Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಫೆ.03: ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ಶಿಬಿರ ನಡೆಯಲಿದೆ ಎಂದು ಸಂಚಾಲಕ ಲವ ಬಂಗೇರಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಈ ಶಿಬಿರದಲ್ಲಿ ಕಿವಿಯ ಶ್ರವಣ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ. ಪತ್ರಕರ್ತರ ಕುಟುಂಬದ ಸದಸ್ಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ಸಾರ್ವಜನಿಕರು ಉಚಿತ ತಪಾಸಣೆ ಪಡೆಯಬಹುದಾಗಿದೆ. ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಟೀಮ್ ಈಶ್ವರ್ ಮಲ್ಪೆ ಶ್ರವಣ ಯಂತ್ರದ (Hearing Machine) ವೆಚ್ಚದ 40% ಮೊತ್ತವನ್ನು ಭರಿಸುತ್ತಿದೆ. ಮೊದಲ 30 ನೋಂದಾಯಿತ ವ್ಯಕ್ತಿಗಳು ಮಾತ್ರ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಅಂತಾರಾಷ್ಟ್ರೀಯ…
ಮಂಗಳೂರು, ಫೆ. 02 : ಫೆ.6ರಂದು ರಾಜ್ಯದಾದ್ಯಂತ ಕರಿಕಾಡ ಸಿನಿಮಾ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ ಎಂದು ಚಿತ್ರದ ನಾಯಕ ನಟ ಕಾಡ ನಟರಾಜ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರಾಗಿದೆ. ಚಿತ್ರದಲ್ಲಿ ಮಂಜು ಸ್ವಾಮಿ , ಯಶ್ ಶೆಟ್ಟಿ , ಗೋವಿಂದ ಗೌಡ , ದೀವಾಕರ್ , ಕಾಮಿಡಿ ಕಿಲಾಡಿ ಸೂರ್ಯ , ದಿ.ರಾಕೇಶ್ ಪೂಜಾರಿ , ವಿಜಯ್ ಚಂಡೂರು , ಚಂದ್ರಪ್ರಭ , ಕರಿಸುಬ್ಬು , ಗಿರಿ , ಬಲರಾಜ್ ವಾಡಿ , ಮಾಸ್ಟರ್ ಆರ್ಯನ್ ಮುಂತಾದವರು ನಟಿಸಿದ್ದಾರೆ ಎಂದು ಮಾಹಿತಿ ನೀಡಿದರು. ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6…
ಉಳ್ಳಾಲ : ಕಾಪಿಕಾಡು ಉಮಾಪುರಿಯ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಫೆ. 1ರಿಂದ ಫೆ. 6ರವರೆಗೆ ನಡೆಯಲಿದೆ. ಫೆ. 7 ಮತ್ತು 8 ರಂದು ವಾರ್ಷಿಕ ಮಹೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮತ್ತು ಭದ್ರಕಾಳಿ ಪ್ರತಿಷ್ಠೆ ನಡೆಯಲಿದ್ದು, ಫೆ. 1ರಂದು ಸಂಜೆ 6.00 ಗಂಟೆಯಿಂದ ವೈಧಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಫೆ. 2ರಿಂದ ಫೆ 6 ರ ವರೆಗೆ ಮಹಾಪೂಜೆ,ಸಭಾ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಫೆ 6 ರಂದು ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಶ್ರೀ ಭದ್ರಕಾಳಿ ಪ್ರತಿಷ್ಠೆ, ಪ್ರತಿಷ್ಠಾ ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಫೆ 7 ಮತ್ತು 8ರಂದು ವಾರ್ಷಿಕ ಜಾತ್ರಾ ಮಹೋತ್ಸವ…
ಬೆಂಗಳೂರು, ಜ. 31: ಬೆಂಗಳೂರಿನ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ‘ಕಾನ್ಸಿಡೆಂಟ್ ಗ್ರೂಪ್’ನ ಸಂಸ್ಥಾಪಕ ಮತ್ತು ಮಾಲೀಕರಾದ ಸಿ.ಜೆ. ರಾಯ್ ಅವರು ಶುಕ್ರವಾರ (ಜ.30) ತಮ್ಮ ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸಿ.ಜೆ.ರಾಯ್ ತನ್ನ ಗನ್ನಿಂದ ಗುಂಡು ಹಾರಿಸಿಕೊಂಡು ಜೀವ ಕಳೆದುಕೊಂಡಿದ್ದಾರೆ. ಅವರನ್ನು ತಕ್ಷಣ ಎಚ್ಎಸ್ಆರ್ ಲೇಔಟ್ನ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿಜೆ ರಾಯ್ ಸಾವನ್ನಪ್ಪಿದರು ಎಂದು ವರದಿಯಾಗಿದೆ. ರಿಯಲ್ ಎಸ್ಟೇಟ್ ಲೇಔಟ್, ಹೋಟೇಲ್, ರೆಸಾರ್ಟ್, ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಿ.ಜೆ.ರಾಯ್ ಬಂಡವಾಳ ಹೂಡಿದ್ದರು. ಯಶಸ್ವಿ ಉದ್ಯಮಿಯಾಗಿದ್ದ ಅವರು ಕಾನ್ಸಿಡೆಂಟ್ ಗ್ರೂಪ್ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಕೊಲಂಬಿಯಾ, ಜ. 30 : ಈಶಾನ್ಯ ಕೊಲಂಬಿಯಾದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಣ್ಣ ವಿಮಾನಯೊಂದು ಪತನಗೊಂಡಿದೆ. ಈ ಘಟನೆಯಲ್ಲಿ ವಿಮಾನದಲ್ಲಿದ್ದ ಸಂಸದ ಸೇರಿದಂತೆ ಎಲ್ಲಾ 15 ಜನರು ಅಪಘಾತದಲ್ಲಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಈ ವಿಮಾನವು ಬೆಳಗ್ಗೆ 11.42 ಕ್ಕೆ ಕುಕುಟಾ ವಿಮಾನ ನಿಲ್ದಾಣದಿಂದ ಪರ್ವತಗಳಿಂದ ಆವೃತವಾದ ಓಕಾನಾ ನಗರಕ್ಕೆ ಹೊರಟಿದೆ.ಮಧ್ಯಾಹ್ನದ ಸುಮಾರಿಗೆ ಹತ್ತಿರದ ಓಕಾನಾದಲ್ಲಿ ಇಳಿಯುವಾಗ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ. ದುರಂತದಲ್ಲಿ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಮಾಹಿತಿ ನೀಡಿದೆ. ವಿಮಾನವನ್ನು ಹುಡುಕಲು ಮತ್ತು ಶವಗಳನ್ನು ಹೊರತೆಗೆಯಲು ಸರ್ಕಾರ ವಾಯುಪಡೆಯನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ.
ಮಂಗಳೂರು, ಜ. 29 : ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರತಿಷ್ಠಿತ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪದಾನ ಸಮಾರಂಭವನ್ನು ಜನವರಿ 31 ಹಾಗೂ ಫೆಬ್ರವರಿ 1 ರಂದು ನಗರದ ಟಿವಿ ರಮಣ ಪೈ ಸಭಾಂಗಣ, ಕೊಡಿಯಾಲ್-ಬೈಲ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಕೊಂಕಣಿ ನಾಟಕ ಮಹೋತ್ಸವದ ಅಂಗವಾಗಿ ನಾಲ್ಕು ಪ್ರಸಿದ್ದ ಕೊಂಕಣಿ ನಾಟಕಗಳ ಪ್ರದರ್ಶನ ನಡೆಯಲಿದೆ. ಮೊದಲ ದಿನ ಸಂಜೆ 5.00 ರಿಂದ 6.00 ಗಂಟೆಯ ತನಕ ಮಂಗಳೂರು ಸಾಧನಾ ಬಳಗ ಪ್ರಕಾಶ್ ಶೆಣೈ ನೇತೃತ್ವದ ಮಕ್ಕಳ ಕಲಾತಂಡದವರು “ಭಕ್ತ ಪುರಂದರ” ಯೆಂಬ ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ.ಅಂದು ಸಂಜೆ 7.00 ರಿಂದ 8.00 ಗಂಟೆ ತನಕ ಮಂಗಳೂರಿನ ರಂಗ ಅಧ್ಯಯನ ಕೇಂದ್ರ ತಂಡದವರು ಅಭಿನಯಿಸುವ ಜನಪ್ರಿಯ “ಚಿಕೆ ರಾಬ್”…
