Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಅ.17 : ಲಯನ್ಸ್ ಡಿಸ್ಟಿಕ್ಸ್ 317ಡಿಯ ಯೋಜನೆಯಾದ ಲಯನ್ಸ್ ಪ್ರಕೋಷ್ಠದಿಂದ ದೇಶಭಕ್ತಿ ಮತ್ತು ಸಂಗೀತ ಆಚರಣೆಯಾದ ಆಜಾದಿ ಕಾ ಮಹೋತ್ಸವ ಮತ್ತು ‘ಸುಹಾನಾ ಸಫರ್’ ಕಾರ್ಯಕ್ರಮ ಆ.16ರಂದು ನಗರದ ಡೊಂಗರಕೇರಿಯಲ್ಲಿರುವ ಕೆನರಾ ಶ್ರೀ ಸುಧೀಂದ್ರ ಆಡಿಟೋರಿಯಂನಲ್ಲಿ ಇತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರು ಉದ್ಘಾಟಿಸಿ ನಂತರ ಕಾರ್ಯಕ್ರಮಕ್ಕೆ ಶುಭಕೋರಿದರು. ನಂತರ ಶಾಸಕ ವೇದವ್ಯಾಸ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ವಾಸುದೇವ ಕಾಮತ್, ಎಂದು ಲಯನ್ಸ್ ಪ್ರಕೋಷ್ಠದ ಜಿಲ್ಲಾ ಸಂಯೋಜಕ ಕುಂಬ್ಳೆ ನರಸಿಂಹ ಪ್ರಭು ಅವರು ಕಾರ್ಯಕ್ರಮಕ್ಕೆ ಶುಭಕೋರಿದರು. ಕಾರ್ಯಕ್ರಮದಲ್ಲಿ ಎಂದು ಲಯನ್ಸ್ ಪ್ರಕೋಷ್ಠದ ಜಿಲ್ಲಾ ಸಂಯೋಜಕ ಕುಂಬ್ಳೆ ನರಸಿಂಹ ಪ್ರಭು, ಲಯನ್ಸ್ ಜಿಲ್ಲಾ ಗವರ್ನರ್ 317ಡಿಯ ಕುಡಿ ಅರವಿಂದ್ ಶೆಣೈ, ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷ ಎಂ.ರಾಜೇಶ್ ಕಾಮತ್, ಜಿಲ್ಲಾ ನಿರ್ದೇಶನಾಲಯದ ಎಸೋಸಿಯೇಟ್ ಸಂಪಾದಕ ವೆಂಕಟೇಶ್ ಎನ್. ಬಾಳಿಗ ಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಶನ್ನ ಮಂಡಳಿ ಸದಸ್ಯ ಬಸ್ತಿ ಪುರುಷೋತ್ತಮ…
ಸುರತ್ಕಲ್, ಆ.17: ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಉದ್ಘಾಟನಾ ಕಾರ್ಯಕ್ರಮ ಆಗಸ್ಟ್ 10, ಭಾನುವಾರದಂದು ನಡೆಯಿತು. ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಮೊಹಮ್ಮದ್ ಹನೀಫ್ ಅವರು ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯ 10 ನೇ ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಎಟಿಎಂ ನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಶ್ರೀ ದುರ್ಗಾ ಫೈನಾನ್ಷಿಯಲ್ ಕಾರ್ಪೊರೇಷನ್ನ ಮಾಲೀಕ ಮೆಬೈಲ್ ಸದಾಶಿವ ಶೆಟ್ಟಿ ಮಾಡಿದರು. ಸಮಾರಂಭವು ಸುರತ್ಕಲ್ ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಬ್ಯಾಂಕಿನ ಪ್ರಗತಿ ಕಳೆದ ಎಂಟು ವರ್ಷಗಳಲ್ಲಿ ₹500 ಕೋಟಿ ವ್ಯವಹಾರದಿಂದ ₹1,300 ಕೋಟಿಗೆ ತಲುಪಿದೆ.ಈ ಬೆಳವಣಿಗೆಗೆ ಆಡಳಿತ ಮಂಡಳಿಯ ಬದ್ಧತೆ ಮತ್ತು ಅಚಲವಾದ ಗ್ರಾಹಕರ ನಂಬಿಕೆ ಕಾರಣವಾಗಿದೆ. ಎಂಸಿಸಿ ಬ್ಯಾಂಕ್ ಪ್ರಸ್ತುತ ಹಣಕಾಸು ವರ್ಷದ ಅಂತ್ಯದ ವೇಳೆಗೆ…
