Subscribe to Updates
Get the latest creative news from FooBar about art, design and business.
Author: admin
ಮಂಗಳೂರು ಅ. 20 : ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ 2025-26 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶುಕ್ರವಾರ ನಗರದ ಐಎಮ್ಎ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಬೆಂಗಳೂರು ಗ್ರಾಮೀಣ ಕ್ಷೇತ್ರದ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರು ಮಾತಾಡಿ, ವೈದ್ಯರು ರೋಗಿಗಳ ಅಪೇಕ್ಷೆ ಮತ್ತು ನಿರೀಕ್ಷೆಯ ಮಟ್ಟಕ್ಕೆ ಸ್ಪಂಧಿಸಬೇಕು ಹಾಗೂ ರೋಗಿಗಳ ಆರ್ಥಿಕ ಹಿನ್ನೆಲೆ ಮತ್ತು ಪರಿಸ್ಥಿತಿಯನ್ನು ಪರಿಗಣಿಸಿ ಶ್ರೇಷ್ಠ ಆಧುನಿಕ ಶೈಲಿಯ ಶಸ್ತ್ರತಜ್ಞ ಜ್ಞಾನವನ್ನು ಬಳಸಿ ಬಡವರಿಗೆ ಸೇವೆಯನ್ನು ನೀಡಬೇಕು ಎಂದರು. ಬಳಿಕ ಸಂಸ್ಥೆಯ ಗೃಹ ವಾರ್ತಾಪತ್ರಿಕೆಯಾದ “ಮೆಡಿಲೋರ್” ಅನ್ನು ಬಿಡುಗಡೆಗೊಳಿಸಿದರು. ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಪದಾಧಿಕಾರಿಗಳ ಪದಗ್ರಹಣದ ವಿಧಿವಿಧಾನಗಳನ್ನು ನೆರವೇರಿಸಿ ತಂಡಕ್ಕೆ ಯಶಸ್ಸು ಕೋರಿದರು. ಈ ಸಂದರ್ಭದಲ್ಲಿ ನಗರದ ಖ್ಯಾತ ಶಸ್ತ್ರಚಿಕಿತ್ಸಾ ತಜ್ಞ ಹಾಗೂ ಸಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಭಾಸ್ಕರ್ ಶೆಟ್ಟಿ ವೈದ್ಯಕೀಯ ಕ್ಷೇತ್ರಕ್ಕೆ ನೀಡದ ಅಮೂಲ್ಯ ಕೊಡುಗೆ ಮತ್ತು…
ಮಂಗಳೂರು, ಅ. 19 : ಕೇರಳ ಮತ್ತು ಕರ್ನಾಟಕದಲ್ಲಿ ಕಾರ್ಯಚರಿಸುತ್ತಿರುವ “ಬಿಂದು” ಜ್ಯುವೆಲ್ಲರಿಯ ಮಂಗಳೂರು ಶೋರೂಂ ಬೆಂದೂರ್ ನ ಎಸ್ ಸಿಎಸ್ ಆಸ್ಪತ್ರೆ ಸಮೀಪ ಭಾನುವಾರ ಶುಭಾರಂಭಗೊಂಡಿತು. ಚಲಚಿತ್ರ ನಟಿ ಸ್ನೇಹ ಪ್ರಸನ್ನ ಅವರು ಬಿಂದು ಜ್ಯುವೆಲ್ಲರಿಯ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಸ್ನೇಹ ಪ್ರಸನ್ನ ಅವರು ಮಾತನಾಡಿ, ತಾನು ಮಂಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದು ಖುಷಿಯಾಗಿದೆ.”ಬಿಂದು” ಜುವೆಲರಿ ತನ್ನಉತ್ತಮ ಗುಣಮಟ್ಟ ಮತ್ತು ಬದ್ಧತೆಯ ಸೇವೆಯಿಂದ ಅಭಿವೃದ್ಧಿಯಾಗಿದೆ ಎಂದರು.. ಈ ಸಂದರ್ಭದಲ್ಲಿ ಅವರು ಸಂಸ್ಥೆಯ ಸಿಎಸ್ ಆರ್ ಚಟುವಟಿಕೆಯ ಭಾಗವಾದ ಮಹಿಳಾ ಸಬಲೀಕರಣ, ಶಿಕ್ಷಣ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ‘ಸ್ವರ್ಣ ಬಿಂದು‘ ಯೋಜನೆಗೆ ಚಾಲನೆ ನೀಡಿದರು. ‘ಮೈ ಬ್ಲೂ ಡೈಮಂಡ್‘ ವಜ್ರಾಭರಣವನ್ನು ಸ್ನೇಹ ಪ್ರಸನ್ನ ಬಿಡುಗಡೆಗೊಳಿಸಿದರು. ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ಯೋಗೇಶಾನಂದಜೀ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ ವೈ., ನಟರಾದ ಶೋಧನ್ ಶೆಟ್ಟಿ, ಅಮೀಶ್, ಕರ್ನಾಟಕ ರಾಜ್ಯ ಅಲೈಡ್ ಮತ್ತು ಹಲ್ತ್ ಕೇರ್ ಕೌನ್ಸಿಲ್ ಚೇರ್ಮನ್…
ಮಂಗಳೂರು, ಅ. 19 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 31ನೇ ಬಿಜೈ ವಾರ್ಡಿನ ಬಿಜೈ ನ್ಯೂ ರೋಡ್ನಲ್ಲಿ ಚರಂಡಿ ಮತ್ತು ಫುಟ್ಪಾತ್ ನಿರ್ಮಾಣಗೊಳ್ಳಲಿದ್ದು, ಅದರ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಬಿಜೈ ನ್ಯೂ ರೋಡ್ನಲ್ಲಿ ಚರಂಡಿ ಮತ್ತು ಫುಟ್ಪಾತ್ 50ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಇಲ್ಲಿ ಸುಸಜ್ಜಿತ ಚರಂಡಿ ಮತ್ತು ಫುಟ್ಪಾತ್ ಅಗತ್ಯತೆ ಬಗ್ಗೆ ಸ್ಥಳೀಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಲವು ಬಾರಿ ಬೇಡಿಕೆ ಇಟ್ಟಿದ್ದರು. ಅದಕ್ಕೆ ಪೂರಕವಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆಯಾಗುವಂತೆ ಮಾಡಲಾಗಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎಲ್ಲಾ ಅನುದಾನಗಳಿಗೆ ತಡೆ ನೀಡಿದ್ದರಿಂದ ಕಾಮಗಾರಿಗೆ ಹಿನ್ನಡೆಯಾಗಿತ್ತು. ನಂತರ ಸಚಿವ ಸತೀಶ್ ಜಾರಕಿಹೊಳಿಯವರನ್ನು ಹಲವಾರು ಬಾರಿ ಭೇಟಿ ಮಾಡಿ ಈ ಕಾಮಗಾರಿಯ ಅಗತ್ಯತೆ ಬಗ್ಗೆ ಮನದಟ್ಟು ಮಾಡಲಾಗಿದ್ದು ಇದೀಗ ಆ ಕಾಮಗಾರಿ…
ಮಂಗಳೂರು, ಅ. 18 : ನಮ್ಮ ಕುಡ್ಲ ವಾಹಿನಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ 25ನೇ ವರ್ಷದ ಗೂಡುದೀಪ ಸ್ಪರ್ಧೆ ಅ.19, ಭಾನುವಾರ ಸಂಜೆ 6ರಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವ ಪುರಸ್ಕಾರ, ಸನ್ಮಾನ ನಡೆಯಲಿದೆ ಎಂದು ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಕರ್ಕೇರಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ, ಆಧುನಿಕ ಹಾಗೂ ಪ್ರತಿಕೃತಿ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿಯೊಂದು ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ಚಿನ್ನದ ಪದಕ, ತೃತೀಯ ಸ್ಥಾನ ಪಡೆದ ಮೂವರು ವಿಜೇತರಿಗೆ ಬೆಳ್ಳಿಯ ಪದಕ ಹಾಗೂ 50 ಪ್ರೋತ್ಸಾಹಕ ಬಹುಮಾನ ಹಾಗೂ ವಿಶೇಷ ಪ್ರೋತ್ಸಾಹಕ ಬಹುಮಾನಗಳಿವೆ. ಭಾಗವಹಿಸಿದ ಪ್ರತಿಯೊಬ್ಬ ಸ್ಪರ್ಧಿಗೂ ನೆನಪಿನ ಕಾಣಿಕೆಯ ಜೊತೆಗೆ ಸಿಹಿತಿಂಡಿಯ ಪೊಟ್ಟಣ ಹಾಗೂ ಶ್ರೀಕ್ಷೇತ್ರದ ಪ್ರಸಾದ ನೀಡಿ ಗೌರವಿಸಲಾಗುವುದು ಎಂದು ಹೇಳಿದರು. ರಂಗಭೂಮಿ ಕಲಾವಿದರಾಗಿರುವ ಲಕ್ಷ್ಮಣ ಕುಮಾರ್ ಮಲ್ಲೂರು ಇವರಿಗೆ ನಮ್ಮಕುಡ್ಲ…
ಮಂಗಳೂರು, ಅ.17: ಕೇರಳ ಮತ್ತು ಕರ್ನಾಟದಲ್ಲಿ ಕಾರ್ಯಾಚರಿಸುತ್ತಿರುವ ಬಿಂದು ಜುವೆಲ್ಲರಿಯ ಮಂಗಳೂರು ಶಾಖೆ ಅ.19ರಂದು ಎಸ್ ಸಿಎಸ್ ಆಸ್ಪತ್ರೆ ಬಳಿ ಶುಭಾರಂಭಗೊಳ್ಳಲಿದೆ ಎಂದು ಬಿಂದು ಜುವೆಲ್ಲರಿಯ ಮಾಲಕ ಅಭಿಲಾಷ್ ಕೆ.ವಿ., ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಂದು ಜುವೆಲ್ಲರಿಯ ಕರ್ನಾಟಕದ 2ನೇ ಶಾಖೆ ಬೆಳಗ್ಗೆ 10:30ಕ್ಕೆ ಉದ್ಘಾಟನೆಯಾಗಲಿದೆ. ಬಿಂದು ಜುವೆಲ್ಲರಿ ಕ್ಷೇತ್ರದಲ್ಲಿ ಕಳೆದ 40 ವರ್ಷಗಳ ಅನುಭವ ಹೊಂದಿರುವ ಸಂಸ್ಥೆಯು ಗ್ರಾಹಕರ ಜೊತೆ ದೀರ್ಘಾವಧಿಯ ಸಂಪರ್ಕವನ್ನು ಹೊಂದಿದೆ. 1982ರಲ್ಲಿ ಸಂಸ್ಥಾಪಕ ಕೆ.ವಿ.ಕುಂಞಕಣ್ಣನ್ ಅವರಿಂದ ಬಿಂದು ಚಿನ್ನಾಭರಣಗಳ ಈ ಪಯಣ ಆರಂಭಗೊಂಡಿತ್ತು. ಇದೀಗ ಕರ್ನಾಟಕ ಮತ್ತು ಕೇರಳದ ಗ್ರಾಹಕರಿಗೆ ಚಿನ್ನದ ಪರಿಶುದ್ಧತೆಯ ಬದ್ಧತೆಯೊಂದಿಗೆ ನವನವೀನ ವಿನ್ಯಾಸವನ್ನು ಒದಗಿಸುವ ಮೂಲಕ ಅವರ ವಿಶ್ವಾಸವನ್ನು ಗಳಿಸಿಕೊಂಡಿದೆ.ಬಿಂದು ಜುವೆಲ್ಲರಿಯ ನೂತನ ಶಾಖೆಯಲ್ಲಿ ವಜ್ರ ಹಾಗೂ ಕಡಿಮೆ ತೂಕದ ಚಿನ್ನಾಭರಣಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು. ಬಿಂದು ಜುವೆಲ್ಲರಿ ತನ್ನ ಹೊಸ ಶಾಖೆಯಲ್ಲೂ ‘ಅಕ್ಷಯ ನಿಧಿ’ ಮತ್ತು ‘ಸ್ವರ್ಣ ಬಿಂದು’…
ದೇರಳಕಟ್ಟೆ, ಅ. 16 :: ಸ್ಥಳೀಯರ ಹಾಗೂ ಉದ್ಯೋಗಿಗಳ ಅನುಕೂಲಕ್ಕಾಗಿ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಅನ್ನು ಆರಂಭಿಸಲಾಗಿದ್ದು, ಕ್ಲಿನಿಕ್ ಉದ್ಘಾಟನೆಯನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಾಧಿಪತಿ ಪ್ರೊ. ಎಂ. ಶಾಂತಾರಾಮ ಶೆಟ್ಟಿ ಅವರು ಬುಧವಾರ ನೆರವೇರಿಸಿದರು. ಬಳಿಕ ಮಾತಾಡಿದ ಅವರು , ಕೆ. ಎಸ್. ಹೆಗ್ಡೆ ಆಸ್ಪತ್ರೆ ಸ್ಥಳೀಯರ ಅನುಕೂಲಕ್ಕಾಗಿ ಸಂಜೆ 5 ರಿಂದ ರಾತ್ರಿ 7.30ರವರೆಗೆ ‘ಈವ್ನಿಂಗ್ ಸ್ಪೆಷಲ್ ಕ್ಲಿನಿಕ್’ನ್ನು ಆಸ್ಪತ್ರೆಯ ಗೌಂಡ್ ಫ್ಲೋರ್ನಲ್ಲಿ ಆರಂಭಿಸಲಾಗಿದೆ. ಕೇವಲ ರೂ.50 ನೋಂದಣಿ ಶುಲ್ಕ ಮಾತ್ರ ಪಡೆಯಲಾಗುತ್ತದೆ. ಈ ಕ್ಲಿನಿಕ್ನಲ್ಲಿ ಎಲ್ಲಾ ತಜ್ಞ ವೈದ್ಯರುಗಳ ಸೇವೆ ಲಭ್ಯವಿರುತ್ತದೆ. ಈಗಾಗಲೇ ಕೆ. ಎಸ್. ಹೆಗ್ಡೆ ಆಸ್ಪತ್ರೆ 1200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯಾಗಿದ್ದು, ಬೆಡ್ ಸ್ಕ್ಯಾನ್, ಎಂ.