Author: admin

ಮಂಗಳೂರು, ಆ. 24 : ನವಮಂಗಳೂರು ಬಂದರು ಪ್ರಾಧಿಕಾರದ (ಎನ್ಎಂಪಿಎ) ಸುವರ್ಣ ಸಂಭ್ರಮದ ಪ್ರಯುಕ್ತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ‘ಆರೋಗ್ಯ, ಕ್ರಿಯಾಶೀಲ ಜೀವನಶೈಲಿ, ದೈಹಿಕ ಕ್ಷಮತೆ’ ಧೈಯದೊಂದಿಗೆ ಆಗಸ್ಟ್31ರಂದು ಬೆಳಗ್ಗೆ 6 ರಿಂದ 9ಗಂಟೆಯವರೆಗೆ 10 ಕಿ.ಮೀ., 5 ಕಿ.ಮೀ. ಮತ್ತು 3 ಕಿ.ಮೀ. ಓಟ ಆಯೋಜಿಸಲಾಗಿದೆ ಎಂದು ಎನ್ಎಂಪಿಎಯ ಹಿರಿಯ ಉಪ ಕಾರ್ಯದರ್ಶಿ ಕೃಷ್ಣ ಬಾಪಿ ರಾಜು ಅವರು ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಈ ಓಟ ಮಂಗಳೂರು ಪಣಂಬೂರು ಬೀಚ್ ನಿಂದ ತಣ್ಣೀರುಬಾವಿ ಬೀಚ್ವರೆಗೆ ನಡೆಯಲಿದ್ದು ಈಗಾಗಲೇ ಕರ್ನಾಟಕ ಹಾಗೂ ನೆರೆ ರಾಜ್ಯಗಳಿಂದ 3,000ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.ವಿವಿಧ ವಯೋಮಿತಿ ವಿಭಾಗದಲ್ಲಿ ಓಟ ನಡೆಯಲಿದೆ. 10 ಕಿ.ಮೀ. ಮತ್ತು 5 ಕಿ.ಮೀ ಓಟಕ್ಕೆ ನಿಗದಿತ ಸಮಯವಿರುತ್ತದೆ. 3 ಕಿ.ಮೀ. ಓಟ ‘ಫನ್ ರನ್ ಆಗಿರುತ್ತದೆ. 10 ಕಿ.ಮೀ. ಓಟವು ಮುಂದೆ ದೇಶದಲ್ಲಿ ನಡೆಯುವ ಮ್ಯಾರಥಾನ್ಗೆ ಅರ್ಹತ ಓಟವೂ ಆಗಲಿದೆ ಎಂದು ಅವರು…

Read More

ಮಂಗಳೂರು,ಆ.23 : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ನಾರಿಕೇಳ ಮಹಾಗಣಯಾಗವು ಆಗಸ್ಟ್ ತಿಂಗಳ ತಾರೀಕು 27ರಿಂದ 29ರವರೆಗೆ ಮಂಗಳೂರಿನ ‘ಓಂಕಾರ ನಗರ’, ಬಂಟ್ಸ್ ಹಾಸ್ಟೆಲ್ನಲ್ಲಿ ಜರಗಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಇದರ ಟ್ರಸ್ಟಿ ಆಶಾ ಜ್ಯೋತಿ ರೈ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಆಗಸ್ಟ್ 26 ಮಂಗಳವಾರ ಸಂಜೆ 4.00 ಗಂಟೆಗೆ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಶ್ರೀ ರಾಮದಾಸ್ ಆಚಾರೈರವರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೆಲ್ನ ‘ಓಂಕಾರ ನಗರ’ಕ್ಕೆ ಬರಮಾಡಿಕೊಳ್ಳುವುದು ಎಂದು ಹೇಳಿದರು. ಆಗಸ್ಟ್ 27 ಬುಧವಾರ ಬೆಳಿಗ್ಗೆ 9.00 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ…

