Author: admin

ಬೆಳ್ಮಣ್, ಆ.09 : ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಬ್ಯಾಂಕಿಂಗ್ ಸೇವೆಯ ಪ್ರಯಾಣದಲ್ಲಿ ಬ್ಯಾಂಕಿನ 9 ನೇ ಎಟಿಎಂ ಅನ್ನು ಆಗಸ್ಟ್ 9, ಶನಿವಾರ ಬೆಳ್ಮಣ್ ಶಾಖೆಯಲ್ಲಿ ಉದ್ಘಾಟಿಸಲಾಯಿತು. ಎಟಿಎಂ ಅನ್ನು ಬೆಳ್ಮನ್ ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್ ನಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬೆಳ್ಮಣ್ ನ ಸೇಂಟ್ ಜೋಸೆಫ್ ಚರ್ಚ್ನನ ಧರ್ಮಗುರುಗಳಾದ ರೆವೆರೆಂಡ್ ಫಾದರ್ ಫ್ರೆಡ್ರಿಕ್ ಮಸ್ಕರೇನ್ಹಸ್ ಅವರು ಎಟಿಎಂ ಅನ್ನು ಆಶಿರ್ವಚಿಸಿ ಶಾಖೆ ಮತ್ತು ಅದರ ಗ್ರಾಹಕರಿಗೆ ಅನುಗ್ರಹ ಮತ್ತು ಸಮೃದ್ಧಿಯನ್ನು ಕೋರಿದರು. ಎಟಿಎಂನಿoದ ಮೊದಲ ನಗದು ಹಿಂಪಡೆಯುವಿಕೆಯನ್ನು ಫ್ರೆಡ್ರಿಕ್ ವಿನ್ಸೆಂಟ್ ಅಂದ್ರಾದೆ ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಅಧ್ಯಕ್ಷೀಯ ಭಾಷಣ ಮಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು, ಬೆಳ್ಮನ್ ಶಾಖೆಯಲ್ಲಿ ವಹಿವಾಟು ₹5 ಕೋಟಿ ದಾಟಿದೆ. ಬ್ರಹ್ಮಾವರ ಶಾಖೆ ಒಂದು ವರ್ಷದೊಳಗೆ ₹10 ಕೋಟಿ ವಹಿವಾಟು…

Read More

ಮಂಗಳೂರು, ಆ.09 : ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ವಿದ್ಯಾರ್ಥಿ ವೇತನ ಮತ್ತು ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಆ.10ರಂದು ಬೆಳಿಗ್ಗೆ 11ಗಂಟೆಗೆ ನಗರದ ಜೆಪ್ಪಿನಮೊಗರಿನಲ್ಲಿರುವ ಪ್ರೆಸ್ಟಿಜ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಸ್ಕಾಲರ್ಶಿಪ್ ಕಮಿಟಿಯ ಚೇರ್ಮ್ಯಾನ್ ಎಂ.ಇ. ಮೂಳೂರು ಅವರು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ಕಲ್ಚರಲ್ ಫೋರಂ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಈ ವರ್ಷ ಪಿಯುಸಿಯಿಂದ ಸ್ನಾತಕೋತ್ತರ ಪದವಿ ತನಕದ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದರು. ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ. ಯೂಸುಫ್ ಮಾತನಾಡಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ದುಆಗೈಯಲಿದ್ದಾರೆ.;ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ನಸೀರ್…

Read More

ಮಂಗಳೂರು, ಆ. 08 : ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಬುಧವಾರ ನಡೆಯಿತು. ಸುವರ್ಣ ಸಂಭ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಉದ್ಘಾಟಿಸಿದರು. ಸಂಭ್ರಮದಲ್ಲಿ ಮಾತನಾಡಿದ ಡಿ.ವಿ. ಸದಾನಂದ ಗೌಡ ಅವರು, ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆಯಾಗಬೇಕು ಎಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರಿಗೆ ಸುವರ್ಣ ಸಂಭ್ರಮ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಸುವರ್ಣ ಸಂಭ್ರಮ ಸಾಕ್ಷೃಚಿತ್ರ ಬಿಡುಗಡೆಗೊಳಿಸಿದರು. ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಹಿರಿಯ ಪತ್ರಕರ್ತ ರವಿ ಹೆಗಡೆ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ಕಾರ್ಡೋಲೈಟ್ ಸ್ಪೆಷಾಲಿಟಿ…

