Author: admin

ಮಂಗಳೂರು,ಜುಲೈ, 26 : ಮೂಡುಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುವ ಬೃಹತ್ ಉದ್ಯೋಗ ಮೇಳ  ಆಳ್ವಾಸ್ ಪ್ರಗತಿ 2025’ರ ಉದ್ಘಾಟನೆಯು ಆಗಸ್ಟ್ 1 ಮತ್ತು 2ರಂದು ವಿದ್ಯಾಗಿರಿಯಲ್ಲಿ ಬೆಳಿಗ್ಗೆ 9.30 ಕ್ಕೆ ನಡೆಯಲಿದ್ದು, ಸಚಿವ ದಿನೇಶ್ ಗುಂಡುರಾವ್ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಅತಿಥಿಯಾಗಿ ಮಂಗಳೂರು ವಿವಿಯ ಕುಲಪತಿ ಡಾ ಪಿಎಲ್ ಧರ್ಮ ಪಾಲ್ಗೊಳ್ಳಲಿದ್ದು, ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಜನಪ್ರತಿನಿಧಿಗಳ ಉಪಸ್ಥಿತಿ ಇರಲಿದೆ ಎಂದರು. ಈ ಸಂದರ್ಭದಲ್ಲಿ ಅಲ್‌ಕಾರ್ಗೋ ಲಾಜಿಸ್ಟಿಕ್ಸ್ನ ಅಧ್ಯಕ್ಷರಾದ ಶಶಿಕಿರಣ್ ಶೆಟ್ಟಿ, ದುಬೈನ ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷರಾದ…

Read More

ಬೆಂಗಳೂರು , ಜುಲೈ, 26 :: ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ಸದ್ಗುರು ಶ್ರೀ ಮಧುಸೂಧನ್ ಸಾಯಿ ರವರ ಒನ್ ವರ್ಡ್ ಒನ್ ಫ್ಯಾಮಿಲಿ ವಿಷನ್ ಮೂಲಕ ಸಾಯಿ ಸಿಂಪನಿ ಆರ್ಕೆಸ್ಟ್ರಾ ತಂಡದಿಂದ ಯುವ ಪ್ರತಿಭೆಗಳ ಸಂಗೀತ ಮ್ಯೂಸಿಕಲ್ ಕಾನ್ಸರ್ಟ್ ಕಾರ್ಯಕ್ರಮ ಬೃಹತ್ ಸಭಾಂಗಣದಲ್ಲಿ ಸುಂದರ ಪರಿಸರದ ನಡುವೆ ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ವ್ಯವಸ್ಥಾಪಕ, ಸಾಯಿ ಗ್ಲೋಬಲ್ ರುವಾರಿ ಒನ್ ವರ್ಡ್ ಒನ್ ಫ್ಯಾಮಿಲಿ ವಿಷನ್ ಮುಖ್ಯಸ್ಥ ಸದ್ಗುರು ಶ್ರೀ ಮಧುಸೂಧನ್ ಸಾಯಿ ಅವರು ಮಾತನಾಡುತ್ತಾ ,ಈ ಸಂಗೀತ ಪ್ರತಿಭೆಗಳ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ ನಿರ್ದೇಶಕ    ಎ.ಆರ್. ರೆಹಮಾನ್ ಅವರು ಬಂದಿದ್ದು ಬಹಳ ಸಂತೋಷದ ವಿಚಾರ. ನಾನು ಅವರನ್ನ ಜೂಮ್ ಆಪ್ ಗೆ ಬನ್ನಿ ವಿದ್ಯಾರ್ಥಿಗಳ ಜೊತೆ ಮಾತನಾಡಿ ಎಂದಿದ್ದೆ , ಆದಕ್ಕೆ ಅವರು ಯುವ ಪ್ರತಿಭೆಗಳನ್ನ ಪ್ರೋತ್ಸಾಹಿಸಲು ನಾನು ನೇರವಾಗಿ ಬರುತ್ತೇನೆ ಎಂದು ಹೇಳಿದ್ದರು.  ಅವರು ಈ ಒಂದು ಕಾರ್ಯಕ್ರಮಕ್ಕೆ ಬಂದಿರುವುದು  ಅವರಿಗೆ ಸಂಗೀತ ಮೇಲೆ   ಪ್ರೀತಿ ಎಷ್ಟಿದೆ ಎಂದು ತಿಳಿಯುತ್ತೆ…