Read More

ಬೆಳ್ತಂಗಡಿ,ಆ.23 : ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತಿದ್ದೇನೆ ಎನ್ನಲಾದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದು ಆತನನ್ನು ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅನಾಮಿಕ ತೋರಿಸಿದ 17 ಪಾಯಿಂಟ್ಗಳಲ್ಲಿ ಎಸ್ಐಟಿ ತಂಡ ಸಮಾಧಿ ಶೋಧವನ್ನು ಶುರು ಮಾಡಿತ್ತು. ಆದರೆ ಏನೂ ಸಿಗದಿದ್ದ ಹಿನ್ನೆಲೆ ಎಸ್ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು. ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದರು. ತನಿಖೆ ಬಳಿಕ ಅನಾಮಿಕನನ್ನು ಬಂಧಿಸಿದ್ದಾರೆ. ಪೊಲೀಸರ ಮುಂದೆ ಸಾಕ್ಷಿ…

Read More

ಉಡುಪಿ, ಆ. 22 : ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಮಗುಚಿ ಬಿದ್ದು, ಮೀನುಗಾರನೊರ್ವ ಮೃತಪಟ್ಟ, ಘಟನೆ ಸಾಸ್ತಾನದ ಕೋಡಿತಲೆ ಬಳಿ ಆಗಸ್ಟ್ 22 ,ಶುಕ್ರವಾರ ಸಂಭವಿಸಿದೆ. ಮೃತರನ್ನು ಶರತ್ ಖಾರ್ವಿ (27) ಎಂದು ಗುರುತಿಸಲಾಗಿದೆ. ಮೂವರು ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಬಲವಾದ ಅಲೆಗಳಿಂದಾಗಿ ಅವರ ದೋಣಿ ಮಗುಚಿ ಬಿದ್ದಿದ್ದು, ಶರತ್ ಖಾರ್ವಿ ಮೀನುಗಾರ ಮೃತಪಟ್ಟಿದ್ದಾರೆ.ಇಬ್ಬರು ಮೀನುಗಾರರಾದ ಅಕ್ಷಯ್ ಖಾರ್ವಿ ಮತ್ತು ಮಂಜುನಾಥ ಖಾರ್ವಿ ಸುರಕ್ಷಿತವಾಗಿ ಈಜಿ ದಡ ಸೇರಿ,ದ್ದಾರೆ. ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ,ಆ.22 ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿಯವರನ್ನು ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸರು ಗುರುವಾರ ಬಂಧಿಸಿದರು.  ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಹಿರಿಯಡ್ಕ ಜೈಲಿಗೆ ಕರೆದೊಯ್ಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯೂಟ್ಯೂಬರ್  ಸಮೀರ್ ಎಂ.ಡಿ.ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ.

Read More

ಉಳ್ಳಾಲ, ಆ. 22 ( : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಉಳ್ಳಾಲದ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ನಡೆದಿದೆ. ಮೃತರನ್ನು ಕುಂಪಲ ಚೇತನನಗರ ನಿವಾಸಿ ಲೋಕೇಶ್ (48) ಎಂದು ಗುರುತಿಸಲಾಗಿದೆ. ಲೋಕೇಶ್ ಅವರು ತೊಕ್ಕೊಟ್ಟಿನಲ್ಲಿ ಇರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಲೋಕೇಶ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

ಮಂಗಳೂರು, ಆ.22 : ಕರ್ನಾಟಕ ಸರ್ಕಾರದ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮತ್ತು ಕೇರಳ ಸರ್ಕಾರದ ತಿರುವನಂತಪುರದ ಭಾರತ್ ಭವನ್ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 23 ರಂದು ತಿರುವನಂತಪುರದ ತೈಕ್ಕಾಡಿ ನಲ್ಲಿರುವ ಭಾರತ್ ಭವನ ಸಭಾಂಗಣದಲ್ಲಿ ಆನಂತಪುರಿ ಗಡಿನಾಡ ಕನ್ನಡ ಸಾಂಸ್ಕೃತಿಕ ಉತ್ಸವವನ್ನು ವೈವಿಧ್ಯ ಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ ಎಂದು ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಸಂಸ್ಥಾಪಕ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಬೆಳಗ್ಗೆ 9ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 10 ಗಂಟೆಗೆ ಕರ್ನಾಟಕ ಸರಕಾರದ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮ ವನ್ನು ಕೇರಳ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಿ.ಆರ್.ಅನಿಲ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮಹಳ್ಳಿ, ಭಾರತ್ ಭವನ ಕಾರ್ಯದರ್ಶಿ ಪ್ರಮೋದ್ ಪಯ್ಯನ್ನೂರ್, ಹಿರಿಯ ವಿದ್ವಾಂಸ ವೀರಣ್ಣ ತುಪ್ಪದ,…

