Author: admin

ಮಂಗಳೂರು, ಮಾ. 07 : ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ‘ವೈಲ್ಡ್ ಲೈಫ್ ಸಫಾರಿ’ ಹಿಂದಿ ಮತ್ತು ಕನ್ನಡ ಚಿತ್ರದ ಮೂಹೂರ್ತ ಸಮಾರಂಭ ಶುಕ್ರವಾರ ನಡೆಯಿತು. ವಿ.ಕೆ. ಪಿಲಂ ಸ್ ರವರ ತನ್ನ ಎರಡನೇ ಪ್ರಾಜೆಕ್ಟ್ ‘ವೈಲ್ಡ್ ಟೈಗರ್ ಸಫಾರಿ’ ಚಲನಚಿತ್ರವನ್ನು ಘೋಷಿಸಿದೆ. ಈ ಸಂಸ್ಥೆಯ ಮೊದಲ ಚಿತ್ರ”ಕರಾವಳಿ” ಆಗಿದ್ದು, ಈ ಹೊಸ ಸಿನಿಮಾ ವಿನೋದ್ ಕುಮಾರ್ ಅವರ ಪ್ರೊಡಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿದೆ. ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ಸಿನಿಮಾದ ಚಿತ್ರೀಕರಣ ಆರಂಭಗೊಳ್ಳಲಿದ್ದು ಶೀಘ್ರದಲ್ಲಿ ಸಿನಿಮಾ ತೆರೆಗೆ ಬರಲಿದೆ  ಎಂದರು. ನಾಯಕ ನಟ ಶಿಥಿಲ್ ಕುಮಾರ್ ಅವರು ಮಾತಾಡಿ, ಲವ್, ಆಕ್ಷನ್ ಸಿನಿಮಾ ಇದಾಗಿದೆ. ಕಥೆ ಕೇಳಿ ಥ್ರಿಲ್ ಆಗಿದ್ದೇನೆ ಎಂದರು. ರಾಜೇಶ್ ಭಟ್ ಸಿನಿಮಾಕ್ಕೆ ಕೆಮರಾ ಕ್ಲಾಫ್ ಮಾಡಿದರು.ಸಮಾರಂಭದಲ್ಲಿ ಸಿನಿಮಾ ನಿರ್ಮಾಪಕ ವಿನೋದ್ ಕುಮಾರ್, ನಾಯಕಿ ನಿಮಿಕಾ ರತ್ನಾಕರ್, ಬಾಲಿವುಡ್ ನ ನೃತ್ಯ ನಿರ್ದೇಶಕರಾದ ಧರ್ಮೇಶ್, ಸುಶಾಂತ್, ಕೆಮರಾಮ್ಯಾನ್ ಎಜೆ ಶೆಟ್ಟಿ, ಕಲಾ ನಿರ್ದೇಶಕ…

Read More

ಮಂಗಳೂರು, ಮಾ. 07 : ಸನ್ ಮ್ಯಾಟ್ರಿಕ್ಸ್ ಬ್ಯಾನರ್ನಡಿ ತಯಾರಾಗಿರುವ ಕೆ. ಸತ್ಯೇಂದ್ರ ಪೈ ನಿರ್ಮಾಣದ ‘ಸ್ಕೂಲ್ ಲೀಡರ್’ ಕನ್ನಡ ಚಲನಚಿತ್ರವು ಏಪ್ರಿಲ್ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರ ನಿರ್ದೇಶಕ ರಜಾಕ್ ಪುತ್ತೂರು ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಕೂಲ್ ಲೀಡರ್ ಚಿತ್ರವು ಪ್ರೌಢಶಾಲಾ ಮಕ್ಕಳ  ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣ ಮೈಗೂಡಿಸಿಕೊಳ್ಳುವ ಕಥಾವಸ್ತು ಹೊಂದಿದೆ. ಶಾಲಾ ಚುನಾವಣೆ ಆಧರಿಸಿರುವ ಕಥೆ ಅಗಿರುವುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ. ಈ ಚಿತ್ರದಲ್ಲಿ ಸುಮಾರು 25 ಶಾಲೆಗಳ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭಿನಯಿಸಿದ್ದಾರೆ’ ಎಂದರು. ಪೆನ್ಸಿಲ್ ಬಾಕ್ಸ್ ಎಂಬ ಚಿತ್ರದ ನಿರ್ದೇಶಕ ರಜಾಕ್ ಪುತ್ತೂರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಾಡು ಬರೆದಿದ್ದಾರೆ. ಚಿತ್ರದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ದೀಪಕ್ ರೈ, ರಮೇಶ್ ಭಟ್ ನಟಿಸಿದ್ದಾರೆ ಎಂದು ಸತ್ಯೇಂದ್ರ ಪೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶಿವಾನಂದ, ನಾಗೇಶ್ ಕಾಮತ್, ಬಾಲಕೃಷ್ಣ…

