Author: admin

ಬೆಂಗಳೂರು, ಆ. 31 : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ(ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯ ನಂತರ ಮೇ 21 ರಿಂದ ಪ್ರಭಾರಿ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದ ಡಾ. ಸಲೀಂ ಅವರನ್ನು ಆಗಸ್ಟ್ 30 ರ ಶನಿವಾರ ಅಧಿಕೃತ ಅಧಿಸೂಚನೆಯೊಂದಿಗೆ ಆ ಹುದ್ದೆಗೆ ದೃಢಪಡಿಸಲಾಗಿದೆ.

Read More

ಉಡುಪಿ, ಆ. 30 : ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಸೆ.13ರ ಬೆಳಗ್ಗೆ 8:30ರಿಂದ ಸಂಜೆ 5:00ರವರೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಎಂದು ಶಾಸಕ ಯಶ್ಪಾಲ್ ಸುವರ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈಗಾಗಲೇ 100ಕ್ಕೂ ಅಧಿಕ ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಸುಮಾರು 4.000ಕ್ಕೂ ಅಧಿಕ ಮಂದಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ. ಉದ್ಯೋಗ ಮೇಳದಲ್ಲಿ ಒಟ್ಟು 1500ಕ್ಕೂ ಅಧಿಕ ವಿವಿಧ ದರ್ಜೆಯ ಉದ್ಯೋಗಗಳು ಲಭ್ಯವಿರಲಿದೆ ಎಂದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಅವರು ಮಾತಾನಾಡಿ, ಈ ಬಾರಿ ಅಜ್ಜರಕಾಡು ಮೈದಾನದಲ್ಲಿ 75 ಕೌಂಟರ್ಗಳನ್ನು ಹಾಕಲಾಗುವುದು. ಆಸಕ್ತರು ಆನ್ಲೈನ್ ಮೂಲಕವೂ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ…

Read More

ಮಂಗಳೂರು, ಸೆ. 29 :  ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಲಂಚುಲಾಲ್ ಕೆ.ಎಸ್. ನಿರ್ಮಾಣದ ‘ನೆತ್ತರಕೆರೆ’ ತುಳು ಚಿತ್ರವನ್ನು ಹಿರಿಯ ಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್  ಅವರು  ಶುಕ್ರವಾರ ನಗರದ ಬಿಗ್ ಸಿನಿಮಾಸ್‌ನಲ್ಲಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ವಿಭಿನ್ನ ಪರಿಕಲ್ಪನೆಯ ಚಿತ್ರಗಳು ಈಗ ತುಳು ಭಾಷೆಯಲ್ಲಿ ಬರುತ್ತಿದೆ. ತುಳುವಿನ 150ನೇ ಚಿತ್ರವಾದ ನಿರ್ದೇಶಕ ಸ್ವರಾಜ್ ಶೆಟ್ಟಿ ಅವರ  ‘ನೆತ್ತರೆಕೆರೆ’ ತುಳು ಸಿನಿಮಾ  ಯಶಸ್ವಿ ಪ್ರದರ್ಶನ ಕಾಣಲಿ ಎಂದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಮಾತನಾಡಿ, ಇದುವರೆಗೆ ತುಳುವಲ್ಲಿ ಕಾಮಿಡಿ ಚಿತ್ರಗಳು ಬರುತ್ತಿದ್ದವು. ಇದೀಗ ವಿಭಿನ್ನ ಚಿತ್ರಗಳು ಬರಲಾರಂಭಿಸಿದೆ. ‘ನೆತ್ತರಕೆರೆ’ ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ನಿರ್ದೇಶಕ ಸ್ವರಾಜ್ ಶೆಟ್ಟಿ ಮಾತಾಡಿ, ತುಳುವಲ್ಲಿ ಬದಲಾವಣೆ ಇರಬೇಕು ಎಂದು ನೆತ್ತೆರೆಕೆರೆ ಸಿನಿಮಾ ಮಾಡಲಾಗಿದೆ. ಚಿತ್ರ ವನ್ನು  ತುಳುನಾಡಿನ ಸಮಸ್ತ ಜನರು  ಚಿತ್ರವನ್ನು ನೋಡಿ ಬೆಂಬಲಿಸಿ ಎಂದರು. ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ನಟ ಪೃಥ್ವಿ ಅಂಬಾರ್,…

Read More

ಮಂಗಳೂರು, ಆ. 28 : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಆ. 27, ಬುಧವಾರ ತೆನೆ ಹಬ್ಬ. ಧಾರ್ಮಿಕ ಕಾರ್ಯಕ್ರಮ  ನಡೆಯಿತು. ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದರು. ಲೆ.ಕ. ರಮಾನಾಥ ಶೆಟ್ಟಿ ಮತ್ತು ಕ್ಷಮಾ ರಮಾನಾಥ ಶೆಟ್ಟಿ ಧ್ವಜಾರೋಹಣಗೈದರು. ಡಾ. ಮಹಾಬಲ ರೈ ಮತ್ತು ಮಲ್ಲಿಕಾ ಎಂ ರೈ ತೆನೆ ವಿತರಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೋಡಿಯಾಲ್ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಬಂಟರ ಸಂಘದ ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟ್ವಾಳ…