Read More

ಮಂಗಳೂರು,ಆ.21 : ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ ನ  ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಆಗಸ್ಟ್ 17, ರವಿವಾರ ಸ್ಥಳಾಂತರಿಸಲಾಯಿತು. ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್‌ ನ  ನಿರ್ದೇಶಕ ವಂದನೀಯ ಸ್ಟಿಫನ್ ಪಿರೇರಾ, ಒಸಿಡಿ ಅವರು ದೀಪ ಬೆಳಗಿಸುವ ಮೂಲಕ ಪ್ರಾರಂಬಿಸಿದರು. ಕೊರ್ಡೆಲ್ ಹೋಲಿ ಕ್ರಾಸ್  ಚರ್ಚ್‌‌ ನ ಧರ್ಮಗುರುಗಳಾದ ವಂದನೀಯ ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಹೊಸ ಕಛೇರಿಯನ್ನು ಆಶೀರ್ವದಿಸಿದರು. ಸೇಫ್ ರೂಮ್ ಅನ್ನು ಮುಖ್ಯ ಅತಿಥಿ, ಸಿಸ್ಟರ್ಸ್ ಆಫ್ ದಿ ಲಿಟಲ್ ಫ್ಲವರ್ ಆಫ್ ಬೆಥನಿಯ ಪ್ರೊಕ್ಯುರೇಟರ್ ಸಿ. ಫ್ಲೋಸಿ ಮಿನೆಜಸ್ ಉದ್ಘಾಟಿಸಿದರು. ಎಟಿಎಂ ಸೌಲಭ್ಯವನ್ನು ಮಂಗಳೂರಿನ ವೈಟ್ ಡವ್ಸ್ನ ಸ್ಥಾಪಕಿ ಮತ್ತು ಅಧ್ಯಕ್ಷೆ ಕೊರಿನ್ ರಸ್ಕ್ವಿನ್ಹಾ ಉದ್ಘಾಟಿಸಿದರು. ಮೊದಲ ಎಟಿಎಂ ನಗದು ಹಿಂಪಡೆಯುವಿಕೆಯನ್ನು ಮಂಗಳೂರಿನ ಪ್ರಸಾದ್ ಪ್ರಿಂಟರ್ಸ್‌ ಮಾಲೀಕ ಪ್ರವೀಣ್ ಪತ್ರಾವೊ…