ಮಂಗಳೂರು, ಆ.16 : ರೋಹನ್ ಕಾರ್ಪೋರೇಶನ್ ಸಂಸ್ಥೆ ಯಿಂದ ಪಂಪವೆಲ್ ರೋಹನ್ ಸ್ಕ್ವೇರ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನೆರವೇರಿತು. ಕಾರ್ಯಕ್ರಮವು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಬಳಿಕ ಮಾತನಾಡಿನ ಅವರು, ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ ದೇಶಸೇವೆಯ ನೆನಪುಗಳನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತದೆ. ಓದು, ಉದ್ಯೋಗ, ಹಣ , ಇವು ಜೀವನದ ಒಂದು ಭಾಗ ಮಾತ್ರ. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸೇವೆ ಸಲ್ಲಿಸುವ ಧ್ಯೇಯವನ್ನೂ ಹೃದಯದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋ ಅವರು, ಸ್ವಾತಂತ್ರ್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ…
ಮಂಗಳೂರು, ಆ.16: ದ.ಕ. ಜಿಲ್ಲಾಡಳಿತ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು. ಆಕರ್ಷಕ ಪಥಸಂಚಲನದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸಂದೇಶ ಭಾಷಣ ಮಾಡಿದ ಅವರು, ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಕರ್ನಾಟಕ ಸರಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಸ್ವಾತಂತ್ರೋತ್ಸವದ ನೈಜ ಉದ್ದೇಶವನ್ನು ಈಡೇರಿಸಿದ ತೃಪ್ತಿ ತಂದಿದೆ. ಗ್ಯಾರಂಟಿ ಯೋಜನೆಗಳು ಹೊಸ ಇತಿಹಾದ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು, ದೇವಸ್ಥಾನ, ಮಸೀದಿ, ಚರ್ಚ್ ಗಳ ಧಾರ್ಮಿಕ ಮುಖಂಡರು ತಮ್ಮ ತಮ್ಮ ಧಾರ್ಮಿಕ ಕೇಂದ್ರಗಳಲ್ಲಿ ಜನರಿಗೆ ತಿಳುವಳಿಕೆ ನೀಡಬೇಕು. ಕಲೆ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲೂ ಸಹ ಸಾಮರಸ್ಯ ಸಂದೇಶ ಸಾರುವತ್ತ ಕಲಾವಿದರು ಹೆಚ್ಚಿನ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಮೂಲಭೂತ ಸೌಕರ್ಯ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಅನುದಾನ ನೀಡಿದೆ. ಜಿಲ್ಲೆಯಲ್ಲಿ…
ಉರ್ವ, ಅ.15 : ಲಯನ್ಸ್ ಡಿಸ್ಟಿಕ್ಸ್ 317ಡಿಯ ಯೋಜನೆಯಾದ ಲಯನ್ಸ್ ಪ್ರಕೋಷ್ಠದಿಂದ ದೇಶಭಕ್ತಿ ಮತ್ತು ಸಂಗೀತ ಆಚರಣೆಯಾದ ಆಜಾದಿ ಕಾ ಮಹೋತ್ಸವ ಮತ್ತು ‘ಸುಹಾನಾ ಸಫರ್’ ಕಾರ್ಯಕ್ರಮ ಆ.16ರಂದು ಸಂಜೆ 5.30ರಿಂದ ನಗರದ ಡೊಂಗರಕೇರಿಯಲ್ಲಿರುವ ಕೆನರಾ ಶ್ರೀ ಸುಧೀಂದ್ರ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಲಯನ್ಸ್ ಪ್ರಕೋಷ್ಠದ ಜಿಲ್ಲಾ ಸಂಯೋಜಕ ಕುಂಬ್ಳೆ ನರಸಿಂಹ ಪ್ರಭು ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಕಾರ್ಯಕ್ರಮವನ್ನು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಮತ್ತು ಲಯನ್ಸ್ ಕ್ಲಬ್ ಮಂಗಳೂರಿನ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ವಾಸುದೇವ ಕಾಮತ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಹಳೆಯ ಸಿನಿಮಾ ಹಾಡುಗಳ ಸಂಗೀತ ಕಾರ್ಯಕ್ರಮ ಸಾಗಲಿದೆ. ಎಲ್ಲರಿಗೂ ಉಚಿತ ಪ್ರವೇಶವಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ 317ಡಿಯ ಕುಡಿ ಅರವಿಂದ್ ಶೆಣೈ, ಜಿಲ್ಲಾ ನಿರ್ದೇಶನಾಲಯದ ಎಸೋಸಿಯೇಟ್…
