Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಅ.20 : ಕುಟುಂಬ ವೈದ್ಯರ ಸಂಘ ಮಂಗಳೂರು ಇದರ ವಿಂಶತಿ ವರ್ಷದ ಆಚರಣೆಯ ಅಂಗವಾಗಿ ಭಾನುವಾರ ನಗರದ ಐಎಂಎ – ಡಾ.ಎ.ವಿ.ರಾವ್ ಕಾನ್ಫೆರೆನ್ಸ್ ಹಾಲ್ನಲ್ಲಿ ಕುಟುಂಬ ವೈದ್ಯರ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಕುಟುಂಬ ವೈದ್ಯರ ರಾಜ್ಯ ಸಮ್ಮೇಳನ ವನ್ನು ಕರ್ನಾಟಕ ಮೆಡಿಕಲ್ ಕೌನ್ಸಿಲ್ನ ಅಧ್ಯಕ್ಷ ಡಾ. ಯೋಗಾನಂದ ರೆಡ್ಡಿ ಅವರು ಉದ್ಘಾಟಿಸಿ ದರು.ನಂತರ ಮಾತನಾಡಿದ ಅವರು, ಎಲ್ಲ ವೈದ್ಯರಲ್ಲೂ ಒಬ್ಬ ಕುಟುಂಬ ವೈದ್ಯ ಉಳಿಯಬೇಕು. ಆಗ ಸಮಗ್ರ ವೈದ್ಯಕೀಯ ಸೇವೆ ಸಾಧ್ಯ. ವೈದ್ಯಕೀಯ ಪದ್ಧತಿಯನ್ನು ಸರಕಾರ ಸರಿಯಾಗಿ ಉಪಯೋಗಿಸದ ಕಾರಣ ಗ್ರಾಮೀಣ ಭಾಗದ ಜನರಿಗೆ ವೈದ್ಯಕೀಯ ಚಿಕಿತ್ಸೆ ಸಿಗುವಲ್ಲಿ ವ್ಯತ್ಯಾಸವಾಗುತ್ತಿದೆ. ಕುಟುಂಬ ವೈದ್ಯ ಪದ್ಧತಿಯನ್ನು ಉಳಿಸಿ ಬೆಳೆಸುವುದು ಅಗತ್ಯ ಎಂದು ಕರ್ನಾಟಕ ಮೆಡಿಕಲ್ ಕೌನ್ಸಿಲ್ನ ಅಧ್ಯಕ್ಷ ಡಾ. ಯೋಗಾನಂದ ರೆಡ್ಡಿ ಹೇಳಿದರು. ನಿಟ್ಟೆ ವಿವಿ ಪ್ರೊ ಚಾನ್ಸಲರ್ ಡಾ.ಶಾಂತಾರಾಮ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಕುಟುಂಬ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಕುಟುಂಬ…
ಉಡುಪಿ, ಅ.19 : ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ಗೆ ಬೆಂಕಿ ಹೊತ್ತಿಕೊಂಡು ಸ್ಕೂಟರ್ ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಸಂಭವಿಸಿದೆ. ಸ್ಕೂಟರ್ ಸವಾರ ಪೆಟ್ರೋಲನ್ನು ಸ್ಕೂಟರಿನ ಸೀಟಿನ ಕೆಳಗೆ ಸಂಗ್ರಹಿಸಿದ್ದರು. ಅವರು ಸ್ಕೂಟರ್ ಅನ್ನು ಕಿಕ್-ಸ್ಟಾರ್ಟ್ ಮಾಡಲು ಪ್ರಯತ್ನಿಸಿದ್ದು, ಇಂಜಿನ್ನಿಂದ ಸೋರಿಕೆಯಾದ ಕಿಡಿಯು ಸೀಟ್ ಕೆಳಗೆ ಸೋರಿಕೆಯಾಗಿದ್ದ ಪೆಟ್ರೋಲ್ಗೆ ತಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ತಕ್ಷಣ ಬೆಂಕಿ ನಂದಿಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ .
ಮೂಡುಬಿದಿರೆ,ಸೆ.18 : ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಎನರ್ಜಿ ಆ್ಯಂಡ್ ವೆಟ್ಲ್ಯಾಂಡ್ಸ್ ರಿಸರ್ಚ್ ಗ್ರೂಪ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ 4 ದಿನಗಳ ಕಾಲ ನಡೆಯ ಲಿರುವ 14ನೇ ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಗುರುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವಅಧ್ಯಕ್ಷತೆ ವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಎಸಿಎಫ್ ಆಂಟನಿ ಎಸ್. ಮರಿಯಪ್ಪ ಕೆನಡಾದ ಪರಿಸರ ಚಿಂತಕ ಡಾ.ಸಿ. ರಾಜಶೇಖರ ಮೂರ್ತಿ, ಪರಿಸರವಾದಿ ಡಾ.ಎಂ.ಡಿ. ಸುಭಾಸ್ ಚಂದ್ರನ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಎಂ. ಕೃಷ್ಣ ಮೂರ್ತಿ, ಡಾ.ಹರೀಶ ಕೃಷ್ಣ ಮೂರ್ತಿ , ಸಂಘಟನಾ ಕಾರ್ಯದರ್ಶಿ ಡಾ.ಎಸ್. ವಿನಯ್ ಉಪಸ್ಥಿತರಿದ್ದರು.
ಸುಳ್ಯ,ಅ.17: ವಲಯ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ, ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ಸದಸ್ಯ, ದಿವಾಕರ ಮುಂಡಾಜೆ (55) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು. ದಿವಾಕರ್ ಅವರು ಬುಧವಾರ ಬೆಳಿಗ್ಗೆ ತನ್ನ ಅಂಗಡಿಗೆ ತನ್ನ ಕಾರಲ್ಲಿ ಬರುತ್ತಿದ್ದ ವೇಳೆ ದಾರಿ ಮಧ್ಯೆ ಹೃದಯಾಘಾತದಿಂದ ಮೃತರಾಗಿದ್ದಾರೆ. ದಿವಾಕರ್ ಅವರು ಹರಿಹರದಲ್ಲಿ ಸ್ಟುಡಿಯೋ, ಅಂಗಡಿಯನ್ನು ಹೊಂದಿದ್ದು, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸೇರಿದಂತೆ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.
ಉಳ್ಳಾಲ, ಅ.16 : ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.ಮೃತರನ್ನು ಮಾಡೂರು ನಿವಾಸಿ ನಾಗೇಶ್(51) ಎಂದು ಗುರುತಿಸಲಾಗಿದೆ. ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ನಾಗೇಶ್ ಅವರು ಬುಧವಾರ ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನು ಖರೀದಿಸಿ ಮನೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು, ಅ. 15: ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ಮತ್ತು ಭಕ್ತಾಭಿಮಾನಿಗಳ ಸಹಭಾಗಿತ್ವದೊಂದಿಗೆ ಆಯೋಜಿಸಲಾಗಿರುವ ಉಡುಪಿ ಉಚ್ಚಿಲ ದಸರಾ ಉತ್ಸವ 2024ರ ವೈಭವದ ವಿಸರ್ಜನ ಶೋಭಾಯಾತ್ರೆ ಮಂಗಳವಾರ ಸಂಜೆ ನಡೆಯಿತು. ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್ ಮತ್ತು ಶಾಲಿನಿ– ಶಂಕರ್ ದಂಪತಿ ಪುಷ್ಪಾರ್ಚನೆಗೈಯ್ಯುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು. ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳಿಗೆ ಕ್ಷೇತ್ರದ ತಂತ್ರಿ ವೇ.ಮೂ. ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಮತ್ತು ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಹಾಮಂಗಳಾರತಿ ಮತ್ತು ವಿಸರ್ಜನ ಆರತಿ ಬೆಳಗಿದ ಬಳಿಕ ವಿಗ್ರಹಗಳನ್ನು ಟ್ಯಾಬ್ಲೊಗಳಿಗೆ ಸ್ಥಳಾಂತರಿಸಲಾಯಿತು. ಶ್ರೀ ಮಹಾಲಕ್ಷ್ಮೀ ದ್ವಾರದ ಬಳಿ ಶ್ರೀ ಕ್ಷೇತ್ರ ಮಾತೆ ಮಹಾಲಕ್ಷ್ಮೀ ದೇವರನ್ನೊಳಗೊಂಡ ಅಂಬಾರಿ ಹೊತ್ತ ವೈಶಿಷ್ಟ್ಯ ಪೂರ್ಣವಾದ ಕರಿಯಾನೆಗೆ ಡ್ರೋನ್ ಮೂಲಕ ಪುಷ್ಪಾರ್ಚ ನೆಗೈದು ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ವಿವಿಧ ಭಜನ ತಂಡಗಳು, ಸಾಮಾಜಿಕ ಜಾಗೃತಿ ಸಾರುವ ಪ್ರತಿಕೃತಿಯುಳ್ಳ…
