Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಸೆ. 19 : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಬಂಟ, ನಾಡವರನ್ನು ಪ್ರತ್ಯೇಕವಾಗಿ ಪರಿಗಣಿಸಬಾರದು. ಇವೆರಡೂ ಒಂದೇ ಜಾತಿ, ಸಮುದಾಯವಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ಅದನ್ನು ಸಷ್ಟವಾಗಿ ಕಾಣಿಸಬೇಕು ಎಂದು ಬಂಟರ ಯಾನ ನಾಡವರ ಮಾತೃಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಗುರುವಾರ ಬಂಟರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಸಮೀಕ್ಷೆಗೆ ವಿರೋಧವಿಲ್ಲ. ಆದರೆ ನಮ್ಮ ಹೆಸರು ಉಲ್ಲೇಖ ಸ್ಪಷ್ಟವಾಗಿರಬೇಕು. ಸಮೀಕ್ಷೆಗೆ ಬರುವಾಗ ಸಮುದಾಯದವರು ಮೊಬೈಲ್ ಆಪ್ ನಲ್ಲಿರುವ 8ನೇ ಕಾಲಂನಲ್ಲಿ ಧರ್ಮ ಎಂದಿರುವ ಜಾಗದಲ್ಲಿ ಹಿಂದೂ ಎಂದು ನಮೂದಿಸಿ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-0227) ರಂತೆ ಬಂಟ್ ಎಂದು ನಮೂದಿಸಬೇಕು. 11ನೇ ಕಾಲಂನಲ್ಲಿ ಸಮಾನಾರ್ಥದ (ಪರ್ಯಾಯ) ಹೆಸರು ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-1026)ರಂತೆ ನಾಡವ ಎಂದು ನಮೂದಿಸಬೇಕು. ಇದೇ ರೀತಿ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A- 1026)…
ಮಂಗಳೂರು, ಸೆ. 19 : ಶ್ರೀ ರಾಮ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಮಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಸೆ.12, ಶುಕ್ರವಾರ ನಡೆಯಿತು. ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮಕ್ಕೆ ಸಂಸದ ದಕ. ಜಿಲ್ಲಾ ಸಂಸದ ಕ್ಯಾ ಬೃಜೇಶ್ ಚೌಟ ಚಾಲನೆ ನೀಡಿ ಮಾತಾಡಿದ ಅವರು, ನಮ್ಮ ದೇಶದಲ್ಲಿ ಶೇ. 65ರಷ್ಟು ಯುವ ಸಮೂಹವು ಇದೆ. ಈ ಯುವ ಸಮೂಹದ ಸಮಯಗಳು ದೇಶ ಕಟ್ಟುವ ಕಾರ್ಯಕ್ಕೆ ವಿನಿಯೋಗ ಆಗಬೇಕಾಗಿದೆ.ಉಳ್ಳವರು ಮು೦ದೆ ಬಂದು ವಿದ್ಯಾರ್ಜನೆಗೆ ನೈತಿಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಸಾಮಾಜಿಕ ಕಲಾ ಮತ್ತು ಕ್ರೀಡಾ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕಂತ ಮಹಾಲಿಂಗ ನಾಯಕ್ ಅಮೈ, ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ವಿಜೇತ ಕುಮಾರಿ ರೆಮೋನಾ ಇವೆಟ್ ಪರೇರಾ, ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿಗಳಾದ ಮೋಹನ್ (ಸೆನ್ ಪೊಲೀಸ್ ಠಾಣೆ…
