Author: admin

ಚೆನ್ನೈ, ಆ. 03 : ತಮಿಳು ಚಿತ್ರರಂಗದ ಹಿರಿಯ ಹಾಸ್ಯ ನಟ ಮದನ್ ಬಾಬ್ (71) ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು ಎಂದು ವರದಿಯಾಗಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತರಾಗಿದ್ದ ಮದನ್ ಬಾಬ್ ಕಳೆದ ಕೆಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಮದನ್ ಬಾಬ್ ಅವರ ಮೂಲ ಹೆಸರು ಎಸ್. ಕೃಷ್ಣಮೂರ್ತಿ. ಚಿತ್ರರಂಗದಲ್ಲಿ ಅವರು ಮದನ್ ಬಾಬ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ರಜನಿಕಾಂತ್, ಕಮಲ್ ಹಾಸನ್, ಅಜಿತ್ ಕುಮಾರ್, ಸೂರ್ಯ, ವಿಜಯ್ ಮುಂತಾದ ಸ್ಟಾರ್ ಕಲಾವಿದರ ಸಿಮಾಗಳಲ್ಲಿ ಮದನ್ ಬಾಬ್ ನಟಿಸಿದ್ದರು.

Read More

ಮೂಡುಬಿದಿರೆ, , ಆ. 02 : ಮಾನವ ಸಂಪನ್ಮೂಲದ ಸಂಪೂರ್ಣ ಬಳಕೆ ಆಗುವಂಥ ಶಿಕ್ಷಣ ಮಕ್ಕಳಿಗೆ ಲಭಿಸಿದಾಗ ಅವರು ಸ್ವಾವಲಂಬಿಯಾಗುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ಗುಂಡೂರಾವ್ ಅವರು ಶುಕ್ರವಾರ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ 15 ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2025ರ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್.ಧರ್ಮ ಅವರು ಮಾತನಾಡುತ್ತಾ, ಉದ್ಯೋಗಾರ್ಥಿಗಳು ಉದ್ಯೋಗ ಕೇಳಿಕೊಂಡು ಕಂಪೆನಿಗಳ ಬಾಗಿಲು ತಟ್ಟದೆ ನಿಮ್ಮ ಕೌಶಲದಿಂದ ಕಂಪೆನಿಗಳೇ ನಿಮ್ಮನ್ನು ಕರೆದು ಕೆಲಸ ಕೊಡುವಂತಾಬೇಕಾಗಿದೆ ಅಂಥ ವ್ಯಕ್ತಿತ್ವ ನಿಮ್ಮದಾಗಲಿ ಎಂದರು. ಶಾಸಕರಾದ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ,ಉದ್ಯೋಗ ಮೇಳ ವಿದ್ಯಾರ್ಥಿ ಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು. ಈ ಸಂದರ್ಭದಲ್ಲಿ ದುಬೈನ ಫಾರ್ಚುನ್ ಗ್ರೂಪ್ ಆಫ್…

Read More

.ಮಂಗಳೂರು, ಆ. 02 : ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರೆಮೋನಾ ಅವರ ಸಾಧನೆ ಮಂಗಳೂರು ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ . ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿಯೂ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು ಈ…

Read More

ಮಂಗಳೂರು, ಜು. 01: ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದವರ ಆಶ್ರಯದಲ್ಲಿ ‘ಕುಂದಾಪ್ರ ಕನ್ನಡ ಹಬ್ಬ’ ಆಗಸ್ಟ್. 3ರಂದು ಬೆಳಗ್ಗೆ 9 ರಿಂದ ಸಂಜೆ 7ರ ತನಕ ಮಂಗಳೂರಿನ ಉರ್ವ ಸ್ಟೋರ್ನ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಸಂಚಾಲಕ ಸಂತೋಷ್ ಶೆಟ್ಟಿ  ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂದಗನ್ನಡದ ನೆಲದಲ್ಲಿ ಜನಿಸಿ, ವೃತ್ತಿ ನಿಮಿತ್ತ ಮಂಗಳೂರಿಗೆ ಬಂದು ನೆಲೆಸಿ, ತುಳುನಾಡಿನವರೇ ಆಗಿದ್ದರೂ, ತಮ್ಮ ಮೂಲ ನೆಲೆಯ ಭಾಷೆ, ಸಂಸ್ಕೃತಿ ಆಚರಣೆ, ಸಂಪ್ರದಾಯವನ್ನ ಉಳಿಸಿಕೊಂಡು ತಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ವಿಶ್ವ ಕುಂದಾಪ್ರ ದಿನಾಚರಣೆಯನ್ನು ಆಷಾಢ ಮಾಸದ ಒಂದು ದಿನದಲ್ಲಿ ‘ಕುಂದಾಪ್ರ ಹಬ್ಬ’ ಹೆಸರಿನಲ್ಲಿ ಹಲವು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.ಕಾರ್ಯಕ್ರಮದ ದಿನ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಅದರಲ್ಲಿ ಮೂರು ಕಾಲಿನ ಓಟ, ಸೈಕಲ್ ಟೈಯರ್ ಓಟ, ಮಡಲು ನೇಯುವುದು, ಗೇರುಬೀಜದ ಗುರಿ, ರಂಗೋಲಿ, ಹೂವಿನ ಸರ…