ಮಂಗಳೂರು, ಅ. 15: ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರ ಕಿರುಚಿತ್ರ ‘ಸೇವ್ ಅವರ್ ಸೋಲ್’ ಅ. 18ರಂದು ಯೂಟ್ಯೂಬ್ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಿರ್ಮಾಪಕ ಯು.ಜಿ. ರಾಘವ್ ಅವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಸ್ಥ ಅಚಲ್ ಅವರು.ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಸಂದೇಶವಿರುವ ಕಿರುಚಿತ್ರ ಎಂದು ಅವರು ಹೇಳಿದರು.ನಿರ್ಮಾಪಕ ಯು.ಜಿ. ರಾಘವ್, ಎ.ಯು. ಕ್ರಿಯೇಶನ್ಸ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ಚಿತ್ರ ನಿರ್ಮಾಣಗೊಂಡಿದೆ ಎಂದು ಅವರು ತಿಳಿಸಿದರು ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ. ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು. ಪ್ರಸಾದ್…
ಮಂಗಳೂರು,ಅ.14: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆ ರವಿವಾರ ನಡೆಯಿತು. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಭವ್ಯ ಶೋಭಾಯಾತ್ರೆಯು ಜರಗಿತು. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ಮೆರವಣಿಗೆ ನಡೆಯಿತು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಶೋಭಾಯಾತ್ರೆ ಮಣ್ಣಗುಡ್ಡ ,ಲಾಲ್ ಬಾಗ್, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್, ನ್ಯೂ ಚಿತ್ರಾ ಟಾಕೀಸು, ಅಳಕೆ ಮಾರ್ಗ ವಾಗಿ ಕುದ್ರೋಳಿ ಶ್ರೀ ಕ್ಷೇತ್ರ ಕ್ಕೆ ಮರಳಿ. ಸೋಮವಾರ ಮುಂಜಾನೆ, ಪೂಜೆ ಬಲಿ, ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದಾ ವಿಸರ್ಜನೆ ನಡೆಯಿತು. 70ಕ್ಕೂ…
ಉಪ್ಪಿನಂಗಡಿ, ಅ.13: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಶನಿವಾರ ನಡೆದಿದೆ. ಮೃತರನ್ನು ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.
ಉಡುಪಿ,ಅ.12 : ಉಡುಪಿಯ ಕಲ್ಸಂಕದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್ನಲ್ಲಿ ’ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಅ.9ರಂದು ಉದ್ಘಾಟನೆಗೊಂಡಿತು. ನೂತನ ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್ನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಜಂಟಿಯಾಗಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಅನುಗ್ರಹದಿಂದ ನೂತನವಾಗಿ ಆರಂಭಗೊಂಡ ಈ ಹೋಟೆಲ್ ಯಶಸ್ವಿಯಾಗಲಿ ಎಂದು ಹಾರೈಸಿದರು. ಪೇಜಾವರ ಶ್ರೀಪಾದರು ಆಶೀರ್ವಚನ ನೀಡಿ, ಉಡುಪಿಗೆ ಉದ್ಯಮಿ ಜಯರಾಮ್ ಬನಾನ್ ಅವರು ಈ ಹೊಟೇಲ್ ಮೂಲಕ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಶ್ರೀ ಕೃಷ್ಣನ ಅನುಗ್ರಹದಿಂದ ಉದ್ಯಮ ಯಶಸ್ವಿಯಾಗುವುದರೊಂದಿಗೆ ಜನತೆಗೂ ಇದರ ಪ್ರಯೋಜನ ದೊರಕಲಿ ಎಂದು ಹಾರೈಸಿದರು. ಸುಬ್ರಹ್ಮಣ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಉಡುಪಿ ಹೊಟೇಲ್ ಉದ್ಯಮಕ್ಕೆ ಪ್ರಸಿದ್ಧವಾಗಿದೆ. ಜಯರಾಮ್ ಬನಾನ್ ಅವರ ಈ ಹೊಟೇಲ್ ಉದ್ಯಮ ತುಂಬಾ ಜನರಿಗೆ ಉದ್ಯೋಗ ನೀಡಿದ್ದು, ಅವರು ಸಮರ್ಥ ಆಡಳಿತದಿಂದ ಯಶಸ್ವಿಯಾಗಿದ್ದಾರೆ ಎಂದು…