Author: admin

ವಿಟ್ಲ,ಫೆ.28 : ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಶಿವರಾತ್ರಿ ಪ್ರಯುಕ್ತ ಶಿವರಾತ್ರಿ ಜಾಗರಣೆ ಮತ್ತು ಸಾಮೂಹಿಕ ಶಿವ ಯೋಗ ನಮಸ್ಕಾರವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನೆಡೆಯಿತು. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಅನುವಂಶಿಕ ಮೊಕ್ತೇಸರ ಜಯರಾಮ ಬಲ್ಲಾಳ್ ಮತ್ತು ಅರಮನೆಯ ಕೃಷ್ಣಯ್ಯ ಬಲ್ಲಾಳ್ ಉದ್ಘಾಟಿಸಿ ಶುಭ ಹಾರೈಸಿದರು. ಜಾಗರಣೆಯು ರಾತ್ರಿ 9.30ರಿಂದ ಭಜನೆಯೋಂದಿಗೆ ಅರಂಭವಾದ 108ಬಾರಿ ಮೃತ್ಯುಂಜಯ ಜಪ,1008ಬಾರಿ ಶಿವ ಪಂಚಾಕ್ಷರಿ ಪಠಣೆ, ಶಿವಷ್ಟೋತ್ತರ ಶತನಾಮಾನಿ ಪಠಣೆ, ಹಾಗೂ ಬಿಲ್ವ ಪತ್ರ ಅರ್ಚನೆಯೋಂದಿಗೆ ಒಟ್ಟು 4ಅವೃತ್ತಿಗಳಲ್ಲಿ 11ಯೋಗ ಶಿವ ನಮಸ್ಕಾರವು ಶಿವ ಸ್ತೋತ್ರ ಪಠಣದೊಂದಿಗೆ 6.00ಕ್ಕೆ ಕಾರ್ಯಕ್ರಮ ಸಮಾಪನಗೊಂಡಿತು. ಸುಮಾರು 200ಕ್ಕೂ ಮಿಕ್ಕಿ ಸಂಖ್ಯೆಯಲ್ಲಿ ವಿಟ್ಲ,ಪುಣಚ,ಕಾಪುಮಜಲು, ಕೆಲಿಂಜ, ಮಾಮೇಶ್ವರ, ಭಾಗದ ಯೋಗ ಬಂಧುಗಳು ಭಾಗವಹಿಸಿದ್ದರು. ಶ್ರೀ ಕ್ಷೇತ್ರದಲ್ಲಿ ಶಿಸ್ತಿಬದ್ದವಾಗಿ ಯೋಗ ಶಿವ ನಮಸ್ಕಾರ ಮಾಡಲಾಯಿತು. ಜಿಲ್ಲಾ ಸಹ ಸಂಚಾಲಕರಾದ ಶ್ರೀಮತಿ ಮಾಧುರಿ , ವಿಟ್ಲ ನಗರದ ಪ್ರಮುಖರಾದ ಶ್ರೀಮತಿ ಮೀರಾ, ಪ್ರಕಾಶ ಅಣ್ಣಡ್ಕ ಇವರು ಶಿಕ್ಷಣ ವಿಧಿಯ ಮಾರ್ಗದರ್ಶನ…

Read More

ಮಂಗಳೂರು, ಫೆ.27 : ಇತಿಹಾಸ ಪ್ರಸಿದ್ಧ ಕಾವೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಮಾರ್ಚ್ 6ರಂದು ಬೆಳಗ್ಗೆ 11 ಗಂಟೆ ಯಿಂದ 12ರವರೆಗೆ ನವೀಕೃತ ಗರ್ಭಗೃಹದಲ್ಲಿ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಮಾರ್ಚ್ 9ರಂದು ಬೆಳಗ್ಗೆ 8:10ರಿಂದ 8:40ರ ಮೀನಲಗ್ನ ಸುಮುಹೂರ್ತದಲ್ಲಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕವು ಜರುಗಲಿರುವುದು ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಮಾರ್ಚ್ 1ರ ಶನಿವಾರದಿಂದ ಮೊದಲ್ಗೊಂಡು ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮ ಹಾಗೂ ಮಾರ್ಚ್ 9ರ ವರೆಗೆ ನಡೆಯುವ ಶ್ರೀ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಹಾಗೂ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಹಾಕಲಾಶಾಭಿಶೇಕಕ್ಕೆ ಭಕ್ತಭಿಮಾನಿಗಳು ತ್ರಿಕರಣಪೂರ್ವಕವಾಗಿ ಸಹಕರಿಸಬೇಕು ಎಂದು ಹೇಳಿದರು. ಹೊರೆಕಾಣಿಕೆ ಸಮಿತಿ ಸಂಚಾಲಕ ರಮಾನಂದ ಭಂಡಾರಿ ಮಾತಾಡಿ, ಮಾರ್ಚ್ 1ರಂದು ಕೂಳೂರು, ಪಡುಕೋಡಿ, ಶಾಂತಿನಗರ, ಗಾಂಧಿನಗರ, ಅತ್ರಬೈಲು, ಕುಂಜತ್ತಬೈಲು, ಮರಕಡ, ಕಾವೂರು, ಪಡುಶೆಡ್ಡೆಜಾರ, ಬೋಂದೇಲ್, ಪಚ್ಚನಾಡಿ, ಪದವಿನಂಗಡಿ, ಮೇರಿಹಿಲ್,…

