Author: admin

ಮಂಗಳೂರು,ಅ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾತೆ ಮೇರಿ ಅಮ್ಮನ ಜನ್ಮದಿನ, ಮೊಂತಿ ಫೆಸ್ತ್( ತೆನೆ ಹಬ್ಬ)ನ್ನು ಕ್ಯಾಥೋಲಿಕ್ ಕ್ರೈಸ್ತ ಬಾಂಧವರು ಸೋಮವಾರ ಭಕ್ತಿ ಭಾವದಿಂದ ಆಚರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಚ್ ಗಳಲ್ಲಿ ಭತ್ತದ ತೆನೆಯನ್ನು ಪವಿತ್ರೀಕರಣ ಮಾಡಿ ವಿತರಿಸಲಾಯಿತು. ಮೇರಿ ಮಾತೆಗೆ ಪುಷ್ಪಾರ್ಚನೆ, ದಿವ್ಯ ಬಲಿಪೂಜೆ ನಡೆಯಿತು. ಮಂಗಳೂರಿನ ಮಿಲಾಗ್ರಿಸ್, ರೊಸಾರಿಯೋ,  ಬೆಂದೂರ್‌ವೆಲ್, ಉರ್ವ ಲೇಡಿಹಿಲ್, ಕೂಳೂರು, ಅಶೋಕ ನಗರ, ಕುಲಶೇಖರ ಸೇರಿದಂತೆ ಪ್ರಮುಖ ಚರ್ಚ್‌ಗಳಲ್ಲಿ ಹಬ್ಬದ ಅಂಗವಾಗಿ ನಡೆದ ಬಲಿಪೂಜೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತರು ಭಾಗವಹಿಸಿದ್ದರು.

Read More

ಬೆಂಗಳೂರು, ಸೆ.8 : ಎಲ್ಟು ಮುತ್ತಾ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಹೈ5 ಸ್ಟುಡಿಯೋಸ್ ನ ನಿರ್ಮಾಪಕ ಸತ್ಯ ಶ್ರೀನಿವಾಸನ್ ಇದೀಗ ಅಲೆಯ ವೈಖರಿ ಎಂಬ ಪಾಪ್ ಸಾಂಗ್ ಅನ್ನು ತಯಾರಿಸಿದ್ದಾರೆ. ಈ ಪಾಪ್ ಸಾಂಗ್ ಗೆ ಅಜಿತ್ ಕೇಶವ್ ಸಾಹಿತ್ಯ ಬರೆದಿದ್ದು, ಚಿನ್ಮಯಿ ಆತ್ರೇಯಾ ಧ್ವನಿಯಾಗಿದ್ದಾರೆ. ಈ ಹಾಡಿಗೆ ಸಾಗರ್ ಗುರುರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಹೈಫೈ ಸ್ಟುಡಿಯೋದಿಂದ ಹಾಡನ್ನ ರಿಲೀಸ್ ಮಾಡಲಾಗಿದೆ. ಮಣಿಕಾಂತ್ ಕದ್ರಿ ಅಲೆಯ ವೈಖರಿ ಕೇಳಿ ಖುಷಿಯಾಗಿದ್ದಾರೆ. ಅಜಿತ್ ಕೇಶವ ಒಂದೊಳ್ಳೆ ಕಾನ್ಸೆಪ್ಟ್ ಮಾಡಿದ್ದಾರೆ.ರವಿಶಂಕರ್ ಹಾಗೂ ಸಂಗೀತಾ ಗುರುರಾಜ್ ಶುಭ ಹಾರೈಸಿದ್ದಾರೆ. ಹಾಗೇ ಈ ಹಾಡನ್ನ ತುಂಬಾನೇ ಇಷ್ಟಪಟ್ಟು ನಿರ್ಮಿಸಿದ್ದೇನೆ ಎಂದು ನಿರ್ಮಾಪಕ ಸತ್ಯ ಶ್ರೀನಿವಾಸನ್ ಅವರು ತಿಳಿಸಿದ್ದಾರೆ.