Read More

ಮಂಗಳೂರು, ಆ. 28 : ಕೃತರ್ಥ ಪ್ರೊಡಕ್ಷನ್ ನಿರ್ಮಾಣದ ಕನ್ನಡ ಚಲನಚಿತ್ರ, ‘ಕುಡ್ಲ ನಮ್ದು ಊರುʼ ಆಗಸ್ಟ್ 5 ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ ರಾಜ್ಯದ 70 ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಚಿತ್ರದ ಪ್ರೇಮಿಯರ್ ಶೋ ಈಗಾಗಲೇ ಎರಡು ಕಡೆ ನಡೆದಿದ್ದು ಜನರ ಪ್ರತಿಕ್ರಿಯೆ ಚೆನ್ನಾಗಿದೆ ಎಂದು ಚಿತ್ರದ ನಿರ್ದೇಶಕರು ಹಾಗೂ ನಾಯಕ ನಟರಾದ ದುರ್ಗಾ ಪ್ರಸಾದ್ ಆರ್ ಕೆ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ‘ಕುಡ್ಲ ನಮ್ದು ಊರುʼ ಚಿತ್ರವನ್ನು ವಿಭಿನ್ನ ರೀತಿಯಲ್ಲಿ ತೋರಿಸುವ ಪ್ರಯತ್ನವನ್ನು ಮಾಡಿ ದ್ದೇನೆ. ಚಿತ್ರದಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದ್ದು, ಚಿತ್ರವು ಉತ್ತಮವಾಗಿ ಮೂಡಿಬಂದಿದೆ ಎಂದರು. ಅಂಕಿತ ಪದ್ಮ, ಚಿತ್ರ ಗೌಡ,ನರೇಂದ್ರ ಜೈನ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ನಿರ್ದೇಶನ ದುರ್ಗಾ ಪ್ರಸಾದ್ ಆರ್ ಕೆ (ಅಲೋಕ್), ನಿರ್ವಹಿಸಿದ್ದಾರೆ. ನಾಯಕ ನಟರುಗಳಾಗಿ ದುರ್ಗಾ ಪ್ರಸಾದ್ ಆರ್ ಕೆ (ಅಲೋಕ್ ಏಕೆ), ಸ್ವರಾಜ್ ಶೆಟ್ಟಿ, ಲಂಚು ಲಾಲ್ ಕೆ ಎಸ್…

Read More

ಮಂಗಳೂರು, ಆ. 27 : ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆ.29, ಶುಕ್ರವಾರ ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಾಯಕ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆತ್ತರಕೆರೆ ಸಿನಿಮಾ ತುಳು ಭಾಷೆಯಲ್ಲಿ ಮಾತ್ರವಲ್ಲದೆ ಇತರ ಭಾಷೆಯಲ್ಲೂ ಸಂಚಲನ ಮೂಡಿಸುವ ನಿರೀಕ್ಷೆ ಇದೆ, ಈ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ ಎಂದರು. ಚಿತ್ರವು  ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ. ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಹುಭಾಷಾ ತಾರಾ ನಟ ಸುಮನ್ ತಲ್ಮಾರ್. ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ ಎಂದು ತಿಳಿಸಿದರು. ಚಿತ್ರದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳೂರು,…

Read More

ಮಂಗಳೂರು, ಆ. 27 : ಎಸ್ಯಾಸಾಫ್ಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ತನ್ನ ಅತ್ಯಾಧುನಿಕ ಕಲಿಕೆ ಮತ್ತು ಸಾಮಥ್ರ್ಯ ಅಭಿವೃದ್ಧಿ ಕೇಂದ್ರವನ್ನು ಮಂಗಳೂರಿನ ಬಜ್ಪೆಯಲ್ಲಿ ಆರಂಭಿಸಿದೆ. ಈ ಕೇಂದ್ರವನ್ನು ಮೂಡಬಿದರೆ ಶಾಸಕ ಉಮನಾಥ್ ಕೋಟ್ಯಾನ್ ಅವರು ಆ.25, ಸೋಮವಾರ ಉದ್ಘಾಟಿಸಿದರು. ಕಂಪನಿಯ ಸ್ಥಾಪಕ ಮತ್ತು ಸಿಇಒ ಶ್ರೀ ಬಿಪಿನ್ ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಈ ಸೌಲಭ್ಯವು ಎಐ, ಐಒಟಿ, ಸ್ಮಾರ್ಟ್ ಗ್ರಿಡ್ಗಳು, ಇವಿ, ಹವಾಮಾನ ಮೂಲಸೌಕರ್ಯ ಮತ್ತು ಇಂಧನ ನಿರ್ವಹಣಾ ವ್ಯವಸ್ಥೆಗಳನ್ನು ಸಂಯೋಜಿಸುವುದರೊಂದಿಗೆ ನವೀಕರಿಸಬಹುದಾದ, ಉಪಯುಕ್ತ ಡಿಜಿಟಲೀಕರಣ ಮತ್ತು ಇಂಧನ ಮೂಲಸೌಕರ್ಯದಲ್ಲಿ ಅಸ್ತಿತ್ವದಲ್ಲಿರುವ ಜಾಗತಿಕ ಯೋಜನೆಗಳಿಗೆ ಪ್ರಾಯೋಗಿಕವಾಗಿ ಆರಂಭಕ್ಕೆ ಒತ್ತು ನೀಡಿದೆ ಎಂದು ಬಿಪಿನ್ ಚಂದ್ರ  ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. 50 ಸಾವಿರ ಚದರ ಅಡಿ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಈ ಕೇಂದ್ರವು ಪ್ರಾಯೋಗಿಕ ಕಲಿಕೆ, ಉದ್ಯಮ ಸಹಯೋಗ ಮತ್ತು ವೃತ್ತಿಪರ ಬೆಳವಣಿಗೆಗಾಗಿ ಉತ್ತಮ ಪರಿಸರ ಹೊಂದಿದೆ.ಈ ಅತ್ಯಾಧುನಿಕ ತಂತ್ರಜ್ಞಾನಗಳು ಯುವ ವೃತ್ತಿಪರರಿಗೆ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲಿಸಲಿದ್ದು, ಈ ವಿಶ್ವ ದರ್ಜೆಯ ಕೇಂದ್ರವು ಭಾರತದ…