Read More

ಉಡುಪಿ, ಫೆ.26 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು, ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಂಗಳವಾರ ಪ್ರಾರಂಭವಾದವು. ವೇದಮೂರ್ತಿ ಕೆ.ಜಿ. ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ ಮತ್ತು ದೇವಾಲಯದ ಪ್ರಧಾನ ಅರ್ಚಕರಾದ ವೇದಮೂರ್ತಿ ಕೆ.ಪಿ. ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ, ದೇವಾಲಯದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಧಾರ್ಮಿಕ ವಿಧಿಗಳಿಗೆ ಚಾಲನೆ ನೀಡಿದರು. ನಂತರ, ಋತ್ವಿಲಾರ್ವಣ, ವಿಶ್ವಕರ್ಮ ಪೂಜೆ ಮತ್ತು ಇತರ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅರಣಿ ಮಥನ ಪ್ರಕ್ರಿಯೆಯ ಮೂಲಕ ಬೆಂಕಿ ಬೆಳಗಿಸಲಾಯಿತು. ೨೪ ಕಾಯಿ ಗಣಯಾಗ ಸೇರಿದಂತೆ ಹವನ ಸಮಾರಂಭಗಳ ಸರಣಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೆಎಂಆರ್‌ಜೆ ಗ್ರೂಪ್ಸ್ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ, ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ,…

Read More

ಬೀಜಿಂಗ್, ಫೆ.25: ಚೀನಾದ ವಿಜ್ಞಾನಿಗಳ ತಂಡವು ಬಾವಲಿಗಳಲ್ಲಿ ಕಂಡುಬರುವ ಹೊಸ ವೈರಾಣುವನ್ನು ಪತ್ತೆಹಚ್ಚಿದೆ. ಕೋವಿಡ್ 19 ಸಾಂಕ್ರಾಮಿಕಕ್ಕೆ ಕಾರಣವಾಗಿದ್ದ ವೈರಾಣುವಿನಂತೆಯೇ ಇರುವ ಈ ಕೊರೊನಾ ವೈರಸ್, ಪ್ರಾಣಿಯಿಂದ ಮನುಷ್ಯರಿಗೆ ಹರಡುವ ಅಪಾಯವಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಡಬ್ಲ್ಯುಐವಿ) ಪ್ರಯೋಗಾಲಯದ ಷಿ ಝಂಗ್‌ಲಿ ನೇತೃತ್ವದ ತಂಡವು ನಡೆಸಿದ ಅಧ್ಯಯನದಲ್ಲಿ ಈ ವೈರಾಣು ಪತ್ತೆಯಾಗಿದೆ. ಇದೀಗ ಪತ್ತೆಯಾಗಿರುವ ಎಚ್‌ಕೆಯು5-ಕೊರೊನಾ ವೈರಸ್-2′, ಕೊರೊನಾ ವೈರಸ್ನ ಹೊಸ ತಳಿಯಾಗಿದ್ದು ಹಾಂಕಾಂಗ್‌ನಲ್ಲಿರುವ ‘ಜಪಾನೀಸ್ ಪಿಪಿಸ್ಟೈಲ್’ ಬಾವಲಿಯಲ್ಲಿ ಮೊದಲು ಗುರುತಿಸಲಾಗಿದೆ.