ಮಂಗಳೂರು, ಸೆ. 18 : ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿಸಲಿವೆ ಎಂದು ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯ ಪ್ರಧಾನ ಸಂಯೋಜಕರಾದ ಕೆ ರಾಜೇಶ್ ಶೆಟ್ಟಿ ಶಬರಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಸೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ನಗದು ಸಹಿತ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಪ್ರಧಾನ ಅತಿಥಿಗಳಾಗಿ ಖ್ಯಾತ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರ ಭಾಗವಹಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿ ಜಿಲ್ಲಾ ಗವರ್ನರ್ ಕುಡ್ಲಿ ಅರವಿಂದ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಹುಮಾನ ವಿತರಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ವೇದಮೂರ್ತಿ…
ಮಂಗಳೂರು, ಸೆ. 18 : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ 18ನೇ ವಾರ್ಷಿಕ ಸಮಾರಂಭದ ಪ್ರಯುಕ್ತ ಸ್ವರ ಕುಡ್ಡ ಗ್ರಾಂಡ್ ಫಿನಾಲೆ ಹಾಗೂ ವಾರ್ಷಿಕ ಸಮಾರಂಭ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಾ ಮಾದರಿ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದರು. ಪತ್ರಕರ್ತ ವಾಲ್ಟರ್ನಂದಳಿಕೆ ಮಾತನಾಡಿ, ಸಂಗೀತ ಕಲಾವಿದರು ತಮ್ಮ ಸಂಗೀತದ ಮೂಲಕ ಜನರನ್ನು ರಂಜಿಸುತ್ತಾರೆ. ತುಳುನಾಡಿನಲ್ಲಿ ಕಲಾವಿದರಿಗೆ ಬೆಲೆ ಕಟ್ಟುವುದಕ್ಕಿಂತ ಬೆಲೆ ನೀಡುವವರಿದ್ದಾರೆ. ಜನರಿಗೆ ಮನೋರಂಜನೆ ನೀಡುವುದು ಸುಲಭವಲ್ಲ ಎಂದರು. ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದ ಹಿರಿಯ ಕಲಾ ಸಾಧಕರಾದ ತೊನ್ನೆ ಪುಷ್ಕಳ ಕುಮಾರ್, ಐವನ್ ಸೀಕ್ವೆರಾ, ಹನೀಫ್ ಪರ್ಲಿಯಾ ಪರವಾಗಿ ಹುಸೈನ್ ಕಾಟಿಪಳ್ಳ ಅವರಿಗೆ ಕರಾವಳಿ ಸಂಗೀತ…
ಸುಳ್ಯ, ಸೆ. 15 : ತೆಂಗಿನ ಮರದಿಂದ ಕಾಯಿಯನ್ನು ಕೀಳುತ್ತಿದ್ದಾಗ ಅಲ್ಯೂಮೀನಿಯಂ ದೋಟಿ ವಿದ್ಯುತ್ ಲೈನಿಗೆ ತಾಗಿ ಶಾಕ್ ಹೊಡೆದು ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಸಾವನಪ್ಪಿದ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ದೋಟಿ ತೋಟದ ಬದಿಯಲ್ಲಿ ಹಾದು ಹೋಗಿರುವ ಎಚ್.ಟಿ. ಲೈನ್ಗೆೆ ತಾಗಿ ದೋಟಿಯ ಮೂಲಕ ವಿದ್ಯುತ್ ಹರಿದು ರಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು, ಸೆ. 16 : ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿ ದೇವಸ್ಥಾನದ ಪ್ರಾಂಗಣದಲ್ಲಿ 43ನೇ ವರ್ಷದ ಮಕ್ಕಳ ಉತ್ಸವ, ಶ್ರೀ ಕೃಷ್ಣವೇಷ ಸ್ಪರ್ಧೆ ಸೆ. 