Read More

ಮಂಗಳೂರು, ಆ. 08 : ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುತ್ತಿರುವ ಕೆನರಾ ಎಂಜಿನಿಯರಿಂಗ್ ಕಾಲೇಜಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಸ್ವಾಯತ್ತ ಸಂಸ್ಥೆಯ ಮಾನ್ಯತೆ ನೀಡಿದೆ. ಈ ಮೂಲಕ ಕಾಲೇಜು ತನ್ನದೇ ತಾಂತ್ರಿಕ ಪಠ್ಯ ವಸ್ತು, ಪರೀಕ್ಷೆ, ಫಲಿತಾಂಶ ನೀಡಲು ಸಾಧ್ಯವಾಗಲಿದೆ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆನರಾ ಎಂಜಿನಿಯರಿಂಗ್ ಕಾಲೇಜು ರಜತ ಮಹೋತ್ಸವ ಸಂಭ್ರಮದ ಸಿದ್ಧತೆಯಲ್ಲಿರುವಾಗ ಈ ಸ್ಥಾನಮಾನ ಲಭಿಸಿರುವುದು ಹರ್ಷ ತಂದಿದೆ. ಶೈಕ್ಷಣಿಕ ಅನ್ವೇಷಣೆ, ಸರಳೀಕೃತ ದಕ್ಷತೆಯ ಹೊಸ ಅಧ್ಯಾಯ ಆರಂಭವಾಗಲಿದೆ. ಶೈಕ್ಷಣಿಕ ಅನ್ವೇಷಣೆ, ಸರಳೀಕೃತ ದಕ್ಷತೆಯ ಹೊಸ ಅಧ್ಯಾಯ ಆರಂಭವಾಗಲಿದೆ. ಕಾಲೇಜಿನ ಸ್ವಾಯತ್ತ ಸ್ಥಾನಮಾನದಿಂದಾಗಿ ಇದೀಗ ವಿದ್ಯಾರ್ಥಿಗಳ ಪಠ್ಯದಲ್ಲಿ ಅನ್ವೇಷಣಾ ವಿಷಯಗಳು, ಕೈಗಾರಿಕಾ ಸ್ನೇಹಿ ಕೌಶಲಗಳು, ಉನ್ನತ ಶೈಕ್ಷಣಿಕ ಆಡಳಿತ ಸಾಧ್ಯವಾಗಲಿದ್ದು, ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಯ ಪರಂಪರೆ ಮತ್ತು ಮೂಲ ಆಶಯವನ್ನು ಇನ್ನಷ್ಟು ಬಲಗೊಳಿಸಿದಂತಾಗಿದೆ ಎಂದರು. ಪ್ರಸ್ತುತ ಕೆನರಾ…

Read More

ಮಂಗಳೂರು,ಅ.07 : ಮ.ನ.ಪಾ.ಯ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು. ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಸುಧಾಕರ್ ಬಿ, ಸ್ಥಳೀಯ ಬಿಜೆಪಿ ಮುಖಂಡರಾದ ಚರಿತ್ ಪೂಜಾರಿ, ಸುನಂದ, ಶ್ರೀನಿವಾಸ್ ಪೈ, ಅನಂತ್ ಶಣೈ, ಚಂದ್ರರಾಜ್, ರಾಕೇಶ್ ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Read More