Read More

ಬೆಂಗಳೂರು, ಆ. 01 : ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 2 ರ ಶನಿವಾರ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಘೋಷಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಈಗಾಗಲೇ 14 ತಿಂಗಳುಗಳನ್ನು ನ್ಯಾಯಾಂಗ ಬಂಧನದಲ್ಲಿ ಕಳೆದಿರುವ ರೇವಣ್ಣ ಅವರು ಜೈಲಿನಲ್ಲಿಯೇ ಇರಲಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಶನಿವಾರ ನಾಳೆ ಪ್ರಕಟಿಸಲಿದೆ. ಜಡ್ಜ್ ಸಂತೋಷ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ. ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್ ಡಿ  ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಕರಣ…

Read More

ಮಂಗಳೂರು, ಜು.31: ಒಡಿಯೂರು ಶ್ರೀಗಳ ಜನ್ಮದಿನೋತ್ಸವ -ಗ್ರಾಮೋತ್ಸವ ಪೂರ್ವಭಾವಿಯಾಗಿ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯ ಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ಆ.3ರಂದು ‘ಬೃಹತ್ ಸ್ವಚ್ಚತಾ ಅಭಿಯಾನ’ ವನ್ನು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ 365 ಸ್ಥಳಗಳಲ್ಲಿ ಏಕಕಾಲದಲ್ಲಿ ವಿವಿಧ ಸಂಘಟನೆಗಳ ಸಹಕಾರ ದೊಂದಿಗೆ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಸಹಕಾರಿರತ್ನ ಎ.ಸುರೇಶ್ ರೈ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಈ ಬಾರಿಯ ಗ್ರಾಮೋತ್ಸವದ ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಭಾಗಗಳಲ್ಲಿ ವೈದ್ಯಕೀಯ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಈ ಬಾರಿ ಗ್ರಾಮೋತ್ಸವದ ಕಾರ್ಯ ಕ್ರಮಗಳು ಆ.8 ರಂದು ಶ್ರೀ ಸಂಸ್ಥಾನಮ್ನಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜರಗಲಿದೆ.ಒಡಿಯೂರು ಶ್ರೀಗುರುದೇವ ದತ್ತ ಸಂಸ್ಥಾನಮ್ ನ  ಪರಮ ಪೂಜ್ಯ ಶ್ರೀ ಗುರು ದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವವನ್ನು ಗ್ರಾಮೋತ್ಸವವಾಗಿ ಗುರುವಂದನೆ-ಸೇವಾ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಸುರೇಶ್ ರೈ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪನೆಯಡ್ಕ…

Read More

ಮಂಗಳೂರು,ಜು. 30 : ಎಮ್.ಸಿ.ಸಿ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರೈಸಿ ಎಮ್.ಸಿ.ಸಿ. ಬ್ಯಾಂಕ್ 22 ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಣ್ನಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು 16ರಿಂದ 19ಕ್ಕೆ ತಲುಪಿದ್ದು, ಬೈಂದೂರಿನಲ್ಲಿ ತನ್ನ 20ನೇ ಶಾಖೆಯನ್ನು ದಿನಾಂಕ 03.08.2025ರಂದು ತೆರೆಯಲಿದೆ ಎಂದು ಎಮ್.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಎಮ್.ಸಿ.ಸಿ. ಬ್ಯಾಂಕ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಖೆಯ ಉದ್ಘಾಟಣಾ ಕಾರ್ಯಕ್ರಮದಲ್ಲಿ ಎಮ್.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ, ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಅಧ್ಯಕ್ಷತೆ ವಹಿಸುವರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಹೊ ಶಾಖೆಯನ್ನು…