ಮೂಡುಬಿದಿರೆ, ಜ. 28 : ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ ನೂತನ ಕಚೇರಿಯನ್ನು ಎಸ್ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸೋಮವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಲ್ಲಬೆಟ್ಟು ಸಹಕಾರಿ ಸಂಘದಿಂದ ವಿಭಜನೆಗೊಂಡು ಪ್ರತ್ಯೇಕ ಅಸ್ತಿತ್ವಕ್ಕೆ ಬಂದಿರುವ ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಳೀಯ ಜನತೆಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆ ನೀಡಲು ಸಾಧ್ಯವಾಗಲಿದೆ. ಈ ಭಾಗದ ರೈತರಿಗೆ ಕೃಷಿ ಸಾಲ ಸೌಲಭ್ಯ ಲಭಿಸಬೇಕು. ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಈ ಸಂಘ ಸದೃಢವಾಗಿ ಬೆಳೆಯಲಿ ಎಂದರು. ಈ ಸಂದರ್ಭದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಶಿರ್ತಾಡಿ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ವಹಿಸಿದ್ದರು. ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಪಡಿತರ ವಿಭಾಗವನ್ನು ಉದ್ಘಾಟಿಸಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರಾದ…
ಬೆಂಗಳೂರು,ಜ. 27 : ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ಸಂವಹನ ಮತ್ತು ಮಾಧ್ಯಮ ಅಧ್ಯಯನ ಶಾಲೆಯ (SCMS) ಆಶ್ರಯದಲ್ಲಿ ಹತ್ತನೇ ಆವೃತ್ತಿಯ ‘ಮೀಡಿಯಾಕಾನ್’ ಅಂತರಾಷ್ಟ್ರೀಯ ಸಮ್ಮೇಳನ ಹಾಗೂ ಸಂಘದ ಉತ್ಸವಗಳಿಗೆ ಜ. 23ರ ಶುಕ್ರವಾರದಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಖ್ಯಾತ ಚಲನಚಿತ್ರ ನಿರ್ದೇಶಕ ದಿಬಾಕರ್ ಬ್ಯಾನರ್ಜಿ ಅವರು, ಅಧಿಕಾರ ಮತ್ತು ಪ್ರಬಲ ನಿರೂಪಣೆಗಳ (dominant narratives) ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಕಿವಿಮಾತು ಹೇಳಿದರು. ಜನಪ್ರಿಯತೆ (populism) ಮತ್ತು ಸರ್ವಾಧಿಕಾರತ್ವದಂತಹ ಶಕ್ತಿಗಳು ಇನ್ನು ಮುಂದೆ ಕೇವಲ ರಾಜಕೀಯ ಸಿದ್ಧಾಂತಗಳಾಗಿ ಉಳಿಯದೆ, ದೈನಂದಿನ ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಬೌದ್ಧಿಕವಾಗಿ ತಮ್ಮನ್ನು ತಾವು ಸನ್ನದ್ಧರನ್ನಾಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮುಂಬರುವ ಸವಾಲುಗಳನ್ನು ಎದುರಿಸಲು ಮತ್ತು ಸಾಮಾಜಿಕ-ರಾಜಕೀಯ ಸಂಕೀರ್ಣತೆಗಳನ್ನು ನಿಭಾಯಿಸಲು ಪ್ರತಿ ನಿಮಿಷವೂ ನಿಮ್ಮ ಕನಸುಗಳನ್ನು ಸಾಕಾರಗೊಳಿಸುವತ್ತ ಮತ್ತು ಮಿದುಳಿಗೆ ಕೆಲಸ ಕೊಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಅವರು ಯುವಜನತೆಗೆ…
ಉಡುಪಿ, ಜ. 26 : ಸ್ಕೂಟರ್ ಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾಶ್ (29) ಎಂದು ಗುರುತಿಸಲಾಗಿದೆ.ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉಡುಪಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು, ಜ. 25: ಹಂಪನಕಟ್ಟೆಯಲ್ಲಿರುವ ಅಕ್ಬರ್ ಕಾಂಪ್ಲೆಕ್ಸ್ನಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಪಕ್ಕದ ಲಾಡ್ಜ್ನಲ್ಲಿದ್ದವರು ಇಂದರಿಂದ ತೊಂದರೆ ಅನುಭವಿಸಿದ್ದಾರೆಎಂದು ಹೇಳಲಾಗಿದೆ. ಹೇಗೆ ಹೊತ್ತಿಕೊಂಡಿತು ಇದರ ಬಗ್ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ.