Read More

ಮಂಗಳೂರು,ಫೆ.23 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ“ ಲೋಗೋ ಅನಾವರಣ ಕಾರ್ಯಕ್ರಮ ಬುಧವಾರ ಬೆಳಗ್ಗೆ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತಾಡಿ, ಜಿಲ್ಲೆಯ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರುತ್ತೇನೆ ಎಂದರು. ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಮಾತಾಡಿ,ಸುವರ್ಣ ಸಂಭ್ರಮದಲ್ಲಿರುವ ಜಿಲ್ಲೆಯ ಪತ್ರಕರ್ತರ ಸಂಘಕ್ಕೆ ಒಳ್ಳೇದಾಗಲಿ ಎಂದರು. ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸಿ.ಎ.ಶಾಂತಾರಾಮ್ ಶೆಟ್ಟಿ ಮಾತಾಡಿ, ಜಿಲ್ಲೆಯ ಪತ್ರಕರ್ತರ ಬಗ್ಗೆ ಕಾಳಜಿ ಮತ್ತು ಹೆಮ್ಮೆಯಿದೆ. ಪತ್ರಕರ್ತರು ಮಾಡುವ ಕೆಲಸದಿಂದ ಅವರನ್ನು ಗುರುತಿಸಬಹುದು. ಬಹುಷಃ ಜಾಸ್ತಿ ಸಂಬಳವಿಲ್ಲದ ಪತ್ರಕರ್ತರು ಪ್ರೀತಿ ಮತ್ತು ವಿಶ್ವಾಸದಿಂದ ಆಪ್ತರಾಗುತ್ತಾರೆ ಎಂದರು. ವೇದಿಕೆಯಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಬಾಳ ಜಗನ್ನಾಥ ಶೆಟ್ಟಿ, ಅನ್ನು…

Read More

ಮಂಗಳೂರು, ಫೆ. 22 : ನೀರುಮಾರ್ಗದ ಪೆದಮಲೆಯಲ್ಲಿ ಪುನನಿರ್ಮಾಣಗೊಂಡಿರುವ ಶ್ರೀವಾಜಿಲ್ಲಾಯ ಮಹಿಷಂತಾಯ -ಧೂಮಾವತಿ ಬಂಟ ದೈವಸ್ಥಾನದಲ್ಲಿ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ ಫೆ. 18ರಿಂದ 22ರ ವರೆಗೆ ಕುಡುಪು ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಫೆ. 18ರಂದು ಅಪರಾಹ್ನ 3 ಗಂಟೆಗೆ ನೀರುಮಾರ್ಗ  ಶ್ರೀ ಸುಬ್ರಹ್ಮಣ್ಯ ಭಜನ ಮಂದಿರದಿಂದ ದೈವಸ್ಥಾನಕ್ಕೆ ಬಂಡಿ ಕೊಡಿಮರ ಮತ್ತು ದೈವಗಳ ಆಭರಣಗಳ ಶೋಭಾಯಾತ್ರೆ, ನಡೆಯಿತು. ಸಂಜೆ 5ಗಂಟೆಗೆ ಪೆದಮಲೆಗುತ್ತು ಭಂಡಾರ ಚಾವಡಿಯಲ್ಲಿ ದೇವತಾ ಪ್ರಾರ್ಥನೆ, ಶಿಲ್ಪ ಸನ್ಮಾನ, ಆಲಯ ಪ್ರತಿಗ್ರಹ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲ, ಮತ್ತು ನೂತನ ಮೊಗಮೂರ್ತಿ ಉಯ್ಯಾಲೆಗಳ ಶುದ್ಧಿ ಪ್ರಕ್ರಿಯೆ ಹಾಗೂ ಬಿಂಬಾಧಿವಾಸ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವಲ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ನಡೆಯಿತು. ಫೆ. 19ರಂದು ಬೆಳಗ್ಗೆ ಪೆದಮಲೆಗುತ್ತು ಭಂಡಾರ ಚಾವಡಿಯಲ್ಲಿ ಗಣಪತಿ ಹೋಮ,ತುಳಸಿ ಪ್ರತಿಷ್ಠೆ ಮತ್ತು ದ್ವಾರಪೂಜೆ ಶ್ರೀ ದೈವಗಳ ಪ್ರತಿಷ್ಠೆ ಕಲಶಾಭಿಷೇಕ ಪೆದಮಲೆ ದೈವಸ್ಥಾನದಲ್ಲಿ ಗಣಪತಿ ಹೋಮ ಮತ್ತು ತೋರಣ…