Read More

ಜೈಪುರ, ಜು. 25 : ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ 60ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲು ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಸ್ಥಳೀಯರು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ.

Read More

ಮಂಗಳೂರು ,ಜುಲೈ, 24 :: ಬೋಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಗುರುಪೂರ್ಣಿಮಾ ಆಚರಣೆ ಜು. 27ರಂದು ಅಮೃತೇಶ್ವರಿ ಸಭಾಂಗಣದಲ್ಲಿ ಬೆಳಗ್ಗೆ 7ರಿಂದ ನಡೆಯಲಿದೆ ಎಂದು ಅಮೃತಾನಂದಮಯಿ ಮಠದ ಅಧ್ಯಕ್ಷ ಸುರೇಶ್ ಅಮೀನ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ಬೋಳೂರಿನಲ್ಲಿರುವ ಶ್ರೀ ಬ್ರಹ್ಮ ಸ್ಥಾನಂ ಕ್ಷೇತ್ರದ ಪ್ರಧಾನ ಅರ್ಚಕರಾದ ಬ್ರಹ್ಮಚಾರಿ ರತೀಶ್, ಅರ್ಚಕ ವೃಂದದವರಿಂದ ಮಹಾಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದೆ. ಗುರುಹೋಮ, ಮೃತ್ಯುಂಜಯ ಹೋಮ, ಸರ್ವೈಶ್ವರ್ಯ ಸೌಭಾಗ್ಯ ಪೂಜೆಗಳು ಜರಗಲಿದೆ ಎಂದು ಹೇಳಿದರು. ಮಂಗಳೂರಿನಲ್ಲಿ ಆಶ್ರಮ ಹಾಗೂ ಅಮೃತ ವಿದ್ಯಾಲಯಂ ಶಿಕ್ಷಣಸಂಸ್ಥೆ ಪ್ರಾರಂಭಗೊಂಡು 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅವುಗಳ ಉದ್ಘಾಟನಾ ಕಾರ್ಯಕ್ರಮ  ಬೆಳಗ್ಗೆ 9 ಕ್ಕೆ ನಡೆಯಲಿದೆ. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ನೇತೃತ್ವದಲ್ಲಿ ಬೆಳಗ್ಗೆ 10ರಿಂದ  ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ, ಭಕ್ತರಿಂದ ಅಮ್ಮನ ಪಾದುಕೆಗೆ ಕ್ಷೀರಾಭಿಷೇಕ, ಗುರುಪೂರ್ಣಿಮಾ…