Read More

ಮಂಗಳೂರು,ಆ.20 : ವಿದ್ಯಾರ್ಥಿಗಳ ಆಕಾಂಕ್ಷೆಗಳನ್ನು ಸಾಧನೆಗಳಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಪರೀಕ್ಷಾ ಪೂರ್ವಸಿದ್ಧತಾ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್), ತನ್ನ ಪ್ರಮುಖ ಉಪಕ್ರಮ – ಅಂಥೆ- 2025 (ಆಕಾಶ್ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ) ಆಯೋಜಿಸಿದೆ ಎಂದು ಎಇಎಸ್ಎಲ್ ಸಿಇಒ ಮತ್ತು ಆಡಳಿತ ನಿರ್ದೇಶಕ ದೀಪಕ್ ಮೆಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ  ಮಾತಾನಾಡಿದ  ಅವರು,  ಆ.24, 31, ಸೆ.7ರಂದು ರಾಷ್ಟ್ರೀಯ ಮಟ್ಟದ ಅರ್ಹತಾ ವಿದ್ಯಾರ್ಥಿವೇತನ ಪರೀಕ್ಷೆ  ನಡೆಯಲಿದೆ. ಪರೀಕ್ಷೆಯನ್ನು   ಆನ್ಲೈನ್ ಮತ್ತು ಆಫ್ಲೈನ್ ವಿಧಾನದಲ್ಲಿ  ಬರೆಯಲು  ಅವಕಾಶವಿದೆ. ಆಯ್ದ ವಿದ್ಯಾರ್ಥಿಗಳಿಗೆ ಶೇ.100ರವರೆಗೆ ವಿದ್ಯಾರ್ಥಿವೇತನ ಮತ್ತು ನಗದು ಬಹುಮಾನ ನೀಡಲಾಗುತ್ತದೆ. ಆಕಾಶ್ ಎಜುಕೇಷನಲ್ ಸರ್ವೀಸಸ್ ತನ್ನ ಡಿಜಿಟಲ್ ಮತ್ತು ಇನ್ವೆಸ್ಟಸ್ ಕೋಸ್ ೯ಗಳಿಗೆ ದೇಶಾದ್ಯಂತ 250 ಕೋಟಿ ರೂ. ಮೌಲ್ಯದ ಶೇ.100 ವಿದ್ಯಾರ್ಥಿವೇತನ ನೀಡುತ್ತದೆ. ಜತೆಗೆ ರೂ. 2.5 ಕೋಟಿ  ಮೌಲ್ಯದ ಪ್ರಶಸ್ತಿ ನೀಡಲಾಗುವುದು  ಎಂದರು. ಈ ವರ್ಷದಿಂದ ಪ್ರತಿಷ್ಟಿತ ಆಕಾಶ್ ಇನ್ವೆಸ್ಟಸ್ ಕೋರ್ಸ್ ಅಡ್ವಾನ್ಸ್ಡ್ ಜೆಇಇ ತಯಾರಿಗಾಗಿ ವಿದ್ಯಾರ್ಥಿವೇತನ…

Read More

ಮಂಗಳೂರು, ಆ.19 : ಡಾಬರ್  ಚವನ್ ಪ್ರಾಶ್  ಸಂಸ್ಥೆಯ ವತಿಯಿಂದ ಮಂಗಳೂರಿನ ಗಾಂಧಿ ನಗರ ಸರಕಾರಿ ಶಾಲೆ ಹಾಗೂ ಕದ್ರಿ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಾಬರ್ ಚವನ್ ಪ್ರಾಶ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಚವನ್ ಪ್ರಾಶ್  ಆಯುರ್ವೇದ ಉತ್ಪನ್ನವಾಗಿದ್ದು, ದಶಕಗಳಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸೋಂಕುಗಳಿಂದ ರಕ್ಷಣೆ ಹೊಂದಲು ಬಳಸಲಾಗುತ್ತಿದೆ. ಶಾಲಾ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಡಾಬರ್  ಚವನ್ ಪ್ರಾಶ್  ಸಂಸ್ಥೆಯ  ವತಿಯಿಂದ  ವಿದ್ಯಾರ್ಥಿಗಳಿಗೆ ಉಚಿತವಾಗಿ ಡಾಬರ್ ಚವನ್ ಪ್ರಾಶ್  ವಿತರಣೆ  ಮಾಡಲಾಗುತ್ತಿದೆ ಎಂದು ಡಾ. ರುಚಿ ಅವರು ಹೇಳಿದರು. ಸಂಸ್ಥೆಯ ಪ್ರಶಾಂತ್ ಅಗರವಾಲ್ ಅವರು ಮಾತನಾಡಿ, ಆಯುರ್ವೇದದ ಶ್ರೀಮಂತ ಪರಂಪರೆ ಮತ್ತು ಪ್ರಕೃತಿ ಗಾಢ ಜ್ಞಾನ ಹೊಂದಿರುವ ಡಾಬರ್ ಯಾವಾಗಲೂ ಸುರಕ್ಷಿತ, ಕೈಗೆಟಕುವ ದರದಲ್ಲಿ ಲಭ್ಯವಿದೆ ಎಂದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸಮಂತ್, ಗಾಂಧಿ ನಗರ ಶಾಲೆಯ ಮುಖ್ಯ ಶಿಕ್ಷಕಿ, ಶಿಕ್ಷಕಿಯರು ಹಾಗೂ ಡಾಬರ್ ಇಂಡಿಯಾದ ದಿನೇಶ್…

Read More