Read More

ಬೆಂಗಳೂರು,ಫೆ.21 : ಟಿವಿ9 ಸುದ್ದಿವಾಹಿನಿಯು ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರನ್ನು ಗುರುತಿಸಿ ಅವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮ ಫೆಬ್ರವರಿ 7, 2025 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಭವ್ಯ ಸಂದರ್ಭವು ಕರ್ನಾಟಕದ ಮಹಿಳೆಯರ ಗಮನಾರ್ಹ ಸಾಧನೆಗಳನ್ನು ಗೌರವಿಸಲು ಮತ್ತು ಆಚರಿಸಲು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸಿದೆ, ಸಮಾಜಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಗುರುತಿಸುತ್ತದೆ . ಟಿವಿ 9 ನವ ನಕ್ಷತ್ರ ಸಮ್ಮಾನ್ ಮೂಲಕ ಅಪ್ರತಿಮ ವೀರರ ಮೇಲೆ ಬೆಳಕು ಚೆಲ್ಲುವುದರಿಂದ ಹಿಡಿದು ಟಿವಿ 9 ಸೆಲ್ಯೂಟ್ ಮೂಲಕ ಕರ್ನಾಟಕ ಪೊಲೀಸ್ ಸೇವೆಯನ್ನು ಸನ್ಮಾನಿಸುವ ಕಾರ್ಯ ಮಾಡುತ್ತಿದೆ.ಟಿವಿ 9, ಮಾಧ್ಯಮದ ಹೊಸ ಕಾರ್ಯಕ್ರಮ ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ವೈವಿಧ್ಯಮಯ ಕೊಡುಗೆಗಳನ್ನು ಗುರುತಿಸುವುದು ಮತ್ತು ಪ್ರಶಂಸಿಸುವುದು “ಹೆಮ್ಮೆಯ ಕನ್ನಡತಿ”ಯ ಮುಖ್ಯ ಉದ್ದೇಶವಾಗಿದೆ. ಇದರಲ್ಲಿ ಸಮಾಜ ಸೇವೆ, ಕಲೆ, ವ್ಯವಹಾರ, ವೈದ್ಯಕೀಯ, ಕ್ರೀಡಾ ಮನರಂಜನೆ ಮತ್ತು ಇತರ ಮಹತ್ವದ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಮಹಿಳೆಯರು ಸೇರಿದ್ದಾರೆ ಎಂದು ಅಯೋಜಕರ…

Read More

ಉರ್ವ, ಫೆ. 20 : ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತ ವರ್ಷಾವಧಿ ಮಹಾಪೂಜೆ ಮಂಗಳವಾರ ಸಂಪನ್ನಗೊಂಡಿತು. ಸೋಮವಾರ,ಫೆ. 17ರಂದು ರಾತ್ರಿ ದೇವಿಗೆ ಮಹಾರಂಗ ಪೂಜೆಯಾಗಿ ಹಾಲು ಉಕ್ಕಿಸುವ ಪೂಜೆ ನೆರವೇರಿತು. ತಡರಾತ್ರಿ ಮಹಾಪೂಜೆ ಹೊರಗಿನ ದರ್ಶನ ಬಲಿ, ಕಟ್ಟೆ ಬಲಿ, ಮಡಸ್ತಾನ, ಕಂಚಿಲ್ ಸೇವೆ, ಶ್ರೀದೇವಿಯ ಗರ್ಭಗುಡಿ ಪ್ರವೇಶವಾಯಿತು. ಮಂಗಳವಾರ ಬೆಳಗ್ಗೆ ನಿತ್ಯಪೂಜೆ, ಮಧ್ಯಾಹ್ನ ಸರ್ವಾಲಂಕಾರ ಪೂಜೆ, ಮಹಾಪೂಜೆ, ಸಂಜೆ ಮಹಾಪೂಜೆ, ಹೊರಗಿನ ದರ್ಶನ ಬಲಿ, ಕಟ್ಟೆ ಬಲಿ, ಮಡಸ್ತಾನ, ಕಂಚಿಲ್ ಸೇವೆ, ಶ್ರೀದೇವಿಯ ಗರ್ಭಗುಡಿ ಪ್ರವೇಶವಾಯಿತು. ರಾತ್ರಿ ಸುಡುಮದ್ದು ಪ್ರದರ್ಶನ ನೆರವೇರಿತು. ಬಳಿಕ ನೈವೇದ್ಯ ಬಲಿ, ಮಹಾರಾಶಿ ಪೂಜೆ ನಡೆಯಿತು. ಫೆಬ್ರವರಿ 22ರಂದು ರಾತ್ರಿ 7ರಿಂದ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮ ನಡೆಯಲಿದೆ.