Read More

ಮಂಗಳೂರು ,ಜುಲೈ, 24 : ಪಂಪ್ ವೆಲ್ ನಲ್ಲಿರುವ ಇಂಡಿಯಾ ಆಸ್ಪತ್ರೆ ಹಾಗೂ ಹೃದಯ ಸಂಸ್ಥೆಯು ಎರಡು ವಾಲ್ವ್-ಇನ್-ವಾಲ್ವ್  ಟಿ ಎವಿ ಆರ್ ಅಪರೂಪದ ಚಿಕಿತ್ಸಾ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಈ ಸ್ವರೂಪದ ಬಹು ಸವಾಲಿನ ಚಿಕಿತ್ಸೆ ಕರಾವಳಿಯ ಭಾಗದಲ್ಲಿ ನಡೆಯುವುದು ಇದೇ ಮೊದಲು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೀವ್ರವಾದ ಆಯೋರ್ಟಿಕ್ ವಾಲ್ವ್ ರೋಗ ಹೊಂದಿರುವ ರೋಗಳಿಗೆ ಸಾಮಾನ್ಯವಾಗಿ ಹೃದಯ ಶಸ್ತ್ರಚಿಕಿತ್ಸೆಯ ಮೂಲಕ ವಾಲ್ವ್ ಬದಲಾವಣೆ ಮಾಡಲಾಗುತ್ತದೆ. ಆದರೆ ಸುಮಾರು 10ರಿಂದ 15 ವರ್ಷಗಳಲ್ಲಿ ಆ ವಾಲುಗಳು ಕುಗ್ಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಪುನಃ ವಾಲ್ವ್ ಬದಲಿಸಲು ಮತ್ತೆ ತೆರೆದ ಹೃದಯದ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು, ಇದು ವಯಸ್ಕ ರೋಗಿಗಳಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನೂತನ ತಂತ್ರಜ್ಞಾನದ ಮೂಲಕ ಹಳೆಯ ವಾಲ್ವ್ ಒಳಗೆ ಹೊಸ ವಾಲ್ವ್ ಅನ್ನು ಸ್ವಾಪಿಸಲಾಗುತ್ತದೆ.…

Read More

ಮಂಗಳೂರು ಜುಲೈ, 23 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು. ಶಾಸಕರಾದ ವೇದವ್ಯಾಸ ಕಾಮತ್ ಅವರು ಮಾತಾಡಿ , ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಗಾಂಧಿನಗರ ಹಾಗೂ ಕಸಬಾ ಬೆಂಗ್ರೆಯಲ್ಲಿ ಎರಡು ಅಂಗನವಾಡಿ ಕೊಠಡಿಗಳಿಗೆ ಮಂಜೂರಾತಿ ದೊರೆತಿದೆ. ಶೀಘ್ರದಲ್ಲಿಯೇ ಕಸಬಾ ಬೆಂಗ್ರೆಯಲ್ಲೂ ಶಿಲನ್ಯಾಸ ನೆರವೇರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ನಿಕಟಪೂರ್ವ ಮ.ನ.ಪಾ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಪ್ರಮುಖರಾದ ಮೋಹನ್ ಆಚಾರ್ಯ, ವಸಂತ್ ಶೇಟ್, ರಘುನಾಥ್ ಪ್ರಭು, ಗುರು ಚರಣ್, ಮುಖ್ಯ ಶಿಕ್ಷಕಿ ಶರ್ಮಿಳಾ ಡಿಸೋಜ, ಸಹ ಶಿಕ್ಷಕಿ ರಾಜೇಶ್ವರಿ ಪ್ರಭು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಕೆ.ಬಿ, ಶಾಲೆಯ ಶಿಕ್ಷಕರು ಹಾಗೂ…

Read More

ಮಂಗಳೂರು ಜುಲೈ, 22 : ಬಿಜೈ ಕಾಪಿಕಾಡ್ನಲ್ಲಿ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್ (ರಿ) ವತಿಯಿಂದ 5ನೇ ವರ್ಷದ ಆಟಿಡೊಂಜಿ ಕೂಟ ಜುಲೈ,, 20 ರವಿವಾರ ಕುದ್ಮುಲ್ ರಂಗರಾವ್ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಸಮಾರಂಭವನ್ನು ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್, ಸದಸ್ಯರು ಎಂ. ಶಶಿಧರ್ ಹೆಗ್ಡೆ ಅವರು ಉದ್ಘಾಟಿಸಿ. ಮಾತಾಡಿದರು. ಶಿಕ್ಷಕಿ ವಿಜಯಲಕ್ಷ್ಮೀ ಕಟೀಲು ಅವರು ಮಾತಾಡಿ, ಹಿಂದಿನ ಕಾಲದಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿಡೊಂಜಿ ಕೂಟ ಕಾರ್ಯಕ್ರಮ ಆಚರಿಸುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷರು ಎಚ್. ನವೀನ್ ಕುಮಾರ್ ಹೆಜಮಾಡಿ,ಮಂಗಳೂರು ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ರಜನೀಶ್ ಕಾಪಿಕಾಡ್ ಸಮಾರಂಭದಲ್ಲಿ ಮಾತಾಡಿದರು. ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ, 2025ರ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು  ಪ್ರಾಥಮಿಕ ಆರೋಗ್ಯ ಕೇಂದ್ರ ಬೋಂದೆಲ್ ನ  ಪ್ರಾಥಮಿಕ…