Read More

ಮಂಗಳೂರು, ಮಾ.6: ಸೈಂಟ್ ಅಲೋಶಿಯಸ್ ಪ್ರತಿಷ್ಠಾನಗಳು ಮತ್ತು ಸೈಂಟ್ ಅಲೋಶಿಯಸ್ ಕಾಲೇಜ್ ಅಲ್ಯುಮಿ ಅಸೋಸಿಯೇಶನ್ ಸಂಯುಕ್ತವಾಗಿ ಅಲೋಶಿಯನ್ ಅಲ್ಯುಮಿ ಪ್ರಶಸ್ತಿ -2025 ಕಾರ್ಯಕ್ರಮವನ್ನು ಮಾ. 8ರಂದು ಕಾಲೇಜಿನ ಎಲ್ಸಿಆರ್ಐ ಬ್ಲಾಕ್ನ ರಸ್ಕ್ವಿಂಹ ಸಭಾಂಗಣದಲ್ಲಿ ಆಯೋಜಿಸಿದೆ. ಸಂಜೆ 5.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 2025ರ ಅಲೋಶಿಯನ್ ಅಲ್ಯುಮ್ಮಿ ಪ್ರಶಸ್ತಿಗೆ ಆಯ್ಕೆಯಾಗಿರುವ ಹೇರಂಭಾ ಇಂಡಸ್ಟ್ರೀಸ್ ಲಿಮಿಟೆಡಂನ ಅಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ, ಸಿಐಒ ಆಫ್ ದಿ ಇಯರ್ ಪ್ರಶಸ್ತಿ ವಿಜೇತೆ ಲೂಸಿ ಮರಿಯಪ್ಪ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಬಹು ಪ್ರಶಸ್ತಿ ವಿಜೇತ ವಾಸ್ತುಶಿಲ್ಪಿ ಆಸ್ಕರ್ ಕಾಂಸೆಸಾವ್, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಮೂರು ಉದ್ಯಮಗಳನ್ನು ನಿರ್ವಹಿಸುತ್ತಿರುವ ಜೇಮ್ಸ್ ವಿನ್ಸೆಂಟ್ ಮೆಂಡೋನ್ಸಾರಿಗೆ ಪ್ರದಾನ ಮಾಡಲಾಗುವುದು ಎಂದು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಪ್ರೆಸ್ಕ್ಲಬ್ನಲ್ಲಿ ಗುರುವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಈ ಪ್ರಶಸ್ತಿಯಡಿ ಈಗಾಗಲೇ 45 ಜನ ಪ್ರಸಿದ್ದ ಅಲೋಶಿಯನ್ಗಳನ್ನು ಗೌರವಿಸಲಾಗಿದೆ. ಈ ಗೌರವಕ್ಕೆ ಪಾತ್ರರಾದ ಕೆಲವು ಗಣ್ಯ…

Read More

ಮಂಗಳೂರು,ಮಾ.05 : ‘ಶಿವಾಜಿ’ ತುಳು ನಾಟಕ ಕಟೀಲು ಕ್ಷೇತ್ರದಲ್ಲಿ ಇದೇ 6 ರಂದು ಪ್ರಥಮ ಬಾರಿ ಪ್ರದರ್ಶನಗೊಳ್ಳಲಿದೆ. ತಾ. 13 ರಂದು ಪುರಭವನದಲ್ಲಿ ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಾಜಿ  ತುಳು ನಾಟಕದ ಶೀರ್ಷಿಕೆ ಗೀತೆ ಕನ್ನಡದಲ್ಲಿದೆ. ಸಂಭಾಷಣೆ ತುಳುವಿನಲ್ಲಿ ಇದೆ. ಅಲ್ಲಲ್ಲಿ ಹಿಂದಿ ಭಾಷೆಯನ್ನು ಬಳಸಿದ್ದೇವೆ. ಒಟ್ಟು 3 ಹಾಡುಗಳಿದ್ದು, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಿರಾಜ್ ಕಾವೂರು ಕಥೆ ರಚಿಸಿದ್ದಾರೆ ಎಂದು ಹೇಳಿದರು. ಪ್ರಮೋದ್ ಮರವಂತೆ, ಶಶಿರಾಜ್ ಕಾವೂರು ಸಾಹಿತ್ಯ ಬರೆದಿದ್ದಾರೆ. ಶಿವಾಜಿ ಪಾತ್ರಕ್ಕೆ ನಟ ಪೃಥ್ವಿ ಅಂಬರ್, ಗುರು ದಾದಾಜಿ ಪಾತ್ರಕ್ಕೆ ನವೀನ್ ಡಿ.ಪಡೀಲ್ ಧ್ವನಿ ನೀಡಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ದೇವದಾಸ್ ಕಾಪಿಕಾಡ್ ಅವರು ಹಾಡುಗಳನ್ನು ಹಾಡಿದ್ದಾರೆ. ಶಿವದೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದ ಪ್ರೀತೇಶ್ ಬಳ್ಳಾಲ್ಬಾಗ್ ಶಿವಾಜಿ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಎ.ಕೆ.…

Read More

ಉಡುಪಿ, ಮಾ.05: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ಮಾರಿಯಮ್ಮ ದೇವರಿಗೆ ಮಹಾಬ್ರಹ್ಮಕಲಶಾಭಿಷೇಕ ನಡೆಸುವ ಮೂಲಕ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಬುಧವಾರ  ಸಂಪನ್ನಗೊಂಡಿತು. ವೇದಮೂರ್ತಿ ಕೆ.ಜಿ.ರಾಗವೇಂದ್ರ ತಂತ್ರಿ ಅವರ ಮಾರ್ಗದರ್ಶನದಲ್ಲಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿ ಹಾಗೂ ಇತರ ಅರ್ಚಕರ ನೇತೃತ್ವದಲ್ಲಿ ಮಹಾ ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಮಂಗಳ ಗಣಯಾಗ, ಶಾಂಭವಿ ಕಾಲಾಮಾತೃಕಾರಾಧನೆ, ಕಾಲರಾತ್ರೀಕಾಲಾಮಾತೃಕಾರಾಧನೆ, ಮಂಡಲಾರ್ಚಣೆಯೊಂದಿಗೆ ಮಹಾ ಬ್ರಹ್ಮಕಲಶಾಭಿಷೇಕದ ಧಾರ್ಮಿಕ ವಿಧಿವಿಧಾನಗಳು ಮಾರಿಯಮ್ಮ ದೇವಿಯ ಬ್ರಹ್ಮಕಲಶಾಭಿಷೇಕದೊಂದಿಗೆ ಮುಕ್ತಾಯಗೊಂಡವು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಹೂವುಗಳಿಂದ ಸುಂದರವಾಗಿ ಅಲಂಕರಿಸಲ್ಪಟ್ಟಿತ್ತು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಒಟ್ಟು 1,008 ಕಲಶಗಳನ್ನು ಭಕ್ತರಿಗೆ ವಿತರಿಸಲಾಯಿತು,ಮಹಾ ಬ್ರಹ್ಮಕಲಶಾಭಿಷೇಕದ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕರೆ ರತ್ನಾಕರ ಶೆಟ್ಟಿ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗೌರವಾಧ್ಯಕ್ಷರಾದ…

Read More

ಕದ್ರಿ ಮಾ. 04 : ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಮಂಗಳೂರು ಇದರ ವತಿಯಿಂದ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ನವೀಕೃತ ಗೊಂಡ ಶ್ರೀ ಗೋರಕ್ಷನಾಥ ಜ್ಞಾನ ಮಂದಿರ ಸಭಾಭವನ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಮಾ. 2ರಂದು ಜರಗಿತು. ಕದ್ರಿ ಶ್ರೀ ಯೋಗೇಶ್ವರ. ಮಠದ ಮಠಾಧಿಪತಿಗಳಾದ ಶ್ರೀ ಶ್ರೀ ರಾಜಾ ಯೋಗಿ ನಿರ್ಮಲ್ ನಾಥ್ ಜೀ,  ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭ ನವೀಕೃತ ಗೊಂಡ ಶ್ರೀ ಗೋರಕ್ಷನಾಥ ಜ್ಞಾನ ಮಂದಿರ ಲೋಕಾರ್ಪಣೆ ಸಂಘದ ಅಧ್ಯಕ್ಷ ಕಿರಣ್ ಜೋಗಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ವೇದವ್ಯಾಸ ಕಾಮತ್ ಅವರು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮನಪಾ ಮಾಜಿ ಸದಸ್ಯೆ ಶಕೀಲಾ ಕಾವಾ, ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತಸರ ಎ.ಜೆ. ಶೆಟ್ಟಿ, ಕದ್ರಿ ಶ್ರೀ ಕೃಷ್ಣ ಮಂದಿರ ಇಲ್ಲಿನ ಸುಧಾಕರ ರಾವ್ ಪೇಜಾವರ, ಜೋಗಿ ಸಮಾಜದ…