Read More

ಮಂಗಳೂರು,ಫೆ.19 : ರಾಮಕ್ಷತ್ರಿಯ ಸೇವಾ ಸಂಘ ಮಂಗಳೂರು ಇದರ ನೇತೃತ್ವದಲ್ಲಿ ಫೆ.22 ಮತ್ತು 23, 2025 ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್ ನಲ್ಲಿ “ಕ್ಷಾತ್ರ ಸಂಗಮ-3” ಎಂಬ ರಾಮಕ್ಷತ್ರಿಯರ ಸಮಾವೇಶ ನಡೆಯಲಿದೆ ಎಂದು ಸಂಚಾಲಕರಾದ ಜೆ.ಕೆ.ರಾವ್ ನಗರದ ಪಾಲೆಮಾರ್ ಗಾರ್ಡನ್ ನಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಸಮಾಜವನ್ನು ಒಟ್ಟುಗೂಡಿಸುವುದು ಮತ್ತು ಯುವ ಜನತೆಗೆ ನಮ್ಮ ಸಮಾಜದ ಸಂಸ್ಕೃತಿ, ಆಚಾರ, ವಿಚಾರ, ಆಚರಣೆ, ಪರಂಪ ರೆಯನ್ನು ತಿಳಿಯಪಡಿಸುವುದು ಸಮಾವೇಶದ ಮುಖ್ಯ ವಿಷಯವಾಗಿದೆ. ಈ ಸಮಾವೇಶದಲ್ಲಿ ರಾಮಕ್ಷತ್ರಿಯ ಸಮಾಜದ ಎಲ್ಲಾ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವ ಸಮುದಾಯ, ಮಹನೀಯರು ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಮಕ್ಷತ್ರಿಯ ಸಮಾಜದ ಸುಮಾರು 52 ಸಂಘಗಳ ಪ್ರತಿನಿಧಿ ಗಳು ಮತ್ತು ಸದಸ್ಯರು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದೆ ಎಂದರು. ಫೆ. 22 ರಂದು ಬೆಳಗ್ಗೆ ಗಂಟೆ 9ರಿಂದ ರಾಮತಾರಕ ಯಜ್ಞ ಮತ್ತು ಜಪ…

Read More

ಕಾಪು, ಫೆ. 19: ಇಲ್ಲಿನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಮಂಗಳವಾರ ಮಧ್ಯಾಹ್ನ ಮಾರಿಯಮ್ಮ ದೇವಿಯ ಭೇಟಿ ಸಹಿತವಾಗಿ ರಥಾರೋಹಣ ಆ ಬಳಿಕ ಮಹಾ ಅನ್ನಸಂತರ್ಪಣೆ ರಾತ್ರಿ ಶ್ರೀ ಮನ್ಮಹಾರಥೋತ್ಸವ, ಉತ್ಸವ ಬಲಿ,ಕಟ್ಟೆ ಪೂಜೆ,ಭೂತ ಬಲಿ,,ಶಯನೋತ್ಸವ ನೆರವೇರಿತು. ದೇಗುಲದ ಪ್ರಧಾನ ತಂತ್ರಿ ವೇ। ಮೂ। ಶ್ರೀಶ ತಂತ್ರಿ ಕಲ್ಯ, ಅರ್ಚಕ ವೇ। ಮೂ। ನಾರಾಯಣ ತಂತ್ರಿ ಅವರ ಉಪಸ್ಥಿತಿಯಲ್ಲಿ ವೈದಿಕ ವೃಂದದವರ ಪಾಲ್ಗೊಳ್ಳುವಿಕೆಯೊಂದಿಗೆ ವಾರ್ಷಿಕ ಮಹೋತ್ಸವ, ಪಲ್ಲಪೂಜೆ, ರಥಾರೋಹಣ ನಡೆಯಿತು. ಆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹಳೇ ಮಾರಿಯಮ್ಮದೇವಸ್ಥಾನದ ಆಡಳಿತ ಮೊಕ್ತಸರ ಪ್ರಸಾದ್ ಜಿ.…

Read More