Read More

ಮಂಗಳೂರು ಜುಲೈ, 21: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು. ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾದರಿಯಾಗಬೇಕೆಂದು ಹೇಳಿದರು. ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ್ರಾಂ್ಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, ಉಪಾಧ್ಯಕ್ಷರು, ಪ್ಯಾರಿಷ್ ಪಾಸ್ಟೋರಲ್ ಕೌನ್ಸಿಲ್ ಮಿಲಾಗ್ರಿಸ್ ಚರ್ಚ್ ಉಪಸ್ಥಿತರಿದ್ದರು. ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿನ್ ವಾಸ್‌ವರು ನೂತನ ವಿದ್ಯಾರ್ಥಿ ಸಂಘದ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಜ್ಯೋತಿ ರತ್ನ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಪುಲ್ ಶೆಟ್ಟಿ ವಂದಿಸಿದರು. ಶೆರೆಲ್ ಡಿಸೋಜ ನಿರೂಪಿಸಿದರು.

Read More

ಮಂಗಳೂರು, ಜು.20 : ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಪ್ರಕರಣವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಜು.19 ಶನಿವಾರ ಆದೇಶ ಹೊರಡಿಸಿದೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ. ಎಸ್ ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. ಎಸ್.ಐ.ಟಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ ಎಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಧರ್ಮಸ್ಥಳ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿಯೋರ್ವ…

Read More

ಮಂಗಳೂರು,ಜು. 19: ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರವು 50ನೇ ದಿನದ ಸಂಭ್ರಮಾಚರಣೆಯನ್ನು ಶುಕ್ರವಾರ ಸಿಟಿ ಸೆಂಟರ್ ಮಾಲ್ ನ  ಭಾರತ್ ಸಿನೆಮಾಸ್ ನಲ್ಲಿ   ನಡೆಸಿತು. ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನೆಮಾಸ್ ನಲ್ಲಿ  ನಡೆದ 50ನೇ ದಿನದ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ನಿರ್ಮಾಪಕ ಸತ್ಯೇಂದ್ರ ಪೈ, ತುಳು ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್, ಚಿತ್ರದ ನಿರ್ದೇಶಕ ರಜಾಕ್ ಪುತ್ತೂರು ಮತ್ತಿತರರು ಮಾತಾನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕರಿಗೆ ಸಿನೆಮಾ ಪ್ರದರ್ಶನ ಏರ್ಪಡಿಸಿ, ಗೌರವಿಸ ಲಾಯಿತು. ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾಗಿರುವ  ಕೆ.ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ ಕನ್ನಡ  ಚಲನಚಿತ್ರದಲ್ಲಿ  ರಝಾಕ್ ಪುತ್ತೂರು ಇವರು ಚಿತ್ರ ದ ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ದೀಪಕ್ ರೈ, ರಮೇಶ್ ಭಟ್ ನಟಿಸಿದ್ದಾರೆ. ಈ ಸಂದರ್ಭದಲ್ಲಿ ಸಹ ನಿರ್ಮಾಪಕ ಅಕ್ಷತ್ ವಿಟ್ಲ,  ನಾಗೇಶ್ ಕಾಮತ್, ಯು. ವಿಶ್ವನಾಥ ಕುಯಿಲಾಡಿ ಸುರೇಶ್…

Read More