ಮಂಗಳೂರು, ಆ.14 : ಕೊಡಿಯಾಲ್ ಬೈಲ್ ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್ ನಲ್ಲಿ ಆ.15 ಮತ್ತು 16ರಂದು ಅದ್ದೂರಿಯಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತದೆ ಎಂದು ಇಸ್ಕಾನ್ನ ಅಧ್ಯಕ್ಷ ಗುಣಾಕರ ರಾಮದಾಸ ಅವರು ಬುಧವಾರ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, 15ರಂದು ಬೆಳಿಗ್ಗೆ 9ರಿಂದ ರಾತ್ರಿ 9 ಗಂಟೆಯವರೆಗೆ ಕಲಾಕುಂಜದಲ್ಲಿ ಶ್ರೀಕೃಷ್ಣನಿಗೆ ಮಹಾಭಿಷೇಕ, ಭಜನೆ, ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ.16ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೊಡಿಯಾಲ್ಬೈಲ್ ಶಾರದಾ ವಿದ್ಯಾಲಯದ ಮೈದಾನದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಂದ ‘ಶ್ರೀಕೃಷ್ಣ ವೈಭವಂ’ ರೂಪಕ, ಬ್ಲಾಗರ್ಗಳು, ರೀಲ್ಸ್ ಮಾಡುವವರಿಗಾಗಿ ‘ಬ್ಲಾಗ್ ಫಾರ್ ಕೃಷ್ಣ’ ಕಾರ್ಯಕ್ರಮ, ಛದ್ಮವೇಷ ಸ್ಪರ್ಧೆ, ಕೃಷ್ಣನ ಕುರಿತ ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಮಧ್ಯರಾತ್ರಿ ಕೃಷ್ಣನಿಗೆ ಜನ್ಮ ಆರತಿ, ಮಹಾಭಿಷೇಕದೊಂದಿಗೆ ಆಚರಣೆ ಸಂಪನ್ನಗೊಳ್ಳಲಿದೆ ಎಂದು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ…
ಮಂಗಳೂರು,ಆ. 13 : ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಮಂಗಳೂರು, ಇದರ ವತಿಯಿಂದ ಕದ್ರಿ ಹಿಲ್ಸ್ ನ ಶ್ರೀ ಗೋರಕ್ಷನಾಥ, ಜ್ಞಾನ ಮಂದಿರದಲ್ಲಿ ಆಟಿಡೊಂಜಿ ದಿನ ಹಾಗೂ ಸಂಘದ 2025ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ಜರಗಿತು. ಪ್ರೊ| ಸಂಜೀವ ಕುತ್ತಾಜೆ ಸುಳ್ಯ ಅವರು ಆಟ ಕೂಟದ ಸಂದೇಶ ನೀಡುತ್ತಾ, ಹಿಂದಿನ ಕಾಲದಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ನಮ್ಮ ಪೂರ್ವಿಕರು ಅನುಸರಿಸುತ್ತಿದ್ದ ಆಚಾರ ವಿಚಾರಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಆಟಿಡೊಂಜಿ ದಿನ ಆಚರಣೆ ಕಾರ್ಯಕ್ರಮವನ್ನು ಪ್ರತೀ ವರ್ಷ ಆಚರಿಸಿಕೊಂಡು ಬಂದಿದೆ ಎಂದು ಹೇಳಿದರು. ಮಂಗಳೂರು ಜೋಗಿ ಸಮಾಜ ಸುಧಾರಕ ಸಂಘ ಇದರ 2025ನೇ ಸಾಲಿನ ವಾರ್ಷಿಕೋತ್ಸವ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘವು ಪ್ರತೀವರ್ಷ ಆಟಿಡೊಂಜಿ ದಿನ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿರುವುದು ಪ್ರಶಂಸನೀಯ ಎಂದರು. ಈ ಸಂದರ್ಭದಲ್ಲಿ ಸಮಾಜ ಸೇವೆಗೈದ ಹಿರಿಯರಾದ…