Read More

ಪುತ್ತೂರು,ಜು. 29 : ವಿವಾಹಿತ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಗಣೇಶ್ ಬಾಗ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತರನ್ನು ದಿ.ವಸಂತ ಎಂಬವರ ಪುತ್ರ ವಿಶ್ವಾಸ್(38) ಎಂದು ಗುರುತಿಸಲಾಗಿದೆ. ವಿಶ್ವಾಸ್ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ತನ್ನ ಕೆಲಸ ಮುಗಿಸಿ ಅಂಗನವಾಡಿಯಿಂದ ಸಂಜೆ ಮನೆಗೆ ಬಂದಾಗ ವಿಶ್ವಾಸ್ ಅವರು ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಪತ್ನಿ ದಿವ್ಯಾ ಅವರು ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು,ಜು. 28 : ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶ್ರೀ ಪ್ರಮೋದ್ ಮಧ್ವರಾಜ್ ಭಾಗವಹಿಸಿ ಮಠದ ಆವರಣದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿದರು. ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ದಿವ್ಯ ಉಪಸ್ಥಿತಿಯಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣ ಮಾಡಿದ ಅವರು ಅಮ್ಮ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರಿಂದ ಪ್ರತಿಷ್ಠಿತ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರವು ವಿಶೇಷ ಸ್ಥಾನವನ್ನು ಪಡೆದಿದೆ. ನಾಲ್ಕು ದಿಕ್ಕುಗಳಿಗೆ ಅಭಿಮುಖವಾಗಿ ಒಂದೇ ಕಲ್ಲಿನಿಂದ ಕೆತ್ತಲ್ಪಟ್ಟ ವಿಗ್ರಹ ಅಮ್ಮನವರ ಸಂಕಲ್ಪದಿಂದ ಬಹಳ ಸುಂದರವಾಗಿ ಮೂಡಿಬಂದಿದೆ. ಇದು ದೇವರು ಸರ್ವವ್ಯಾಪಿ ಎಂಬ ಮಹತ್ತರ ಸಂದೇಶ ನೀಡುತ್ತಿದೆ.ಅಮ್ಮನ ಅನುಗ್ರಹದಿಂದ ಇಲ್ಲಿ ನಡೆಯುತ್ತಿರುವ ಮಾನವೀಯ ಸೇವಾ ಉಪಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯರವರು ಅತಿಥಿಯಾಗಿ ಭಾಗವಹಿಸಿ ಆಶ್ರಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೇವಾಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಗೌರವಾರಪಣೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.ಡಾ.ದೇವದಾಸ್…

Read More

ಮಂಗಳೂರು,ಜು. 27 : ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿದ್ಧಗೊಂಡ, ಸತ್ಯ ಎಸ್ ಶ್ರೀನಿವಾಸನ್ ನಿರ್ಮಿಸಿರುವ ‘ಎಲ್ಟು ಮುತ್ತಾ’ಎಂಬ ಕನ್ನಡ ಚಲನಚಿತ್ರ ಆ.1ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ನಟ ನವೀನ್ ಡಿ.ಪಡೀಲ್  ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಟ ಶೌರ್ಯ ಪ್ರತಾಪ್ ಅವರು ಮಾತನಾಡಿ, ನಾನು ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುವ ಜೊತೆಗೆ ಸಹ ಬರವಣಿಗೆ ಮತ್ತು ಸಹ ನಿರ್ದೇಶನದಲ್ಲಿ ಕೂಡ ಸಾಥ್ ಕೊಟ್ಟಿದ್ದೇನೆ. ಇತರೆ ಭಾಷೆಗಳಿಂದ ಡಬ್ಬಿಂಗ್ ಗಾಗಿ ಬೇಡಿಕೆಯ ಕರೆ ಬಂದಿದೆ ಎಂದರು. ಸತ್ಯ ಶ್ರೀನಿವಾಸನ್ ಮತ್ತು ಪವೀಂದ್ರ ಮುತ್ತಪ್ಪ ನಿರ್ಮಾಣದ ಜೊತೆಗೆ ಇಡೀ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಪ್ರಸನ್ನ ಕೇಶವ ಅವರು ಈ ಚಿತ್ರಕ್ಕೆ ಸಂಗೀತವನ್ನು ನೀಡಿದ್ದಾರೆ ಎಂದವರು ಹೇಳಿದರು. ನಿರ್ಮಾಪಕ ಸತ್ಯ ಶ್ರೀನಿವಾಸನ್ ಅವರು ಮಾತನಾಡಿ, ಈ ಚಿತ್ರದಲ್ಲಿ ರುಹಾನ್ ಆರ್ಯ, ಕಾಕ್ರೋಚ್ ಸುಧಿ, ನವೀನ್ ಪಡೀಲ್, ರಾಮ್,ಧನುದೇವಯ್ಯ, ಪ್ರಿಯಾಂಕಾ ಮಳಲಿ, ಸಮ್ರಾಟ್, ಅವಿರೇಶ್, ಪ್ರಶಾಂತ್, ತಾರಕ್, ಜೋಗಿ ರವಿ,…

Read More