರು…
ಮಂಗಳೂರು, ಮಾ.26:ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ನರ್ಸಿಂಗ್ ಫೌಂಡೇಶನ್ ವಿಭಾಗ, ಯೆನೆಪೋಯ ನರ್ಸಿಂಗ್ ಕಾಲೇಜು ದೇರಳಕಟ್ಟೆ ಇವುಗಳ ಸಂಯುಕ್ತ ಆಶ್ರಯ ದಲ್ಲಿ ವಿಶ್ವ ಕ್ಷಯರೋಗ ದಿನವನ್ನು ಮಾ.24ರಂದು ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವು ಜಾಥಾದ ಮುಖಾಂತರ ಪ್ರಾರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್ ಆರ್ ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು ಕ್ಷಯರೋಗ ಕೊನೆಗಾಣಿಸಲು ಕಾರ್ಯನಿರ್ವಹಿಸುವ ಎಲ್ಲರನ್ನೂ ಪ್ರಶಂಶಿಸಿದರು. ಯೆನೆಪೋಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ. ವಿಜಯಕುಮಾರ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಯೆನೆಪೋಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ ಎಸ್ ಗಂಗಾಧರ ಸೋಮಯಾಜಿ ,ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಲೀನಾ ಕೆಸಿ, ನರ್ಸಿಂಗ್, ಫೌಂಡೇಶನ್ ವಿಭಾಗದ ಮುಖ್ಯಸ್ಥ ಪ್ರೊ. ಶಶಿಕುಮಾರ್ ಜವಡಗಿ ಮತ್ತು ಸಹಪ್ರಾಧ್ಯಾಪಕ ಡಾ. ಹೆಝಿಲ್ ರೀಮ್ ಬರ್ಬೋಜ…
ಮಂಗಳೂರು, ಮಾ.25: ರೋಹನ್ ಕಾರ್ಪೊರೇಷನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಶಿಲಾನ್ಯಾಸ ಕಾರ್ಯಕ್ರಮವು ಸೋಮವಾರ ನಗರದ ಅತ್ತಾವರ-ಬಾಬುಗುಡ್ಡದಲ್ಲಿ ನಡೆಯಿತು. ಮಿಲಾಗ್ರಿಸ್ ಚರ್ಚ್ನ ಧರ್ಮಗುರು ರೆ.ಫಾ. ಬೊನೆವೆಂಚರ್ ನಝ್ರತ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಾಸಕರಾದ ಐವನ್ ಡಿಸೋಜ, ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್ನ ಅಧ್ಯಕ್ಷ ರೋಹನ್ ಮೊಂತೆರೋ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.