ವಿಟ್ಲ, ಆ. 12 : ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಅವರ ಜನ್ಮದಿನೋತ್ಸವ, ಗ್ರಾಮೋತ್ಸವ 2025ರ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಅನುಗ್ರಹ ಸಂದೇಶ ನೀಡುತ್ತಾ,, ಸಂಸ್ಕಾರದಿಂದ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಸಂಸ್ಕಾರದಿಂದ ಸಂಸ್ಕೃತಿ ಉಳಿಯಲು ಸಾಧ್ಯ ಆಗುತ್ತದೆ. ನಿರೀಕ್ಷೆಯ ಬದಲು ಪರಿಶ್ರಮದಿಂದ ಪರಿವರ್ತನೆ ಮಾಡಿ ಯಶಸ್ಸನ್ನು ಗಳಿಸಬಹುದು ಎಂದು ಸ್ವಾಮೀಜಿ ಹೇಳಿದರು. ಸಾಧ್ವಿ ಶ್ರೀ ಮಾತಾನಂದಮಯಿ ದಿವ್ಯ ಸಾನಿಧ್ಯ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ವಿವಿಧ ಕ್ಷೇತ್ರಗಳ ಗಣ್ಯರಾದ ಪ್ರೊ. ನರೇಂದ್ರ ಎಲ್. ನಾಯಕ್, ಡಾ. ಡಿ. ಸುರೇಶ ರಾವ್, ಕಿಶೋರ್ ಆಳ್ವ, ಶಂಕರ ಕೆ. ಶೆಟ್ಟಿ ಅಂಕ್ಲೇಶ್ವರ, ರವೀಂದ್ರನಾಥ ಭಂಡಾರಿ , ದಿವಾಕರ ದಾಸ ನೇರ್ಲಾಜೆ ,ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ , ಮಹಾರಾಷ್ಟ್ರ ಘಟಕದ ಅಧ್ಯಕ್ಷ ವಾಮಯ್ಯ ಬಿ ಶೆಟ್ಟಿ, ಮುಂಬೈ ಸೇವಾ ಬಳಗದ ಪ್ರಭಾಕರ ಶೆಟ್ಟಿ, ಸ್ವಾಗತ ಸಮಿತಿ ಅಧ್ಯಕ್ಷ…
ಮಂಗಳೂರು, ಆ.11 : ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು ಸೋಮರ್ ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದ ಈಜುಪಟು ಮಂಗಳೂರಿನ ಲೇಡಿಹಿಲ್ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಉಡುಪಿಯ ಈಜುಕೊಳದಲ್ಲಿ ಗುತ್ತಿಗೆ ಆಧಾರದಲ್ಲಿ ಲೈಫ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಮೂರು ವರ್ಷದ ಹಿಂದೆ ನಗರದ ಮಂಗಳೂರು ಮಹಾನಗರಪಾಲಿಕೆ ಈಜುಕೊಳದ ನಿರ್ವಹಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮಂಗಳೂರು, ಆ.10 : ಮಂಗಳೂರು ಕರ್ನಾಟಕ ರಾಜ್ಯ ದೇವಾಡಿಗರ ಸಂಘದಿಂದ ದೇವಾಡಿಗ ಸಮಾಜ ಭವನದಲ್ಲಿ ಆಟಿಡೊಂಜಿ ದಿನ ಇತ್ತೀಚೆಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಂಕನಾಡಿ ಪಡೀಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಲತೀಶ್ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಷ್ಟಕರವಾಗಿದ್ದ ಹಿಂದಿನ ಕಾಲದ ಆಟಿ ದಿನಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸುತ್ತಾರೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಾಂಸ್ಕೃತಿಕ ಚಿಂತಕಿ ಮಂಜುಳಾ ಪ್ರವೀಣ್ ಶೆಟ್ಟಿ ಅವರು, ಆಟ ತಿಂಗಳಿನ ಪ್ರತಿ ಆಚರಣೆಯೂ ಕರಾವಳಿಯ ಹವಾಗುಣ ಹಾಗೂ ಸಸ್ಯ ಸಂಪತ್ತಿನ ಬಳಕೆಗೆ ಪೂರಕವಾಗಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಅಧ್ಯಕ್ಷ ಅಶೋಕ್ ಮೈಲಿ, ಪಾವಂಜೆ ದೇವಾಡಿಗ ಸಮಾಜ ಸಂಘದ ಅಧ್ಯಕ್ಷ ಅಣ್ಣಪ್ಪ ದೇವಾಡಿಗ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ.ರಾ.ದೇ. ಸಂ.ಹಿರಿಯಡ್ಕ ಉಪಸಂಘದ ಅಧ್ಯಕ್ಷ ಎಚ್. ರಾಜೇಂದ್ರ ಕುಮಾರ್, ಷಷ್ಠಿ ರಥ ಸಮರ್ಪಣ ಸಮಿತಿ ಪೊಳಲಿಯ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ, ಶ್ರೇಷ್ಠ ವಾದ್ಯ ವಾದಕ, ತಯಾರಕ…