Read More

ಮಂಗಳೂರು, ಆ. 26: ಜಪ್ಪಿನಮೊಗರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಗಸ್ಟ್ 26ರಿಂದ 28ರ ವರೆಗೆ ಜಪ್ಪಿನಮೊಗರು ಗಣೇಶ ಮಂಟಪದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಜೆ. ನಾಗೇಂದ್ರ ಕುಮಾರ್ ಶನಿವಾರ ನಗರದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಆಗಸ್ಟ್26ರಂದು ಸಂಜೆ ಗಂಟೆಗೆ ಪೂರ್ಣಕುಂಭ ಸ್ವಾಗತದೊಂದಿಗೆ ಜಪ್ಪಿನಮೊಗರು ಶ್ರೀ ವೈದ್ಯನಾಥ ಮಹಾದ್ವಾರದಿಂದ ಶ್ರೀ ವಿಶ್ವೇಶ್ವರನ ವಿಗ್ರಹವನ್ನು ಶ್ರೀ ಗಣೇಶ ಮಂಟಪಕ್ಕೆ ತರಲಾಗುತ್ತದೆ. 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದರು, ಆಗಸ್ಟ್ 27ರಂದು ಬೆಳಗ್ಗೆ 7ಗಂಟೆಗೆ ಬ್ರಹ್ಮಶ್ರೀ ವಿಠಲದಾಸ್ ತಂತ್ರಿ ಅವರ ಪೌರೋಹಿತ್ಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾಪನೆ ನಡೆಯಲಿದೆ. 9ಗಂಟೆಗೆ ಪ್ರತಿಷ್ಠಾಪನ ಸಭಾ ಕಾರ್ಯಕ್ರಮ ನಡೆಯಲಿದೆ. 10ಗಂಟೆಗೆ ಹಸಿರು ತೆನೆ ವಿತರಣೆ, ಅನಂತರ ಭಜನಾ ಕಾರ್ಯಕ್ರಮ, ಮಧ್ಯಾಹ್ನದ ಮಹಾಪೂಜೆ ನಡೆಯಲಿದೆ. ಸಂಜೆ 5.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ಸಾರ್ವಜನಿಕ ರಂಗಪೂಜೆ ಹಾಗೂ ಮಹಾಪೂಜೆ, ಅನಂತರ ಅನ್ನಸಂತರ್ಪಣೆ…

Read More

ಮಂಗಳೂರು, ಆ. 26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ನಡೆಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ  ನಡೆದ  ಪ್ರತಿಭಾ ಪುರಸ್ಕಾರ ಜತೆ ಸಂಘಧ ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನೆರವೇರಿಸಿದರು ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದದಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ,ಸರಕಾರಿ ಯೋಜನೆ, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮಹತ್ಕಾರ್ಯವನ್ನು ಸರಕಾರಿ ನೌಕರರು ನಿರ್ವಹಿಸುತ್ತಿದ್ದಾರೆ.ಭವಿಷ್ಯವನ್ನು ನಿರ್ಮಾಣ ಮಾಡುವ…

Read More

ಉಡುಪಿ, ಆ.25 : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತಿಮರೋಡಿ ಅವರನ್ನು ಅವರ ನಿವಾಸದಲ್ಲಿ ಬಂಧಿಸಲಾಗಿತ್ತು. ಹಿರಿಯ ಬಿಜೆಪಿ ನಾಯಕರ ವಿರುದ್ಧ ತಿಮರೋಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ಇದೀಗ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Read More