Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಡಿ.20 : ಮಂಗಳೂರಿನ ಶಕ್ತಿನಗರದಲ್ಲಿರುವ ರಮಾಶಕ್ತಿ ಮಿಷನ್ ನಲ್ಲಿ ಡಿ. 25 ರಿಂದ 29ರವರೆಗೆ 5 ದಿನಗಳ ಕಾಲ ಲೋಕ ಕಲ್ಯಾಣಕ್ಕಾಗಿ ಶ್ರೀ ಸಹಸ್ರ ಚಂಡಿಕಾಯಾಗ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ಸುಧಾ ಪ್ರಸಾದ್ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವೇದ ಶಾಸ್ತ್ರಾನುಸಾರ ನಿರ್ಮಿತ 10 ಹೋಮ ಕುಂಡಗಳಲ್ಲಿ ಸುಮಾರು 130ಕ್ಕೂ ಹೆಚ್ಚು ಖುತ್ವಿಕರು ನಿರಂತರ ಯಾಗದಲ್ಲಿ ಪಾಲ್ಗೊಳ್ಳುತ್ತಾರೆ. ವೈದಿಕ ಪಂಡಿತರಾದ ಶ್ರೀ ಲಕ್ಷ್ಮೀ ನಾರಾಯಣ ಸೋಮಯಾಜಿ ಅವರು ಈ ಯಾಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ದಿನಾಂಕ 29 ರಂದು ನಡೆಯುವ ಮಹಾ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಶ್ರಂಗೇರಿ ಶಾರದಾ ಮಠದ ಪೀಠಾಧಿಪತಿಯಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಡಿ.23ರಂದು ಹೊರಕಾಣಿಕೆ ನಡೆಯಲಿದೆ. 25ರಂದು ಗಣಹೋಮ,26 ಶುಕ್ರವಾರದಂದು ಲಕ್ಷ್ಮೀನಾರಾಯಣ ಹ್ರದಯ ಹೋಮ,27ಶನಿವಾರದಂದು ನವಗ್ರಹ ಸಹಿತ ಮಹಾಮ್ರತ್ಯುಂಜಯ ಹೋಮ,28 ರಂದು ಧನ್ವಂತರಿ ಹೋಮ ಹಾಗೂ 29ರಂದು ಮಹಾ ಚಂಡಿಕಾ ಹೋಮ ನಡೆಯಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉದಯ್.ಡಿ.ಭಟ್ಕಳ್ ಅಧ್ಯಕ್ಷರು,ಡಾ.ಪೂರ್ಣಿಮಾ ಬಾಳಿಗ,ಅಶೋಕ್…
ಬೈಂದೂರು, ಡಿ. 19 : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರು ದೋಣಿಯಿಂದ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರು ಉಪ್ಪುಂದ ಗ್ರಾಮದ ಮಡಿಕಲ್ ಬಳಿ ನಡೆದಿದೆ. ಮೃತರನ್ನು ಹರಿಶ್ಚಂದ್ರ ಖಾರ್ವಿ ಎಂದು ಗುರುತಿಸಲಾಗಿದೆ. ಇವರು ಸೋಮವಾರ ಸಂಜೆ ದೋಣಿಯಲ್ಲಿ ಇತರ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದು, ಸಮುದ್ರ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದಾಗ ದೋಣಿಯಿಂದ ಆಯತಪ್ಪಿ ನೀರಿಗೆ ಬಿದ್ದಿದ್ದು,ಕೂಡಲೇ ಅವರನ್ನು ಇತರ ಮೀನುಗಾರರು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿ ದ್ದಾರೆ. ಆದರೆ ಹರಿಶ್ಚಂದ್ರ ಖಾರ್ವಿ ಅವರು ಡಿ.18ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ, ಡಿ. 18 : ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಎರಡನೇ ಬಾರಿ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಅವರನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಸಹಾಯಕ ಆಯುಕ್ತರು ಮರು ಪರಿಶೀಲನೆ ಮಾಡಿ ಇದೀಗ ಮತ್ತೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ ಆದರೆ ಈ ಸಂದರ್ಭ ಮಹೇಶ್ ಶೆಟ್ಟಿಅವರು ಮನೆಯಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ.
