Subscribe to Updates
Get the latest creative news from FooBar about art, design and business.
Author: admin
ಮಂಗಳೂರು ಜ.26 : ನಗದದ ಸುಲ್ತಾನ್ ಬತ್ತೇರಿಯಲ್ಲಿರುವ ಸ್ವಸ್ತಿಕ್ ವಾಟರ್ ಪ್ರಂಟ್ ನಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಅತಿಥಿಯಾಗಿದ್ದ ನಗರ ಪೊಲೀಸ್ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಮಾತಾನಾಡಿ, ಜೆಸಿಐ ಸಂಸ್ಥೆಯಿಂದ ನಡೆಯುತ್ತಿರುವ ಸಾಮಾಜಿಕ ಸೇವಾ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು. ನೂತನ ಅಧ್ಯಕ್ಷ ಯತೀಶ್ ಕೆ.ಎಸ್., ಮಾತಾನಾಡಿ, ಜೆಸಿಐ ಸಂಸ್ಥೆ ನನಗೆ ಸಮಾಜ ಸೇವೆ, ಶಿಸ್ತು ಸೇರಿ ಬಹಳಷ್ಟು ಕಳಿಸಿದೆ ಮತ್ತು ನನ್ನ ಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ಹೇಳಿದರು. ಸಮಾರಂಭದಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಡಾ.ರಾಘವೇಂದ್ರ ಹೊಳ್ಳ, ನೂತನ ಅಧ್ಯಕ್ಷ ಯತೀಶ್ ಕೆ.ಎಸ್., ನಿಕಟಪೂರ್ವ ಅಧ್ಯಕ್ಷೆ ದೀಪಾ ರಾವ್, ನಿಯೋಜಿತ ಕಾರ್ಯದರ್ಶಿ ಭೂಮಿಕಾ ಪೂಜಾರಿ, ಅಲ್ವಿನ್ ಸಿಕ್ವೆರ ಮತ್ತಿತ್ತರರು ಉಪಸ್ಥಿತರಿದ್ದರು.ಸಭೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬೆಂಗಳೂರು, ಜ.26 : ಎರಡು ಹೊಸ ಧಾರಾವಾಹಿಗಳನ್ನು ಕಲರ್ಸ್ ವಾಹಿನಿಯಲ್ಲಿ ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ. 27 ರಂದು ಪ್ರಸಾರವಾಗಲಿವೆ. ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30 ಕ್ಕೆ ಪ್ರಸಾರ ಆಗಲಿದೆ. ಕಾಂಟ್ರಾಕ್ಟ್ ಮದುವೆ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರ ಆಗಲಿದೆ. ವಧು ಧಾರಾವಾಹಿಯಲ್ಲಿ ವಧು ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ವಧು ಮನುಷ್ಯ ಸಂಬಂಧಗಳನ್ನು ಪ್ರೀತಿಸುವ ಮತ್ತು ಗೌರವಿಸುವ ಕಥೆ ಈ ಧಾರಾವಾಹಿಯಲ್ಲಿದೆ. ಸಾರ್ಥಕ್ ಪಾತ್ರದಲ್ಲಿ ಲಕ್ಷಣ ಧಾರಾವಾಹಿಯ ಅಭಿಷೇಕ್ ಶ್ರೀಕಾಂತ್, ವಧು ಪಾತ್ರದಲ್ಲಿ ದುರ್ಗಾಶ್ರೀ ಮತ್ತು ಪ್ರಿಯಾಂಕಾ ಪಾತ್ರದಲ್ಲಿ ಸೋನಿ ಮುಲೇವಾ ನಟಿಸಲಿದ್ದಾರೆ. ಹೆಸರಾಂತ ಕಲಾವಿದರಾದ ವಿನಯಾ ಪ್ರಸಾದ್, ಸುಧಾ ಬೆಳವಾಡಿ, ರವಿ ಭಟ್, ರವಿ ಕುಮಾರ್ ಮತ್ತು ರೇಖಾ ಸಾಗರ್ ಅವರು ಅಭಿನಹಿಸಿದ್ದಾರೆ. ಯಜಮಾನ ಧಾರಾವಾಹಿಯಲ್ಲಿ ರಘು ಒಬ್ಬ ಸ್ವಾರ್ಥವಿಲ್ಲದ ಸರಳ ವ್ಯಕ್ತಿ, ಇವರಿಗೆ ತನ್ನ ಕುಟುಂಬದ ಪ್ರೀತಿ…