Read More

ಮಂಗಳೂರು, ಸೆ.8: ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಸಾರಥ್ಯ ಹಾಗೂ ನಮ್ಮ ಟಿವಿ ಸಹಯೋಗದಲ್ಲಿ 10ನೆ ಆವೃತ್ತಿಯ ಪಿಲಿನಲಿಕೆ  ಕಾರ್ಯಕ್ರಮ ಅ. 1ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಮಿಥುನ್ ರೈ ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಿಲಿನಲಿಕೆ ಪಂಥ ಕಾರ್ಯಕ್ರಮವನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ನಸೀರ್ ಹುಸೇನ್ ಸೇರಿದಂತೆ ಸಂಸದರು, ಶಾಸಕರು ಆಗಮಿಸಲಿದ್ದಾರೆ. ಪಿಲಿನಲಿಕೆ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ, ಜಾಕೀಶ್ರಾಫ್, ಸ್ಯಾಂಡಲ್ವುಡ್ ನಟರಾದ ರಿಷಬ್ ಶೆಟ್ಟಿ, ರಾಜ್ ಬಿ. ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಸಿನಿಮಾ, ಕ್ರೀಡಾ ಕ್ಷೇತ್ರದ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ ಎಂದವರು ಹೇಳಿದರು. 10ನೆ ವರ್ಷದ ಪಿಲಿನಲಿಕೆ ಸ್ಪರ್ಧೆಯ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 10 ಲಕ್ಷ ರೂ. ದ್ವಿತೀಯ ಬಹುಮಾನವಾಗಿ 5 ಲಕ್ಷ ರೂ. ಹಾಗೂ ತೃತೀಯ…

Read More

ಮಂಗಳೂರು, ಸೆ. 07 : ಧರ್ಮಸ್ಥಳ ಪ್ರದೇಶದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ಎಸ್ಐಟಿ ಪೊಲೀಸರು ಭದ್ರತೆ ದೃಷ್ಟಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೊಳಗಾಗುತ್ತಿದ್ದಂತೆ ಇತ್ತ ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರಿಂದ ಜಾಮೀನು ಕೋರಿ ಬೆಳ್ತಂಗಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ.

Read More

ಮಂಗಳೂರು, ಅ. 5 : ರಚನಾ ಪ್ರಶಸ್ತಿ ಪ್ರದಾನ- 2025 ಕಾರ್ಯಕ್ರಮ ಅಕ್ಟೋಬರ್ 5 ರಂದು ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆಯಲಿದೆ ಎಂದು ರಚನಾ ಸಂಸ್ಥೆಯ ಅಧ್ಯಕ್ಷರು ಜೊನ್ ಬಿ. ಮೊಂತೇರೊ ಅವರು ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ.ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ ಎಂದರು. ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರತಿಷ್ಠಿತ ರಚನಾ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.ಕಳೆದ ಬಾರಿಯಂತೆ…

Read More

ಮಂಗಳೂರು,ಸೆ. 05 : ರೆಸ್ಟೊಲೆಕ್ಸ್ ಕಾಯಿರ್ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರಾದ ಡೇವಿಡ್ ಕುರುವಿಲ್ಲಾ  ಅವರು  ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನ ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ರೆಸ್ಟೊಲೆಕ್ಸ್ ನಾಲ್ಕು ದಶಕಗಳಿಂದ ಗ್ರಾಹಕರ ಅನುಭವಗಳನ್ನು ಹೆಚ್ಚಿಸುತ್ತ ಮತ್ತು ಸೂಕ್ತ ಆಯ್ಕೆಗಳನ್ನು ಬೆಂಬಲಿಸುವತ್ತ ಗಮನಹರಿಸಿದೆ. ಮಂಗಳೂರಿನಲ್ಲಿರುವ ಈ ಹೊಸ ಫ್ರಾಂಚೈಸಿ ಮಳಿಗೆಯು ನಮ್ಮ ಗ್ರಾಹಕರ ಅಗತ್ಯಗಳನ್ನು ಪೂರೈಸಲಿದೆ’ ಎಂದರು. ಸಂಸ್ಥೆಯ ಪಾಲುದಾರರಾದ ವಿಜಯ ಕಾಮತ್ ಮಾತಾಡಿ, ಸ್ಪ್ರಿಂಗ್, ಕಾಯಿರ್ ಮತ್ತು ಫೋಮ್ ಹಾಸಿಗೆಗಳ ಉತ್ಕೃಷ್ಟ ಶ್ರೇಣಿಗೆ ಹೆಸರುವಾಸಿಯಾದ ಪ್ರಮುಖ ಹಾಸಿಗೆ ಬ್ರಾಂಡ್ ರೆಸ್ಟೊಲೆಕ್ಸ್, ಮಂಗಳೂರಿನ ಬಲ್ಲಾಳ್ ಬಾಗ್ ನಲ್ಲಿ ತನ್ನ ಹೊಸ ವಿಶೇಷ ಫ್ರಾಂಚೈಸಿ ಮಳಿಗೆಗೆ ಶುಕ್ರವಾರ ಚಾಲನೆ ನೀಡಿದೆ. ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಳಿಗೆಯು ಈ ಪ್ರದೇಶದ ಗ್ರಾಹಕರಿಗೆ ಗುಣಮಟ್ಟದ ನಿದ್ರೆಗೆ ಅಗತ್ಯ ಪರಿಕರಗಳನ್ನು ಒದಗಿಸಲಿದೆ ಎಂದು ಹೇಳಿದರು. 850 ಚದರ ಅಡಿ ವಿಸ್ತೀರ್ಣದಲ್ಲಿ ವ್ಯಾಪಿಸಿರುವ ಈ…