14,ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಉದ್ಘಾಟಿಸಿ, ಆಶೀರ್ವಚನದಲ್ಲಿ ಕಲ್ಕೂರ ಪ್ರತಿಷ್ಠಾನವು ಕಳೆದ 43 ವರ್ಷಗಳಿಂದ ಶ್ರೀ ಕೃಷ್ಣವೇಷ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ.. ಶ್ರೀ ರಾಮ, ಕೃಷ್ಣನ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗೆ ಮುಂದಾಗಬೇಕು. ಮುಂದಿನ ವರ್ಷದಿಂದ ಕಲ್ಕೂರ ಪ್ರತಿಷ್ಠಾನ ಆಯೋಜಿಸುವ ಸ್ಪರ್ಧೆಯಲ್ಲಿ ಶ್ರೀ ಕೃಷ್ಣನ ಹೆಸರಿನ ಮಕ್ಕಳಿಗೆ ಬಹುಮಾನ ನೀಡಬೇಕು ಎಂದು ಸ್ವಾಮೀಜಿ ಹೇಳಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ ಮಾತನಾಡಿದರು. ಕಾರ್ಯಕ್ರಮದಲ್ಲಿಕದ್ರಿ ಮಂಜುನಾಥ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎ.ಜೆ.ಶೆಟ್ಟಿ, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣ, ಶರವು ಮಹಾಗಣಪತಿ ದೇವಸ್ಥಾನದ ಧರ್ಮದರ್ಶಿ ರಾಘವೇಂದ್ರ ಶಾಸ್ತ್ರೀ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಮುಖಂಡ ಶಶಿಧರ ಹೆಗ್ಡೆ, ಉದ್ಯಮಿ ರತ್ನಾಕರ ಜೈನ್m ಲೀಲಾಕ್ಷ…
ಮಂಗಳೂರು, ಸೆ. 15: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಗೊಳಪಟ್ಟ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ ರೂ.1174.00 ಕೋಟಿಗಳಷ್ಟು ರೂ. ವ್ಯವಹಾರ ನಡೆಸಿದ್ದು, ಒಟ್ಟು ರೂ.12.79 ಕೋಟಿ ನಿವ್ವಳ ಲಾಭ ದಾಖಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರ ರವಿರಾಜ್ ಹೆಗ್ಡೆ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಅವರು, 751 ಹಾಲು ಸಂಘಗಳು 3.97 ಲಕ್ಷ ಲೀಟರ್ ಹಾಲು ಶೇಖರಣೆ ಮಾಡುತ್ತಿದೆ. ಹಾಲಿನ ಶೇಖರಣೆ 2024-25 ನೇ ಸಾಲಿನಲ್ಲಿ ದಿನಕ್ಕೆ 3.42 ಲಕ್ಷ ಲೀಟರ್ ಸಂಗ್ರಹಣೆಯಾಗಿದ್ದು ಪ್ರಸ್ತುತ ಸಾಲಿನಲ್ಲಿ ಶೇ.16ರಷ್ಟು ಏರಿಕೆಯಾಗಿದ್ದು, ಒಟ್ಟು 3.97 ಲಕ್ಷ ಲೀಟರ್ನಷ್ಟು ಹಾಲು ಸಂಗ್ರಹಣೆಯಾಗುತ್ತಿದೆ ಎಂದರು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರಿನಲ್ಲಿ ಒಕ್ಕೂಟಕ್ಕೆ 10.30 ಎಕರೆ ಸರಕಾರಿ ಜಾಗ ಒದಗಿಸಿರುವುದು ನಮ್ಮ ಯೋಜನೆ ವಿಸ್ತರಣೆಗೆ ಅನುಕೂಲವಾಗಿದೆ. ರೈತ ಕಲ್ಯಾಣ ಟ್ರಸ್ಟ್ 2024-25 ನೇ ಸಾಲಿನಲ್ಲಿ ಒಟ್ಟು ರೂ.2.05 ಕೋಟಿಯಷ್ಟು ಮೊತ್ತವನ್ನು ರೈತರ ಮರಣ, ವೈದ್ಯಕೀಯ ವೆಚ್ಚ ರಾಸುಗಳ…
ಬೆಂಗಳೂರು, ಸೆ. 15 : ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್”(BRAT) ಚಿತ್ರದ “ಗಂಗಿ ಗಂಗಿ” ಎಂಬ ಮಾಸ್ ಹಾಡು ಅದ್ದೂರಿಯಾಗಿ ಇತ್ತೀಚಿಗೆ ಬೆಂಗಳೂರು ನಗರದ ಮಂತ್ರಿ ಮಾಲ್ ನ ಒಳ ಆವರಣದಲ್ಲಿ ಬಿಡುಗಡೆಯಾಯಿತು. ಈಗಾಗಲೇ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಗೊಂಡಿದೆ. ಈ “ಬ್ರ್ಯಾಟ್” ಚಿತ್ರವನ್ನು ಮಂಜುನಾಥ್ ಕಂದಕೂರ್ ನಿರ್ಮಿಸುತ್ತಿದ್ದು , ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬಿಡುಗಡೆಯಾಗಿರುವ ಈ ಹಾಡು ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ತಾವೇ ರಚಿಸಿ ಹಾಡಿದ್ದಾರೆ. ಇವರೊಂದಿಗೆ ಗಾಯಕಿ ಇಂದು ನಾಗರಾಜ್ ಕೂಡ ಸಾಥ್ ನೀಡಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕಂಪೋಸಿಂಗ್ ನಲ್ಲಿ ಬಂದಿರುವ ಈ ಹಾಡಿಗೆ ನಟ ಡಾರ್ಲಿಂಗ್ ಕೃಷ್ಣ ಹಾಗೂ ಮುಂಬೈ ಬೆಡಗಿ ಅನೈರಾ ಸ್ಟೆಪ್ ಹಾಕಿದ್ದಾರೆ. ಈ ಹಾಡು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡ ನಂತರ ಚಿತ್ರತಂಡ ಚಿತ್ರದ ಕುರಿತು ಮಾಹಿತಿಯನ್ನು ಹಂಚಿಕೊಂಡರು.…
ಮಂಗಳೂರು, ಸೆ. 14 : ಎಂಸಿಸಿ ಬ್ಯಾಂಕ್ ತನ್ನ 12 ನೇ ಎಟಿಎಂ ಅನ್ನು ಕಿನ್ನಿಗೋಳಿ ಶಾಖೆಯಲ್ಲಿ ಸೆ.13, ರ ಶನಿವಾರ ಉದ್ಘಾಟನೆಗೊಂಡಿತು. ಎಂ ಆರ್ ಪಿ ಎಲ್ ನ ಕಾರ್ಪೊರೇಟ್ ಬ್ರ್ಯಾಂಕಡಿಂಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ ಇದರ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂ ನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ ನ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರಾ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಕಿನ್ನಿಗೋಳಿ ಶಾಖೆಯ ಗ್ರಾಹಕರು ಕಳೆದ 28 ವರ್ಷಗಳಲ್ಲಿ ಶಾಖೆಯ ಬೆಳವಣಿಗೆಗೆ ಬೆಂಬಲ ನೀಡಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಬ್ಯಾಂಕಿನ ಗಮನಾರ್ಹ ಪ್ರಗತಿಯಾಗಿದ್ದು,…
ಮಂಗಳೂರು, ಸೆ. 13: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ಸೆ.14ರಂದು ‘ಧರ್ಮ ಜಾಗೃತಿ ಯಾತ್ರೆ’ನಡೆಯಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಯಾತ್ರೆ ನಡೆಯಲಿದೆ ಎಂದು ಸಂಘಟಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದತೆಯಿಂದ, ಪರಸ್ಪರ ಸಹಬಾಳ್ವೆಯಿಂದ ಕಾರ್ಯ ನಿರ್ವಹಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳು ಪಕ್ಷಾತೀತವಾಗಿ ಹಾಗೂ ಜಾತ್ಯತೀತ ವಾಗಿ ಒಗ್ಗಟ್ಟಾಗಿ, ‘ಸಹಕಾರ ರತ್ನ’ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಧರ್ಮ ಜಾಗೃತಿ ಯಾತ್ರೆ ನಡೆಸಲಿದ್ದಾರೆ ಎಂದರು. ಈ ಯಾತ್ರೆಯಲ್ಲಿ 1500ಕ್ಕೂ ಅಧಿಕ ಸಹಕಾರಿ ಸಂಘಗಳು, 3000ಕ್ಕೂ ಅಧಿಕ ವಾಹನಗಳು ಭಾಗಿಯಾಗಲಿವೆ.ಇದೊಂದು ಧರ್ಮ ಸಂರಕ್ಷಣೆಯ ಯಾತ್ರೆಯಾಗಿದೆ. ಧಾರ್ಮಿಕ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ಮಾಡುವ ಷಡ್ಯಂತ್ರಿಗಳ ವಿರುದ್ಧ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ,…