Read More

ಬೆಂಗಳೂರು, ಮಾ.03 : ಶಾಸಕರ ವೇತನವನ್ನು ಶೇ 50 ರಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಶಾಸಕರ ಕ್ಲಬ್ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ. ಶಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ 50% ಹೆಚ್ಚಾಗಲಿದೆ. ಇದರ ಜೊತೆ ಇತರೆ ಭತ್ಯೆಗಳ ಮೊತ್ತವೂ ಹೆಚ್ಚಲಿದೆ. ಕಳೆದ ಅಧಿವೇಶನದಲ್ಲಿ ಶಾಸಕರ ವೇತನ ಹೆಚ್ಚಳ ಮಾಡುವಂತೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಪ್ರಸ್ತಾಪಿಸಿದ್ದರು.

Read More

ಮಂಗಳೂರು, ಮಾ .02 : ನಗರದ ನೀರೇಶ್ವಾಲ್ಯ, ಗೂಡ್’ಶೆಡ್ ರಸ್ತೆ ಯಲ್ಲಿರುವ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಶಾಸಕರ ನಿಧಿಯಿಂದ ಅಭಿವೃದ್ಧಿಗೊಂಡ ಮೇಲ್ಛಾವಣಿ ಹಾಗೂ ಸರ್ವರ ಸಹಕಾರದಿಂದ ನಿರ್ಮಾಣಗೊಂಡ ಅನ್ನಪೂರ್ಣೇಶ್ವರಿ ಭೋಜನಾಲಯವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ದೇವರ ಉತ್ಸವದ ಸಂದರ್ಭದಲ್ಲಿ ನಡೆಯುವ ಅನ್ನಸಂತರ್ಪಣಾ ಸೇವೆಯು ಭಕ್ತರಿಗೆ ಸಾಂಗವಾಗಿ ನಡೆಯುವ ಉದ್ದೇಶದೊಂದಿಗೆ ಇಲ್ಲಿ ಸುಸಜ್ಜಿತವಾದ ಭೋಜನಾಲಯ ಹಾಗೂ ಭಕ್ತರ ಹಿತದೃಷ್ಟಿಯಿಂದ ಮೇಲ್ಛಾವಣಿಯನ್ನು ನಿರ್ಮಿಸಲಾಗಿದ್ದು ಪವಿತ್ರ ಶಿವರಾತ್ರಿಯ ಸಂದರ್ಭದಲ್ಲೇ ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹೆಚ್. ಅಶೋಕ್ ನಾಯಕ್, ಸಹ ಮೊಕ್ತೇಸರರಾದ ಶ್ರೀ ಎನ್. ಶಿವಪ್ರಸಾದ್ ನಾಯಕ್, ಶ್ರೀಮತಿ ಲಲಿತಾ ಮತ್ತು ಶ್ರೀ ಎಚ್. ಪ್ರಭಾಕರ ನಾಯಕ್ ಹೊನ್ನಕಟ್ಟೆ,  ಸುಷ್ಮಾ ಮತ್ತು ಸುರೇಶ ಮಾಧವ ನಾಯಕ್ ಕೋಡಿಕಲ್, ಮತಿ ಸುಪ್ರಿಯ ಮತ್ತು  ಪ್ರವೀಣಚಂದ್ರ ಸುಂದರ ನಾಯಕ್ ಮಣ್ಣಗುಡ್ಡೆ, ಚಾರೋಡಿ ಅಭ್ಯುದಯ ಸಂಘದ ಅಧ್ಯಕ್ಷರಾದಬಿ. ಮಧುಕರ ನಾಯಕ್ ಅಲ್ಲದೇ ಅನೇಕರು ಉಪಸ್ಥಿತರಿದ್ದರು.