ಆರ್.ಐ., ರೊಬೊಟಿಕ್ ಸರ್ಜರಿ, 17 ಸುಸಜ್ಜಿತ ಆಪರೇಷನ್ ಥಿಯೇಟರ್ ಗಳ ವ್ಯವಸ್ಥೆ ಒಳಗೊಂಡಿದೆ. ಎಲ್ಲಾ ರೋಗಿಗಳಿಗೆ ಅತ್ಯಾಧುನಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಆಡಳಿತ ವಿಭಾಗದ ಸಹಕುಲಾಧಿಪತಿ ವಿಶಾಲ್…
ಮಂಗಳೂರು, ಅ.15: ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿದ್ದು, ‘ಪೇಸ್ ಸಿಲ್ವಿಯೋರಾ 2025’ ಹೆಸರಿನಲ್ಲಿ ಡಿಸೆಂಬರ್ ವರೆಗೆ ವಿವಿಧ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದೆ ಎಂದು ಪಿಎ ಎಜುಕೇಶನಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹೀಂ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2000ದಲ್ಲಿ ಮಂಗಳೂರಿನ ಪಿ.ಎ. ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಆರಂಭಗೊಂಡ ಪೇಸ್ ಇಂದು, ಯುಎಇ, ಭಾರತ ಮತ್ತು ಕುವೈತ್ ಗಳಲ್ಲಿ 20 ಸಂಸ್ಥೆಗಳ ಜಾಗತಿಕ ಜಾಲವಾಗಿ ಜಾಗತಿಕ ಜಾಲವಾಗಿ ಬೆಳೆದಿದೆ.ಪೇಸ್ ಗ್ರೂಪ್ ಭಾರತದಲ್ಲಿನ ರಿಮ್ಸ್ ಇಂಟರ್ ನ್ಯಾಶನಲ್ ಸ್ಕೂಲ್ ಕಣ್ಣೂರು ಮತ್ತು ವೆಸ್ಟ್ ಲಂಡನ್ ವಿಶ್ವವಿದ್ಯಾನಿಲಯ, ರಾಸ್ ಅಲ್ ಖೈಮಾಗಳಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಪೇಸ್ ಸಿಲ್ವಿಯೋರಾ ಕಾರ್ಯಕ್ರಮದ ಬ್ಯಾನರ್ ಡ್ರಾಪ್ ಹಾಗೂ ಕಾರ್ಯಕ್ರಮಗಳ ಉದ್ಘಾಟನೆ ಅ.14ರಂದು ಪೇಸ್ ನಾಲೆಡ್ಜ್ ಸಿಟಿ ಕ್ಯಾಂಪಸ್ನಲ್ಲಿ ನಡೆದಿದೆ ಎಂದರು. ಮೂರು ತಿಂಗಳ ಉತ್ಸವ ‘ಒಂದು ಪರಂಪರೆಯನ್ನು ಗೌರವಿಸುವುದು, ಭವಿಷ್ಯವನ್ನು ಬೆಳಗಿಸುವುದು’ ಎಂಬ ಥೀಮ್ ನಡಿ ವಿವಿಧ ವಿಭಾಗಗಳಲ್ಲಿ ನಡೆಯಲಿದೆ. ಸಂಭ್ರಮದ…
ಸುಳ್ಯ , ಅ. 14 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸುಳ್ಯ ತಾಲೂಕಿನ ಗುತ್ತಿಗಾರು ಶಾಖೆ ಗುತ್ತಿಗಾರು ಮುಖ್ಯ ರಸ್ತೆಯ ರಾಘವೇಂದ್ರ ಕಾಂಪ್ಲೆಕ್ಸ್ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಶಾಖೆಯ ಉದ್ಘಾಟನೆ ಹಾಗೂ ಎಟಿಎಂ ಉದ್ಘಾಟನೆ ಸೋಮವಾರ ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರೈತರ ಪರವಾಗಿ ನಿಂತಿರುವ ಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾದದ್ದು ಎಂದು ಹೇಳಿದರು. ಎಸ್ಸಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ರಿಬ್ಬನ್ ಕತ್ತರಿಸಿ ಶಾಖೆ ಉದ್ಘಾಟಿಸಿದರು. ನಿರ್ದೇಶಕ ಕುಶಾಲಪ್ಪ ಗೌಡ ಎಟಿಎಂ ಕೇಂದ್ರವನ್ನು ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಠೇವಣಿಪತ್ರ ವಿತರಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು…
ಮಂಗಳೂರು, ಅ. 13 : ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೇ ಅವತರಣೋತ್ಸವ ಅಮೃತೋತ್ಸವ 2025 ಕಾರ್ಯಕ್ರಮ ಅ. 11, ಶನಿವಾರ ನಡೆಯಿತು. ಅಂದು ಬೆಳಗ್ಗೆ 8.45ಕ್ಕೆ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಿದರು. ಗಂಟೆ 9ರಿಂದ ಶ್ರೀ ಗುರು ಪಾದುಕಾ ಪೂಜೆ, ಸತ್ಸಂಗ, ಭಜನೆ, ಧ್ಯಾನ, ನಂತರ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಆರ್ಶಿವಾಚನದಲ್ಲಿ ಕಳೆದ 25 ವರ್ಷಗಳಿಂದ ಮಠವು ಧಾರ್ಮಿಕ ಚಟುವಟಿಕೆಗಳ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಪ್ರಗತಿಯ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾತಾಡಿ,, ಮಂಗಳೂರಿನ ಮಾತಾ ಅಮೃತಾನಂದಮಯಿ ಮಠವು ಬಡವರಿಗೆ ಉಚಿತ ಆರೋಗ್ಯತಪಾಸಣಾ ಹಾಗೂ ಚಿಕಿತ್ಸಾ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಕ್ಷೇತ್ರಕ್ಕೆ ಮಾತಾ ಅಮೃತಾನಂದಮಯಿ ದೇವಿ ಯವರ ಕೊಡುಗೆ ಅಪಾರವಾದುದು ಎಂದು ಹೇಳಿದರು. ಮುಖ್ಯ…
ಉಳ್ಳಾಲ, ಅ. 12: ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಸಮೀಪದ ಉಚ್ಚಿಲ ಜಂಕ್ಷನ್ ಬಳಿಯ ಗುಜರಿ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ಸಂಭವಿಸಿದ ಈ ಘಟನೆಯಿಂದ ಗುಜರಿ ಅಂಗಡಿಯಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ವರದಿಯಾಗಿದೆ. ಉಚ್ಚಿಲದ ಅಂಡರ್ ಪಾಸ್ ಬಳಿಯ ಇಕ್ಬಾಲ್ ಹಾಗೂ ಇಬ್ರಾಹಿಂ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಅಗ್ನಿ ಶಾಮಕದಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