ಮಂಗಳೂರು, ಆ.6 : ರೋಹನ್ ಕಾರ್ಪೋರೇಶನ್ ವತಿಯಿಂದ ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲಿ ನಡೆಯಿತು. ಶಿಬಿರವನ್ನು ಹಿಂದ್ ಕುಷ್ಟ್ ನಿವಾರಣ್ ಸಂಘ (ರಿ) ಮತ್ತು ಲಯನ್ಸ್ ಕ್ಲಬ್ ಮಂಗಳಾದೇವಿ ಈ ಎರಡು ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಬೆಳಿಗ್ಗೆಯಿಂದಲೇ ಶಿಬಿರದಲ್ಲಿ ನೂರಾರು ಉದ್ಯೋಗಿಗಳು ಮತ್ತು ಕಾರ್ಮಿಕರು ಭಾಗವಹಿಸಿದ್ದು, ತಜ್ಞ ವೈದ್ಯರ ತಂಡದಿಂದ ರಕ್ತದೊತ್ತಡ, ಡಯಾಬಿಟಿಸ್, ದಂತಚಿಕಿತ್ಸೆ, ಇ.ಸಿ. ಜಿ ,ಸಾಮಾನ್ಯ ತಪಾಸಣೆ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಿತು. ರೋಹನ್ ಕಾರ್ಪೋರೇಶನ್ ನ ಡೈರೆಕ್ಟರ್ ಡಿಯೋನ್ ಮೊಂತೇರೊರವರು ಅವರು ಮಾತನಾಡುತ್ತಾ,ನಮ್ಮ ಸಂಸ್ಥೆಯ ಬೆಳವಣಿಗೆಯಲ್ಲಿ ಕಾರ್ಮಿಕರ ಕೊಡುಗೆ ಅಮೂಲ್ಯವಾಗಿದೆ. ಅವರ ಆರೋಗ್ಯದ ಬಗ್ಗೆ ನಾವು ತೀವ್ರ ಕಾಳಜಿ ವಹಿಸುತ್ತಿದ್ದೇವೆ. ಈ ಶಿಬಿರವು ಕಾಳಜಿಯ ಪ್ರತಿಬಿಂಬವಾಗಿದೆ ಎಂದು ಅಭಿಪ್ರಾಯಪಟ್ಟರು. ಮಂಗಳೂರು ಡಿಎಪಿಸಿಯು ಜಿಲ್ಲಾ ಮೇಲ್ವಿಚಾರಕರಾದ ಶ್ರೀ ಮಹೇಶ್…

Read More

ಮಂಗಳೂರು, ಆ. 5: ಲಯನ್ ಇಂಟರ್ನ್ಯಾಶನಲ್ 217 ಡಿಯ ನೂತನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಭಿಲಾಷ ಆ. 9ರಂದು ಸಂಜೆ 4 ಕ್ಕೆ ಇಂಡಿಯಾನಾ ಕನ್ವೆನ್ಯನ್ ಸೆಂಟರ್ನಲ್ಲಿ ನಡೆಯಲಿದೆ ಎಂದು 2025-26ನೇ ಸಾಲಿನ ಜಿಲ್ಲಾ ಗವರ್ನರ್ ಕುಡ್ಲಿ ಅರವಿಂದ್ ಶೆಣೈ ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂದರ್ಭ 13 ಯೋಜನೆಗಳ ಜತೆಗೆ ಮೆಗಾ ಸೇವಾ ಯೋಜನೆಗಳಿಗೂ ಚಾಲನೆ ನೀಡಲಾಗುತ್ತದೆ.ಲಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆಯು ಜಿಲ್ಲೆ- 317 ಡಿ ನಾಲ್ಕು ಕಂದಾಯ ಜಿಲ್ಲೆ ಗಳಾದ ದಕ್ಷಿಣ ಕನ್ನಡ,ಹಾಸನ,ಕೊಡಗು,ಚಿಕ್ಕಮಗಳೂರುಗಳಲ್ಲಿ120 ಕ್ಲಬ್ ಗಳನ್ನು ಒಳಗೊಂಡಿದೆ.ಈ ವರ್ಷ ಬ್ಯೂಟಿಫುಲ್ ವರ್ಲ್ಡ್ ಸೇವಾ ಹೆಸರಿನೊಂದಿಗೆ 13 ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು. ಮೆಗಾ ಸೇವಾ ಯೋಜನೆಯಾಗಿ ಗವರ್ನರ್ ಪ್ರಾಜೆಕ್ಟ್ ಮೊಬೈಲ್ ಕಿಚನ್ ಯೋಜನೆ ಅಡಿ 25 ಲಕ್ಷ ರೂ.ನ ಯೋಜನೆಯನ್ನು ಹಮ್ಮಿಕೊಂಡಿದೆ. ಎಲ್ಲ ಕ್ಲಬ್ಗಳ ಹಾಗೂ ದಾನಿಗಳ ಸಹಕಾರದಿಂದ ಇಸ್ಕಾನ್ ವತಿಯಿಂದ ನಡೆಯುವ ಆಹಾರ ಪೂರೈಕೆ ವ್ಯವಸ್ಥೆಗೆ ಮೊಬೈಲ್ ಕಿಚನ್…

Read More

ಬೆಂಗಳೂರು, ಆ. 05 :ಸ್ಯಾಂಡಲ್ ವುಡ್ ನ  ಯುವ ನಟ ಸಂತೋಷ್ ಬಾಲರಾಜ್ (34) ಆ 5,ಇಂದು ಬೆಳಗ್ಗೆ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ನಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.