ಮಂಗಳೂರು, ಡಿ.18 : ಅಡ್ಯಾರು ಗ್ರಾಮ ಪಂಚಾಯತ್ ,ಪ್ರಕೃತಿ ಸಂಜೀವಿನಿ ಒಕ್ಕೂಟ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಇದರ ಸಂಯುಕ್ತ ಆಶ್ರಯದಲ್ಲಿ ಡಿ 2೦ ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯ ತನಕ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಅಡ್ಯಾರು ಗ್ರಾಮೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಅಡ್ಯಾರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಅಬ್ದುಲ್ ಜಲೀಲ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಅಂದುಪೂರ್ವಾಹ್ನ 9 ರಿಂದ ಮಕ್ಕಳ ಪಥ ಸಂಚನದ ಬಳಿಕ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಅವರು ನೆರವೇರಿಸಲಿದ್ದಾರೆ . ಅಧ್ಯಕ್ಷತೆಯನ್ನು ಅಡ್ಯಾರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಅಬ್ದುಲ್ ಜಲೀಲ್ ವಹಿಸಲಿರುವವರು . ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ , ಅಡ್ಯಾರು ಗ್ರಾಮ ಪಂಚಾಯತ್ ಇದರ ಉಪಾಧ್ಯಕ್ಷರಾದ ಝೋಹರಾ ಭಾಗವಹಿಸಲಿದ್ದಾರೆ…
ಮಂಗಳೂರು, ಡಿ.17: ಕೊಂಕಣಿ ಸಾಹಿತಿ, ಲೇಖಕ ಜೆ.ಎಫ್. ಡಿಸೋಜಾರ 18ನೆ ಕಥೆ ಪುಸ್ತಕ ‘ಭಾಂಗಾರಾಚೊ ಕೊಳ್ಸೊ’ ಕೃತಿಯನ್ನು ಸಾಹಿತಿ ರೊನಾಲ್ಡ್ ರೋಚ್ ಕಾಸ್ಸಿಯಾ ಅವರು ಬುಧವಾರ ನಗರದ ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಿದರು. ಜೆ.ಎಫ್. ಡಿಸೋಜಾ ಅವರು ಭಂಗರಾಚಿ ಮಸ್ಲಿ (ಚಿನ್ನದ ಮೀನು), ಭಂಗರಾಚಿ ಕುರಾದ್ (ಚಿನ್ನದ ಕೊಡಲಿ), ಭಂಗಾರಾಚೆ ಚಿತಾಲ್ (ಚಿನ್ನದ ಜಿಂಕೆ), ಭಂಗಾರಾಚೆ ಮೋರ್ (ಚಿನ್ನದ ನವಿಲು), ಭಂಗಾರಾಚೊ ಕೀರ್ (ಚಿನ್ನದ ಗಿಳಿ), ಭಾಂಗಾರಾಚೊ ಬುಡ್ಕುಲೊ (ಚಿನ್ನದ ಮಡಕೆ) ಹಾಗೂ ಇತ್ತೀಚೆಗೆ ಬಿಡುಗಡೆಯಾದ ಭಂಗರಸೋ ಕೊಲ್ಸೋ (ಚಿನ್ನದ ಕೊಡ) ಸೇರಿ18 ಮಕ್ಕಳ ಕಥೆಗಳ ಪುಸ್ತಕಗಳನ್ನು ರಚಿಸಿದ್ದಾರೆ.. ಅವರು ಮಕ್ಕಳ ಕಥೆಗಳು, ಇತರ ಕಥೆ, ಚುಟುಕುಗಳ ಮೂಲಕ ಹಲವು ಪ್ರಶಸ್ತಿ, ಸನ್ಮಾನಗಳನ್ನು ಪಡೆದಿದ್ದಾರೆ. ಎಂದು ಸಾಹಿತಿ ಡಾಲ್ಪಿ ಲೋಬೋ ಅವರು ಕೃತಿಕಾರರ ಬಗ್ಗೆ ಪರಿಚಯ ನೀಡಿದರು. ಈ ಸಂದರ್ಭದಲ್ಲಿ ಮಾರ್ಸೆಲ್ ಡಿಸೋಜಾ, ಜಾನೆಟ್ ಡಿಸೋಜಾ, ಡ್ಯಾಫ್ನಿ ಮಿನೇಜಸ್ ಉಪಸ್ಥಿತರಿದ್ದರು.
ಮಂಗಳೂರು, ಡಿ.16 : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21 ರಂದು ಸುರತ್ಕಲ್ ಬಂಟರ ಭವನದ ಆವರಣದಲ್ಲಿ ‘ಪರ್ವ 2025’ ಫುಡ್ ಫೆಸ್ಟಿವೆಲ್, ಲೈಫ್ ಸ್ಟೈಲ್ ಮತ್ತು ಸೀರೆ ಮೇಳ ನಡೆಯಲಿದೆ ಎಂದು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷರಾದ ಸರೋಜಾ ಟಿ.ಶೆಟ್ಟಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿಗಳಾದ ರಾಜೇಶ್ವರಿ ಡಿ ಶೆಟ್ಟಿ ಮಾತಾಡಿ ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ವಿವಿಧ ಮಳಿಗೆಗಳ ಸೀರೆ ಮಾರಾಟ ಮೇಳ ನಡೆಯಲಿದೆ. ಈ ಸೀರೆ ಮೇಳದಲ್ಲಿ ನವನವೀನ ಮಾದರಿಯ ಕಾಂಚಿಪುರಂ, ರೇಷ್ಮೆ, ಬನಾರಸ್, ಬಂಗಾಲಿ ಕಾಟನ್ ಹಾಗೂ ವಿವಿಧ ಮಾದರಿಯ ಸೀರೆಗಳು ಸಲ್ವಾರ್ ಸೂಟ್, ಖಾದಿ ಭಂಡಾರ, ಕುರ್ತಾಗಳು, ಕಸೂತಿ, ಹಸ್ತಕಲೆ ಬ್ಯಾಗುಗಳು,ಒಂದು ಗ್ರಾಂ ಚಿನ್ನಾಭರಣ ವಿವಿಧ ವಿನ್ಯಾಸದ ಆರ್ಟಿಫಿಶಲ್ ಜ್ಯುವೆಲ್ಲರಿ, ಮಸಾಲೆ ಹುಡಿಗಳು,ಹರ್ಬಲ್ ಉತ್ಪನ್ನಗಳು ಹಾಗೂ ಅನೇಕ ವಿಧವಿಧ ಉತ್ಪನ್ನಗಳ ಅಪೂರ್ವ…
ಮಂಗಳೂರು,ಡಿ. 15 : ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.14ರಂದು ಭಾನುವಾರ ನಿಧನ ಹೊಂದಿದರು. ಶ್ರೀಧರ ರೈ ಅವರು ಸುಂಕದಕಟ್ಟೆ ಮೇಳ, ಕೊಲ್ಲೂರು ಮೇಳ, ಭಗವತೀ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.ರಾಜ ವೇಷ, ಪುಂಡು ವೇಷ, ಬಣ್ಣದ ವೇಷಧಾರಿಯಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರು.