Read More

ಬೈಂದೂರು,ಸೆ. 05 : ಎಂಸಿಸಿ ಬ್ಯಾಂಕ್, ಮಂಗಳೂರು ಇದರ ಬೈಂದೂರು ಶಾಖೆಯಲ್ಲಿ ಸೆಪ್ಟೆಂಬರ್ 4ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಆಶಾ ವೀಣಾ ಡಯಾಸ್ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು ಅಧ್ಯಕ್ಷೀಯ ಭಾಷಣದಲ್ಲಿ, ಮಾತನಾಡಿ, ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲು ಸಂತೋಷ ವಾಗುತ್ತಿದೆ. ಯುವ ವಿದ್ಯಾರ್ಥಿಗಳ ವೃತ್ತಿಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು. ಹೊಸಾಡು ರಾಮ ಶೇರಿಗಾರ್ ಅವರು ತಮ್ಮ ಭಾಷಣದಲ್ಲಿ, ಮಾತನಾಡಿ, ಬೈಂದೂರಿನಲ್ಲಿ ಇದೇ ಮೊದಲ ಬಾರಿಗೆ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಿದ ಎಂಸಿಸಿ ಬ್ಯಾಂಕಿನ ಆಡಳಿತ ಮಂಡಳಿಯನ್ನು ಶ್ಲಾಘಿಸಿದರು. ಎಂಸಿಸಿ ಬ್ಯಾಂಕ್ ನೀಡುವ ಸೇವೆಗಳನ್ನು ಬಳಸಿಕೊಳ್ಳುವಂತೆ…

Read More

ಬೆಳ್ತಂಗಡಿ, ಸೆ. 04  : ಬೆಳ್ತಂಗಡಿ,  ಸುಳ್ಯ, ಪುತ್ತೂರು, ಕಡಬ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ನೂತನ ಅಧ್ಯಕ್ಷರಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಅವಿರೋಧ ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆಯಾದರು. ಸೆ.2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ನಡೆಯಿತು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದರು. ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ  ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ, ಜಿಲ್ಲೆಯ ವಿವಿಧ ತಾಲೂಕಿನಿಂದ ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

Read More

ಕೈರೋ, ಸೆ. 03 : ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಲ್ಲಿ ಇಡೀ ಗ್ರಾಮವೇ ನೆಲಸಮಗೊಂಡಿದೆ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್ಮೆಂಟ್/ಆರ್ಮಿ  ಮಾಹಿತಿ ನೀಡಿದೆ. ಸುಡಾನ್ ಸೈನ್ಯ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ ನಡುವಿನ ರಕ್ತಸಿಕ್ತ ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದೆ ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವವರನ್ನು ಹೊರತೆಗೆಯಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಇತರ ನೆರವು ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ ಎಂದು ವರದಿಯಾಗಿದೆ.

Read More

ಮಂಗಳೂರು, ಸೆ. 02: ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16 ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಯಾದ ಸಾಹಿತಿ ಸಂತೋಷ ಕುಮಾರ ಮೆಹಂದಳೆ ಅವರು ಸಮಾರಂಭವನ್ನು ಉದ್ದೇಶಿಸಿ ಮಾತಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಕರ್ನಾಟಕದ ಪಂಚ ಸಾಧಕರಾದ ಡಾ ಎಸ್ ಎಮ್ ಶಿವಪ್ರಕಾಶ್, ಡಾ ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ ಅಸದ್, ರೆಮೊನಾ ಎವೆಟ್ ಪೆರೇರಾ ಮತ್ತು ಗೋಕಾವಿ ಗೆಳೆಯರ ಬಳಗದ ಪರವಾಗಿ ಜಯಾನಂದ ಮಾದರ ಅವರಿಗೆ ಡಾ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ರಘು ಇಡ್ಕಿದು ಅಭಿನಂದನ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಹೊರ ತಂದಿರುವ ಹಿರಿಯ ಲೇಖಕ ಕಡ್ಕೆ ರಾಮ ಅವಭೃತ ಅವರ ಪರ್ಯಟನಾನುಭವ ಕೃತಿ ಬಿಡುಗಡೆ ನಡೆಯಿತು.ಸಮಾರಂಭದಲ್ಲಿ ಡಾ…

Read More