ಮೂಡುಬಿದಿರೆ, ಜ.25 : ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ನಡೆಯುವ 22ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅಲಂಗಾರು ಚರ್ಚಿನ ಧರ್ಮಗುರು ರೇಫಾ ಮೆಲಸ್ ನೊರೊನ್ಹ ಉದ್ಯಮಿ ಸುಧೀರ್ ಹೆಗ್ಡೆ ಕಂಬಳ ಕರೆಗೆ ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದವನ್ನು ಸಂಪ್ರೋಕ್ಷಿಸಿ ಕಂಬಳಕ್ಕೆ ಶನಿವಾರ ಸಾಂಪ್ರದಾಯಿಕ ಚಾಲನೆ ನೀಡಿದರು. ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಅವರು ದೀಪ ಬೆಳಗಿಸಿ ಸಭಾ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಕ್ರೀಡೆ ಕಂಬಳವು ಸಾಂಸ್ಕೃತಿಕ ಪರಂಪರೆ ಕ್ರೀಡೆಯಾಗಿದ್ದು ಹಲವು ತಲೆಮಾರುಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ. ಈ ಜನಪದ ಕ್ರೀಡೆಯು ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತದೆ ಎಂದರು. ಚಂದ್ರಶೇಖರ್ ಸ್ವಾಮೀಜಿ ಅವರು ಅಬ್ಬಕ್ಕ ರಾಣಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ಕೆಎಂಎಫ್ ಅಧ್ಯಕ್ಷ ಕೆ ಪಿ ಸುಚರಿತ…
ಮೂಡುಬಿದಿರೆ,ಜ.24 : ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ‘ವೀರ ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ’ ದಲ್ಲಿ 22ನೇ ವರ್ಷದ ಹೊನಲು ಬೆಳಕಿನ ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳೋತ್ಸವವು ಜ.25ರಂದು ನಡೆಯಲಿದೆ ಎಂದು ಶಾಸಕ, ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಎ.ಕೋಟ್ಯಾನ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಮಯಕ್ಕೆ ಸರಿಯಾಗಿ ಕಂಬಳವನ್ನು ಆರಂಭಿಸಿ ಆದಷ್ಟು ಬೇಗ ಮುಗಿಸುವ ನಿಟ್ಟಿನಲ್ಲಿ ಬೆಳಿಗ್ಗೆ 7ಕ್ಕೆ ಕಾಯ೯ಕ್ರಮವನ್ನು ಆರಂಭಿಸಲಾಗುವುದು.ಚೌಟರ ಅರಮನೆಯ ಕುಲದೀಪ ಎಂ. ಅಧ್ಯಕ್ಷತೆಯಲ್ಲಿ ಅಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊತ್ತೇಸರ ವೇ.ಮೂ ಈಶ್ವರ ಭಟ್, ಅಲಂಗಾರು ಚರ್ಚ್ ಧರ್ಮಗುರು ಮೆಲ್ವಿನ್ ನೊರೊನ್ಹಾ ಪುತ್ತಿಗೆ ನೂರಾನಿ ಮಸ್ಟೀದ್ನ ಮೌಲಾನ ಝಿಯಾವುಲ್ಸ್, ಸುಧೀರ್ ಹೆಗ್ಡೆ ಕುಂಟಾಡಿ ಅವರೆಲ್ಲರೂ ಒಟ್ಟಾಗಿ ಸೇರಿ ಕಂಬಳ ಕರೆಗೆ ಪ್ರಸಾದ ಹಾಕಿ ಹಾಲನೆರೆಯುವ ಮೂಲಕ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್, ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಲಿದ್ದು, ಸಭಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಖ್ಯ…
ಮಂಗಳೂರು,ಜ.23 : ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಅಮೃತಾ ಆಸ್ಪತ್ರೆ ,ಕೊಚ್ಚಿ ಇವರಿಂದ ಮಂಗಳೂರಿನಲ್ಲಿ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು. ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಮಂಗಳೂರಿನ ಅಮ್ಮನವರ ಭಕ್ತರು ಮತ್ತು ಸೇವಾಸಮಿತಿಗಳ ಸಹಯೋಗದೊಂದಿಗೆ ಜರುಗಿದ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರದಲ್ಲಿ ಕರ್ನಾಟಕದಾದ್ಯಂತ ಹಾಗೂ ಹೊರರಾಜ್ಯಗಳ ಜನರು ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬಂದು ಭಾಗವಹಿಸಿ ಪ್ರಯೋಜನ ಪಡೆದರು. ಶಿಬಿರದಲ್ಲಿ ಜನ್ಮಜಾತ ಹೃದ್ರೋಗವಿದ್ದು ಶಸ್ತ್ರ ಚಿಕಿತ್ಸೆ ಅಗತ್ಯವುಳ್ಳ ಮತ್ತು ಇತರ ಗಂಭೀರ ಪರಿಸ್ಥಿತಿ ಗಳೊಂದಿಗೆ ಗುರುತಿಸಲ್ಲಟ್ಟ ಮಕ್ಕಳಿಗೆ ಕೊಚ್ಚಿಯ ಅಮೃತಾ ಆಸ್ಪತ್ರೆ ಯಲ್ಲಿ ಉಚಿತ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಗಳನ್ನು ನೀಡುವ ಭರವಸೆ ನೀಡಲಾಯಿತು.400 ಕ್ಕೂ ಅಧಿಕ ಮಕ್ಕಳು ಈ ಶಿಬಿರದ ಪ್ರಯೋಜನ ಪಡೆಲಿದ್ದಾರೆ. 18 ವರ್ಷದೊಳಗಿನ ಮಕ್ಕಳ ತಪಾಸಣೆಯನ್ನು ಕೊಚ್ಚಿಯ ಅಮೃತಾ ಆಸ್ಪತ್ರೆಯ ಪೀಡಿಯಾಟ್ರಿಕ್ ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಬ್ರಿಜೇಶ್ ಪಿ ಕೆ ನೇತೃತ್ವದ ಮಕ್ಕಳ…
ಮಂಗಳೂರು, ಜ.22: ನೀರುಮಾರ್ಗ ಉಳಬೈಲ್ ಮುಹಿಯುದ್ದೀನ್ ಜುಮಾ ಮಸೀದಿಯ ವತಿಯಿಂದ ಹಯಾತುಲ್ ಔಲಿಯಾ ಹೆಸರಿನಲ್ಲಿ ನಡೆಸುತ್ತ ಬಂದಿರುವಉರೂಸ್ ಕಾರ್ಯಕ್ರಮ ಜ.26ರಂದು ನಡೆಯಲಿದೆ. ಉರೂಸ್ ಅಂಗವಾಗಿ ಜ.24 ಮತ್ತು 25ರಂದು ಧಾರ್ಮಿಕ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಜ.24ರಂದು ಸೈಯದ್ ನಿಝಾಮುದ್ದೀನ್ ಬಾಫಖಿ ತಂಬಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಮುಹಿಯುದ್ದೀನ್ ಜುಮಾ ಮಸೀದಿ ಮತ್ತು ಮದ್ರಸದ ಅಧ್ಯಕ್ಷ ಆಸಿಫ್ ತಾರಿಗುಡ್ಡೆ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜನವರಿ 26 ರಂದು ಉರೂಸ್ ಕಾರ್ಯಕ್ರಮ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಜರುಗಲಿದೆ. ಸ್ವಾಬಿರಿಯ್ಯ ಅರೆಬಿಕ್ ಕಾಲೇಜು ಕಲಿಯಾರ್ ಪ್ರಾಂಶುಪಾಲರಾದ ಅಲ್ ಹಾಝ್ ಅಬ್ದುಲ್ ರಝಾಕ್ ಮಿಸ್ಸಾಹಿ ಬಾಯಾರ್ ನೇತೃತ್ವ ವಹಿಸಲಿದ್ದು, ಅಬ್ದುಲ್ ಅಝೀಝ್ ಇರ್ಫಾನಿ ಮಖೂಮಿ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಬಿ.ಝಡ್ ಜಮೀರ್ ಅಹಮದ್, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್, ಮಂಗಳೂರು ಉತ್ತರ ಶಾಸಕರಾದ ಡಾ. ವೈ.…
ವಾಷಿಂಗ್ಟನ್, ಜ.21: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಜೆ.ಡಿ.ವ್ಯಾನ್ಸ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಪ್ರಮಾಣ ವಚನ ಬೋಧಿಸಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಸರಿಯಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷ ಪದವಿಗೆ ಏರಿದರು.1985ರ ಬಳಿಕ ಇದೇ ಮೊದಲ ಬಾರಿಗೆ ಕ್ಯಾಪಿಟಲ್ ಭವನದ ಒಳಾಂಗಣದಲ್ಲಿ ಕಾರ್ಯಕ್ರಮ ನಡೆದಿದೆ. ಸಮಾರಂಭದಲ್ಲಿ ಪ್ರಧಾನಿ ಮೋದಿ ಪರವಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್,, ಉದ್ಯಮಿಗಳಾದ ಮುಕೇಶ್ ಅಂಬಾನಿ ದಂಪತಿ ಹಾಗೂ ಎಲಾನ್ ಮಸ್ಕ್ ಉಪಸ್ಥಿತರಿದ್ದರು.