ವಿಟ್ಲ ಡಿ. 14 : ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮೈರ ಮೋನಪ್ಪ ಕುಲಾಲ್ (65) ಎಂದು ಗುರುತಿಸಲಾಗಿದೆ. ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳ ಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಳಿಯ ಎಂಬಲ್ಲಿ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೈರ ಮೋನಪ್ಪ ಕುಲಾಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸಾವನ್ನಪ್ಪಿ. ಮೂವರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೋನಪ್ಪ ಕುಲಾಲ್ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಘಟ ನೆ ನಡೆದೆ…
ಮಂಗಳೂರು, ಡಿ. 13 : ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು, ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಸಂಯುಕ್ತ ಆಶ್ರಯದ ಸೌಹಾರ್ದ ಕ್ರಿಸ್ಮಸ್ ಉತ್ಸವ 2025 ಇದರ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಶನಿವಾರ ನೆರವೇರಿತು. ಕ್ರಿಸ್ಮಸ್ ಉತ್ಸವವನ್ನು ರಾಜ್ಯ ಮಟ್ಟದ ಸ್ಕೇಟಿಂಗ್ ಕ್ರೀಡಾಪಟು ಯುವರಾಜ್ ಡಿ. ಕುಂದರ್ ಅವರು ಕೇಕ್ ಕತ್ತರಿಸಿ ಉದ್ಘಾಟಿಸಿದರು.ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾದರ್ ಸುದೀಪ್ ಪೌಲ್ ಅವರು ಕ್ರಿಸ್ಮಸ್ ಸಂದೇಶ ನೀಡಿದರು.ಈ ಸಂದರ್ಭದಲ್ಲಿ ಸ್ಕೇಟಿಂಗ್ ಕ್ರೀಡಾಪಟು ಯುವರಾಜ್ ಡಿ. ಕುಂದರ್ ಅವರನ್ನು ಸನ್ಮಾನಿಸಲಾಯಿತು. ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರಾಯ್ ಕ್ಯಾಸ್ತೆಲಿನೊ ಅಧ್ಯಕ್ಷತೆ ವಹಿಸಿದ್ಧರು.ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೊ, ಕಥೊಲಿಕ್ ಸಭಾ ಅಧ್ಯಕ್ಷ ಸಂತೋಷ್ ಡಿಸೋಜ, ಉದ್ಯಮಿ ಸಂತೋಷ್ ಸಿಕ್ವೇರಾ, ಕೋಶಾಧಿಕಾರಿ ಡಾಲ್ಫಿ ಡಿ’ಕೋಸ್ತಾ,ಮಂಗ್ಳೂರ್ ಕ್ಯಾಥಲಿಕ್ ಸಭಾ ಮಂಗಳೂರ್ ಪ್ರದೇಶ್ ಕಾರ್ಯದರ್ಶಿ ವಿಲ್ಮಾ ಮೊಂಥೆರೋ ಉಪಸ್ಥಿತರಿದ್ದರು. ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಕಾರ್ಯದರ್ಶಿ ಸುನಿಲ್…
ಅಲ್ಲೂರು, ಡಿ. 12 : ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. ಈ ಅಪಘಾತವು ಬೆಳಗಿನ ಜಾವ 5.30ರ ವೇಳೆ ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು,12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿವೆ. ಬಸ್ಸಿನಲ್ಲಿ 35 ಮಂದಿ ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. 9 ಮಂದಿ ಮೃತಪಟ್ಟಿದ್ದಾರೆ, 7 ಮಂದಿಯನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಸಿಹೆಚ್ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.