Read More

ಉರ್ವಸ್ಟೋರ್, 04 : ಕುಂದಾಪ್ರದ ವಾಟ್ಸಾಪ್ ಬಳಗದ ವತಿಯಿಂದ ‘ಕುಂದಾಪ್ರ ಕನ್ನಡ ಹಬ್ಬ’ ಕಾರ್ಯಕ್ರಮ ಮಂಗಳೂರಿನ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕುಂದಾಪುರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ| ದೀಪಕ್ ಶೆಟ್ಟಿ ಅವರು ಮಾತಾನಾಡಿ, ಕುಂದಾಪುರದ ಮೂಲ ಭಾಷೆಯ ಆಚಾರ ವಿಚಾರ ಮತ್ತು ಅದರ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶ ದಿಂದ ಈ ‘ಕುಂದಾಪ್ರ ಕನ್ನಡ ಹಬ್ಬ’ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮವರೊಂದಿಗೆ ನಮ್ಮ ಭಾಷೆ ಬಳಸಿ ಅಗತ್ಯಕ್ಕೆ ತಕ್ಕಂತೆ ಇತರ ಭಾಷೆ ಬಳಸಬೇಕು.ಮಂಗಳೂರಿನಲ್ಲಿರುವ ಕುಂದಾಪ್ರ ಕನ್ನಡಿಗರು ತಮ್ಮ ಮೂಲ ಭಾಷೆಯೊಂದಿಗೆ ತುಳುವನ್ನು ಕೂಡ ಬಳಸುತ್ತಾರೆ. ಸ್ವಾತಂತ್ರ್ಯ ಹೋರಾಟ,ಸಾಹಿತ್ಯ, ಯಕ್ಷಗಾನ, ಧಾರ್ಮಿಕ ಕ್ಷೇತ್ರಕ್ಕೂಕುಂದಾಪುರದವರ ಕೊಡುಗೆ ಅಪಾರ.ಭಾವನಾತ್ಮಕ ಸಂಬಂಧ, ಭಾಷೆಯ ಬಗ್ಗೆ ಮಾತನಾಡುವವರ ಅಭಿಮಾನದಿಂದ ವಿಶ್ವ ಕುಂದಾಪುರ ಕನ್ನಡ ದಿನ ಯಶಸ್ವಿಯಾಗಿದೆ ಎಂದರು. ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಬಿ. ಮಾತನಾಡಿ, ಭಾಷೆಯ ಹೆಸರಿನಲ್ಲಿ ವಿಶ್ವ ಮಟ್ಟದ ಕಾರ್ಯಕ್ರಮ ಆಯೋಜನೆಯ ಕೀರ್ತಿ ಕುಂದಾಪ್ರ ಕನ್ನಡಕ್ಕೆ ಸಲ್ಲುತ್ತದೆ.ತುಳುವಿನಂತೆ ಕುಂದಾಪ್ರ…

Read More

ಮಂಗಳೂರು, ಆ. 04 : ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’  ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್’ನ ಧರ್ಮಗುರುಗಳಾದ ರೆವರೆಂಡ್ ಫಾದರ್ ವಿನ್ಸೆಂಟ್ ಕುವೆಲ್ಲೊ ಅವರು ಆಶೀರ್ವದಿಸಿ, ಹೊಸ ಶಾಖೆಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಬು ಶೆಟ್ಟಿ ಸೇಫ್ ಡೆಪಾಸಿಟ್ ಲಾಕರ್ ಉದ್ಘಾಟಿಸಿದರು ಇ-ಸ್ಟ್ಯಾಂಪಿಂಗ್ ಸೌಲಭ್ಯವನ್ನು ಬೈಂದೂರಿನ ಸೈಂಟ್ ಥಾಮಸ್ ವಸತಿ ಶಾಲೆಯ ಪ್ರಾಂಶುಪಾಲ ರೆವರೆಂಡ್ ಫಾದರ್ ಫಿಲಿಪ್ ನೆಲಿವಿಲ್ಲಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ಶ್ರೀ…

Read More