ಮಂಗಳೂರು, ಜ.20 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ 28ನೇ ವಾರ್ಡಿನ ಉರ್ವ ಮಾರ್ಕೆಟ್ ಬಳಿಯ ರಿಕ್ಷಾ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಶಾಸಕರ ವಿಶೇಷ ಅನುದಾನದಿಂದ ಅಳವಡಿಸಲಾದ ಈ ಮೇಲ್ಛಾವಣಿಯಿಂದ ಮಳೆ-ಬಿಸಿಲು ನ್ನೂ ಲೆಕ್ಕಿಸದೇ ದಿನನಿತ್ಯ ದುಡಿಯುವ ರಿಕ್ಷಾ ಚಾಲಕರುಗಳಿಗೆ ಬಿಡುವಿನ ವೇಳೆಯಲ್ಲಿ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ. ಎಷ್ಟೇ ದುಡಿಯುವ ಒತ್ತಡದಲ್ಲಿದ್ದರೂ ಸಿಗುವ ಅಲ್ಪ ಸ್ವಲ್ಪ ಸಮಯದಲ್ಲೇ ನೀವು ಇರುವಲ್ಲಿಯೇ ವಿಶ್ರಾಂತಿ ಪಡೆದು ಆರೋಗ್ಯದೆಡೆಗೆ ಗಮನ ಹರಿಸುವಂತೆ ರಿಕ್ಷಾ ಚಾಲಕ ಬಂಧುಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಮ.ನ.ಪಾ ಸದಸ್ಯರುಗಳಾದ ಗಣೇಶ್ ಕುಲಾಲ್, ಸಂಧ್ಯಾ ಆಚಾರ್ಯ, ಪೂರ್ಣಿಮಾ, ಮತ್ತು ಮೋಹನ್ ಪೂಜಾರಿ, ರಾಧಾಕೃಷ್ಣ, ಮೋಹನ್ ಆಚಾರ್, ಶೇಖರ್, ಜಿತೇಶ್, ಗಣೇಶ್ ಸಾಲ್ಯಾನ್, ಮನೋಹರ್, ಹರೀಶ್, ರಾಜೇಶ್, ಆನಂದ ರೈ, ಪ್ರೀತಮ್, ಪ್ರಕಾಶ್, ರಘುನಾಥ ಪ್ರಭು, ಗುರು ಚರಣ್, ವಿಶು ಕುಮಾರ್, ಪ್ರಜೀತ್, ಕಿಶೋರ್, ಪ್ರಸಾದ್, ಮುರಳಿ,…
ಬಂಟ್ವಾಳ, ಜ.19:ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೆ. ಪದ್ಮನಾಭ ರೈ ಅವರು ಪುನರಾಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ರಾಜ್ಯ ಕೃಷಿಕ ಸಮಾಜದ ಪ್ರತಿನಿಧಿಗಳ ಆಯ್ಕೆ ಸಂಬಂಧ ಚುನಾವಣೆಯಲ್ಲಿ ಬಂಟ್ವಾಳ ತಾಲೂಕು ಕೃಷಿಕ ಸಮಾಜದಿಂದ ಆಯ್ಕೆಯಾದ ಪದ್ಮನಾಭ ರೈ ಅವರು ರಾಜ್ಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದರು. ಪದ್ಮನಾಭ ರೈ ಅವರು ಬಂಟ್ವಾಳ ತಾ.ಪಂ., ಎಪಿಎಂಸಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ತಾಲೂಕು ಕಾಂಗ್ರೆಸ್ ಸೇವಾದಳದ ಮಾಜಿ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸಿದ್ದರು. ನೆಟ್ಲ ಸದಾಶಿವ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.
ಮಂಗಳೂರು, ಜ.18 : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಚಾಲನೆ ದೊರೆಯಿತು. ವಾರಾಂತ್ಯದ ಹಿನ್ನೆಲೆಯಲ್ಲಿ ಮೊದಲ ದಿನವೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತ ಸೇರಿದ್ದ ಜನರು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು.ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡಿದರು. “ಸ್ಟ್ರೀಟ್ ಫುಡ್ ಫಿಯೆಸ್ಟ” ಜನವರಿ 22ರ ವರೆಗೆ ಪ್ರತಿನಿತ್ಯ ಸಂಜೆ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ತುಳುನಾಡ ಹಾಗೂ ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮೇಯರ್ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್…