Read More

ಕಠ್ಮಂಡು, ಫೆ. 01 : ನೇಪಾಳದಲ್ಲಿ ಫೆ.28 ರಂದು ಮುಂಜಾನೆ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಾಗೆನೇ ಭಾರತ, ಟಿಬೆಟ್ ಮತ್ತು ಚೀನಾದ ಗಡಿ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ. ಹಿಮಾಲಯನ್ನ ಮಧ್ಯಭಾಗದ ಸಿಂಧುಪಾಲ್‌ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಸ್ಥಳೀಯ ಕಾಲಮಾನ ಬೆಳಗಿನ ಜಾವ 2.51ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ನಿರ್ವಹಣಾ ಮತ್ತು ಸಂಶೋಧನಾ ಕೇಂದ್ರ ತಿಳಿಸಿದೆ. ನೇಪಾಳದ ಸಂಭವಿಸಿದ ಭೂಕಂಪನದಿಂದ ಯಾವುದೇ ಜೀವಹಾನಿಯಾಗಲಿ, ಗಾಯಗೊಂಡಿರುವುದಾಗಲಿ ವರದಿಯಾಗಿಲ್ಲ. ಆದರೆ ಭೂಕಂಪನ ಸಂಭವಿಸಿದ ಪ್ರದೇಶಗಳಲ್ಲಿ ಜನ ಆತಂಕಗೊಂಡಿದ್ದಾರೆ ಎಂದು ವರದಿಯಾಗಿದೆ

Read More

ಮಂಗಳೂರು, ಫೆ.28 : ನಗರದ ಸಿಟಿಲೈಟ್ ಕಾಂಪ್ಲೆಕ್ಸ್ ನಲ್ಲಿ ಸಾಂಪ್ರದಾಯಿಕ ಸಿಹಿತಿನಸು ಬ್ರ್ಯಾಂಡ್ ಗಳಲ್ಲಿ ಒಂದಾಗಿರುವ ಇಂಡಿಯಾ ಸ್ವೀಟ್ ಹೌಸ್ ಇದರ 40ನೇ ಮಳಿಗೆ ಉದ್ಘಾಟನೆಗೊಂಡಿತು. ಇಂಡಿಯಾ ಸ್ವೀಟ್ ಹೌಸ್ ಮಳಿಗೆಯನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ನಂತರ ಎ.ಜೆ. ಗ್ರೂಪ್ ಇದರ ಚೇಯರ್ ಮ್ಯಾನ್ ಡಾ.ಎ.ಜೆ.ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಂಪನಕಟ್ಟೆಯ ಸಿಟಿ ಲೈಟ್ ಬಿಲ್ಡಿಂಗ್ ನಲ್ಲಿ ಆರಂಭವಾಗಿರುವ ಈ ಹೊಸ ಮಳಿಗೆ ಈಗ ಮಂಗಳೂರಿನ ಗ್ರಾಹಕರಿಗೆ ಅತ್ಯುತ್ತಮ ಸಿಹಿ ತಿನಿಸುಗಳು ಮತ್ತು ತಿಂಡಿಗಳನ್ನು ಒದಗಿಸಲಿದೆ. ಎಂದು ಸಂಸ್ಥೆಯ ಸಹ ಸಂಸ್ಥಾಪಕರಾದ ವಿಶ್ವನಾಥ ಮೂರ್ತಿ ಹೇಳಿದರು. ನಮ್ಮ 40ನೇ ಮಳಿಗೆಯನ್ನು ಆರಂಭಿಸಲು ಇದು ಉತ್ತಮ ಸ್ಥಳ ಎನ್ನುವುದು ನಮ್ಮ ಭಾವನೆ. ಹಾಗಾಗಿ ನಮ್ಮ ಮಳಿಗೆಯನ್ನು ಇಲ್ಲಿ ಪ್ರಾರಂಭಿಸಿದ್ದೇವೆ .ನಾವು ಐದು ವರ್ಷಗಳಲ್ಲಿ ಎಷ್ಟು ದೂರ ಬಂದಿದ್ದೇವೆ ಎಂಬುದಕ್ಕೆ  ಈ ಮಳಿಗೆ ಅತ್ಯುತ್ತಮ ಪುರಾವೆಯಾಗಿದೆ ಎಂದರು. ಉದ್ಘಾಟನಾ ಕಾರ್ಯಕ್ರಮದಲ್ಲಿ  ಅತಿದೊಡ್ಡ ಹಾಗೂ ವಿಶಿಷ್ಟ…

Read More